HomeಮುಖಪುಟTMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

- Advertisement -
- Advertisement -

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಪಕ್ಷದ ಅಧ್ಯಕ್ಷ ಸ್ಥಾನದಿಂದ “ಕಿತ್ತೊಗೆದಿದ್ದಾರೆ” ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.ಅಲ್ಲದೆ, ತಾವು ಸ್ಥಾಪಿಸಿರುವ ಬಣವೇ “ಅಸಲಿ ಟಿಎಂಸಿ” ಎಂದು ಘೋಷಿಸಿಕೊಂಡಿರುವ ಬಂಡಾಯ ಶಾಸಕರು, ಪಕ್ಷದ ಹಿರಿಯ ನಾಯಕ ಅರೂಪ್ ರಾಯ್ ಅವರನ್ನು ತಮ್ಮ ಹೊಸ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಉಲುಬೇರಿಯಾ ಪುರ್ಬಾ ಕ್ಷೇತ್ರದ ಶಾಸಕ ಋತಬ್ರತಾ ಬ್ಯಾನರ್ಜಿ, “ನಾವು ಇಂದು (ಸೋಮವಾರ) ವಿಶೇಷ ಅಧಿವೇಶನವನ್ನು ನಡೆಸಿದ್ದು, ಪಕ್ಷದ ಪ್ರತಿನಿಧಿಗಳು ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಆಯ್ಕೆ ಮಾಡಿದ್ದಾರೆ. ಅರೂಪ್ ರಾಯ್ ಅವರು ಪಕ್ಷದ ಆರಂಭದ ದಿನಗಳಿಂದಲೂ ನಮ್ಮೊಂದಿಗಿದ್ದಾರೆ. ಹೊಸ ಸಮಿತಿಗೆ ಇನ್ನುಳಿದ 29 ಸದಸ್ಯರನ್ನು ಆಯ್ಕೆ ಮಾಡಲಾಗಿದೆ,” ಎಂದು ತಿಳಿಸಿದ್ದಾರೆ.

ದಂಗೆ ಎದ್ದಿರುವ ಶಾಸಕರು ಮಮತಾ ಬ್ಯಾನರ್ಜಿ ಅವರನ್ನು ಪಕ್ಷದಿಂದ ಸಂಪೂರ್ಣವಾಗಿ ಹೊರಹಾಕಿಲ್ಲ, ಬದಲಿಗೆ ಅವರನ್ನು ಕೇವಲ ‘ಮುಖ್ಯ ಸಲಹೆಗಾರರನ್ನಾಗಿ’ ಮುಂದುವರಿಸಲು ಬಯಸಿದ್ದಾರೆ. ಟಿಎಂಸಿ ಸಂವಿಧಾನದ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಬೇಕು. ಕೊನೆಯದಾಗಿ ಫೆಬ್ರವರಿ 2022 ರಲ್ಲಿ ಸಮಿತಿ ರಚನೆಯಾಗಿತ್ತು. ಹೀಗಾಗಿ ನಿಯಮದಂತೆಯೇ ಹೊಸ ಸಮಿತಿ ರಚಿಸಲಾಗಿದೆ ಎಂದು ಬಂಡಾಯ ನಾಯಕರು ವಾದಿಸಿದ್ದಾರೆ. ಈ ನಿರ್ಧಾರವನ್ನು ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗಕ್ಕೆ ತಿಳಿಸುವುದಾಗಿ ಅವರು ಹೇಳಿದ್ದಾರೆ. ಇದೇ ವೇಳೆ ಮಮತಾ ಅವರ ಸೋದರಸೊಸೆ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಹೆಸರನ್ನು ಸಭೆಯಲ್ಲಿ ಚರ್ಚಿಸಿಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಕಟ್ಟಾ ಬೆಂಬಲಿಗ ಹಾಗೂ ಪಶ್ಚಿಮ ಬಂಗಾಳದ ಮಾಜಿ ಸಚಿವ ಮದನ್ ಮಿತ್ರ ಈ ಬಂಡಾಯವನ್ನು ತೀವ್ರವಾಗಿ ಖಂಡಿಸಿದ್ದಾರೆ. “ಪಕ್ಷದ ಸಂರಚನೆ ಮತ್ತು ನಾಯಕತ್ವವನ್ನು ಬದಲಾಯಿಸುವ ಯಾವುದೇ ಅಧಿಕಾರ ಈ ಬಂಡಾಯ ಶಾಸಕರಿಗೆ ಇಲ್ಲ. ಪಕ್ಷಕ್ಕೊಂದು ಸಂವಿಧಾನವಿದೆ ಮತ್ತು ಅದರ ಪ್ರಕಾರ ಮಮತಾ ಬ್ಯಾನರ್ಜಿ ಅವರೇ ಪಕ್ಷದ ಏಕೈಕ ಅಧ್ಯಕ್ಷರು. ಈ ಹೊಸ ಸಮಿತಿ ರಚನೆ ಕಾನೂನುಬಾಹಿರ, ಇದನ್ನು ಮಾಡಲು ಅವರಿಗೆ ಸಾಧ್ಯವೇ ಇಲ್ಲ,” ಎಂದು ತಿರುಗೇಟು ನೀಡಿದ್ದಾರೆ.

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋತ ನಂತರ ಟಿಎಂಸಿ ಒಳಜಗಳದಿಂದ ಜರ್ಜರಿತವಾಗಿದೆ. ಜೂನ್ 3 ರಂದು ಪಕ್ಷದ ಒಟ್ಟು 80 ಶಾಸಕರ ಪೈಕಿ ಸುಮಾರು 60 ಶಾಸಕರು ಮಮತಾ ನಾಯಕತ್ವದ ವಿರುದ್ಧ ಬಂಡಾಯ ಎದ್ದು, ಋತಬ್ರತಾ ಬ್ಯಾನರ್ಜಿ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದರು. ಸ್ಪೀಕರ್ ಕೂಡ ಈ ಬಣಕ್ಕೆ ಮಾನ್ಯತೆ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಮಮತಾ ಬಣದ ಶೋಭಂದೇಬ್ ಚಟ್ಟೋಪಾಧ್ಯಾಯ ಸಲ್ಲಿಸಿದ್ದ ಅರ್ಜಿಗೆ ಮಧ್ಯಂತರ ಆದೇಶ ನೀಡಲು ಕಲ್ಕತ್ತಾ ಹೈಕೋರ್ಟ್ ನಿರಾಕರಿಸಿದೆ.

ಇತ್ತೀಚೆಗಷ್ಟೇ ಟಿಎಂಸಿ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್, ಪಕ್ಷದ 20 ಲೋಕಸಭಾ ಸಂಸದರು ತ್ರಿಪುರಾ ಮೂಲದ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ’ (NCP) ಯೊಂದಿಗೆ ವಿಲೀನಗೊಂಡು, ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟವನ್ನು ಬೆಂಬಲಿಸಲಿದ್ದಾರೆ ಎಂದು ಪ್ರಕಟಿಸಿದ್ದರು.

ಈ 20 ಬಂಡಾಯ ಸಂಸದರನ್ನು ಪಕ್ಷಾಂತರ ಕಾಯ್ದೆಯಡಿ ಸಂಸದ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಅಭಿಷೇಕ್ ಬ್ಯಾನರ್ಜಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ ಈ ತಿಂಗಳ ಆರಂಭದಲ್ಲೇ ಟಿಎಂಸಿಯ ಮೂವರು ರಾಜ್ಯಸಭಾ ಸಂಸದರು ರಾಜೀನಾಮೆ ನೀಡಿದ್ದು, ಇಬ್ಬರು ಪಕ್ಷವನ್ನೇ ತೊರೆದಿದ್ದಾರೆ. ಒಟ್ಟಾರೆಯಾಗಿ ಬಂಗಾಳದ ಚುನಾವಣಾ ಸೋಲು ಮಮತಾ ಬ್ಯಾನರ್ಜಿ ಅವರ ಸಾಮ್ರಾಜ್ಯವನ್ನೇ ನಡುಗಿಸಿದ್ದು, ಟಿಎಂಸಿ ಇಬ್ಬಾಗವಾಗುವ ಹಂತಕ್ಕೆ ತಲುಪಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...