HomeಅಂಕಣಗಳುSIRSIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಒಟ್ಟು 23 ವಿರೋಧ ಪಕ್ಷಗಳು ಮತ್ತು ಒಬ್ಬರು ಪಕ್ಷೇತರ ಸಂಸದರು ಮಂಗಳವಾರ (ಜೂನ್ 30) ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿಗೆ ಜಂಟಿ ಪತ್ರವೊಂದನ್ನು ಬರೆದಿದ್ದಾರೆ.

ಜೂನ್ 8ರಂದು 25 ವಿರೋಧ ಪಕ್ಷಗಳು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಿ, ಒಗ್ಗಟ್ಟನ್ನು ಮೂಡಿಸಲು ನಿರ್ಣಯಿಸಿತ್ತು, ಜೊತೆಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಚುನಾವಣೆಗಳ ನಿಷ್ಪಕ್ಷಪಾತತೆಯ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಕಳುಹಿಸಿತ್ತು. ಜೂನ್‌ 8ರ ಸಭೆಗೆ ಡಿಎಂಕೆ ಮತ್ತು ಎಎಪಿ ಹಾಜರಾಗದಿದ್ದರೂ, ಎರಡೂ ಪಕ್ಷಗಳು ಜಂಟಿ ಪತ್ರಕ್ಕೆ ಸಹಿ ಹಾಕಿವೆ.

ಇಂಡಿಯಾ ಮೈತ್ರಿಕೂಟದ ಪ್ರಮುಖ ಅಂಗವಾಗಿದ್ದ ಡಿಎಂಕೆ, ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವು ತನ್ನ ಕೈಬಿಟ್ಟು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ ಕಾರಣ ಈ ತಿಂಗಳ ಆರಂಭದಲ್ಲಿ ನಡೆದ ಸಭೆಗೆ ಹಾಜರಾಗಿರಲಿಲ್ಲ. 

ಆ ಸಭೆಯಲ್ಲಿ ಡಿಎಂಕೆ ಪಕ್ಷವನ್ನು ನಡೆಸಿಕೊಂಡ ರೀತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ಟೀಕೆಯನ್ನು ಎದುರಿಸಿತ್ತು ಮತ್ತು ಡಿಎಂಕೆ ಹಾಗೂ ಎಎಪಿ ಎರಡೂ ಪಕ್ಷಗಳನ್ನು ಮೈತ್ರಿಕೂಟಕ್ಕೆ ಮರಳಿ ಕರೆತರಲು ಎಲ್ಲಾ ಪಕ್ಷಗಳು ಶ್ರಮಿಸಬೇಕು ಎಂಬ ಒಮ್ಮತಕ್ಕೆ ನಾಯಕರು ಬಂದಿದ್ದರು ಎಂದು ವರದಿಯಾಗಿದೆ.

ಜೂನ್ 8 ರಂದು ನಡೆದ ಸಭೆಯ ತೀರ್ಮಾನದಂತೆ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಂಟಿ ಪತ್ರವನ್ನು ಕಳುಹಿಸಲಾಗಿದೆ ಎಂದು ಕಾಂಗ್ರೆಸ್ ಸಂಸದ ಮತ್ತು ಮಾಧ್ಯಮ ವಿಭಾಗದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

“ಜೂನ್ 8, 2026 ರಂದು ನಡೆದ ಇಂಡಿಯಾ ಜನ್‌ಬಂಧನ್ ಸಭೆಯಲ್ಲಿ 21 ರಾಜಕೀಯ ಪಕ್ಷಗಳು ಮತ್ತು ಒಬ್ಬರು ಪಕ್ಷೇತರ ಸಂಸದರು ಭಾಗವಹಿಸಿದ್ದರು. ಈ ಸಭೆಯಲ್ಲಿ, ಭಾರತೀಯ ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ಮತ್ತು ಇತರ ಚುನಾವಣೆ ಸಂಬಂಧಿತ ವಿಷಯಗಳ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಜಂಟಿ ಪತ್ರ ಬರೆಯಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು” ಎಂದು ಹೇಳಿದ್ದಾರೆ.

ಮುಂದುವರಿದು, “ಅದರಂತೆ, ಈಗ 23 ರಾಜಕೀಯ ಪಕ್ಷಗಳು ಹಾಗೂ ಒಬ್ಬರು ಪಕ್ಷೇತರ ಸಂಸದರು ಸಹಿ ಮಾಡಿರುವ ಜಂಟಿ ಪತ್ರವನ್ನು ಇಂದು ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಲಾಗಿದೆ. ವಿರೋಧ ಪಕ್ಷಗಳು ‘ಶ್ಯೂರ್’ (SURE—Solidarity, Unity and REsistance) ತತ್ವಕ್ಕೆ ದೃಢವಾಗಿ ಬದ್ಧವಾಗಿವೆ” ಎಂದು ತಿಳಿಸಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಜೈರಾಮ್ ರಮೇಶ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಇಂಡಿಯಾ ಮೈತ್ರಿಕೂಟದ ಹೊರಗಿರುವ ಎಎಪಿ ಮತ್ತು ಡಿಎಂಕೆ ಪಕ್ಷಗಳು ಈ ಪತ್ರಕ್ಕೆ ಸಹಿ ಹಾಕಿರುವುದನ್ನು ಖಚಿತಪಡಿಸಿದ್ದಾರೆ.

ಕಳೆದ ವರ್ಷ ಬಿಹಾದಲ್ಲಿ ಮೊದಲ ಬಾರಿಗೆ ಆರಂಭಿಸಲಾದ ಎಸ್‌ಐಆರ್ ಪ್ರಕ್ರಿಯೆಯು ಒಂದು ವರ್ಷವನ್ನು ಪೂರೈಸಿದ ಸಂದರ್ಭದಲ್ಲೇ ಈ ಜಂಟಿ ಪತ್ರವನ್ನು ಕಳುಹಿಸುವ ನಿರ್ಧಾರಕ್ಕೆ ಬರಲಾಗಿದೆ. ಅಂದಿನಿಂದ ಈವರೆಗೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಇದರ ಪರಿಣಾಮವಾಗಿ ಐದು ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಪಶ್ಚಿಮ ಬಂಗಾಳವೊಂದರಲ್ಲೇ ಸುಮಾರು 27 ಲಕ್ಷ ಮತದಾರರು ಏಪ್ರಿಲ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗಿಲ್ಲ ಮತ್ತು ಈ ಕುರಿತಾದ ಮೇಲ್ಮನವಿಗಳು ಇಂದಿಗೂ ನ್ಯಾಯಾಂಗ ನ್ಯಾಯಮಂಡಳಿಗಳ ಮುಂದೆ ಬಾಕಿ ಇವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...