Homeಮುಖಪುಟತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ.

ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್ ಜಿ.ಎಸ್. ಆಶಾನಾಥ್ ಮತ್ತು ಕೌನ್ಸಿಲರ್ ಆರ್. ವಿನೋದ್ ಅವರು ‘ಭಾರತ ಮಾತೆ’ಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇತರ ಕೆಲವು ಕೌನ್ಸಿಲರ್‌ಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪರಿಭಾಷೆಯಾದ ‘ಬಲಿದಾನಿ’ಗಳ (ಹುತಾತ್ಮರು) ಹೆಸರಿನಲ್ಲಿ ಪ್ರಮಾಣ ವಚನ ವಚನ ಸ್ವೀಕಾರ ಮಾಡಿದ್ದರು. ಇನ್ನು ಹಲವರು ಶ್ರೀ ಪದ್ಮನಾಭಸ್ವಾಮಿ ಹಾಗೂ ಕೆಲವರು ‘ಆಟ್ಟುಕಲ್ ಅಮ್ಮ’ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇವರ ಜೊತೆಗೆ ಕೆಲವರು ತಮ್ಮ ಸ್ಥಳೀಯ ದೇವತೆಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು; ಉದಾಹರಣೆಗೆ ತಿರುವಲ್ಲಂ ಕೌನ್ಸಿಲರ್ ಗೋಪಕುಮಾರ್ ಅವರು ತಿರುವಲ್ಲಂ ಪರಶುರಾಮರ ಹೆಸರಿನಲ್ಲಿ, ಕಮಲೇಶ್ವರಂ ಕೌನ್ಸಿಲರ್ ವಿ. ಗಿರಿ ಅವರು ಇರುಂಕುಳಂಗರ ದುರ್ಗಾ ಭಗವತಿಯ ಹೆಸರಿನಲ್ಲಿ ಮತ್ತು ಪಂಗೋಡ್ ಕೌನ್ಸಿಲರ್ ವಿಷ್ಣು ಮೋಹನ್ ಅವರು ಉದಿಯನ್ನೂರು ದೇವಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೆಯೇ ವಲಿಯಾಸಾಲ ಕೌನ್ಸಿಲರ್ ವಿ.ಎಸ್. ಸೂರ್ಯ ಅವರು ‘ಕಾವಿಲಮ್ಮ’ನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

20 ಕೌನ್ಸಿಲರ್‌ಗಳಲ್ಲಿ ಆರ್. ಸುಗತನ್ ಕೂಡ ಒಬ್ಬರು. ಇವರನ್ನು ಕೇರಳದ ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಕಾಪಾ) ಅಡಿಯಲ್ಲಿ ಬಂಧಿಸಲಾಗಿದೆ. ಇವರು ಪ್ರಸ್ತುತ ತ್ರಿಸ್ಸೂರ್‌ನ ವಿಯ್ಯೂರ್ ಸೆಂಟ್ರಲ್ ಜೈಲಿನ ಉನ್ನತ ಭದ್ರತಾ ಸುಧಾರಣಾ ಕೇಂದ್ರದಲ್ಲಿದ್ದಾರೆ. ಕೊಲೆಯತ್ನ ಸೇರಿದಂತೆ ಹಲವಾರು ಗಂಭೀರ ಆರೋಪಗಳು ಒಳಗೊಂಡಂತೆ ಇವರ ವಿರುದ್ಧ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಇವರು ಮುಂದಿನ ನಾಲ್ಕು ವಾರಗಳೊಳಗೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಗತನ್ ಅವರು ಈ ಹಿಂದೆ ‘ಗುರುದೇವನ್’ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಿಪಿಐ(ಎಂ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯಡಿಎಫ್‌) ಎರಡೂ ಒಟ್ಟಿಗೆ ಸೇರಿ ಈ 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಒತ್ತಾಯಿಸುತ್ತಿವೆ.

ಎಲ್‌ಡಿಎಫ್‌ ಕೌನ್ಸಿಲ್ ಪಕ್ಷದ ನಾಯಕ ಅಡ್ವೊಕೇಟ್ ಎಸ್.ಪಿ. ದೀಪಕ್ ಅವರು 20 ಬಿಜೆಪಿ ಕೌನ್ಸಿಲರ್‌ಗಳನ್ನು ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರು ದೇವನಾಮದಲ್ಲಿ ಅಥವಾ ಕೇರಳ ಮುನ್ಸಿಪಾಲಿಟಿ ಕಾಯ್ದೆ 1994ರ ಸೆಕ್ಷನ್ 143ರ ಅಡಿಯಲ್ಲಿ ಕಡ್ಡಾಯಗೊಳಿಸಿರುವಂತೆ ಪ್ರಾಮಾಣಿಕವಾಗಿ ದೃಢೀಕರಿಸಿ ಪ್ರಮಾಣ ವಚನ ಸ್ವೀಕರಿಸುವ ಬದಲಾಗಿ, ವಿವಿಧ ದೇವತೆಗಳು, ಹುತಾತ್ಮರು, ರಾಜಕೀಯ ಚಳುವಳಿಗಳು ಮತ್ತು ರಾಜಕೀಯ ನಾಯಕರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಈ ಅರ್ಜಿಯಲ್ಲಿ ಆರೋಪಿಸಲಾಗಿತ್ತು.

ಪ್ರಮಾಣ ವಚನವು ಸಂವಿಧಾನಕ್ಕೆ ಬದ್ಧವಾಗಿರಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷಕ್ಕಾಗಲಿ ಅಥವಾ ಅದರ ಹುತಾತ್ಮರಿಗಾಗಲಿ ಅಲ್ಲ ಎಂದು ವಾದಿಸಿದ್ದರು. ಆದ್ದರಿಂದ ಈ ರೀತಿಯ ಪ್ರಮಾಣ ವಚನಗಳು ರಾಜ್ಯ ಚುನಾವಣಾ ಆಯೋಗದ ಕಡ್ಡಾಯ ನಿರ್ದೇಶನಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರ ಹೇಳಿದ್ದರು.

ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಯೋಜನವು ಪ್ರತಿವಾದಿ-ಕೌನ್ಸಿಲರ್‌ಗಳಿಗೆ ಇಂದಿನವರೆಗೆ (ಜೂ.24) ಲಭ್ಯವಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಯ ಸೆಕ್ಷನ್ 531ರ ಪ್ರಕಾರ, ಕೌನ್ಸಿಲ್‌ನ ರಚನೆಯಲ್ಲಿನ ಯಾವುದೇ ನ್ಯೂನತೆ, ಖಾಲಿ ಹುದ್ದೆ, ಅಕ್ರಮ ಅಥವಾ ವ್ಯಕ್ತಿಯೊಬ್ಬರ ಚುನಾವಣೆಯಲ್ಲಿನ ಕಾನೂನುಬಾಹಿರತೆಯ ಕಾರಣಕ್ಕಾಗಿ ಮಾತ್ರ ಮುನ್ಸಿಪಾಲಿಟಿ ಕೌನ್ಸಿಲ್, ಸ್ಥಾಯಿ ಸಮಿತಿ ಅಥವಾ ಇತರ ಯಾವುದೇ ಸಮಿತಿಯ ಯಾವುದೇ ಕಾಯ್ದೆ ಅಥವಾ ನಡಾವಳಿಗಳು ಅಸಿಂಧುಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ.

ಗ್ರಾಮ ಪಂಚಾಯತ್ ಸದಸ್ಯನ ಪ್ರಮಾಣವಚನವೂ ಅಸಿಂಧು

ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಪ್ರಮಾಣ ವಚನವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ಸಹ ನ್ಯಾಯಾಲಯವು ಪರಿಶೀಲನೆ ನಡೆಸಿದೆ.

ಪಂಚಾಯತ್ ರಾಜ್ ಕಾಯ್ದೆಯಡಿ ನಿಗದಿಪಡಿಸಿದ ನಮೂನೆಯು ಕೇವಲ ಎರಡು ಆಯ್ಕೆಗಳನ್ನು ಮಾತ್ರ ನೀಡುತ್ತದೆ; ಅವುಗಳೆಂದರೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದು ಅಥವಾ ಪ್ರಾಮಾಣಿಕವಾಗಿ ದೃಢೀಕರಿಸುವುದು ಎಂದು ನ್ಯಾಯಾಲಯವು ಹೇಳಿದೆ. ನಿಗದಿಪಡಿಸಿದ ನಮೂನೆಯಿಂದ ಯಾವುದೇ ರೀತಿಯಲ್ಲಿ ವಿಚಲಿತರಾಗುವುದು ಶಾಸನಬದ್ಧ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಆ ಸದಸ್ಯನ ಪ್ರಮಾಣ ವಚನವನ್ನು ಸಹ ಅಸಿಂಧು ಎಂದು ಘೋಷಿಸಿದೆ.

ಕೇರಳ ಮುನ್ಸಿಪಾಲಿಟಿ ಕಾಯ್ದೆಗೆ ಭಿನ್ನವಾಗಿ, ಪಂಚಾಯತ್ ರಾಜ್ ಕಾಯ್ದೆಯು ಪ್ರಮಾಣ ವಚನ ಅಸಿಂಧುಗೊಂಡ ಸದಸ್ಯರು ಕೈಗೊಂಡ ಕ್ರಮಗಳನ್ನು ರಕ್ಷಿಸುವ ಯಾವುದೇ ನಿಬಂಧನೆಯನ್ನು ಹೊಂದಿಲ್ಲ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಇದರ ಪರಿಣಾಮವಾಗಿ, ತೀರ್ಪು ಬಂದ ದಿನಾಂಕದವರೆಗೆ ಪ್ರತಿವಾದಿಯು ವಡಕ್ಕಂಚೇರಿ ಗ್ರಾಮ ಪಂಚಾಯತ್ ಸದಸ್ಯರಾಗಿ ನಿರ್ವಹಿಸಿದ ಎಲ್ಲಾ ಕಾರ್ಯಗಳು ಅಸಿಂಧು ಎಂದು ನ್ಯಾಯಾಲಯವು ತೀರ್ಪು ನೀಡಿದೆ; ಆದಾಗ್ಯೂ, ನೀಡಲಾದ ಸಮಯದೊಳಗೆ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅವರು ತಮ್ಮ ಸ್ಥಾನವನ್ನು ಕ್ರಮಬದ್ಧಗೊಳಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದೆ.









ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...