Homeಮುಖಪುಟ'ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ' : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

- Advertisement -
- Advertisement -

“ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು ಪ್ರಾರಂಭಿಸಿದೆವು. ನಾನು ಅವರ ಪಕ್ಷವನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇನೆ”, ಇದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಂಡಾಯ ಬಣದ ಅಧ್ಯಕ್ಷರಾಗಿರುವ ಹೌರಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಅರೂಪ್ ರಾಯ್ ಅವರ ಮಾತು.

ಇಂಡಿಯನ್‌ ಎಕ್ಸ್‌ಪ್ರೆಸ್ ಜೊತೆ ಮಾತನಾಡಿರುವ ಅರೂಪ್ ರಾಯ್, “ನಾನು ಯಾವುದೇ ಬಂಡಾಯ ಬಣವನ್ನು ರೂಪಿಸಿಲ್ಲ. ಇತರರು ಅದನ್ನು ಮಾಡಿದರು. ನಾನು ಹೆಚ್ಚು ಸಂಖ್ಯೆಯಿದ್ದ ಪಕ್ಷದ ಪರವಾಗಿ ನಿಂತೆ. ವಿರೋಧ ಪಕ್ಷದ ನಾಯಕರ ರಿತಬ್ರತಾ ಬ್ಯಾನರ್ಜಿ ಕಡೆಯಿಂದ ನನಗೆ ಆಹ್ವಾನ ಬಂದಿದ್ದರಿಂದ ನಾನು ಅವರ ಸಭೆಯಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ.

ಟಿಎಂಸಿಯ ಬಂಡಾಯ ಬಣವು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಅರೂಪ್ ರಾಯ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಸಭೆಯ ನಡಾವಳಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.

ಚುನಾವಣಾ ಸೋಲಿನ ಬಳಿಕ ಮೊದಲ ಸಭೆಯು ಮಮತಾ ಬ್ಯಾನರ್ಜಿ ಅವರ ಮನೆಯಲ್ಲೇ ನಡೆದಿತ್ತು. ಆ ವೇಳೆ ಶೋವನ್ದೇವ್ ಚಟ್ಟೋಪಾಧ್ಯಾಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ಪ್ರಸ್ತಾವನೆಗೆ ನಾನು ಸಹಿ ಮಾಡಿದ್ದೆ ಎಂದು ಅರೂಪ್ ರಾಯ್ ತಿಳಿಸಿದ್ದಾರೆ.

ಪಕ್ಷವು ವಿಧಾನಸಭಾಧ್ಯಕ್ಷರ ಕಚೇರಿಗೆ ಸಲ್ಲಿಸಿದ್ದ ಕೆಲವು ಸಹಿಗಳು ನಕಲಿಯಾಗಿವೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪೊಲೀಸರು ನನಗೆ ತೋರಿಸಿದ ದಾಖಲೆಗಳಲ್ಲಿ ಇದ್ದ ಸಹಿ ನನ್ನದಲ್ಲ” ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿಯ ಮುಖ್ಯ ಸಲಹೆಗಾರರನ್ನಾಗಿ ಮಾಡಲು ಬಯಸುವುದಾಗಿ ವಿರೋಧ ಪಕ್ಷದ ನಾಯಕ ರಿತಬ್ರತಾ ಬ್ಯಾನರ್ಜಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅರೂಪ್ ರಾಯ್, ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಅದನ್ನು ಹೇಳುತ್ತಿಲ್ಲ. ನಾನು ಏನು ಹೇಳಬೇಕೆಂದು ಬಯಸಿದ್ದೆನೋ, ಅದನ್ನು ಈಗಾಗಲೇ ಮಾಡಿದ್ದೇನೆ ಎಂದಿದ್ದಾರೆ.

ವಿಧಾನಸಭೆ ಅಧಿವೇಶನವನ್ನು ಹೇಗೆ ಎದುರಿಸುತ್ತೀರಿ..ನಿಮ್ಮ ತಂತ್ರವೇನು ಎಂಬ ಪ್ರಶ್ನೆಗೆ ಉತ್ತಿರಿಸಿರುವ ಅರೂಪ್‌ ರಾಯ್, “ನಾವು ರಚನಾತ್ಮಕ ಟೀಕೆಯನ್ನು ಮಾಡುತ್ತೇವೆ. ನಾವು ಬಿಜೆಪಿಯ ತಪ್ಪುಗಳನ್ನು ಎತ್ತಿ ತೋರಿಸುತ್ತೇವೆ ಮತ್ತು ಅವರ ನೀತಿಗಳನ್ನು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಚುನಾವಣೆ ಸೋಲಿನ ನಂತರ ಹಲ್ಲೆಗೊಳಗಾದ ಟಿಎಂಸಿ ಕಾರ್ಯಕರ್ತರ ಬಗ್ಗೆ ಏನು ಹೇಳುತ್ತೀರಿ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಯ್, “ನಾವು ನಮ್ಮ ಕಾರ್ಯಕರ್ತರ ಪರವಾಗಿ ನಿಲ್ಲಬೇಕು. ಆ ಸಭೆಯಲ್ಲೂ ನಾನು ಇದನ್ನೇ ಹೇಳಿದ್ದೆ. ಅಪರಾಧಗಳನ್ನು ಮಾಡಿ ಕಾನೂನು ಮೊಕದ್ದಮೆಗಳನ್ನು ಎದುರಿಸುತ್ತಿರುವವರ ವಿಷಯವೇ ಬೇರೆ. ಆದರೆ ಯಾವ ಕಾರ್ಯಕರ್ತರು ಮತ್ತು ನಾಯಕರು ನಿರಪರಾಧಿಗಳಾಗಿದ್ದಾರೋ, ನಾವು ಅವರ ಪರವಾಗಿ ನಿಲ್ಲಬೇಕು. ಅವರ ಪರವಾಗಿ ನಿಲ್ಲುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಬಂಡಾಯ ಬಣದ ಹೆಚ್ಚಿನ ಸಂಸದರು ಮತ್ತು ಶಾಸಕರು ಅಭಿಷೇಕ್ ಬ್ಯಾನರ್ಜಿ ಅವರ ನಾಯಕತ್ವವನ್ನು ಪ್ರಶ್ನಿಸಿದ್ದಾರೆ. ನೀವು ಅವರೊಂದಿಗೆ ಸಹಮತ ಹೊಂದಿದ್ದೀರಾ? ಎಂಬ ಉತ್ತರಿಸಿದ ರಾಯ್, “ಸಂಸದರು ಮತ್ತು ಶಾಸಕರ ಅಭಿಪ್ರಾಯಗಳು ವಿಭಿನ್ನವಾಗಿವೆ. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಶಾಸಕರ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ. ನನಗೆ ಯಾರ ಮೇಲೂ ಯಾವುದೇ ಆರೋಪಗಳಿಲ್ಲ” ಎಂದು ತಿಳಿಸಿದ್ದಾರೆ.

ಮುಂದೆ ಟಿಎಂಸಿ ಪಕ್ಷದ ಧ್ವಜ, ಚಿಹ್ನೆ ಮತ್ತು ಬ್ಯಾಂಕ್‌ ಖಾತೆಗಳನ್ನು ವಶಕ್ಕೆ ಪಡೆಯುತ್ತೀರಾ? ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅರೂಪ್ ರಾಯ್, “ಪಕ್ಷದ ಚಿಹ್ನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಆಯೋಗಕ್ಕೆ ಅಧಿಕೃತ ಪತ್ರವನ್ನು ನೀಡಿದ್ದೇವೆ. ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಯಾವುದೇ ನಿರ್ಣಯವನ್ನು ಅಂಗೀಕರಿಸಿಲ್ಲ. ಆದರೆ, ಖಾತೆ ಪರಿಶೀಲಿಸಲು ಒಬ್ಬ ಆಡಿಟರ್ (ಲೆಕ್ಕ ಪರಿಶೋಧಕ) ಅನ್ನು ನೇಮಿಸಲಾಗುವುದು ಎಂದು ವಿಪಕ್ಷ ನಾಯಕ ರಿತಬ್ರತಾ ಬ್ಯಾನರ್ಜಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Courtesy : indianexpress.com





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...