HomeಅಂಕಣಗಳುKarnataka against SIRಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು:...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

- Advertisement -
- Advertisement -

“ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ 19.37 ಕೋಟಿಗೆ ಏರಿಕೆಯಾಯಿತು. ಆದರೆ, ಇಂದು 2024ರಲ್ಲಿ ಸರ್ಕಾರ ರಚಿಸಿದವರು, 2025ರ ಹೆಸರಿನಲ್ಲಿ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ನೆಪದಲ್ಲಿ ಕೋಟ್ಯಂತರ ಜನರನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ” ಎಂದು ಜಮಾತೆ ಇಸ್ಲಾಮಿ ಹಿಂದ್‌ನ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಯೂಸುಫ್ ಕನ್ನಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಾತನಾಡಿದ ಅವರು, “ಒಟ್ಟು 6 ಕೋಟಿ 50 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇವರೆಲ್ಲರೂ ನುಸುಳುಕೋರರಾ ಅಥವಾ ಸತ್ತು ಹೋಗಿದ್ದಾರಾ? 2024ರಿಂದ 26ರ ಅವಧಿಯಲ್ಲಿ ಸತ್ತವರನ್ನು ನೆಪವಾಗಿಟ್ಟುಕೊಂಡು ಚುನಾವಣೆಯಲ್ಲಿ ಗೆದ್ದವರು, ಈಗ 65 ಲಕ್ಷ ಜನರನ್ನು ಹೊರಹಾಕುವಾಗ 23 ಲಕ್ಷ ಜನ ಸತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಈ ಹಿಂದೆ ಈ ಸತ್ತವರು ಮತ ಹಾಕಿದ್ದರೇ? ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ ಆ ಜನರು ಯಾರು ಎಂಬುವುದನ್ನು ಚುನಾವಣಾ ಆಯೋಗ ಮೊದಲು ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದರು.

“ಇಲ್ಲಿಯವರೆಗೆ ಪಟ್ಟಿಯಿಂದ ತೆಗೆದ ಲಕ್ಷಾಂತರ ಜನರಲ್ಲಿ ಒಬ್ಬನೇ ಒಬ್ಬ ನುಸುಳುಕೋರ ಸಿಕ್ಕಿಲ್ಲ. ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಹೊರಗಿಟ್ಟು ಚುನಾವಣೆ ನಡೆಸಿದ್ದು ಏಕೆ? ಇದು ಚುನಾವಣಾ ಆಯೋಗದ ಜವಾಬ್ದಾರಿಯಲ್ಲವೇ? ಈ ಹೊಣೆಗಾರಿಕೆಯನ್ನು ಆಯೋಗ ಏಕೆ ನಿರ್ವಹಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದರು.

“ಕರ್ನಾಟಕಕ್ಕೆ ಎಸ್ಐಆರ್ (SIR) ಕಾಲಿಟ್ಟಿದೆ. ಕಳೆದ ಆರು ತಿಂಗಳಿನಿಂದ ನೂರಾರು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಒಂದಕ್ಕೂ ಉತ್ತರ ಸಿಕ್ಕಿಲ್ಲ. ‘ಎದ್ದೇಳು ಕರ್ನಾಟಕ’, ‘ನನ್ನ ಮತ-ನನ್ನ ಹಕ್ಕು’, ‘ಜಾಗೃತ ಕರ್ನಾಟಕ’ದಂತಹ ಸಂಘಟನೆಗಳು ಜನರಲ್ಲಿ ಅರಿವು ಮೂಡಿಸಲು ಹೋಗುತ್ತಿದ್ದೇವೆ. ಆದರೆ, ಎಸ್ಐಆರ್ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯೇ ಇಲ್ಲ. ಹಿಂದೆಲ್ಲಾ ಚುನಾವಣಾ ಆಯೋಗವೇ ಹಳ್ಳಿ ಹಳ್ಳಿಗಳಿಗೆ ಹೋಗಿ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುತ್ತಿತ್ತು. ಈಗ ಅದೇ ಆಯೋಗ ಮಾಡುತ್ತಿರುವುದೇನು?” ಎಂದು ಅವರು ತೀವ್ರವಾಗಿ ಆಕ್ಷೇಪಿಸಿದರು.

“ಈ ಸಭೆಯಲ್ಲಿರುವ ಪ್ರತಿಯೊಬ್ಬರೂ ಜಾಗೃತರಾಗಬೇಕು. ರಾಜ್ಯದಲ್ಲಿ ಯಾರೊಬ್ಬರ ಮತವೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮೆಲ್ಲಾ ಸಂಘಟನೆಗಳ ಜವಾಬ್ದಾರಿಯಾಗಿದೆ” ಎಂದು ಮೊಹಮ್ಮದ್ ಯೂಸುಫ್ ಕನ್ನಿ ಅವರು ಕರೆ ನೀಡಿದರು.

‘ಚುನಾವಣಾ ಆಯೋಗಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಅತಾರ್ತಿಕ ʼಲಾಜಿಕಲ್ ಡಿಸ್ಕ್ರಿಪೆನ್ಸಿʼ ಸಾಫ್ಟ್‌ವೇರ್ ಅನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಆಗ್ರಹಿಸಿದರು.
  2. ನೀವು ತಯಾರಿಸುವ ಮತದಾರರ ಪಟ್ಟಿಯ ಕರಡು ಪ್ರತಿಯನ್ನು (ಪರಿಶೀಲನೆಗೆ ಅವಕಾಶವಿರುವಂತೆ) ಕಂಪ್ಯೂಟರ್ ಓದುವ ಮಾದರಿಯಲ್ಲಿ ಕೊಡಬೇಕು ಎಂದು ಒತ್ತಾಯಿಸಿದರು.
  3. ಚುನಾವಣಾ ಮ್ಯಾನ್ಯೂಯಲ್‌ನಲ್ಲಿ ನೀಡಲಾಗಿರುವ ನಿರ್ದೇಶನದಂತೆ, ಕರಡು ಮತದಾರರ ಪಟ್ಟಿಯನ್ನು ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ಕರೆದು ಸಾರ್ವಜನಿಕ ಪರಿಶೀಲನೆಗೆ ಮತ್ತು ತಿದ್ದುಪಡಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
  4. ಅಪೀಲ್ ಸಲ್ಲಿಸಲು ಕನಿಷ್ಠ ಆರು ತಿಂಗಳ ಸಮಯಾವಕಾಶ ನೀಡಲೇ ಬೇಕು ಎಂದು ಒತ್ತಾಯಿಸಿದರು.

‘ರಾಜ್ಯ ಸರಕಾರಕ್ಕೆ’ ಪ್ರತಿರೋಧ ಸಮಾವೇಶದ ಆಗ್ರಹಗಳು:

  1. ಸರಳ ವಿಧಾನ ಬಳಸಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಚೆಕ್ ಲಿಸ್ಟ್ ರೀತಿ ಕೆಲಸ ಮಾಡುವ, ರಾಜ್ಯದ ಸ್ವಾಲಂಬಿ ಅರ್ಹ ಮತದಾರರ ಪಟ್ಟಿಯನ್ನು ತಯಾರಿಸಬೇಕು ಎಂದು ಆಗ್ರಹಿಸಿದರು.
  2. ಅರ್ಹ ಮತದಾರರಿಗೆ ಗ್ಯಾರಂಟಿಯಾಗಿ ಸ್ಮಾರ್ಟ್ ಕಾರ್ಡ್ ವಿತರಿಸಬೇಕು ಎಂದು ಒತ್ತಾಯಿಸಿದರು.
  3. ಎಸ್ಐಆರ್ ಕೇಳುವ ದಾಖಲೆಗಳಲ್ಲದ ಅರ್ಹ ಮತದಾರರಿಗೆ ಸ್ಥಳದಲ್ಲೇ ಅಗತ್ಯ ದಾಖಲೆ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...