HomeಅಂಕಣಗಳುKarnataka against SIRಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

- Advertisement -
- Advertisement -

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಯೂಸುಫ್ ಕನ್ನಿ ಹೇಳಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವಿಜಯಪುರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ (ಜೂ.13) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್‌ನ ಲೋಪದೋಷಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗಕ್ಕೆ ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ವಿಚಾರವಾಗಿ ಆಯೋಗ ಬಹಿರಂಗ ಚರ್ಚೆಗೆ ಬರಲಿ ಎಂದು ಆಗ್ರಹಿಸಿದರು.

ಚುನಾವಣಾ ಆಯೋಗ ಎಸ್‌ಐಆರ್ ಘೋಷಣೆ ಮಾಡುವಾಗ ನಕಲಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆ ಎಂದು ಹೇಳಿತ್ತು. ಆದರೆ, ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಲಕ್ಷಾಂತರ ಜನರ ಸಾಂವಿಧಾನಿಕ ಹಕ್ಕು ಕಿತ್ತುಕೊಂಡಿರುವುದನ್ನು ನಾವು ನೋಡಿದ್ದೇವೆ. ಹಾಗಾಗಿ, ಇಂತಹ ಅಸಾಂವಿಧಾನಿಕ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ನಡೆಸುವುದು ಬೇಡ ಎಂದರು.

ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ನಾವು ಈಗಾಗಲೇ ಚುನಾವಣಾ ಆಯೋಗದ ಎದುರು ಹಲವು ಬೇಡಿಕೆಗಳನ್ನು ಇಟ್ಟಿದ್ದೇವೆ. ಅವುಗಳಿಗೆ ಆಯೋಗ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಆರಿಫುಲ್ಲಾ ಮಾತನಾಡಿ, ಎಸ್‌ಐಆರ್‌ ಮತದಾರರ ಪಟ್ಟಿಯ ಸಾಮಾನ್ಯ ಪ್ರಕ್ರಿಯೆ ಅಲ್ಲ, ವಿಶೇಷ ಪರಿಷ್ಕರಣೆಯಾಗಿದೆ. ದೇಶದ ಜನರ ನಾಗರಿಕತ್ವ ನಿರ್ಧರಿಸಲು ಮುಂದಾಗಿರುವ ಈ ದೊಡ್ಡ ಪ್ರಕ್ರಿಯೆಗೆ ಸಂಸತ್ತಿನ ಅನುಮೋದನೆ ಪಡೆದಿಲ್ಲ, ಸರ್ಕಾರದಿಂದ ಯಾವುದೇ ಅಧಿಕೃತ ರಾಜಪತ್ರ ಪ್ರಕಟಿಸಿಲ್ಲ ಎಂದರು.

ಎಸ್ಐಆರ್ ನಮೂನೆಯಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯತ್ಯಾಸವಿದೆ. ಇದಕ್ಕೆ ನಮ್ಮ ವಿರೋಧವಿದೆ. ಈ ಮೊದಲು ಸರ್ಕಾರ ಬಂದು ಮತದಾರರ ಪಟ್ಟಿ ತಯಾರಿಸುತಿತ್ತು, ಈಗ ನಾವೇ ಮಾಡಬೇಕಂತೆ. ಚುನಾವಣಾ ಆಯೋಗ ಏನೇ ತಪ್ಪು ಮಾಡಿದರೂ ಪ್ರಶ್ನಿಸುವ ಅಧಿಕಾರ ಕಿತ್ತುಕೊಳ್ಳಲಾಗಿದೆ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಮಾರ್ಪಡಿಸಿರುವುದು ಇವೆಲ್ಲ ಅವ್ಯವಸ್ಥೆಗಳ ಮೂಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನೇ ಬದಲಿಸಿ, ಅವರಿಗೆ ಬೇಕಾದವರನ್ನು ನೇಮಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್‌ ಮೂಲಕ ವಲಸೆ ಕಾರ್ಮಿಕರನ್ನು ನುಸುಳುಕೋರರು ಎಂದು ಹಣೆಪಟ್ಟಿ ಕಟ್ಟಲಾಗ್ತಿದೆ. ರಾಜ್ಯದಿಂದ ರಾಜ್ಯಕ್ಕೆ ವಲಸೆ ಬಂದವರು ನುಸುಳುಕೋರರಲ್ಲ, ಅವರೂ ನಮ್ಮ ದೇಶದವರು. ಬಡ ಕೂಲಿ ಕಾರ್ಮಿಕರು, ದಲಿತರು, ಆದಿವಾಸಿಗಳು ಎಲ್ಲಿಂದ ದಾಖಲೆಗಳನ್ನು ತರಬೇಕು ಎಂದು ಪ್ರಶ್ನಿಸಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡ ರಫೀಕ್ ಅಹ್ಮದ್ ಮಾತನಾಡಿ, ಎಸ್‌ಐಆರ್ ಮೂಲಕ ದೇಶದ ಪ್ರಜೆಗಳನ್ನು ಹೊರಗಿಟ್ಟು ಚುನಾವಣೆ ನಡೆಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಎಸ್‌ಐಆರ್‌ ವೇಳೆ ಮತದಾರರ ಪಟ್ಟಿಯಿಂದ ಹೊರಬಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ ಎಂದು ಹೇಳಲಾಗ್ತಿದೆ. ಆದರೆ, ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವ ಮೊದಲೇ ಚುನಾವಣೆ ನಡೆದಿರುವ ಉದಾಹರಣೆಗಳನ್ನು ನಾವು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನೋಡಿದ್ದೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...