HomeಅಂಕಣಗಳುKarnataka against SIRSIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

- Advertisement -
- Advertisement -

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ.

ಎಸ್‌ಐಆರ್(SIR) ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಮತದಾರರಿಗೆ ಗೊಂದಗಳು ಉಂಟಾಗುವುದು ಸಾಮಾನ್ಯ ಇಂತಹ ಸಂದರ್ಭದಲ್ಲಿ , ಸಾರ್ವಜನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಗೊಂದಲಗಳಿಗೆ ಪರಿಹಾರಕಂಡುಕೊಳ್ಳಲು ಸರ್ಕಾರ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು 7 ದಿನಗಳ ಒಳಗಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿ ಕೌಂಟರ್‌ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳು ಹೆಲ್ಪ್‌ ಡೆಸ್ಕ್‌ಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಯ ವಾರ್ಡ್‌ ಕಚೇರಿಯಲ್ಲಿ ಕಂಪ್ಯೂಟರ್, ಇಂಟರ್ನೆಟ್, ಮುದ್ರಣ, ಸ್ಕ್ಯಾನಿಂಗ್ ಮತ್ತು ಅಗತ್ಯ ಮೂಲಸೌಕರ್ಯಗಳೊಂದಿಗೆ ಸಹಾಯ ಮತ್ತು ಸೌಲಭ್ಯ ಕೌಂಟರ್ ಸ್ಥಾಪಿಸಬೇಕು. ಅಟಲ್ ಜನಸ್ನೇಹಿ ಕೇಂದ್ರಗಳು, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, CSC ಗಳು ಮತ್ತು ಇತರೆ ಅಧಿಕೃತ ಕೇಂದ್ರಗಳು ಅರ್ಜಿಗಳನ್ನು ಪ್ರಕ್ರಿಯೆಗೊಳಿಸುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್‌ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಹಾಗೂ ಉಪ ತಹಸೀಲ್ದಾರ್‌ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.

ಇಂದಿನಿಂದ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯಾದ್ಯಂತ ಬಿಎಲ್‌ಒಗಳು ಮನೆ ಬಾಗಿಲಿಗೆ ಬಂದು ಎನ್ಯುಮರೇಷನ್ ಫಾರ್ಮ್‌ ಕೊಡಲಿದ್ದಾರೆ. ಮತದಾರರ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಈ ಫಾರ್ಮ್‌ಗಳನ್ನು ತುಂಬಬೇಕು. ಆ ನಂತರ, ಆಗಸ್ಟ್‌ 5ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆ ಪಟ್ಟಿಯಲ್ಲಿ ಎನ್ಯುಮರೇಷನ್ ಫಾರ್ಮ್‌ ಸಲ್ಲಿಸಿದ್ದ ಪ್ರತಿಯೊಬ್ಬರ ಹೆಸರುಗಳು ಇರುತ್ತವೆ. ಆದರೆ, ಲಕ್ಷಾಂತರ ಮಂದಿಗೆ ತಮ್ಮ ಅರ್ಹತೆಯನ್ನು ಸಾಬೀತು ಪಡಿಸುವಂತೆ ಚುನಾವಣಾ ಆಯೋಗ ನೋಟಿಸ್‌ ಕೊಡುತ್ತದೆ. ಅಕ್ಷರಸ್ಥರು ತಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಾಸ್‌ಪೋರ್ಟ್‌ ಸೌಲಭ್ಯ ಹೊಂದಿರುವರರು ಪಾಸ್‌ಪೋರ್ಟ್‌ಗಳನ್ನು ಒದಗಿಸಬಹುದು. ಆದರೆ, ಅನಕ್ಷರಸ್ಥರು ಮತ್ತು ಬಡ-ಹಿಂದುಳಿದ ದಾಖಲೆ ರಹಿತರು ಸಮಸ್ಯೆಗೆ ಸಿಲುಕಲಿದ್ದಾರೆ.

ಅಂತಹ ದಾಖಲೆ ರಹಿತರ ಮತದಾನ ಹಕ್ಕನ್ನು ರಕ್ಷಿಸಲು ಜಾತಿ ಪ್ರಮಾಣಪತ್ರ ಮತ್ತು ಶಾಶ್ವತ ನಿವಾಸ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ಒದಗಿಸಬಹುದು, ಆ ಮೂಲಕ ತನ್ನ ನಾಗರಿಕರನ್ನು ರಕ್ಷಿಸಿಕೊಳ್ಳಬಹುದು. ಈ ಹಿಂದೆ, ಕೇರಳ ಸರ್ಕಾರವೂ ಇಂತಹ ಕ್ರಮವನ್ನು ಕೈಗೊಂಡಿತ್ತು. ಬಹುಸಂಖ್ಯಾತರು ಮತಪಟ್ಟಿಯಿಂದ ಹೊರಗುಳಿಯದಂತೆ ರಕ್ಷಿಸಿತು. ಇದೀಗ, ಕರ್ನಾಟಕ ಸರ್ಕಾರವು ಅಂತಹ ಮಹತ್ವದ ಹೆಜ್ಜೆ ಇಟ್ಟಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...