HomeಅಂಕಣಗಳುKarnataka against SIRಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

- Advertisement -
- Advertisement -

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಡಾ. ಇಸಾಬೆಲ್ಲ ಝೇವಿಯರ್ ಹೇಳಿದರು.

ಗದಗದ ಪತ್ರಿಕಾ ಭವನದಲ್ಲಿ ಬುಧವಾರ (ಜೂನ.17) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಐಆರ್‌ ಎಂಬುವುದು ಹೆಸರಿಗೆ ಮತದಾರರ ಪಟ್ಟಿಯ ಪರಿಷ್ಕರಣೆ ಆಗಿರಬಹುದು. ಆದರೆ, ಇದರ ಹಿಂದಿನ ಉದ್ದೇಶ ಬೇರೆಯದ್ದೇ ಇದೆ. ಇದು ಆರ್‌ಎಸ್‌ಎಸ್‌-ಸಂಘಪರಿವಾರದ ಹಿಡನ್‌ ಅಜೆಂಡಾದ ಜಾರಿ ಪ್ರಕ್ರಿಯೆ ಎಂದು ಟೀಕಿಸಿದರು.

ಎಸ್‌ಐಆರ್‌ ಪ್ರಕ್ರಿಯೆ ಸಂಪೂರ್ಣವಾಗಿ ಒಪ್ಪುವಂತದಲ್ಲ. ನಾವು ಮತದಾರರ ಪಟ್ಟಿಯ ಪರಿಷ್ಕರಣೆಯ ವಿರುದ್ದವಿಲ್ಲ, ವಿಶೇಷ ಪರಿಷ್ಕರಣೆಯನ್ನು ವಿರೋಧಿಸುತ್ತೇವೆ. ಲಾಜಿಕಲ್ ಡಿಸ್ಕ್ರಿಪೆನ್ಸಿಯಂತಹ ಕೋಟ್ಯಾಂತರ ಮತದಾರರನ್ನು ಹೊರಗಿಡುವ ಕುತಂತ್ರವನ್ನು ಒಪ್ಪುವುದಿಲ್ಲ ಎಂದರು.

ಎಸ್‌ಐಆರ್‌ ಹೆಚ್ಚು ಪರಿಣಾಮ ಎದುರಿಸುವವರು ನಮ್ಮ ಹೆಣ್ಣು ಮಕ್ಕಳು. ಅವರಿಗೆ ತಂದೆಯ ಮನೆಯಲ್ಲಿ ಒಂದು ಹೆಸರಿದ್ದರೆ, ಮದುವೆಯಾದ ಮೇಲೆ ಮತ್ತೊಂದು ಹೆಸರಿರುತ್ತದೆ. ಎಸ್‌ಐಆರ್‌ನಲ್ಲಿ ಒಂದು ಸ್ಲೆಲ್ಲಿಂಗ್ ತಪ್ಪಿದರೂ ನಾವು ಮತದಾರರ ಪಟ್ಟಿಯಿಂದ ಹೊರ ಬೀಳುತ್ತೇವೆ. ಹೀಗಿರುವಾಗ ಹೆಸರು ಬದಲಿಸುವ ಹೆಣ್ಣು ಮಕ್ಕಳ ಗತಿಯೇನು ಎಂದು ಪ್ರಶ್ನಿಸಿದರು.

ಎಸ್‌ಐಆರ್‌ನಲ್ಲಿ ಹೆಚ್ಚು ಸಮಸ್ಯೆಗೆ ಸಿಲುಕುವವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಹೆಣ್ಣು ಮಕ್ಕಳು. ಅವರಲ್ಲಿ ಚುನಾವಣಾ ಆಯೋಗ ಕೇಳಿದ ದಾಖಲೆಗಳು ಇರಲು ಸಾಧ್ಯವೇ ಇಲ್ಲ. ಹಾಗಾಗಿ, ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯುವುದಾದರೆ ನಾವು ಮುಂದಿಟ್ಟಿರುವ ಬೇಡಿಕೆಗಳಿಗೆ ಆಯೋಗ ಸ್ಪಂದಿಸಬೇಕು. ಒಬ್ಬರೇ ಒಬ್ಬರು ಅರ್ಹರು ಮತದಾರರ ಪಟ್ಟಿಯಿಂದ ಹೊರ ಬೀಳದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದರು.

ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾದ ಸಂಚಾಲಕ ಹಾಗೂ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಯೂಸುಫ್ ಕನ್ನಿ ಮಾತನಾಡಿ, ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವುದು ಖಚಿತ ಎಂದು ಕಳವಳ ವ್ಯಕ್ತಪಡಿಸಿದರು.

ಇಲ್ಲದ ದಾಖಲೆಗಳನ್ನು ಕೇಳಿ, ಲಾಜಿಕಲ್ ಡಿಸ್ಕ್ರಿಪೆನ್ಸಿಯಂತಹ ಹೊಸ ನಿಯಮಗಳ ಮೂಲಕ ಲಕ್ಷಾಂತರ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ. ಎಸ್‌ಐಆರ್ ಮೂಲಕ ಚುನಾವಣಾ ಆಯೋಗ ನಮ್ಮ ಪೌರತ್ವ ಪರಿಶೀಲನೆಗೆ ಇಳಿದಿದೆ. ಪೌರತ್ವ ನಿರ್ಣಯಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಹಾಗಾಗಿ, ಈ ಪ್ರಕ್ರಿಯೆ ಒಪ್ಪುವಂತದಲ್ಲ ಎಂದರು.

ನುಸುಳುಕೋರರನ್ನು ಹೊರಗೆ ಹಾಕುತ್ತೇವೆ ಎಂಬ ನೆಪ ಹೇಳಿ ಎಸ್‌ಐಆರ್‌ ನಡೆಸುತ್ತಿದ್ದಾರೆ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಇವರೆಲ್ಲ ನುಸುಳುಕೋರರ ಎಂದು ಪ್ರಶ್ನಿಸಿದರು.

ಮೈ ಓಟ್ ಮೈ ರೈಟ್ ಆಂದೋಲನದ ನಾಯಕ ಆರಿಫುಲ್ಲಾ ಮಾತನಾಡಿ, ಚುನಾವಣಾ ಆಯೋಗದ ಮುಂದೆ ಜನ ಸಂಘಟನೆಗಳು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಬೇಕು. ಜನರ ಮತದಾನದ ಹಕ್ಕನ್ನು ಉಳಿಸುವ ಕೆಲಸವನ್ನು ಆಯೋಗ ಮಾಡಬೇಕು. ರಾಜ್ಯ ಸರ್ಕಾರ ಕೂಡ ತ್ವರಿತ ಗತಿಯಲ್ಲಿ ಜನರಿಗೆ ದಾಖಲೆಗಳನ್ನು ನೀಡಿ ಅವರ ಮತದಾನದ ಹಕ್ಕನ್ನು ಉಳಿಸುವ ಕೆಲಸ ಮಾಡಬೇಕು. ಆಯೋಗದ ಮೇಲೆ ಒತ್ತಡ ಹೇರಲು ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಆಯೋಜಿಸಿದ್ದೇವೆ. ಆಯೋಗ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ಗದಗ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ, ವೇಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಜುನೈದ್, ಸಂವಿಧಾನ ಸಂರಕ್ಷರ ಪಡೆಯ ಸರೋವರ್ ಬೆಂಕಿಕೆರೆ, ಗದಗ-ಬೆಟಗೇರಿ ಅಂಜುಮಾನ್ ಎ ಇಸ್ಲಾಮಿ ಅಧ್ಯಕ್ಷ ಅನ್ವರ್ ಬಾಗೇವಾಡಿ, ಸಾಮಾಜಿಕ ಕಾರ್ಯಕರ್ತ ಮುತ್ತು ಇದ್ದರು.

ಸುದ್ದಿಗೋಷ್ಠಿಗೂ ಮುನ್ನ ಎಸ್‌ಐಆರ್ ವಿರೋಧಿ ಜನಜಾಗೃತಿ ತಂಡ ಗದಗ-ಬೆಟಗೇರಿ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿತು. ಸ್ಥಳೀಯರ ಮುಖಂಡರು ಈ ವೇಳೆ ಸಾಥ್ ನೀಡಿದರು.

ಸುದ್ದಿಗೋಷ್ಠಿ ಬಳಿಕ ಜಾಥಾ ತಂಡ ಬೆಟಗೇರಿಯ ಸಂತ ಇಗ್ನೇಷಿಯಸ್ ಲೊಯೋಲಾ ಚರ್ಚ್‌ನಲ್ಲಿ ಫಾದರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.

ಸಂಜೆ 6 ಗಂಟೆಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸಮುದಾಯ ಸಂಘಟನೆಗಳ ಮುಖಂಡರೊಂದಿಗೆ ಜಾಥಾ ತಂಡದ ನಾಯಕರು ಸಭೆ ನಡೆಸಿದರು. ಎಸ್‌ಐಆರ್ ವಿಚಾರದಲ್ಲಿ ಬೀದಿಗಿಳಿದು ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...