Homeಮುಖಪುಟಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ.

ಬಿಜೆಪಿ ಮತ್ತು ಕೇಂದ್ರ ಸಚಿವರು ಈ ಮೈಲಿಗಲ್ಲನ್ನು “12 ವರ್ಷಗಳ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ”ಎಂಬ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. 

ಇದೇ ಸಂದರ್ಭದಲ್ಲಿ ದೇಶದ ಜನರಿಗೆ, ವಿಶೇಷವಾಗಿ ಮಹಿಳೆಯರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಅಡಿಯಲ್ಲಿ ನೀಡಲಾಗುತ್ತಿರುವ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸಲಾಗಿದೆ ಎಂಬುವುದಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸೂಚಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೋದಿ ಸರ್ಕಾರಕ್ಕೆ 12 ವರ್ಷ, 12 ರಿಂದ 4ಕ್ಕೆ ಇಳಿದ ಸಿಲಿಂಡರ್‌ಗಳ ಸಂಖ್ಯೆ

ಮೋದಿ ಸರ್ಕಾರ ಜೂನ್ 9, 2026ಕ್ಕೆ 12 ವರ್ಷಗಳನ್ನು ಪೂರೈಸಿದೆ. ಇದೇ ವೇಳೆ 12 ಇದ್ದ ಉಜ್ವಲ ಯೋಜನೆಯ ಸಿಲಿಂಡರ್‌ಗಳ ಸಂಖ್ಯೆ 4ಕ್ಕೆ ಇಳಿದಿದೆ.

2016ರಲ್ಲಿ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಿದಾಗ, ಫಲಾನುಭವಿಗಳು ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್‌ಗಳನ್ನು ಪಡೆಯುತ್ತಾರೆ ಎಂದು ಸರ್ಕಾರ ಘೋಷಣೆ ಮಾಡಿತ್ತು. ಕಳೆದ ವರ್ಷ, ಈ ಸಂಖ್ಯೆಯನ್ನು 9ಕ್ಕೆ ಇಳಿಸಲಾಗಿತ್ತು. ಈಗ ಅದನ್ನು ನಾಲ್ಕಕ್ಕೆ ಇಳಿಸಲಾಗಿದೆ.

ಮೋದಿ ಸರ್ಕಾರ ಸಿಲಿಂಡರ್‌ಗಳ ಸಂಖ್ಯೆಯನ್ನು ಇಳಿಸಲು ಪಶ್ಚಿಮ ಏಷ್ಯಾ ಸಂಘರ್ಷದಿಂದ ಎಲ್‌ಪಿಜಿ ಪೂರೈಕೆಯಲ್ಲಿ ಅಡಚಣೆಯಾಗಿರುವುದೇ ಕಾರಣ ಎಂದು ಕೆಲ ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ಇದು ನಿಜವೇ ಆದರೆ, ಪಶ್ಚಿಮ ಏಷ್ಯಾ ಸಂಘರ್ಷದಿಂದ ನಮ್ಮ ದೇಶದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಮೋದಿ ಕೈಯಲ್ಲಿ ದೇಶ ಸುರಕ್ಷಿತವಾಗಿದೆ ಎಂದು ಬಿಜೆಪಿಯವರು ಹೇಳುತ್ತಿರುವುದು ಸುಳ್ಳಾ? ಎಂಬ ಪ್ರಶ್ನೆ ಮೂಡುತ್ತದೆ.

ಒಂದು ವೇಳೆ ಸಿಲಿಂಡರ್‌ಗಳ ಸಂಖ್ಯೆ ಇಳಿಕೆಗೆ ಪಶ್ಚಿಮ ಏಷ್ಯಾ ಸಂಘರ್ಷ ಕಾರಣವಲ್ಲ ಎಂದರೆ, ಇನ್ನೇನು ಕಾರಣ ಎಂಬುವುದನ್ನು ಸರ್ಕಾರ ಮತ್ತು ಅದನ್ನು ಸಮರ್ಥಿಸುವ ಬಿಜೆಪಿಗರು ಉತ್ತರಿಸಬೇಕಷ್ಟೆ.

2016 ರಿಂದ 10 ಕೋಟಿಗೂ ಹೆಚ್ಚು ಕುಟುಂಬಗಳು ಉಜ್ವಲ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಂಡಿವೆ. 2024-25 ಮತ್ತು 2025-26 ರ ಹಣಕಾಸು ವರ್ಷಗಳಲ್ಲಿ ಈ ಯೋಜನೆಯಡಿಯಲ್ಲಿ ಸಬ್ಸಿಡಿ ಹಂಚಿಕೆ ಸುಮಾರು 12,000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಸಿಲಿಂಡರ್ ಕಡಿತ- ಕಾಂಗ್ರೆಸ್ ಟೀಕೆ

ಸಬ್ಸಿಡಿ ಸಿಲಿಂಡರ್ ಕಡಿತದಿಂದ ಫಲಾನುಭವಿ ಮಹಿಳೆಯರ ಮೇಲೆ ವರ್ಷಕ್ಕೆ 24,792 ಕೋಟಿ ರೂ. ಹೊರೆಯಾಗಲಿದೆ ಎಂದು ಕಾಂಗ್ರೆಸ್ ವಕ್ತಾರ ಸುರ್ಜೇವಾಲ ಹೇಳಿಕೆ ನೀಡಿದ್ದಾರೆ.

“ಮೋದಿ ನೇತೃತ್ವದ ಸರ್ಕಾರ ತನ್ನನ್ನು ತಾನು ಮಹಿಳಾ ಕಲ್ಯಾಣದ ಚಾಂಪಿಯನ್ ಎಂದು ಹೇಳಿಕೊಳ್ಳುತ್ತಿದ್ದರೂ, ಬಡ ಗೃಹಿಣಿಯರನ್ನು ನಿರ್ಲಕ್ಷಿಸುತ್ತಿದೆ. ಸರ್ಕಾರ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಸ್ಥಿರವಾಗಿ ಹಿಂಪಡೆಯುತ್ತಿದೆ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ನೀಡಿದ್ದ ಭರವಸೆಯನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

“2016ರಲ್ಲಿ ಉಜ್ವಲ ಯೋಜನೆಯು ಮಹಿಳೆಯರಿಗೆ ಹೊಗೆಯುಗುಳುವ ಕಟ್ಟಿಗೆ ಒಲೆಗಳಿಂದ ಮುಕ್ತಿ ನೀಡಲಿದೆ ಎಂದು ಮೋದಿ ಹೇಳಿದ್ದರು. ವರ್ಷಕ್ಕೆ 12 ಸಬ್ಸಿಡಿ ಸಹಿತ ಸಿಲಿಂಡರ್‌ಗಳನ್ನು ಪೂರೈಸಲಾಗುವುದು ಎಂದು ಭರವಸೆಯನ್ನೂ ನೀಡಲಾಗಿತ್ತು. ಆದರೆ, ಕಳೆದ ವರ್ಷ ಈ ಸಂಖ್ಯೆಯನ್ನು 12ರಿಂದ 9ಕ್ಕೆ ಇಳಿಕೆ ಮಾಡಲಾಯಿತು. ಇದೀಗ 2026ರಲ್ಲಿ ಸಬ್ಸಿಡಿ ಸಹಿತ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಇಳಿಕೆ ಮಾಡಲಾಗಿದೆ. ಕ್ಲಪ್ತವಾಗಿ ಹೇಳುವುದಾದರೆ, 12 ಸಿಲಿಂಡರ್‌ಗಳನ್ನು ಪೂರೈಸುವ ಭರವಸೆ ನೀಡಲಾಗಿತ್ತು. ಆದರೆ, ಆ ಸಂಖ್ಯೆ ಇದೀಗ ಕೇವಲ 4ಕ್ಕೆ ಇಳಿಕೆಯಾಗಿದೆ” ಎಂದು ಖರ್ಗೆ ಬೊಟ್ಟು ಮಾಡಿದ್ದಾರೆ.

“ಪದೇ ಪದೇ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಏರಿಕೆ ಮಾಡುತ್ತಿರುವುದರಿಂದ, ಫಲಾನುಭವಿಗಳ ಪಾಲಿಗೆ ಎಲ್‌ಪಿಜಿ ಸಿಲಿಂಡರ್ ದುಬಾರಿಯಾಗಿ ಪರಿಣಮಿಸಿದೆ ಎಂದೂ ಅವರು ದೂರಿದ್ದಾರೆ. ಬಲವಂತವಾಗಿ ಸಿಲಿಂಡರ್ ಗಳನ್ನು ಕೈಬಿಡುವಂತೆ ಮಾಡಲಾಗುತ್ತಿದೆ. ಇದರಿಂದ ತಾಯಂದಿರು ಹಾಗೂ ಸಹೋದರಿಯರು ಸಾಂಪ್ರದಾಯಿಕ ಒಲೆಗಳಿಗೆ ಮೊರೆ ಹೋಗುವ ಅನಿವಾರ್ಯತೆಗೆ ತುತ್ತಾಗಿದ್ದಾರೆ. ಅವರ ಕಷ್ಟಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಮೋದಿ ಸರ್ಕಾರ, ಅಧಿಕಾರದ ಮದವೇರಿಸಿಕೊಂಡಿದೆ!” ಎಂದು ಅವರು ತೀಕ್ಷ್ಣ ಟೀಕಾಪ್ರಹಾರ ನಡೆಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...