Homeಕರ್ನಾಟಕಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

- Advertisement -
- Advertisement -

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ಹಲಿಗೆ (ತಮಟೆ) ಬಡೆಯುವ ವಿಚಾರಕ್ಕೆ ದಲಿತರು ಮತ್ತು ಇತರ ಜಾತಿಗಳ ಜನರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಜೂನ್ 26ರಂದು ದಲಿತರ ಮನೆಗಳಿಗೆ ನುಗ್ಗಿ ಮಹಿಳೆಯರು, ಮಕ್ಕಳು ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಭಾನುವಾರ (ಜೂ.28) ಬೋಚನಹಳ್ಳಿ ಗ್ರಾಮದ ಮಂಜುಳಾ ಮೈಲಪ್ಪ ಹಿರೇಮನಿ ಎಂಬುವರು ‘ನಮ್ಮವರ ಮೇಲೆ ಹಲ್ಲೆಯಾಗಿದೆ’ ಎಂದು 39 ಜನರ ವಿರುದ್ಧ ದೂರು ದಾಖಲಿಸಿದ್ದು, ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮತ್ತೊಂದೆಡೆ ಗ್ರಾಮದ ಪರಸಪ್ಪ ಹುಲಕೋಟಿ ಎನ್ನುವರು ಕೂಡ ಪ್ರತಿದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರೆ ಮಂಜುಳಾ ಮೈಲಪ್ಪ ಹಿರೇಮನಿ,”ಜೂನ್ 25ರಂದು ಮೊಹರಂ ಮೆರವಣಿಗೆ ವೇಳೆ ನಮ್ಮ ದಲಿತ ಹುಡುಗರು ಹಲಿಗೆ ಬಡಿಯುತ್ತಿದ್ದರು. ಈ ವೇಳೆ ಇತರ ಜಾತಿಯ ಕೆಲವರು ಅವರನ್ನು ಗೇಲಿ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ನಮ್ಮ ಮಾವ ಹೋಗಿದ್ದರು. ಈ ವೇಳೆ ಅವರಿಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಚಪ್ಪಲಿಯಿಂದ ಹೊಡೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಮ್ಮ ಮಾವನ ಮಗ ಸ್ಥಳಕ್ಕೆ ಹೋಗಿ ಪ್ರಶ್ನಿಸಿದ್ದಾರೆ. ಆಗ ವಾಗ್ವಾದ ನಡೆದು ನಮ್ಮ ಮಾವ ಮತ್ತು ಅವರ ಮಗನಿಗೆ ಚಪ್ಪಲಿಯಿಂದ ಥಳಿಸಿ, ಜಾತಿ ನಿಂದನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮುಂದುವರಿದು, “ಅಂದು ಇತರರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು. ಮರುದಿನ ನಮ್ಮ ಮಾವನವರು ಪರಸಪ್ಪ ಅವರ ಬಳಿ ತೆರಳಿ ಹಿಂದಿನ ದಿನ ನಡೆದ ಘಟನೆ ವಿವರಿಸಿದ್ದರು. ಆಗ ಪರಸಪ್ಪ ಮಾವನವರನ್ನು ಗದರಿಸಿ ಕಳಿಸಿದ್ದರು. ನಮ್ಮ ಮಾವನವರು ಏನೂ ಮಾಡಲಾಗದೆ ಸ್ಥಳದಿಂದ ವಾಪಾಸ್ ಬಂದಿದ್ದರು” ಎಂದು ವಿವರಿಸಿದ್ದಾರೆ.

“ಮನೆಗೆ ಬಂದ ಮಾವನವರು ಮತ್ತು ಅವರ ಮಕ್ಕಳು ಅವರವರ ಕೆಲಸ ಕಾರ್ಯಗಳಿಗೆ ತೆರಳಿದ್ದರು. ಈ ವೇಳೆ ಗುಂಪು ಕಟ್ಟಿಕೊಂಡು ಬಂದ ಎರಡ್ಮೂರು ಜಾತಿಯವರು, ನಮ್ಮ ಮನೆಗಳಿಗೆ ನುಗ್ಗಿ ಕೈಗೆ ಸಿಕ್ಕಿದ ವಸ್ತುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಮಕ್ಕಳು ಎನ್ನದೆ ಎಲ್ಲರ ಮೇಲೆ ಹಲ್ಲೆ ಮಾಡಿದ್ದಾರೆ. ಕೊಡಲಿ ಹಿಡಿದುಕೊಂಡು ಬಂದು ಯಾರನ್ನಾದರೂ ಜೀವ ತೆಗೆಯಲು ಮುಂದಾಗಿದ್ದರು. ದಾಳಿಯ ವಿಡಿಯೋ ಮಾಡುತ್ತಿದ್ದ ನಮ್ಮ ಹುಡುಗರ ಮೊಬೈಲ್ ಫೋನ್‌ ಕಿತ್ತುಕೊಂಡು ಹೋಗಿದ್ದಾರೆ. ಮುಖ್ಯವಾಗಿ, ನಮಗೆ ಜಾತಿ ನಿಂದನೆ ಮಾಡಿದ್ದಾರೆ” ಎಂದು ಮಂಜುಳಾ ಗಂಭೀರ ಆರೋಪ ಮಾಡಿದ್ದಾರೆ.

“ನಮ್ಮ ಕೇರಿಗೆ ನುಗ್ಗಿ ಮನಸೋಇಚ್ಚೆ ಹಲ್ಲೆ ಮಾಡುತ್ತಿದ್ದಾಗ ನಾವು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆವು, ಜೊತೆಗೆ ಆಂಬ್ಯಲೆನ್ಸ್‌ಗೂ ಕರೆ ಮಾಡಿದೆವು. ಆಂಬ್ಯುಲೆನ್ಸ್ ಬಂದು ಗಾಯಗೊಂಡ ನಮ್ಮ ಜನರನ್ನು ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡುತಿತ್ತು. ಆದರೂ, ಆರೋಪಿಗಳು ಹಲ್ಲೆ ನಡೆಸುವುದನ್ನು ಮುಂದುವರಿಸಿದ್ದರು. ಕೊನೆಗೆ ಪೊಲೀಸರು ಬಂದು ನಮಗೆ ರಕ್ಷಣೆ ಕೊಟ್ಟರು” ಎಂದು ತಿಳಿಸಿದ್ದಾರೆ.

“ನಾವು ಭಯದಲ್ಲಿ ಬದುಕುತ್ತಿದ್ದೇವೆ”

ಘಟನೆ ನಂತರ ನಾವು ಭಯದಲ್ಲಿ ಬದುಕುತ್ತಿದ್ದೇವೆ. ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ. ಆದರೂ, ಹಲ್ಲೆ ಮಾಡಿದವರು ದ್ವೇಷ ಇಟ್ಟುಕೊಂಡು ಮತ್ತೆ ಏನಾದರು ಮಾಡಿಯಾರು ಎಂಬ ಭಯ ನಮಗಿದೆ. ನಮ್ಮ ಹುಡುಗರು ಮನೆ ಬಿಟ್ಟು ಎಲ್ಲೂ ಹೊರಗಡೆ ಹೋಗದಂತೆ ಸೂಚಿಸಿದ್ದೇವೆ. ಇದು ಮೊದಲ ಘಟನೆಯಲ್ಲ, ನನಗೆ ಗೊತ್ತಿರುವ ಹಾಗೆ ಕಳೆದ ಹತ್ತು ವರ್ಷದಲ್ಲಿ ಹಲವಾರು ಬಾರಿ ನಮ್ಮ ಸಮುದಾಯದವರ ಮೇಲೆ ಹಲ್ಲೆಯಾಗಿದೆ. ಜಾತಿಯನ್ನೇ ಮುಂದಿಟ್ಟುಕೊಂಡು ಪದೇ ಪದೇ ಹಲ್ಲೆ ಮಾಡುವುದು, ನಿಂದಿಸುವುದು ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು, ಇವುಗಳಿಂದ ಮುಕ್ತಿ ಬೇಕು ಎಂದು ಮಂಜುಳಾ ಅಳಲು ತೋಡಿಕೊಂಡಿದ್ದಾರೆ.

ಸಮುದಾಯಗಳ ನಡುವೆ ಪರಸ್ಪರ ಅನ್ಯೋನ್ಯತೆ ಮೂಡಲಿ- ಕರಿಯಪ್ಪ ಗುಡಿಮನಿ

ದಲಿತ ಸಮುದಾಯದ ಮೇಲೆ ನಡೆದ ದಾಳಿಯನ್ನು ಖಂಡಿಸಿ ದಲಿತ ಮತ್ತು ಇತರ ಜನಪರ ಸಂಘಟನೆಗಳು ಶೀಘ್ರದಲ್ಲೇ ಬೋಚನಹಳ್ಳಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವ ತೀರ್ಮಾನ ಮಾಡಿದ್ದೇವೆ. ಅದಕ್ಕೂ ಮೊದಲು, ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ತಿಳಿಸಿದ್ದಾರೆ.

ಬೋಚನಹಳ್ಳಿಯಲ್ಲಿ ಎರಡು ತಳ ಸಮುದಾಯಗಳ ನಡುವೆ ಸಂಘರ್ಷ ನಡೆದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪರಸ್ಪರ ಅನ್ಯೋನ್ಯತೆಯಿಂದ ಇರಬೇಕಾದ ಈ ಸಮುದಾಯಗಳ ಜನರು, ಈ ರೀತಿ ಗಲಾಟೆ ಮಾಡಿಕೊಳ್ಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ನಾವು ಯಾವುದೇ ಸಮುದಾಯವನ್ನು ಗುರಿಯಾಗಿಸುತ್ತಿಲ್ಲ. ನಮ್ಮ ಆಗ್ರಹ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬುವುದು ಮಾತ್ರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಜಾತಿ ದೌರ್ಜನ್ಯಗಳು ನಡೆಯುತ್ತಿವೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜನ ಸಮುದಾಯಗಳ ನಡುವೆ ಪರಸ್ಪರ ಸೌಹಾರ್ದತೆ, ನಂಬಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಕರಿಯಪ್ಪ ಆಗ್ರಹಿಸಿದ್ದಾರೆ.

ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ದಲಿತರ ಮೇಲಿನ ಹಲ್ಲೆಯನ್ನು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ ವಿದ್ಯಾರ್ಥಿ ಸಂಘಟನೆ, ಮಹಿಳಾ ಮುನ್ನಡೆ ಹಾಗೂ ಪ್ರಗತಿಪರ ಚಿಂತಕರು ತೀವ್ರವಾಗಿ ಖಂಡಿಸಿದ್ದು, ಹೋರಾಟಕ್ಕೆ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಾದಿಗ ರಕ್ಷಣಾ ವೇದಿಕೆ, ಮೊಹರಂ ಹಬ್ಬದ ಸಂದರ್ಭದಲ್ಲಿ ಮಾದಿಗ ಸಮುದಾಯದ ಕಾಲೋನಿಗೆ ನುಗ್ಗಿ ಕೆಲ ಕಿಡಿಗೇಡಿಗಳು ದೌರ್ಜನ್ಯ ನಡೆಸಿರುವ ಘಟನೆ ಖಂಡನೀಯವಾಗಿದೆ. ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವಂತಹ ಜಾತಿವಾದಿ ಮನೋಭಾವದ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

“ಸಂವಿಧಾನ ನೀಡಿರುವ ಸಮಾನತೆ, ಗೌರವ ಮತ್ತು ಬದುಕುವ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಹಾಗೂ ಆಡಳಿತದ ಜವಾಬ್ದಾರಿಯಾಗಿದೆ. ಯಾವುದೇ ಸಮುದಾಯದ ಮೇಲೆ ಅನ್ಯಾಯ ನಡೆದರೆ ಅದನ್ನು ಸಹಿಸಲಸಾಧ್ಯ. ಬೋಚನಹಳ್ಳಿ ಗ್ರಾಮದ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು” ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.

ಗ್ರಾಮದಲ್ಲಿ ಶಾಶ್ವತ ಶಾಂತಿ, ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ಸಂಘಟನೆಗಳ ಮುಖಂಡರು ಚರ್ಚಿಸಿದ್ದಾರೆ. ನೊಂದ ಸಮುದಾಯದ ಪರವಾಗಿ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಅವರ ನೇತೃತ್ವದಲ್ಲಿ ಮುಂದಿನ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ಗ್ರಾಮದ ನೊಂದ ಮಾದಿಗ ಸಮುದಾಯದ ನೂರಾರು ಜನರು ಈ ಸಂದರ್ಭದಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುದಕಪ್ಪ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ರಾಣದಪ್ಪ, ಮುಖಂಡರಾದ ನಿಂಗಪ್ಪ ಪೂಜಾರಿ, ಜಿಲ್ಲಾ ಖಜಾಂಚಿ ಗವಿಸಿದ್ದಪ್ಪ ಹಲಗಿ, ತಾಲೂಕು ಕಾರ್ಯದರ್ಶಿ ಯಂಕಪ್ಪ ಬಿಸರಳ್ಳಿ, ತಾಲೂಕು ಸಹ ಕಾರ್ಯದರ್ಶಿ ಹೊಸಳ್ಳಿ ನಾಗರಾಜ್, ಮುಖಂಡರಾದ ಕಾರಿಗನೂರು ಓಬಳೇಶ್, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಪರವಾಗಿ ವಕೀಲರಾದ ಯಮನೂರಪ್ಪ ಈಳಿಗನೂರು, ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...