HomeಅಂಕಣಗಳುKarnataka against SIRವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

- Advertisement -
- Advertisement -

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು.

ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ ಗಣಿಹಾರ, ಎಸ್‌ಐಆರ್‌ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಹೊರಟಿರುವ ಜಾಥಾಗೆ ಶುಭವಾಗಲಿ ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಏನೆಂದು ಜನರಿಗೆ ಗೊತ್ತಿಲ್ಲ. ಎಸ್‌ಐಆರ್ ಅನ್ನು ಸರ್ ಎನ್ನುತ್ತಾ, ಹಾಗಂದ್ರೆ ಏನು ಎಂದು ಕೇಳುತ್ತಿದ್ದಾರೆ. ಹಾಗಾಗಿ, ಅವರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಸುಮಾರು 150 ಜನ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಎಸ್‌ಐಆರ್ ವಿರೋಧಿ ಒಕ್ಕೂಟ ಜೂನ್ 13ರಿಂದ 18ರವರೆಗೆ ರಾಜ್ಯದ ಕನಿಷ್ಠ 30 ಜಿಲ್ಲೆಗಳ ಸುಮಾರು 100 ತಾಲೂಕುಗಳಲ್ಲಿ ಎಸ್‌ಐಆರ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ತಲಾ ಆರು ಜಿಲ್ಲೆಗಳನ್ನು ಒಳಗೊಂಡ ಒಟ್ಟು ಐದು ಮಾರ್ಗಗಳಲ್ಲಿ ಇಂದು ಏಕಕಾಲಕ್ಕೆ ಜಾಥಾಗೆ ಚಾಲನೆ ನೀಡಲಾಗಿದೆ ಎಂದು ವಿವರಿಸಿದರು.

ವಿಜಯಪುರದಲ್ಲಿ ಇಂದು ಚಾಲನೆ ಪಡೆದುಕೊಂಡಿರುವ ಜಾಥಾ ನಾಳೆ (ಜೂ.14) ಬಾಗಲಕೋಟೆ, ಜೂ. 15 ಬೆಳಗಾವಿ, ಜೂ.16 ಧಾರವಾಡ, ಜೂ.17ಂದು ಗದಗ ಜಿಲ್ಲೆಗಳಲ್ಲಿ ಸಂಚರಿಸಿ, ಜೂ.18ರಂದು ಹಾವೇರಿಯಲ್ಲಿ ಸಮಾಪ್ತಿಯಾಗಲಿ. ಜೂ.20ರಂದು ಬೆಂಗಳೂರಿನಲ್ಲಿ ಎಸ್‌ಐಆರ್ ವಿರುದ್ದ ಬೃಹತ್ ಪ್ರತಿರೋಧ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಎರಡನೇ ಹಂತದಲ್ಲಿ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ನಡೆದಿದೆ. ಈ ರಾಜ್ಯಗಳಲ್ಲಿ ಸುಮಾರು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಎಸ್‌ಐಆರ್‌ನಲ್ಲಿ ಜನರ ಬಳಿ ಇಲ್ಲದ ದಾಖಲೆಗಳನ್ನು ಕೇಳಲಾಗ್ತಿದೆ. ಈ ಮೂಲಕ ಅವರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗ್ತಿದೆ. ನಮ್ಮ ದೇಶದಲ್ಲಿ ಶೇಕಡ 36.5 ಜನರಲ್ಲಿ ಮಾತ್ರ ದಾಖಲೆಗಳಿಗೆ. ದಾಖಲೆಗಳು ಇಲ್ಲದವರು ಶೇಕಡ 63.5ರಷ್ಟಿದ್ದಾರೆ. ಬಡವರು, ದಲಿತರು, ಕೂಲಿ ಕಾರ್ಮಿಕರು ಎಲ್ಲಿಂದ ದಾಖಲೆಗಳನ್ನು ಕೊಡಬೇಕು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಎಸ್‌ಐಆರ್ ಮೂಲಕ 50 ಲಕ್ಷಕ್ಕೂಹೆಚ್ಚು ಜನರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕುವ ಸಾಧ್ಯತೆ ಇದೆ. ಇದರ ವಿರುದ್ದ ನಾವು ಹೋರಾಟ ರೂಪಿಸುವ ಅಗತ್ಯವಿದೆ. ಸಂವಿಧಾನದ ಆಶಯಗಳನ್ನು ಕಾಪಾಡುವ ಜವಬ್ದಾರಿ ನಮ್ಮಲಿದೆ ಎಂದು ಜನರನ್ನು ಎಚ್ಚರಸಿದರು.

ಅಖಂಡ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಮಾತನಾಡಿ, ಎಸ್‌ಐಆರ್ ಮೂಲಕ ಜನರ ಮತದಾನದ ಹಕ್ಕನ್ನು ಕಸಿಯಲು ಚುನಾವಣಾ ಆಯೋಗ ಷಡ್ಯಂತ್ರ ರೂಪಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಈ ಮೂಲಕ ಪ್ರಯತ್ನಿಸುತ್ತಿದೆ. ನಮ್ಮನ್ನು ಅಳುವ ರಾಜಕಾರಣಿಗಳನ್ನು ಓಟು ಹಾಕಿ ಗೆಲ್ಲಿಸುವಾಗ ನಾವು ಅವರ ಬಗ್ಗೆ ಯಾವುದೇ ಪರಿಶೀಲನೆ ನಡೆಸಿಲ್ಲ. ಆದರೆ, ನಾವು ಓಟು ಹಾಕಿ ಗೆಲ್ಲಸಿದವರು ನಮ್ಮ ಪರಿಶೀಲನೆ ಮಾಡಲು ಹೊರಟಿದ್ದಾರೆ. ಮುಂದೆ ನಾವು ಎಂಪಿ, ಎಂಎಲ್‌ಗಳನ್ನು ನಾವು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.

ದೇಶದ ಇಂದಿನ ಪರಿಸ್ಥಿತಿ ನೋಡಿದರೆ ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು ಎಂದು ವ್ಯಂಗ್ಯವಾಡಿದರು. ಎಸ್‌ಐಆರ್ ಹಿಂಪಡೆಯಬೇಕು, ಇಲ್ಲದಿದ್ದರೆ ಅದರ ವಿರುದ್ದ ದೇಶದಲ್ಲಿ ಕ್ರಾಂತಿಯಾಗಲಿದೆ ಎಂದರು.

ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನ್ ರೆಡ್ಡಿ ಮಾತನಾಡಿ, ದೇಶದ ಮೇಲೆ 2 ಲಕ್ಷ ಕೋಟಿ ಸಾಲ‌‌ ಇದೆ. ಆರ್ಥಿಕತೆ ಹದಗೆಡುತ್ತಿದೆ, ಖಾಸಗಿಕರಣ ಆಗ್ತಿದೆ, ನೀಟ್, ಇಡಿ, ಸಿಬಿಐನಂತಹ ಎಲ್ಲಾ ಸಂಸ್ಥೆಗಳು ಹದೆಗೆಡುತ್ತಿವೆ. ಭರವಸೆ ಇದ್ದ ಸುಪ್ರಿಂ‌ ಕೋರ್ಟ್ ಕೂಡ ಎಸ್‌ಐಅರ್‌ಪರ ಇದೆ ಎಂದರು.

ಎಸ್‌ಐಅರ್ ಹಿಂದೆ ಏನೊ ಗೌಪ್ಯ ಉದ್ದೇಶ ಇದೆ. ನುಸುಳುಕೋರರು ಅಂದ್ರೆ 6 ಕೋಟಿ ಜನರು ನುಸುಳುಕೋರರ..ಜನರು ಮತ ಚಲಾಯಿಸಲು ನಾಲಾಯಕ್ ಅಂದ್ರೆ ನಿಮ್ಮ ಅರ್ಹತೆ ಏನು? ಇಲ್ಲಿ ಸರ್ವಾಧಿಕಾರ ತರುವ ಉದ್ದೇಶ ಸರ್ಕಾರಕ್ಕೆ ಇದ್ದಂಗಿದೆ. ಇದು ಬರೀ ಅಲ್ಪ ಸಂಖ್ಯಾತರ ಸಮಸ್ಯೆ ಅಲ್ಲಿ ದಲಿತರು, ಮಹಿಳೆಯರು ಮತ್ತು ಬಡವರ ಸಮಸ್ಯೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಸುರೇಶ ಬಿಜಾಪುರ್ ಮಾತನಾಡಿ, ಇದೇ ರೀತಿ ಮುಂದವರಿದರೆ ಎಸ್‌ಐಆರ್ ಮಾಡಿ ಎಷ್ಟು ಜನರನ್ನು ಮತದಾರರ ಪಟ್ಟಿಯಿಂದ ತೆಗಿಯುತ್ತೀರಿ ಎಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿದರು. ಸಾಂವಧಾನಿಕ ಸಂಸ್ಥೆಯಾದ ಆಯೋಗ ರಾಜಕೀಯ ಆಗಬಾರದು ಎಂದರು.

ಜನರು ರೊಚ್ಚಿಗೆದ್ದರೆ ಸರ್ಕಾರ ಇರುವುದಿಲ್ಲ, ಆಯೋಗವೂ ಇರುವುದಿಲ್ಲ. ನಾವು ಅಕ್ರಮ ವಲಸಿಗರ ಹೆಸರು ತೆಗೆಯಬಾರದು ಎಂದು ಹೇಳುತ್ತಿಲ್ಲ. ಭಾರತೀಯರ ಹೆಸರನ್ನು ಗುರಿಯಾಗಿಸಿ ತೆಗಿಯಬೇಡಿ ಎನ್ನುತ್ತಿದ್ದೇವೆ. ಮುಖ್ಯವಾಗಿ ಮುಸಲ್ಮಾನರನ್ನು ಗುರಿಯಾಗುವುಸುದು ಬಿಡಿ. ಇಲ್ಲೇ ಹುಟ್ಟಿ ಬೆಳೆದವರ ಹಕ್ಕು ಕಿತ್ತಿಕೊಳ್ಳುವುದು ಅಂದರೆ ಏನು ಎಂದು ಪ್ರಶ್ನಿಸಿದರು. ಆಧಾರ್ ಕಾರ್ಡ್ ಮುಂದಿಟ್ಟು ಎಸ್‌ಐಆರ್ ಮಾಡಿ ಎಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ನಮ್ಮ ಪೂರ್ವಜರು ಕಟ್ಟಿಕೊಟ್ಟ ದೇಶ ಉಳಿಸಿಕೊಳ್ಳಲು ನಾವು ಹೋರಾಡುತ್ತಿದ್ದೇವೆ. ಮತದಾನದ ಹಕ್ಕು ಹೋದರೆ ಈ ದೇಶದ ನಾಗರಿಕತ್ವ ಹೋದಂತೆ. ಈ ನಿಟ್ಟಿನಲ್ಲಿ ನಾವು ಗಂಭೀರವಾಗಿ ಕೆಲಸ ಮಾಡಿಬೇಕಾಗಿದೆ. ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಎಸ್‌ಐಆರ್ ವಿರೋಧಿಸಲೇಬೇಕು. ಜನರಿಗೆ ಇದರ ಅನಾಹುತಗಳನ್ನು ತಿಳಿಸಬೇಕು ಎಂದರು.

ವಿಜಯಪುರ ನಗರದಲ್ಲಿ ಜಾಗೃತಿ ಜಾಥಾ

ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ಪಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ, ನಗರದ ಗಾಂಧಿ ಕಟ್ಟೆ ಸರ್ಕಲ್ ಬಳಿಗೆ ಸಾಗಿತು. ಅಲ್ಲಿ ಜಾಥಾದ ನಾಯಕರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಐಆರ್‌ನ ಅನಾಹುತಗಳನ್ನು ತಿಳಿಸಿಕೊಟ್ಟು, ಅದನ್ನು ಹೇಗೆ ಎದುರಿಸಬೇಕು ಮತ್ತು ತಮ್ಮ ಮತದಾನದ ಹಕ್ಕನ್ನು ಹೇಗೆ ಉಳಿಸಿಕೊಳ್ಳಬೇಕು ಎಂದು ವಿವರಿಸಿದರು.

ಗಾಂಧಿ ಕಟ್ಟೆ ಸರ್ಕಲ್‌ನ ಕಾರ್ಯಕ್ರಮವನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಂತ ನೂರಾರು ಜನರು ವೀಕ್ಷಿಸಿದರು, ಭಾಷಣಗಳನ್ನು ಆಲಿಸಿದರು. ಇದೇ ಸಂದರ್ಭದಲ್ಲಿ ಜನರಿಗೆ ಕರಪತ್ರಗಳನ್ನು ವಿತರಿಸಲಾಯಿತು.

ಗಾಂಧಿ ಕಟ್ಟೆಯಿಂದ ಹೊರಟ ಜಾಥಾ ಇತಿಹಾಸ ಪ್ರಸಿದ್ದ ಜಾಮಿಯಾ ಮಸೀದಿ ಬಳಿಯ ಝಂಡಾ ಕಟ್ಟೆಗೆ ತೆರಳಿತು. ಅಲ್ಲಿ ಕಾಲಿ ಮಸ್ಜಿದ್ ಮುಂಭಾಗದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಹೋರಾಟಗಾರರು ಮಾತನಾಡಿದರು.

ಮೊದಲ ದಿನದ ಜಾಥಾ ವಿಜಯಪುರ ನಗರದಲ್ಲಿ ಸಮಾಪ್ತಿಗೊಂಡಿತು. ಎರಡನೇ ದಿನ, ಅಂದರೆ ಜೂನ್ 14ರಂದು ವಿಜಯಪುರದಿಂದ ಹೊರಡುವ ಜಾಥಾ ಬಾಗಲಕೋಟೆ ತಲುಪಲಿದೆ. ಅಲ್ಲಿನ ವಿವಿಧ ಕೇಂದ್ರಗಳಲ್ಲಿ ಜನಜಾಗೃತಿ ಸಭೆಗಳು ನಡೆಯಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...