Homeಕರ್ನಾಟಕ‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

- Advertisement -
- Advertisement -

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು ಮುಂದಿಡುವ ಮೂಲಕ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಂಬಂಧವನ್ನು ಕಟುವಾಗಿ ಟೀಕಿಸಿರುವ ಅವರು, “ಪ್ರತಿ ಬಾರಿ ಯಾರಾದರೂ ಆರೆಸ್ಸೆಸ್ ಅನ್ನು ಪ್ರಶ್ನಿಸಿದಾಗ, ಬಿಜೆಪಿ ತನ್ನ ಸ್ಥಿಮಿತತೆಯನ್ನು ಕಳೆದುಕೊಳ್ಳುತ್ತದೆ” ಎಂದು ಲೇವಡಿ ಮಾಡಿದ್ದಾರೆ. ಈ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಈಗ ಮತ್ತೊಂದು ಹಂತಕ್ಕೆ ತಲುಪಿದೆ. 

ಇಂದು ಪ್ರಿಯಾಂಕ್ ಖರ್ಗೆ ಅವರು ಮಾಡಿರುವ ಪೋಸ್ಟ್‌ನಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವಿನ ಆಂತರಿಕ ಸಂಬಂಧ ಹಾಗೂ ಸಂಘಟನೆಯ ಇತಿಹಾಸವನ್ನು ನೇರವಾಗಿ ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ ಎಂದು ಲೇವಡಿ ಮಾಡಿರುವ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡದ ಸಂಘಟನೆ ಇಂದು ರಾಷ್ಟ್ರಕ್ಕೆ ದೇಶಪ್ರೇಮದ ಪಾಠ ಹೇಳುತ್ತಿರುವುದೇಕೆ ಎಂದು ಪ್ರಶ್ನಿಸಿದರೆ ಬಿಜೆಪಿಗೆ ತಡೆಯಲಾಗದ ಸಿಟ್ಟು ಬರುತ್ತದೆ ಎಂದು ಇತಿಹಾಸದ ಪುಟಗಳನ್ನು ಕೆದಕಿದ್ದಾರೆ. ನಾಗಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಲು ಬರೋಬ್ಬರಿ 52 ವರ್ಷಗಳೇಕೆ ಬೇಕಾಯಿತು ಎಂದು ಕೇಳಿದರೆ ಬಿಜೆಪಿ ಕೋಪದಿಂದ ಬುಸುಗುಡುತ್ತದೆ ಎಂದಿದ್ದಾರೆ.

ಅಷ್ಟೇ ಅಲ್ಲದೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ನಿಜಕ್ಕೂ ಯಾವ ಸಂವಿಧಾನಕ್ಕೆ ಬದ್ಧರಾಗಿದ್ದಾರೆ? ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದ ಭಾರತದ ಸಂವಿಧಾನಕ್ಕೋ ಅಥವಾ ತಾವೇ ಬರೆಯಬೇಕಿತ್ತು ಎಂದು ಬಯಸುವ ಸಂವಿಧಾನಕ್ಕೋ ಎಂದು ಪ್ರಶ್ನಿಸುವ ಮೂಲಕ ಕೇಸರಿ ಪಡೆಯ ಸಂವಿಧಾನಿಕ ನಿಲುವನ್ನು ಖರ್ಗೆ ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್ ಒಂದು ಸಂಘಟನೆಯಾಗಿ ಕಾನೂನಾತ್ಮಕ ನೋಂದಣಿ ಮಾಡಿಕೊಳ್ಳುವುದನ್ನು ಮತ್ತು ಸರ್ಕಾರಕ್ಕೆ ತೆರಿಗೆ ಪಾವತಿಸುವುದನ್ನು ಏಕೆ ನಿರಾಕರಿಸುತ್ತದೆ ಎಂದು ಕೇಳಿದರೆ, ಬಿಜೆಪಿ ಆಕ್ರೋಶದಿಂದ ಪೂತ್ಕರಿಸುತ್ತದೆ ಎಂದು ಹೇಳಿದ್ದಾರೆ. 

ಬಿಜೆಪಿ ಎಂದಿಗೂ ಆರ್‌ಎಸ್‌ಎಸ್‌ಗೆ ಕೇವಲ ಮಿತ್ರನಾಗಿರಲಿಲ್ಲ, ಅದು ಎಂದಿಗೂ ಆರ್‌ಎಸ್‌ಎಸ್ ಸಾಧನವಾಗಿಯೇ ಇದೆ. ಪ್ರತಿ ಬಾರಿ ಬುಸುಡುವಾಗಲೂ, ಹಾವಿನ ಬಾಲ ಯಾರ ಕೈಯಲ್ಲಿದೆ ಎಂಬುದನ್ನು ಬಿಜೆಪಿ ಖಚಿತಪಡಿಸುತ್ತದೆ ಎಂದು ಹೇಳುವ ಮೂಲಕ ಬಿಜೆಪಿಯನ್ನು ಆರ್‌ಎಸ್‌ಎಸ್ ಕೈಗೊಂಬೆ ಎಂದು ಕರೆದಿದ್ದಾರೆ.

ಈ ಪೋಸ್ಟ್‌ಗಿಂತ ಮುಂಚಿತವಾಗಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಅಧಿಕೃತ ಪತ್ರ ಬರೆದು ಸಂಘಟನೆಯ ಕಾನೂನಾತ್ಮಕ ಸ್ಥಿತಿಗತಿಯನ್ನು ಪ್ರಶ್ನಿಸಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದರು. ಕರ್ನಾಟಕದಲ್ಲಿ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಪಥಸಂಚಲನ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುವ ಆರ್‌ಎಸ್‌ಎಸ್ ಗೃಹ ಇಲಾಖೆಯೇ ಭದ್ರತೆ ಒದಗಿಸುತ್ತದೆ. ಹೀಗಿರುವಾಗ, ಈ ಸಂಘಟನೆ ಯಾವ ಭಾರತೀಯ ಕಾನೂನಿನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ, ಅದರ ನೋಂದಣಿ ಸಂಖ್ಯೆ ಏನು, ಪದಾಧಿಕಾರಿಗಳು ಯಾರು, ಅದಕ್ಕೆ ಬರುವ ನಿಧಿ ಹಾಗೂ ತೆರಿಗೆ ಪಾವತಿಯ ದಾಖಲೆಗಳೇನು ಎಂದು ಖರ್ಗೆ ಪಟ್ಟು ಹಿಡಿದಿದ್ದರು. 

ಸಾರ್ವಜನಿಕವಾಗಿ ಇಷ್ಟೊಂದು ಪ್ರಭಾವ ಹೊಂದಿರುವ ಸಂಘಟನೆ ಸಂವಿಧಾನ ಮತ್ತು ದೇಶದ ಕಾನೂನಿಗೆ ಬದ್ಧವಾಗಿರಬೇಕು, ಪಾರದರ್ಶಕತೆ ಕೇಳುವುದು ತಪ್ಪೇ ಎಂದು ಖರ್ಗೆ ಪ್ರಶ್ನಿಸಿದ್ದರು.

ಪ್ರಿಯಾಂಕ್ ಖರ್ಗೆ ಅವರ ಈ ಸರಣಿ ದಾಳಿಯಿಂದ ಕೆರಳಿದ ಬಿಜೆಪಿ ನಾಯಕರು ಮತ್ತು ಸಂಸದರು ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರು ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದು, ಆರ್‌ಎಸ್‌ಎಸ್ ತಂಟೆಗೆ ಹೋದವರು ಯಾರೂ ರಾಜಕೀಯವಾಗಿ ಉಳಿದಿಲ್ಲ, ಬದುಕಿಲ್ಲ ಎಂದು ಧಮ್ಕಿ ಹಾಕಿದ್ದಾರೆ. ಪ್ರಿಯಾಂಕ್ ಖರ್ಗೆ ಅನಾವಶ್ಯಕವಾಗಿ ಆರ್‌ಎಸ್‌ಎಸ್ ಜೊತೆ ಜಗಳಕ್ಕೆ ನಿಲ್ಲುತ್ತಿದ್ದಾರೆ, ಬುದ್ಧಿಶೂನ್ಯರಂತೆ ಮಾತನಾಡುವುದನ್ನು ಬಿಟ್ಟು ಗೃಹ ಸಚಿವರಾಗಿ ತಮ್ಮ ಕೆಲಸದ ಕಡೆ ಗಮನ ಕೊಡಲಿ ಎಂದು ಜಿಗಜಿಣಗಿ ವಾಗ್ದಾಳಿ ನಡೆಸಿದ್ದಾರೆ. ಇತರ ಬಿಜೆಪಿ ನಾಯಕರು ಸಹ ಆರ್‌ಎಸ್‌ಎಸ್ ಒಂದು ರಾಷ್ಟ್ರಭಕ್ತ ಸಂಘಟನೆಯಾಗಿದ್ದು, ಅದರ ವಿರುದ್ಧ ಮಾತನಾಡುವುದು ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಧಮ್ಕಿ ಮತ್ತು ವೈಯಕ್ತಿಕ ದಾಳಿಗೆ ಜಗ್ಗದ ಪ್ರಿಯಾಂಕ್ ಖರ್ಗೆ, ತಮಗೆ ಧಮ್ಕಿ ಹಾಕುವ ಮೂಲಕ ಬಿಜೆಪಿ ತನ್ನ ಸಾಮಂತಶಾಹಿ ಮತ್ತು ಮನುವಾದಿ ಮನಸ್ಥಿತಿಯನ್ನು ಪ್ರದರ್ಶಿಸುತ್ತಿದೆ ಎಂದು ದೂರಿದ್ದಾರೆ. ಆರ್‌ಎಸ್‌ಎಸ್ ತಂಟೆಗೆ ಹೋದವರು ಉಳಿಯಲ್ಲ ಎನ್ನುವ ಮಾತಿನ ಅರ್ಥವೇನು, ಆರ್‌ಎಸ್‌ಎಸ್ ಏನಾದರೂ ಭಯೋತ್ಪಾದಕ ಸಂಘಟನೆಯೇ, ಪ್ರಶ್ನಿಸಿದವರನ್ನು ಅದು ಮುಗಿಸಿಬಿಡುತ್ತದೆಯೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ. ಜಿಗಜಿಣಗಿ ಅವರ ದಲಿತ ಎಂಬ ಉಲ್ಲೇಖವನ್ನು ಖಂಡಿಸಿದ ಖರ್ಗೆ, ನಾನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಿದ್ಧಾಂತದ ಅನುಯಾಯಿ. ಪ್ರಶ್ನಿಸುವ ಧೈರ್ಯ ಮತ್ತು ಬೌದ್ಧಿಕ ಪ್ರಬುದ್ಧತೆ ನನಗೆ ಅಂಬೇಡ್ಕರ್ ಅವರಿಂದ ಬಂದಿದೆ. ಅಂಬೇಡ್ಕರ್ ಸಿದ್ಧಾಂತ ನಂಬಿದವರಿಗೆ ಭಯ ಎನ್ನುವುದೇ ಗೊತ್ತಿಲ್ಲ, ನಿಮ್ಮ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಸವಾಲು ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಇವತ್ತಿನ ಪೋಸ್ಟ್ ಕೇವಲ ಒಂದು ಸಾಮಾಜಿಕ ಜಾಲತಾಣದ ಹೇಳಿಕೆಯಾಗಿ ಉಳಿದಿಲ್ಲ. ಇದು ದೇಶದ ಅತಿ ದೊಡ್ಡ ಸಂಘಟನೆಯಾದ ಆರೆಸ್ಸೆಸ್‌ನ ಕಾನೂನಾತ್ಮಕ ಅಸ್ತಿತ್ವ, ಇತಿಹಾಸ ಮತ್ತು ದೇಶಪ್ರೇಮದ ನಿಲುವನ್ನು ರಾಜ್ಯದ ಗೃಹ ಸಚಿವರೊಬ್ಬರು ನೇರವಾಗಿ ಪ್ರಶ್ನಿಸುತ್ತಿರುವ ತಾರ್ಕಿಕ ಹೋರಾಟವಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಸಂವಿಧಾನವನ್ನು, ಪ್ರಜಾಪ್ರಭುತ್ವದ ಆಶಯಗಳನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಧರ್ಮಾಂಧ ರಾಜಕಾರಣವನ್ನು ಮಾಡುತ್ತಾ, ಸಮಾಜವನ್ನು ಒಡೆಯುತ್ತಾ ಬಂದಿರುವ ಆರೆಸ್ಸೆಸ್ ಮತ್ತು ಅದರ ರಾಜಕೀಯ ಅಂಗಸಂಸ್ಥೆಯಂತೆ ಕಾರ್ಯನಿರ್ವಹಿಸುವ ಬಿಜೆಪಿ ಇನ್ನಾದರೂ ದೇಶದ ಕಾನೂನನ್ನು ಗೌರವಿಸುತ್ತಾರಾ ಎಂಬ ಪ್ರಶ್ನೆ ಈಗ ಮೂಡಿದೆ. 

ಸಂವಿಧಾನಕ್ಕಿಂತ ದೊಡ್ಡವರು ಯಾರೂ ಇಲ್ಲ ಎನ್ನುವ ದೇಶದಲ್ಲಿ, ಇಷ್ಟೊಂದು ಪ್ರಭಾವಿ ಎನಿಸಿಕೊಂಡಿರುವ ಸಂಘಟನೆ ಇಂದಿಗೂ ದೇಶದ ಕಾನೂನಿನ ಅಡಿಯಲ್ಲಿ ಅಧಿಕೃತವಾಗಿ ನೋಂದಣಿ ಆಗದೆ ಇರಲು ಕಾರಣವೇನು, ಸಾರ್ವಜನಿಕ ಜವಾಬ್ದಾರಿಗೆ ಮತ್ತು ಪಾರದರ್ಶಕತೆಗೆ ಆರ್ ಎಸ್ ಎಸ್  ಒಳಪಡುತ್ತಾ? ಈ ಮೂಲಕವಾದರೂ ತನ್ನ ಸಂವಿಧಾನ ವಿರೋಧಿ ಹಣೆಪಟ್ಟಿಯನ್ನು ಕಳೆದುಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. But u have not shown braveness in telling the complete gist of what Ramesh jigajinagi really told against Rss with dirty launguage. That means u r surrendered to bjp

LEAVE A REPLY

Please enter your comment!
Please enter your name here

- Advertisment -

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...