Homeಅಂತರಾಷ್ಟ್ರೀಯ2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ 'ನರಮೇಧ' ಎಂದ ವರದಿ

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

- Advertisement -
- Advertisement -

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ.

ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ 20,000ಕ್ಕೂ ಹೆಚ್ಚು ಮಕ್ಕಳನ್ನು ಹತ್ಯೆ ಮಾಡಿದ್ದು, 44,000ಕ್ಕೂ ಹೆಚ್ಚು ಮಕ್ಕಳನ್ನು ಗಾಯಗೊಳಿಸಿವೆ ಎಂದು ಆಯೋಗ ವಿವರಿಸಿದೆ.

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ಉಲ್ಲಂಘನೆಗಳ ಬಗ್ಗೆ ತನಿಖೆ ನಡೆಸಲು 2021ರಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಆಯೋಗ ತನ್ನ ವರದಿಯಲ್ಲಿ, ಇಸ್ರೇಲ್ ಮತ್ತು ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ನಡೆದ ಮಿಲಿಟರಿ ಕಾರ್ಯಾಚರಣೆಗಳ ಪ್ರಮಾಣ ಮತ್ತು ಸ್ವರೂಪವು “ಪ್ಯಾಲೆಸ್ತೀನ್ ಮಕ್ಕಳ ದೊಡ್ಡ ಮಟ್ಟದ ಸಾವು, ಗಾಯ ಮತ್ತು ಆಘಾತಕ್ಕೆ” ಕಾರಣವಾಗಿದೆ ಎಂದು ಹೇಳಿದೆ.

ಅಕ್ಟೋಬರ್ 2025ರ ಕದನ ವಿರಾಮದ ನಂತರವೂ ಮಕ್ಕಳು ಕೊಲ್ಲಲ್ಪಡುತ್ತಿದ್ದಾರೆ ಮತ್ತು ತೀವ್ರವಾಗಿ ಗಾಯಗೊಳ್ಳುತ್ತಿದ್ದಾರೆ. ಇಸ್ರೇಲ್ ಕದನ ವಿರಾಮವನ್ನು ಮತ್ತು ಅಂತಾರಾಷ್ಟ್ರೀಯ ಕಾನೂನಿನಡಿ ಪ್ಯಾಲೆಸ್ತೀನ್ ಮಕ್ಕಳಿಗೆ ನೀಡಬೇಕಾದ ರಕ್ಷಣೆಯನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿದೆ ಎಂದು ಆಯೋಗದ ಅಧ್ಯಕ್ಷರಾದ ಶ್ರೀನಿವಾಸನ್ ಮುರಳಿಧರ್ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಮಕ್ಕಳನ್ನು ಬಂಧಿಸಿ, ಬಂಧನ ಕೇಂದ್ರಗಳಲ್ಲಿ ಚಿತ್ರಹಿಂಸೆ ಮತ್ತು ಇತರ ರೀತಿಯ ದುರ್ನಡತೆಗೆ ಒಳಪಡಿಸಲಾಗಿದೆ ಎಂದು ಆಯೋಗ ಪತ್ತೆಹಚ್ಚಿದೆ. ಅಲ್ಲದೆ, ಬಂಧನದಲ್ಲಿರುವ ಕೆಲವು ವ್ಯಕ್ತಿಗಳು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅದು ತಿಳಿಸಿದೆ.

ಇಸ್ರೇಲಿ ಆಕ್ರಮಣ ಮತ್ತು ಹಗೆತನದ ದೀರ್ಘಕಾಲದ, ಜನಾಂಗೀಯ, ಲಿಂಗ ಆಧಾರಿತ ಮತ್ತು ತಲೆಮಾರುಗಳ ನಡುವಿನ ಸ್ವರೂಪದಲ್ಲಿ ಬೇರೂರಿರುವ “ಸಾಮೂಹಿಕ ಅವಮಾನ ಮತ್ತು ದಬ್ಬಾಳಿಕೆಯ” ಭಾಗವಾಗಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯವನ್ನು ಬಳಸಲಾಗಿದೆ ಎಂದೂ ಸಹ ಆಯೋಗ ಆರೋಪಿಸಿದೆ.

ನವಜಾತ ಶಿಶುಗಳು ಮತ್ತು ಹೆರಿಗೆ ಆರೈಕೆ ಕೇಂದ್ರಗಳಿಗೆ ಉಂಟಾದ ಹಾನಿಯು ನವಜಾತ ಶಿಶುಗಳ ಬದುಕುಳಿಯುವಿಕೆ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಅದೇ ಸಮಯದಲ್ಲಿ, ಇಸ್ರೇಲ್ ವಿಧಿಸಿದ ದಿಗ್ಬಂಧನ ಮತ್ತು ಮುತ್ತಿಗೆಯಿಂದ ಉಂಟಾದ ಹಸಿವು ಮಕ್ಕಳ ಸಾವುಗಳಿಗೆ ಮತ್ತು ಆರೋಗ್ಯ ಪರಿಸ್ಥಿತಿಗಳು ಕ್ಷೀಣಿಸಲು ಕಾರಣವಾಗಿದೆ ಎಂದು ಆಯೋಗವು ತಿಳಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯ ಅನಾಥಾಶ್ರಮಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಧ್ವಂಸಗೊಳಿಸಲಾಗಿದೆ ಅಥವಾ ನಾಶಪಡಿಸಲಾಗಿದೆ, ಇದು ಮಕ್ಕಳ ಬೆಳವಣಿಗೆ ಮತ್ತು ಆರೈಕೆಯ ಲಭ್ಯತೆಗೆ ಅಡ್ಡಿಪಡಿಸಿದೆ ಎಂದು ಆಯೋಗ ಹೇಳಿದೆ.

ಮಕ್ಕಳಲ್ಲಿ ಮಾನಸಿಕ ಹಾನಿ ವ್ಯಾಪಕವಾಗಿದೆ ಮತ್ತು ದೀರ್ಘಕಾಲದವರೆಗೆ ಇರುತ್ತದೆ ಎಂದು ತಿಳಿಸಿದ ಆಯೋಗವು, ಇದನ್ನು “ಆಕ್ರಮಿತ ಮನಸ್ಸು” (occupied psyche) ಎಂದು ಬಣ್ಣಿಸಿದೆ. ಇದರಲ್ಲಿ ಮಕ್ಕಳು ಆಟವಾಡುವ, ಕಲ್ಪಿಸಿಕೊಳ್ಳುವ, ಭರವಸೆ ಹೊಂದುವ ಮತ್ತು ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದೆ.

“ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಬಾಂಬ್‌ಗಳು ಮತ್ತು ಬಂದೂಕುಗಳು ಶಾಂತವಾದರೂ, ಪ್ಯಾಲೆಸ್ತೀನ್ ಮಕ್ಕಳು ಒಂದೇ ರಾತ್ರಿಯಲ್ಲಿ ಚೇತರಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮುರಳಿಧರ್ ಹೇಳಿದ್ದಾರೆ. ಅವರ ಆರೋಗ್ಯ, ಶಿಕ್ಷಣ ಮತ್ತು ಬೆಳವಣಿಗೆಗೆ ಉಂಟಾಗಿರುವ ನಾಶವು ಸರಿಪಡಿಸಲಾಗದಂಥದ್ದಾಗಿದೆ ಎಂದಿದ್ದಾರೆ.

ಅಲ್ಲದೆ, ಮಕ್ಕಳನ್ನು ಗುರಿಯಾಗಿಸುವುದು ಪ್ಯಾಲೆಸ್ತೀನ್ ಸಮಾಜದ ಜನಸಂಖ್ಯಾ ಮತ್ತು ಸಾಮಾಜಿಕ ಅಡಿಪಾಯಗಳು ಸೇರಿದಂತೆ ಅದರ ಒಟ್ಟಾರೆ ರಚನೆ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತದೆ ಎಂದು ತಿಳಿಸಿದ್ದಾರೆ. “ಮಕ್ಕಳನ್ನು ಗುರಿಯಾಗಿಸುವ ಮೂಲಕ, ಇಸ್ರೇಲ್ ಪ್ಯಾಲೆಸ್ತೀನ್ ಜನರ ಅಸ್ತಿತ್ವದ ಸಾಮರ್ಥ್ಯ ಮತ್ತು ಅವರ ಭವಿಷ್ಯವನ್ನು ನಿರ್ಧರಿಸುವ ಹಕ್ಕಿನ ಮೇಲೆಯೇ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ಸಲಹಾ ಅಭಿಪ್ರಾಯಕ್ಕೆ ಅನುಗುಣವಾಗಿ, ಪ್ಯಾಲೆಸ್ತೀನ್ ಮಕ್ಕಳಿಗೆ ಹಾನಿ ಮಾಡುವ ಉಲ್ಲಂಘನೆಗಳನ್ನು ನಿಲ್ಲಿಸುವಂತೆ ಮತ್ತು ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ ತನ್ನ ಉಪಸ್ಥಿತಿಯನ್ನು ಕೊನೆಗೊಳಿಸುವಂತೆ ಆಯೋಗವು ಇಸ್ರೇಲ್‌ ಅನ್ನು ಒತ್ತಾಯಿಸಿದೆ.  

ಅಲ್ಲದೆ, ಆರೋಪಿತ ಅಪರಾಧಗಳಿಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ಅದು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದೆ.

ಇಸ್ರೇಲ್ ವರದಿಯನ್ನು ತಿರಸ್ಕರಿಸಿದೆ. ವರದಿಯನ್ನು ಒಂದು “ಪ್ರಚಾರದ ತುಣುಕು” (propaganda piece) ಎಂದು ಬಣ್ಣಿಸಿದೆ.

“ಆಯೋಗ ಸತ್ಯವನ್ನು ಹುಡುಕುವ ಬದಲು, ಇಸ್ರೇಲ್ ಅನ್ನು ಮಾತ್ರ ಪ್ರತ್ಯೇಕಿಸಿ ನಿಂದಿಸುವ ಉದ್ದೇಶವನ್ನು ಹೊಂದಿರುವ “ಮೂಲಭೂತವಾಗಿ ದೋಷಪೂರಿತವಾದ ವ್ಯವಸ್ಥೆ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಟೀಕಿಸಿದೆ.

“ಪ್ಯಾಲೆಸ್ತೀನ್ ಉಗ್ರಗಾಮಿ ಸಂಘಟನೆಯಾದ ಹಮಾಸ್‌ನಿಂದ ಕೊಲ್ಲಲ್ಪಟ್ಟ ಅಥವಾ ಅಪಹರಣಕ್ಕೊಳಗಾದ ಇಸ್ರೇಲಿ ಮಕ್ಕಳನ್ನು ಈ ವರದಿಯು ನಿರ್ಲಕ್ಷಿಸಿದೆ ಎಂದು ಅದು ಹೇಳಿದೆ ಮತ್ತು ವಿಶ್ವಾಸಾರ್ಹ ಪರಿಶೀಲನಾ ವಿಧಾನಗಳ ಕೊರತೆಯನ್ನು ಹೊಂದಿದೆ ಎಂದು ಆಯೋಗದ ಮೇಲೆ ಆರೋಪ ಮಾಡಿದೆ. “ಇಸ್ರೇಲ್ ಈ ಮಾನಹಾನಿಕರ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತದೆ” ಎಂದು ಹೇಳಿದೆ.

ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ 1,200 ಜನರನ್ನು ಕೊಂದು, ಒತ್ತೆಯಾಳುಗಳನ್ನು ಕರೆದೊಯ್ದ ನಂತರ, ಅಕ್ಟೋಬರ್ 2023ರಲ್ಲಿ ಗಾಝಾದಲ್ಲಿ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆ ಪ್ರಾರಂಭವಾಯಿತು. ಅಂದಿನಿಂದ ಇಸ್ರೇಲ್ ಗಾಝಾದ ಮೇಲೆ ಭೀಕರ ವೈಮಾನಿಕ ಮತ್ತು ಭೂಪ್ರದೇಶದ ದಾಳಿಗಳನ್ನು ನಡೆಸುತ್ತಿದ್ದು, 75,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ.

ಸೆಪ್ಟೆಂಬರ್‌ನಲ್ಲಿ, ವಿಶ್ವಸಂಸ್ಥೆಯ ವಿಚಾರಣಾ ಆಯೋಗವು ಗಾಝಾದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಇಸ್ರೇಲ್ ನರಮೇಧ ಎಸಗಿದೆ ಎಂದು ಹೇಳಿತ್ತು. ಇಸ್ರೇಲ್ ವಿದೇಶಾಂಗ ಸಚಿವಾಲಯವು ಆ ವರದಿಯನ್ನೂ ‘ವಿಕೃತ ಮತ್ತು ಸುಳ್ಳು’ ಎಂದು ಬಣ್ಣಿಸಿ ತಿರಸ್ಕರಿಸಿತ್ತು.

ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ನವೆಂಬರ್ 2024ರಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ವಿರುದ್ಧ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಬಂಧನ ವಾರಂಟ್ ಹೊರಡಿಸಿತ್ತು. 






ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...