HomeಅಂಕಣಗಳುKarnataka against SIRಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

- Advertisement -
- Advertisement -

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ ‘ಎಸ್‌ಐಆರ್ (SIR) ವಿರೋಧಿ ಕರ್ನಾಟಕ’ ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌.

ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ ಪ್ರೊ. ಎಂ.ವಿ. ಕೃಷ್ಣ ಅವರು, “ನಮ್ಮ ಮುಂದೆ ಬಹುದೊಡ್ಡ ಸವಾಲಿದೆ. ತುಂಬಾ ಜನರಿಗೆ ಎಸ್‌ಐಆರ್ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಆದರೆ, ಇದರಿಂದ ಲಕ್ಷಾಂತರ ಜನ ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಇಂತಹ ಅನ್ಯಾಯವನ್ನು ನಾವು ಖಂಡಿಸಲೇಬೇಕು ಹಾಗೂ ಜನಸಾಮಾನ್ಯರ ಬದುಕಿನ ಹಕ್ಕಿನ ಮೇಲೆ ದಾಳಿ ಮಾಡುವ ಈ ಹುನ್ನಾರವನ್ನು ಒಗ್ಗಟ್ಟಿನಿಂದ ತಡೆಯಬೇಕು,” ಎಂದು ಎಸ್‌ಐಆರ್‌ನಿಂದ ಆಗುತ್ತಿರುವ ಅನ್ಯಾಯಗಳನ್ನು ವಿವರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ಲೇಖಕ ನಂದಕುಮಾರ್ ಕುಂಬ್ರಿಉಬ್ಬು ಮಾತನಾಡಿ, “ಎಸ್‌ಐಆರ್ ಎನ್ನುವುದು ಕೇವಲ ‘ಮತದಾರರ ತೀವ್ರ ಪರಿಷ್ಕರಣೆ’ ಅಲ್ಲ, ಅದು ನೇರವಾದ ‘ಮತದಾನದ ನಿರಾಕರಣೆ’. ಇದರ ಮೂಲಕ ಕೇಂದ್ರ ಸರ್ಕಾರವು ಸಂವಿಧಾನ ಮತ್ತು ಚುನಾವಣಾ ಆಯೋಗವನ್ನು ಮುಂದಿಟ್ಟುಕೊಂಡೇ ಜನರನ್ನು ವಂಚಿಸುತ್ತಿದೆ,” ಎಂದು ಗಂಭೀರವಾಗಿ ಆರೋಪಿಸಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕರಾದ ಪೂರ್ಣಚಂದ್ರ, ಸಾಮಾಜಿಕ ಹೋರಾಟಗಾರ್ತಿ ಕಿರಣ ಪಿ.ಆರ್., ಶಿವಕುಮಾರ್, ಪ್ರೊ. ಎಂ.ವಿ. ಕೃಷ್ಣ, ಲಿಂಗರಾಜು, ನಸ್ರೀನ್ ಮಿಠಾಯಿ, ಮಹಿಳಾ ಮುನ್ನಡೆಯ ಶಿಲ್ಪಾ, ಕರ್ನಾಟಕ ಜನಶಕ್ತಿ ಸಂಘಟನೆಯ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಸಿದ್ಧರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮದ್ದೂರಿನಲ್ಲಿ ಜಾಗೃತಿ ಸಂವಾದ:

ತದನಂತರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮದ್ದೂರಿನ ಅಂಬೇಡ್ಕರ್ ಭವನದಲ್ಲಿ ಎಸ್‌ಐಆರ್ ಅನಾಹುತಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸಾರ್ವಜನಿಕರೊಡನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂವಾದದಲ್ಲಿ ಪಾಲ್ಗೊಂಡಿದ್ದ ಮಾಜಿ ಸಂಸದೆ ಹಾಗೂ ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್ ಅವರು, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಮತ್ತು ಪ್ರಸ್ತುತ ಎಸ್‌ಐಆರ್‌ನಿಂದ ಜನಸಾಮಾನ್ಯರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ಎಳೆಎಳೆಯಾಗಿ ವಿವರಿಸುವ ಮೂಲಕ ಅರಿವು ಮೂಡಿಸಿದರು.
ಹಾಗೆಯೇ, ಮಂಡ್ಯದ ಕರ್ನಾಟಕ ಜನಶಕ್ತಿ ಕಚೇರಿಯಲ್ಲೂ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ಜಾಥಾದ ಭಾಗವಾಗಿ ಮಹತ್ವದ ಸಭೆ ನಡೆಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...