HomeಅಂಕಣಗಳುKarnataka against SIRಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

- Advertisement -
- Advertisement -

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR – Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ. ಅಂಶುಮಂತ್ ಅವರು ಪ್ರಕಟಿಸಿದರು.

ಶಿವಮೊಗ್ಗದಲ್ಲಿ ಉದ್ಘಾಟನೆಗೊಂಡು ಶಿರಸಿ ಮತ್ತು ಭಟ್ಕಳದ ಮೂಲಕ ಸಂಚರಿಸಿ, ಇಂದು (ಎರಡನೇ ದಿನ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ‘ಎದ್ದೇಳು ಕರ್ನಾಟಕ’ ಮತ್ತು ‘ಎಸ್‌ಐಆರ್ ವಿರೋಧಿ ಒಕ್ಕೂಟ’ದ ಕಾರ್ಯಕರ್ತರ ಜನಜಾಗೃತಿ ಜಾಥಾವನ್ನು ಆತ್ಮೀಯವಾಗಿ ಸ್ವಾಗತಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಅಂಶುಮಂತ್ ಬೇರೆ ಬೇರೆ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಆತಂಕವಿದೆ. ಕರ್ನಾಟಕದಲ್ಲಿ ಇಂತಹ ಯಾವುದೇ ಲೋಪಗಳು ಮರುಕಳಿಸದಂತೆ ನಾವು ಎಚ್ಚರ ವಹಿಸಬೇಕಾಗಿದೆ, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮತ್ತು ಬೂತ್ ಮಟ್ಟದ ಏಜೆಂಟರ (BLA) ಜವಾಬ್ದಾರಿ ಅತ್ಯಂತ ಹೆಚ್ಚಾಗಿದೆ. ಸಂವಿಧಾನ ನಮಗೆ ನೀಡಿರುವ ಪವಿತ್ರವಾದ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು.

ಭಾರತೀಯ ಚುನಾವಣಾ ಆಯೋಗವು ಯಾವುದೇ ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಅಥವಾ ಸರ್ಕಾರದ ಪರವಾಗಿ ಕೆಲಸ ಮಾಡಬಾರದು. ಅದು ಸ್ವತಂತ್ರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಎಸ್‌ಐಆರ್ ಪ್ರಕ್ರಿಯೆ ನಡೆಯುವಾಗ ಬಡವರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳಿಗೆ ಧಕ್ಕೆಯಾಗದಂತೆ ರಕ್ಷಿಸಬೇಕು. ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿ ಸಲ್ಲಿಸಲು ಸಾರ್ವಜನಿಕರಿಗೆ ಹೆಚ್ಚಿನ ಕಾಲಾವಕಾಶವನ್ನು ಆಯೋಗ ನೀಡಬೇಕು, “ಎಸ್‌ಐಆರ್ ಪ್ರಕ್ರಿಯೆಯ ಸಂದರ್ಭದಲ್ಲಿ ರಾಜ್ಯದ ಯಾವೊಬ್ಬ ನಾಗರಿಕನೂ ತನ್ನ ಮತದ ಹಕ್ಕನ್ನು ಕಳೆದುಕೊಳ್ಳದಂತೆ ಜಾಗ್ರತೆ ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗಾಗಿ, ಮತದಾರರ ಹಕ್ಕುಗಳ ರಕ್ಷಣೆಗಾಗಿ ನಡೆಯುವ ಈ ಹೋರಾಟದ ಪ್ರತಿ ಹಂತದಲ್ಲೂ ಕಾಂಗ್ರೆಸ್ ಪಕ್ಷವು ನಿಮ್ಮ ಜೊತೆಗೆ ದೃಢವಾಗಿ ನಿಲ್ಲಲಿದೆ.” ಎಂದು ತಿಳಿಸಿದರು.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ, “ಸ್ವಾತಂತ್ರ್ಯದ ನಂತರ ದೇಶದ ಪ್ರತಿ ಪ್ರಜೆಯೂ ಮತದಾನದಲ್ಲಿ ಭಾಗವಹಿಸಬೇಕು ಎಂಬುದು ಸಂವಿಧಾನದ ಆಶಯವಾಗಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ತೀವ್ರ ವಿಶೇಷ ಪರಿಷ್ಕರಣೆಯು ಸಂವಿಧಾನದ ಮೂಲ ಆಶಯಗಳನ್ನೇ ಬುಡಮೇಲು ಮಾಡುತ್ತಿದೆ. ಅರ್ಹರನ್ನು ಮತಪಟ್ಟಿಯಿಂದ ಹೊರಗಿಟ್ಟು, ಅವರನ್ನು ‘ಅನುಮಾನಾಸ್ಪದ ಮತದಾರರು’ ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಭಾರತೀಯನಾದ ನಾನು ಭಾರತೀಯನೇ ಎಂದು ಸಾಬೀತುಪಡಿಸಿಕೊಳ್ಳಬೇಕಾದ ದುಸ್ಥಿತಿಗೆ ನಾಗರಿಕರನ್ನು ತಳ್ಳಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಆಯೋಗದ ಕಾರ್ಯವೈಖರಿ ನಿಸ್ಪಕ್ಷಪಾತವಾಗಿಲ್ಲ ಎಂಬ ಆರೋಪಗಳು ನಾಗರಿಕ ಸಮಾಜದಿಂದ ಕೇಳಿಬರುತ್ತಿವೆ. ಇದು ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿ. ಎಸ್‌ಐಆರ್ (SIR) ಎಂಬುದು ಜನತಂತ್ರದ ಮೇಲಿನ ದಾಳಿಯಾಗಿದ್ದು, ಇದನ್ನು ಪಕ್ಷ, ಸಂಘಟನೆಗಳ ಭೇದ ಮರೆತು ವಿರೋಧಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ಈ ಜಾಥಾದ ಉದ್ದೇಶವು ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರ ವಹಿಸುವುದೇ ಆಗಿದೆ” ಎಂದು ಕರೆ ನೀಡಿದರು.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನವಿರೋಧಿ ಮತ್ತು ಸಂವಿಧಾನ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತದೆ. ಈ ಹಿಂದ ಇದ್ದ ಹಲವು ಸರ್ಕಾರಗಳು ದೇಶದಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಲಭ್ಯವಾಗಬೇಕು ಆ ಮುಖೇನ ಹೆಚ್ಚೆಚ್ಚು ಮತದಾನದ ಮೂಲಕ ಒಂದು ಚುನಾಯಿತ ಸರ್ಕಾರ ಆಯ್ಕೆಯಾಗಬೇಕು ಎಂದು ಹೇಳುತ್ತಿದ್ದವು. ಆದರೆ ಈಗಿನ ಸರ್ಕಾರ ಯಾರು ಮತದಾರರಾಗಿ ಇರಬೇಕು ಎಂದು ನಿರ್ಧರಿಸಿ ಸರ್ಕಾರ ಮತದಾರರನ್ನ ಆಯ್ಕೆ ಮಾಡುತ್ತಿದೆ. ಈ SIR ಪ್ರಕ್ರಿಯೆಯಲ್ಲಿ ಮತದಾರರು ಹಲವು ರೀತಿಯ ದಾಖಲೆಗಳನ್ನು ನೀಡಬೇಕು ಎಂದು ಹೇಳುತ್ತಿದೆ ಆದರೆ ಈ ಬಡವರು ಅಲ್ಪಸಂಖ್ಯಾತರು, ಆದಿವಾಸಿಗಳ ಬಳಿ ಇವರು ಹೇಳುವ ಯಾವ ದಾಖಲೆಗಳು ಇರತ್ತೆ? ಆಗ ಇವರನ್ನು ಮತದಾನ ದಿಂದ ಹೊರಗಿಟ್ಟು ಇವರ ಪರವಾದವರು ಮಾತ್ರ ಈ ಹಕ್ಕಿನಲ್ಲಿ ಉಳಿಯುವಂತೆ ಮಾಡುತ್ತಾರೆ ಇದು ಅಕ್ಷಮ್ಯ ಮತ್ತು ಅಸಂವಿಧಾನಿಕ ಹಾಗಾಗಿ SIR ಅನ್ನು ಜಾರಿ ಮಾಡಲು ಬಿಡಬಾರದು ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ಪ್ರಗತಿಪರ ಚಿಂತಕ ಎಲ್ದೊ ಹೊನ್ನಕೂಡಿಗೆ ಕೇಂದ್ರ ಚುನಾವಣಾ ಆಯೋಗದ ನಡೆಯನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ‘ಎದ್ದೇಳು ಕರ್ನಾಟಕ’ ಮತ್ತು ‘ಎಸ್‌ಐಆರ್ ವಿರೋಧಿ ಒಕ್ಕೂಟ’ದ ಪ್ರಮುಖ ಪದಾಧಿಕಾರಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್ ಮುನ್ನ ಕಡೂರು, ರಾಮು ಕೌಳಿ, ಸಂದೀಪ್ ಸುಮಂತ್ ರಾಜೀವ್ ಸರೋಜ ಮತ್ತು ಪವಿತ್ರ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...