HomeಅಂಕಣಗಳುKarnataka against SIRಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರ ಬಹಿರಂಗ ಸಭೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ, ಎಸ್‌ಐಆರ್ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಲ್ಲೂ ನಮಗೆ ನ್ಯಾಯ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್‌ನಿಂದ ಇತ್ತೀಚೆಗೆ ಬರುತ್ತಿರುವ ತೀರ್ಪುಗಳು ಆತಂಕ ಹುಟ್ಟಿಸುತ್ತಿವೆ ಎಂದರು.

ಎಸ್‌ಐಆರ್‌ನಲ್ಲಿ ಮೊದಲು ಮತದಾರರ ಪಟ್ಟಿಯಿಂದ ತೆಗಿಯುತ್ತಾರೆ, ಆಮೇಲೆ ನಾಗರಿಕರಲ್ಲ ಎನ್ನುತ್ತಾರೆ. ಈಗಾಗಲೇ ಪ್ರಾದೇಶಿಕ ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬರುತ್ತಿದ್ದಾರೆ. ಈ ಅಪಾಯವನ್ನು ಎದುರಿಸಲು ಈಗ ಎದ್ದು ನಿಲ್ಲದಿದ್ದರೆ ಮುಂದೆ ಭಯಾನಕ ದಿನಗಳು ಬರಲಿವೆ ಎಂದು ಎಚ್ಚರಿಸಿದರು.

ಜನರು ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಹೋರಾಟಗಳು ಮಾಡಬಾರದು ಎಂದು ಜಾತಿ ಧರ್ಮಗಳ ಮಧ್ಯೆ ಜಗಳ ತಂದಿಡುತ್ತಿದ್ದಾರೆ. ಬಿಜೆಪಿ ಆರ್‌ಎಸ್‌ಎಸ್ ಶಕ್ತಿಗಳ ವಿರುದ್ದ ನಾವು ಹೋರಾಡಬೇಕು. ಇಲ್ಲದಿದ್ದರೆ ಸಂವಿಧಾನ ನಾಶವಾಗಲಿದೆ, ಮನುಸ್ಮೃತಿ ಜಾರಿಗೆ ಬರಲಿದೆ ಎಂದರು.

ಹೋರಾಟಗಾರ ಬಿಎಸ್. ಸೊಪ್ಪಿನ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆ, ರಾಜಕೀಯ ವಲಯದ ಬೆಳವಣಿಗೆಗಳು ನೋಡುವಾಗ ಭಯವಾಗ್ತಿದೆ. ಇದುವರೆಗೆ ನಡೆದ ಜನ ಪ್ರತಿನಿಧಿಗಳ ಅಯ್ಕೆ ಮುಂದೆ ನಡೆಯುವುದಿಲ್ಲ ಎಂಬ ಆತಂಕ ಶುರುವಾಗಿದೆ. ಸಾಂವಿಧಾನಿಕ ಸಂಸ್ಥೆಗಳು ಆಡಳಿತ ಪಕ್ಷದ ಕೈಗೊಂಬೆಯಾಗಿವೆ. ಇದರ ವಿರುದ್ದ ನಾವು ಎಚ್ಚೆತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಹಿಂದೆ ಸಂವಿಧಾನ, ಸರ್ಕಾರ ನಾವು ಈ ದೇಶದವರು ಎಂದು ಹೇಳುತಿತ್ತು. ಈಗ ನಾವು ದಾಖಲೆ ಕೊಟ್ಟು ಸಾಬೀತುಪಡಿಸಬೇಕಾಗಿದೆ. ನಮ್ಮಲ್ಲಿರುವ ಆಧಾರ್ ಕಾರ್ಡ್, ರೇಷನ್ ಕಾರ್ಡ್‌ ಎಸ್‌ಐಆರ್‌ಗೆ ಅರ್ಹ ದಾಖಲೆಯಲ್ಲ ಎಂದಿದ್ದಾರೆ. ಹೀಗಿರುವಾಗ ನಾವು ಎಂತಹ ಸಂಕಷ್ಟದ ಪರಿಸ್ಥಿಯಿಯಲ್ಲಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗಾಗಲೇ 13 ರಾಜ್ಯಗಳಲ್ಲಿ 6.5. ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ‌. ಇನ್ನೂ 6 ಕೋಟಿ ಜನರನ್ನು ಹೊರಗಿಡುತ್ತಾರೆ. ಹಾಗಾದರೆ, ಇವರೆಲ್ಲ ಪಾಕಿಸ್ತಾನಿಗಳ? ಎಂದು ಪ್ರಶ್ನಿಸಿದರು. ಸರ್ಕಾರದ ಒಳ ಉದ್ದೇಶ ಬಡವರು, ದಲಿತರು, ಕಾರ್ಮಿಕರನ್ನು ಮತದಾರರ ಪಟ್ಟಿಯಿಂದ ಹೊರ ಹಾಕುವುದು. ಏಕೆಂದರೆ ಇವರಿಗೆ ಅವರು ಮತ ಹಾಕುವುದಿಲ್ಲ ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಗುರುನಾಥ್ ಉಳ್ಳಿಕಾಶಿ ಮಾತನಾಡಿ, ಎಸ್‌ಐಆರ್ ವೇಳೆ 12 ದಾಖಲೆಗಳನ್ನು ತೋರಿಸಿ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ದಾಖಲೆ ಕೊಡಬೇಕಾದವರು ನಾವಲ್ಲ, ಈ ಷಡ್ಯಂತ್ರ್ಯ ರೂಪಿಸಿದರು. ಅಂದರೆ ಆರ್‌ಎಸ್‌ಎಸ್‌, ಸಂಘಪರಿವಾರದವರು. ಏಕೆಂದರೆ, ಅವರ ಸಂಘಟನೆ ಇನ್ನೂ ನೋಂದಣಿಯೇ ಆಗಿಲ್ಲ. ಅವರು ಮೊದಲು ದಾಖಲೆಗಳನ್ನು ಕೊಡಲಿ, ಬಳಿಕ ನಾವೂ ಕೊಡುತ್ತೇವೆ ಎಂದು ಹೇಳಿದರು.

ಲಡಾಯಿ ಪ್ರಕಾಶನದ ಬಸವರಾಜ್ ಸೂಳೆಭಾವಿ ಮಾತನಾಡಿ, ಎಸ್ಐಅರ್ ಮೂಲಕ ಈ ದೇಶದ ಜನರ ನಾಗರಿಕತ್ವ ಪರಿಶೀಲಿಸಲು ಹೊರಟವರಿಗೆ ನಮ್ಮನೊಂದು ಸವಾಲಿದೆ. ದೆಹಲಿಯ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಹೆಸರಿದೆ. ಅದರಲ್ಲಿ ಒಬ್ಬರೇ ಒಬ್ಬ ಆರ್‌ಎಸ್‌ಎಸ್‌ ಸಂಘ ಪರಿವಾರದವರ ಹೆಸರು ತೋರಿಸಲಿ ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಂಘಪರಿವಾರದವರು ಬ್ರಿಟಿಷರ ಜೊತೆ ಕೈಜೋಡಿಸಿದ್ದರು ಎಂದು ಆರೋಪಿಸಿದರು.

ಎಸ್‌ಐಆರ್ ಮೂಲಕ ನೀವು ಕಿತ್ತುಕೊಳ್ಳಲು ಮುಂದಾಗಿರುವ ನಮ್ಮ ನಾಗರಿಕತ್ವ ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ, ನಮ್ಮ ಹಕ್ಕುಗಳನ್ನು ಉಳಿಸುತ್ತೇವೆ. ಎಸ್‌ಐಅರ್ ಮೂಲಕ ನೀವು ಈ ದೇಶದಲ್ಲಿ ಕ್ರಾಂತಿಗೆ ನಾಂದಿ ಹಾಡುತಿದ್ದೀರಿ, ನಾವು ಆ ಕ್ರಾಂತಿಗೆ ಸಿದ್ದರಾಗುತ್ತೇವೆ ಎಂದರು.

ಅಮ್ಮಾರೂಡ ಗುರುಪೀಠದ ಶ್ರೀ ರಾಘವೇಂದ್ರ ಸ್ವಾಮೀಜಿ ಮಾತನಾಡಿ, ನಾವು ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯದವರು ಒಗ್ಗಟ್ಟಾದರೆ ಯಾವುದೇ ಎಸ್ಐಆರ್ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮ‌ ಪೂರ್ವಜರು ತ್ಯಾಗಗಳನ್ನು ಮಾಡಿ ನಮಗೆ ಸ್ವಾತಂತ್ರ್ಯ ಕೊಡಿಸಿದರು. ಬಾಬಾ ಸಾಹೇಬರು ಸಂವಿಧಾನದ ಮೂಲಕ ನಮಗೆ ಹಕ್ಕುಗಳನ್ನು ನೀಡಿದರು. ಅದನ್ನು ಕೇಳುವ ಅವಕಾಶ ನಮಗಿದೆ ಎಂದರು.

ನಮ್ಮ ಸಮಾಜದಲ್ಲಿ ತಾರತಮ್ಯಗಳು ಮುಂದುವರಿದಿವೆ. ಮುಂದೆ ಇದ್ದವರು ಇನ್ನೂ ಮುಂದುವರಿಯುತ್ತಿದ್ದಾರೆ. ಹಿಂದುಳಿದವರು ಹಿಂದೆಯೇ ಇದ್ದೇವೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಅದಕ್ಕಾಗಿ ನಾವೆಲ್ಲ‌ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಮುನ್ನಡೆಸುತ್ತಿರುವ ಯೂಸುಫ್ ಕನ್ನಿ, ಇಸಾಬೆಲ್ಲ ಝೇವಿಯರ್, ಸಂವಿಧಾನ ಸುರಕ್ಷಾ ಸಮಿತಿಯ ಸಂಚಾಲಕ ಅಶ್ರಫ್ ಅಲೀ ಮಾತನಾಡಿದರು.

ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...