Homeಮುಖಪುಟಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ...

ಅಕ್ರಮ, ಅನೈತಿಕ, ಅಶ್ಲೀಲ ಮಾರ್ಗಗಳ ಮೂಲಕ ಸಿಎಎ ಪರ ಮಿಸ್‌ಕಾಲ್‌ ಸಂಗ್ರಹಣೆ: ಬೆಳಿಕಿಗೆ ಬಂದ ಬಿಜೆಪಿ ಕಾರ್ಯಕರ್ತರ ಬಂಡವಾಳ

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

- Advertisement -
- Advertisement -

ಇಡೀ ಭಾರತದ ವಿರೋಧ ಪಕ್ಷಗಳು ಒಂದಾದರೂ ಸರಿಯೇ ಪೌರತ್ವ ಕಾಯ್ದೆ ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಆದರೆ ಸಿಎಎ, ಎನ್‌ಆರ್‌ಸಿ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೇಳುತ್ತಿದ್ದು ದಿನೇ ದಿನೇ ವ್ಯಾಪಿಸುತ್ತಿವೆ.

ಈ ನಡುವೆ ಆನ್‌ಲೈನ್‌ನಲ್ಲಿ ಸಿಎಎ ಪರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವ ಬಿಜೆಪಿಯು ಮಿಸ್‌ಕಾಲ್ ಅಭಿಯಾನವನ್ನು ಆರಂಭಿಸಿದೆ. ಆದರೆ ಬಿಜೆಪಿ ಘೋಷಿಸಿರುವ ನಂಬರ್‌ಗೆ ಮಿಸ್‌ಕಾಲ್‌ ಕೊಡಿಸಲು ಅನೈತಿಕ ಮಾರ್ಗ ಹಿಡಿದಿರುವುವುದು ಬೆಳಕಿಗೆ ಬಂದಿದೆ.

ನಿನ್ನೆ ರಾಜಸ್ಥಾನದಲ್ಲಿ ಸಿಎಎ ಪರ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ ಪೌರತ್ವ ಕಾಯ್ದೆಗೆ ಬೆಂಬಲ ನೀಡಲು 8866288662 ನಂಬರ್‌ಗೆ ಮಿಸ್‌ ಕಾಲ್‌ ಕೊಡಿ ಎಂದು ಮನವಿ ಮಾಡಿದ್ದರು.

ಆದರೆ ನಿರೀಕ್ಷಿತ ಮಿಸ್‌ಕಾಲ್‌ಗಳು ಆ ನಂಬರ್‌ಗೆ ಬಂದಿಲ್ಲ. ಏಕೆಂದರೆ ಬಹುತೇಕ ಜನ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಿದ್ದಾರೆ. ಹಾಗಾಗಿ ಬಿಜೆಪಿ ಮನವಿಗೆ ಯಾರೂ ಕಿವಿಗೊಟ್ಟಿಲ್ಲ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ತುಂಬಾ ಕಡಿಮೆ ಮಿಸ್‌ಕಾಲ್‌ಗಳು ಬಂದಿರುವುದರಿಂದ ಬಿಜೆಪಿ ಅದನ್ನು ಸಾರ್ವಜನಿಕವಾಗಿ ತೋರಿಸಲು ಆಗುವುದಿಲ್ಲ. ಇತ್ತೀಚೆಗೆ ನಡೆದ ಎಲ್ಲಾ ಪೋಲ್‌ಗಳು ಕೂಡ ಜನಾಭಿಪ್ರಾಯ ಸಿಎಎ ಎನ್‌ಆರ್‌ಸಿ ವಿರುದ್ಧವಿರುವುದನ್ನು ತೋರಿಸಿವೆ.

ಇದರಿಂದ ಕಂಗಾಲಾಗಿರುವ ಬಿಜೆಪಿ ಕಾರ್ಯಕರ್ತರು, ಐಟಿ ಸೆಲ್‌ ಪಡೆ ಅಡ್ಡಹಾದಿಗಿಳಿಗಿದೆ. ಅಶ್ಲೀಲತೆಗೆ ಇಳಿದಿದೆ. ಅದು ಅಂದದ ಹೆಣ್ಣುಮಕ್ಕಳ ಫೋಟೊ ಹಾಕಿ ಫೇಕ್‌ ಐಡಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ತೆರೆದು ಬೋರ್‌ ಹಾಗಿದ್ರೆ ನನ್ನೊಡನೆ ಮಾತಾಡಲು ಈ ನಂಬರ್‌ಗೆ ಕಾಲ್‌ ಮಾಡಿ, ಉಚಿತ ನೆಟ್‌ಫ್ಲಿಕ್ಸ್ ಚಂದಾ ಬೇಕೆ ಈ ನಂಬರ್‌ ಕಾಲ್‌ ಮಾಡಿ ಎಂದು ಸಿಎಎ ಬೆಂಬಲಿಸಲು ಇರುವ 8866288662 ನಂಬರ್‌ ಅನ್ನೆ ಕೊಡಲಾಗಿದೆ..!

ಕೆಲಸ ಬೇಕಾದರೆ ಕಾಲ್‌ ಮಾಡಿ, ನನ್ನೊಡನೆ ಚಾಟ್ ಮಾಡಲು ಕಾಲ್‌ ಮಾಡಿ ಎಂಬರ್ಥದ ಅಶ್ಲೀಲ ಪದಗಳಲ್ಲಿ ಯುವಕರನ್ನು ಸೆಳೆಯುವ ರೀತಿಯ ಪೋಸ್ಟರ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡು.ವ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಒಂದಷ್ಟು ಪೋಸ್ಟರ್‌ಗಳು ಮತ್ತು ಟ್ವೀಟ್‌ಗಳು ಕೆಳಗಿನಂತಿವೆ ನೋಡಿ.

ಇವೆಲ್ಲವೂ ಫೋಟೋಶಾಪ್‌ ಮಾಡಿದ ಚಿತ್ರಗಳಾಗಿದ್ದು ಟ್ವಿಟ್ಟರ್‌ನಲ್ಲಿ ಹುಡುಕಿದರೆ ಆ ಅಕೌಂಟ್‌ಗಳೇ ಸಿಗುವುದಿಲ್ಲ. ಆದರೂ ಒಂದಷ್ಟು ಯುವಕರು ಈ ನಂಬರ್‌ಗೆ ಮಿಸ್‌ಕಾಲ್‌ ಕೊಟ್ಟಿರುವುದು ಕಂಡುಬಂದಿದೆ.

ಇನ್ನು ನೆಟ್‌ಫ್ಲಿಕ್ಸ್‌ ಉಚಿತ ಚಂದಾ ಮತ್ತು ಪಾಸ್‌ವರ್ಡ್‌ ಪಡೆಯಲು ಮಿಸ್‌ಕಾಲ್‌ ಕೊಡಿ ಎಂದು ಟ್ವಿಟ್ಟರ್‌ನಲ್ಲಿ ಅಧಿಕೃತವಾಗಿ ವೈರಲ್‌ ಮಾಡಿದ್ದಾರೆ. ಇದಕ್ಕೆ ನೆಟ್‌ಫ್ಲಿಕ್ಸ್‌ ತನ್ನ ಅಧಿಕೃತ ಅಕೌಂಟ್‌ನಿಂದ ಟ್ವೀಟ್‌ ಮಾಡಿ ಇದು ಫೇಕ್‌ನ್ಯೂಸ್‌ ಎಂದು ಸ್ಪಷ್ಟಪಡಿಸಿದೆ.

ಇನ್ನು ಹಲವಾರು ಜನ ಕೆಟ್ಟಕೊಳಗಾಗಿ ಬರೆದು ಈ ನಂಬರ್‌ಗೆ ಮಿಸ್‌ಕಾಲ್ ಕೊಡಿ ಎಂದು ಅಂಗಾಲಾಚಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಕೆಲವರು ಬಿಜೆಪಿಗೆ ಈ ಪರಿಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡುತ್ತಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ವಿರುದ್ಧ ಜನ ತಿರುಗಿಬಿದ್ದಾಗ ಅದನ್ನು ಮುರಿಯಲು, ಭಾರತದ ಹೆಚ್ಚಿನ ಜನ ಬಿಜೆಪಿ ಕಡೆ ಇದ್ದಾರೆ ಎಂದು ತೋರಿಸಲು ಎಂಥ ನೀಚಮಟ್ಟಕ್ಕೂ ಬಿಜೆಪಿ ಕಾರ್ಯಕರ್ತರು ಇಳಿಯಬಲ್ಲರು ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...