Homeಮುಖಪುಟಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ 'ಮೊಟ್ಟೆ' ಔಟ್

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

- Advertisement -
- Advertisement -

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ ಒದಗಿಸುವ ಜವಾಬ್ದಾರಿಯನ್ನು ಹಿಂದೂ ಧಾರ್ಮಿಕ ಸಂಸ್ಥೆಯಾದ ಇಸ್ಕಾನ್‌ಗೆ ವಹಿಸಲಾಗಿದ್ದು, ಇದರ ಮೊದಲ ಪ್ರಮುಖ ಬದಲಾವಣೆಯಾಗಿ ಮೆನುವಿನಿಂದ ಮಾಂಸಾಹಾರಿ/ಮೊಟ್ಟೆ ಪದಾರ್ಥಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ.

ಇಸ್ಕಾನ್ ಸಂಸ್ಥೆಯು ತನ್ನ ಆವರಣದಲ್ಲಿ ನೀಡುವ ಶುದ್ಧ ಸಸ್ಯಾಹಾರಿ ಊಟವು ಜನಪ್ರಿಯವಾಗಿದ್ದರೂ, ಈಗ ಸರ್ಕಾರದ ಹೊಸ ನಿರ್ಧಾರದಿಂದಾಗಿ ಶಾಲಾ ಮಕ್ಕಳಿಗೆ ತಮಗೆ ಇಷ್ಟಬಂದದ್ದನ್ನು ತಿನ್ನುವ ಆಯ್ಕೆ ಇಲ್ಲದಂತಾಗಿದೆ.

ಸೋಮವಾರ ಬಜೆಟ್ ಭಾಷಣದಲ್ಲಿ ಈ ಕುರಿತು ಪ್ರಕಟಿಸಿರುವ ಬಂಗಾಳದ ಹಣಕಾಸು ಸಚಿವ ಸ್ವಪನ್ ದಾಸ್‌ಗುಪ್ತಾ, “ಪ್ರಾಥಮಿಕ ಶಾಲೆಗಳಲ್ಲಿ ಬಿಸಿಯೂಟದ ಸಾಮಗ್ರಿ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ₹6.78 ರಿಂದ ₹10 ಕ್ಕೆ ಹೆಚ್ಚಿಸಲಾಗುವುದು. ಕೋಲ್ಕತ್ತಾ ಪಾಲಿಕೆ ವ್ಯಾಪ್ತಿಯ ಶಾಲೆಗಳಲ್ಲಿ ಪೌಷ್ಟಿಕಾಂಶಯುಕ್ತ ಬೇಯಿಸಿದ ಬಿಸಿಯೂಟವನ್ನು ಒದಗಿಸಲು ಇಸ್ಕಾನ್ ಸಂಸ್ಥೆಯನ್ನು ತೊಡಗಿಸಿಕೊಳ್ಳಲಾಗುವುದು,” ಎಂದು ತಿಳಿಸಿದ್ದಾರೆ.

1995 ರ ಆಗಸ್ಟ್ 15 ರಂದು ಕೇಂದ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಆರಂಭವಾದ ಈ ಯೋಜನೆಗೆ ನಂತರದ ವರ್ಷಗಳಲ್ಲಿ ಅನ್ನ, ಬೇಳೆ ಸಾರು ನೀಡುವ ವ್ಯವಸ್ಥೆ ತರಲಾಯಿತು. ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಉಳಿದ ಐದು ದಿನಗಳಲ್ಲಿ ಅನ್ನ, ದಾಲ್ ಮತ್ತು ಆಲೂಗಡ್ಡೆ ಪಲ್ಯವನ್ನು ನೀಡಲಾಗುತ್ತಿತ್ತು. ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮೊಟ್ಟೆಯನ್ನು ಪ್ರೋಟೀನ್‌ನ ಪ್ರಮುಖ ಮೂಲವೆಂದು ಪರಿಗಣಿಸಲಾಗುತ್ತದೆ.

ಹಲವು ಶಾಲೆಗಳಲ್ಲಿ ಶಿಕ್ಷಕರೇ ಸ್ವತಃ ಹಣವನ್ನು ಸಂಗ್ರಹಿಸಿ ಮಕ್ಕಳಿಗೆ ಅಪರೂಪಕ್ಕೆ ಚಿಕನ್ ಅಥವಾ ಮೀನಿನ ಊಟವನ್ನು ಸಹ ಕೊಡಿಸುತ್ತಿದ್ದರು. ಮೊಟ್ಟೆ ಇಷ್ಟಪಡದ ಅಥವಾ ಸಸ್ಯಾಹಾರಿಗಳಾಗಿದ್ದ ವಿದ್ಯಾರ್ಥಿಗಳು ಅದನ್ನು ಬಿಟ್ಟು ಇತರ ಪದಾರ್ಥಗಳನ್ನು ಆಯ್ದುಕೊಳ್ಳುತ್ತಿದ್ದರು. ಆದರೆ ಈಗ ಇಡೀ ಮೆನುವನ್ನೇ ಬದಲಾಯಿಸಿರುವುದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ಸರ್ಕಾರವು ಸಸ್ಯಾಹಾರವನ್ನು ಬಲವಂತವಾಗಿ ಹೇರುತ್ತಿದೆ ಎಂದು ಆರೋಪಿಸಿವೆ.

ಕೋಲ್ಕತ್ತಾದ ಇಸ್ಕಾನ್ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಮಣ್ ದಾಸ್ ಮಾತನಾಡಿ, “ನಮ್ಮ ಬಿಸಿಯೂಟದಲ್ಲಿ ಮೊಟ್ಟೆ ಇರದಿದ್ದರೂ ಪೌಷ್ಟಿಕಾಂಶದಲ್ಲಿ ಯಾವುದೇ ಕೊರತೆಯಾಗುವುದಿಲ್ಲ. ನಾವು ಕಿಚಡಿಯೊಂದಿಗೆ ಪನೀರ್, ರಾಜ್ಮಾ ಮತ್ತು ಸೋಯಾಬೀನ್‌ಗಳಂತಹ ಪೌಷ್ಟಿಕಯುಕ್ತ ಪದಾರ್ಥಗಳನ್ನು ನೀಡುವ ಮೂಲಕ ಅದನ್ನು ಸರಿದೂಗಿಸುತ್ತೇವೆ. ಪ್ರಾಯೋಗಿಕ ಯೋಜನೆಯಾಗಿ ನಮ್ಮ ‘ಅನ್ನಮಿತ್ರ ಫೌಂಡೇಶನ್’ ಮೂಲಕ ಇದನ್ನು ಜಾರಿಗೊಳಿಸುತ್ತಿದ್ದೇವೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ದೇಶದ ಎಂಟು ರಾಜ್ಯಗಳ 12 ಲಕ್ಷ ವಿದ್ಯಾರ್ಥಿಗಳಿಗೆ ನಾವು ಈಗಾಗಲೇ ಇದೇ ರೀತಿ ಶುದ್ಧ ಸಸ್ಯಾಹಾರಿ ಬಿಸಿಯೂಟ ನೀಡುತ್ತಿದ್ದೇವೆ,” ಎಂದು ಸಮರ್ಥಿಸಿಕೊಂಡಿದ್ದಾರೆ.

ಬಿಸಿಯೂಟದ ವೆಚ್ಚ ಹೆಚ್ಚಿಸಿರುವುದನ್ನು ಶಿಕ್ಷಕರು ಸ್ವಾಗತಿಸಿದ್ದಾರಾದರೂ, ಮಕ್ಕಳು ಸಂಪೂರ್ಣ ಸಸ್ಯಾಹಾರಿ ಮೆನುವಿಗೆ ಹೇಗೆ ಒಗ್ಗಿಕೊಳ್ಳುತ್ತಾರೆ ಎಂಬ ಗೊಂದಲದಲ್ಲಿದ್ದಾರೆ ಅಲ್ಲದೆ ಅವರ ಆಯ್ಕೆಗೆ ಅವಕಾಶವಿಲ್ಲ ಎಂದಿದ್ದಾರೆ ಎಂದು ‘ಟೆಲಿಗ್ರಾಫ್ ಇಂಡಿಯಾ’ ವರದಿ ಮಾಡಿದೆ.

“ಶಾಲೆಗಳಲ್ಲಿ ಮೊಟ್ಟೆ ನೀಡುವ ದಿನದಂದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುತ್ತಾರೆ. ಇಸ್ಕಾನ್ ಸ್ವಚ್ಛವಾದ ಆಹಾರ ನೀಡುತ್ತದೆ ಎಂಬ ಭರವಸೆ ನಮಗಿದೆ, ಆದರೆ ಮಕ್ಕಳು ಸಂಪೂರ್ಣ ಸಸ್ಯಾಹಾರಕ್ಕೆ ಒಗ್ಗಿಕೊಳ್ಳುವುದು ಕಷ್ಟವಾಗಬಹುದು. ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲಿಸಿದರೆ ಒಳ್ಳೆಯದು.” ಎಂದು ರಾಜಾ ಡೇ (ಮುಖ್ಯೋಪಾಧ್ಯಾಯರು, ಮಿತ್ರ ಇನ್ಸ್ಟಿಟ್ಯೂಷನ್) ಟಿಲಿಗ್ರಾಫ್‌ ಇಂಡಿಯಾ ವರದಿ ಮಾಡಿದೆ.

“ನಮ್ಮ ಶಾಲೆಯ ಅನೇಕ ಬಡ ಮಕ್ಕಳಿಗೆ ಪನೀರ್ ಅಥವಾ ರಾಜ್ಮಾ ಎಂದರೆ ಏನೆಂದೇ ಗೊತ್ತಿಲ್ಲ. ಹೀಗಿದ್ದಾಗ ಇದು ಮಕ್ಕಳ ಮೇಲೆ ನಿರ್ದಿಷ್ಟ ಆಹಾರ ಪದ್ಧತಿಯನ್ನು ಬಲವಂತವಾಗಿ ಹೇರಿದಂತಾಗುತ್ತದೆ.” ಎಂದು ಸರ್ಕಾರಿ ಶಾಲಾ ಶಿಕ್ಷಕರಾದ ಸೌಗತ ಬಸು ತಿಳಿಸಿದ್ದಾರೆ.

ಬಿಜೆಪಿಯ ಶಿಕ್ಷಕರ ಸಂಘದ ಸಹ-ಸಂಚಾಲಕರಾದ ಪಿಂಟು ಪಾರುಯಿ ಮಾತನಾಡಿ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತಲೇ, “ಆಹಾರ ಪದಾರ್ಥಗಳನ್ನು ವಿದ್ಯಾರ್ಥಿಗಳ ಇಷ್ಟ ಮತ್ತು ಆದ್ಯತೆಗಳಿಗೆ ಅನುಗುಣವಾಗಿ ಸಿದ್ಧಪಡಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...