HomeಅಂಕಣಗಳುKarnataka against SIRಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು.

ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ ದೃಷ್ಟಿಕೋನವು ಸಂವಿಧಾನ ವಿರೋಧಿಯಾಗಿದೆ. ಸೋದರತ್ವಕ್ಕೆ ಮತ್ತು ದೇಶದ ಏಕತೆಗೆ ಮಾರಕವಾಗಿರುವ ಇವರ ಮಾತುಗಳು, ಮತದಾನದ ಹಕ್ಕು ಉಳಿಯಬೇಕು ಎಂದು ಕೇಳುವವರ ಮೇಲೆ ದೇಶದ್ರೋಹಿ ಎಂಬ ಹಣೆಪಟ್ಟಿ ಕಟ್ಟುವ ಮೂಲಕ ಸುಳ್ಳುಗಳನ್ನು ಹರಡುತ್ತಿವೆ. ಈ ಸುಳ್ಳುಗಳ ಮುಖವಾಡವನ್ನು ನಾವು ಬಯಲು ಮಾಡಬೇಕಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರ ದೃಷ್ಟಿಕೋನದಿಂದ ನೋಡುವುದಾದರೆ, ಇ-ಶ್ರಮ್ ಕಾರ್ಡ್ ಪಡೆದ ಒಂದು ಕೋಟಿ ಏಳು ಲಕ್ಷ ಮಂದಿ, ಕಟ್ಟಡ ಕಾರ್ಮಿಕರು ಹಾಗೂ ಶಾಪ್ ಅಂಡ್ ಎಸ್ಟಾಬ್ಲಿಷ್ಮೆಂಟ್ ಕಾಯ್ದೆಯಡಿ ಇರುವ ಲಕ್ಷಾಂತರ ಕಾರ್ಮಿಕರಲ್ಲಿ ಸುಮಾರು 60 ಪ್ರತಿಶತದಷ್ಟು ಮಂದಿ ವಲಸೆ ಕಾರ್ಮಿಕರು. ಈ ನಾಡನ್ನು ಕಟ್ಟುತ್ತಿರುವ ಇವರ ಬಳಿ 2002ರ ದಾಖಲೆಗಳನ್ನು ಕೇಳುವುದು ಎಷ್ಟರಮಟ್ಟಿಗೆ ಸರಿ? ಇವರನ್ನು ಹೊರಗಿಡುವ ಕೆಲಸ ಖಂಡನೀಯ. ರಾಜ್ಯ ಸರ್ಕಾರವೂ ಸಹ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಸೌಲಭ್ಯಗಳನ್ನು ನಿಲ್ಲಿಸುವುದಾಗಿ ಬೆದರಿಕೆ ಹಾಕುತ್ತಿದ್ದು, ಇದನ್ನು ವಿರೋಧಿಸಬೇಕಿದೆ. ನಾವು ಕರ್ನಾಟಕದಲ್ಲಿ ಎಸ್ಐಆರ್ ಅನ್ನು ಸೋಲಿಸಲೇಬೇಕಿದೆ ಎಂದು ಅವರು ಕರೆ ನೀಡಿದರು.

ಹಿಂದೆ ಇದೇ ಪ್ರೀಡಂ ಪಾರ್ಕ್‌ನಲ್ಲಿ 25 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ದಾಖಲೆಗಳನ್ನು ಕೇಳುವ ಸರ್ಕಾರದ ವಿಧಾನದ ವಿರುದ್ಧ ಹೋರಾಡಿದ್ದೆವು. ಐದು ಕೋಟಿ ನಾಲ್ಕು ಲಕ್ಷ ಜನರ ಮ್ಯಾಪಿಂಗ್ ಕೆಲಸದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು. ಆದರೆ, ಈ ಕೆಲಸದ ನಂತರ ಕಾರ್ಯಕರ್ತೆಯರು ಜೈಲಿಗೆ ಹೋಗುವ ಆತಂಕವಿದೆ ಎಂದು ಆಗಲೇ ಸರ್ಕಾರಕ್ಕೆ ಎಚ್ಚರಿಸಿದ್ದೆವು. ಬಿಎಲ್‌ಒಗಳು 2002ರ ನಂತರದ ದಾಖಲೆಗಳನ್ನು ಕೇಳುತ್ತಿದ್ದಾರೆ. 2001ರ ದಾಖಲೆಗಳಿಲ್ಲದ ಸೊಸೆಯಂದಿರನ್ನು ಮನೆಯ ಮಗಳು ಅಥವಾ ಮೊಮ್ಮಗಳೆಂದು ದಾಖಲಿಸಲು ಅಧಿಕಾರಿಗಳು ಸೂಚಿಸುತ್ತಿದ್ದಾರೆ. ಇದರಿಂದ ಕೆಲಸ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರೇ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ. ಹಿಂದುಳಿದ ವರ್ಗಗಳ ವಾಸಸ್ಥಳಗಳಲ್ಲಿ ಈ ಸಮಸ್ಯೆ ಹೆಚ್ಚಿದೆ. ತಮಿಳುನಾಡು-ಕೇರಳದಲ್ಲಿ ನಡೆಯದ ಈ ಕುತಂತ್ರ ಕರ್ನಾಟಕದಲ್ಲಿ ನಡೆಯದಂತೆ ಸರ್ಕಾರ ನೋಡಿಕೊಳ್ಳಬೇಕು. ಜನರು ದಾಖಲೆ ಒದಗಿಸುವ ರೀತಿ ಸರ್ಕಾರ ಕೆಲಸ ಮಾಡಬೇಕೇ ಹೊರತು, ದಾಖಲೆ ಕೇಳಿ ಅವರನ್ನು ಸತಾಯಿಸಬಾರದು ಎಂದು ವರಲಕ್ಷ್ಮಿ ಅವರು ಸರ್ಕಾರವನ್ನು ಒತ್ತಾಯಿಸಿದರು.

ʼಚುನಾವಣಾ ಆಯೋಗಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು.
  3. ಚುನಾವಣಾ ಮ್ಯಾನ್ಯೂಯಲ್ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು.
  4. ಅಪೀಲ್ ಸಲ್ಲಿಸಲು ಕನಿಷ್ಟ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು.

‘ರಾಜ್ಯ ಸರಕಾರಕ್ಕೆʼ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲಿದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...