Homeಕರ್ನಾಟಕಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

- Advertisement -
- Advertisement -

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ಹಲಿಗೆ (ತಮಟೆ) ಬಡೆಯುವ ವಿಚಾರಕ್ಕೆ ದಲಿತರು ಮತ್ತು ಇತರ ಜಾತಿಗಳ ಜನರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಜೂನ್ 26ರಂದು ದಲಿತರ ಮನೆಗಳಿಗೆ ನುಗ್ಗಿ ಮಹಿಳೆಯರು, ಮಕ್ಕಳು ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಭಾನುವಾರ (ಜೂ.28) ಬೋಚನಹಳ್ಳಿ ಗ್ರಾಮದ ಮಂಜುಳಾ ಮೈಲಪ್ಪ ಹಿರೇಮನಿ ಎಂಬುವರು ‘ನಮ್ಮವರ ಮೇಲೆ ಹಲ್ಲೆಯಾಗಿದೆ’ ಎಂದು 39 ಜನರ ವಿರುದ್ಧ ದೂರು ದಾಖಲಿಸಿದ್ದು, ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮತ್ತೊಂದೆಡೆ ಗ್ರಾಮದ ಪರಸಪ್ಪ ಹುಲಕೋಟಿ ಎನ್ನುವರು ಕೂಡ ಪ್ರತಿದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರೆ ಮಂಜುಳಾ ಮೈಲಪ್ಪ ಹಿರೇಮನಿ,”ಜೂನ್ 25ರಂದು ಮೊಹರಂ ಮೆರವಣಿಗೆ ವೇಳೆ ನಮ್ಮ ದಲಿತ ಹುಡುಗರು ಹಲಿಗೆ ಬಡಿಯುತ್ತಿದ್ದರು. ಈ ವೇಳೆ ಇತರ ಜಾತಿಯ ಕೆಲವರು ಅವರನ್ನು ಗೇಲಿ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ನಮ್ಮ ಮಾವ ಹೋಗಿದ್ದರು. ಈ ವೇಳೆ ಅವರಿಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಚಪ್ಪಲಿಯಿಂದ ಹೊಡೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಮ್ಮ ಮಾವನ ಮಗ ಸ್ಥಳಕ್ಕೆ ಹೋಗಿ ಪ್ರಶ್ನಿಸಿದ್ದಾರೆ. ಆಗ ವಾಗ್ವಾದ ನಡೆದು ನಮ್ಮ ಮಾವ ಮತ್ತು ಅವರ ಮಗನಿಗೆ ಚಪ್ಪಲಿಯಿಂದ ಥಳಿಸಿ, ಜಾತಿ ನಿಂದನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮುಂದುವರಿದು, “ಅಂದು ಇತರರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು. ಮರುದಿನ ನಮ್ಮ ಮಾವನವರು ಪರಸಪ್ಪ ಅವರ ಬಳಿ ತೆರಳಿ ಹಿಂದಿನ ದಿನ ನಡೆದ ಘಟನೆ ವಿವರಿಸಿದ್ದರು. ಆಗ ಪರಸಪ್ಪ ಮಾವನವರನ್ನು ಗದರಿಸಿ ಕಳಿಸಿದ್ದರು. ನಮ್ಮ ಮಾವನವರು ಏನೂ ಮಾಡಲಾಗದೆ ಸ್ಥಳದಿಂದ ವಾಪಾಸ್ ಬಂದಿದ್ದರು” ಎಂದು ವಿವರಿಸಿದ್ದಾರೆ.

“ಮನೆಗೆ ಬಂದ ಮಾವನವರು ಮತ್ತು ಅವರ ಮಕ್ಕಳು ಅವರವರ ಕೆಲಸ ಕಾರ್ಯಗಳಿಗೆ ತೆರಳಿದ್ದರು. ಈ ವೇಳೆ ಗುಂಪು ಕಟ್ಟಿಕೊಂಡು ಬಂದ ಎರಡ್ಮೂರು ಜಾತಿಯವರು, ನಮ್ಮ ಮನೆಗಳಿಗೆ ನುಗ್ಗಿ ಕೈಗೆ ಸಿಕ್ಕಿದ ವಸ್ತುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಮಕ್ಕಳು ಎನ್ನದೆ ಎಲ್ಲರ ಮೇಲೆ ಹಲ್ಲೆ ಮಾಡಿದ್ದಾರೆ. ಕೊಡಲಿ ಹಿಡಿದುಕೊಂಡು ಬಂದು ಯಾರನ್ನಾದರೂ ಜೀವ ತೆಗೆಯಲು ಮುಂದಾಗಿದ್ದರು. ದಾಳಿಯ ವಿಡಿಯೋ ಮಾಡುತ್ತಿದ್ದ ನಮ್ಮ ಹುಡುಗರ ಮೊಬೈಲ್ ಫೋನ್‌ ಕಿತ್ತುಕೊಂಡು ಹೋಗಿದ್ದಾರೆ. ಮುಖ್ಯವಾಗಿ, ನಮಗೆ ಜಾತಿ ನಿಂದನೆ ಮಾಡಿದ್ದಾರೆ” ಎಂದು ಮಂಜುಳಾ ಗಂಭೀರ ಆರೋಪ ಮಾಡಿದ್ದಾರೆ.

“ನಮ್ಮ ಕೇರಿಗೆ ನುಗ್ಗಿ ಮನಸೋಇಚ್ಚೆ ಹಲ್ಲೆ ಮಾಡುತ್ತಿದ್ದಾಗ ನಾವು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆವು, ಜೊತೆಗೆ ಆಂಬ್ಯಲೆನ್ಸ್‌ಗೂ ಕರೆ ಮಾಡಿದೆವು. ಆಂಬ್ಯುಲೆನ್ಸ್ ಬಂದು ಗಾಯಗೊಂಡ ನಮ್ಮ ಜನರನ್ನು ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡುತಿತ್ತು. ಆದರೂ, ಆರೋಪಿಗಳು ಹಲ್ಲೆ ನಡೆಸುವುದನ್ನು ಮುಂದುವರಿಸಿದ್ದರು. ಕೊನೆಗೆ ಪೊಲೀಸರು ಬಂದು ನಮಗೆ ರಕ್ಷಣೆ ಕೊಟ್ಟರು” ಎಂದು ತಿಳಿಸಿದ್ದಾರೆ.

“ನಾವು ಭಯದಲ್ಲಿ ಬದುಕುತ್ತಿದ್ದೇವೆ”

ಘಟನೆ ನಂತರ ನಾವು ಭಯದಲ್ಲಿ ಬದುಕುತ್ತಿದ್ದೇವೆ. ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ. ಆದರೂ, ಹಲ್ಲೆ ಮಾಡಿದವರು ದ್ವೇಷ ಇಟ್ಟುಕೊಂಡು ಮತ್ತೆ ಏನಾದರು ಮಾಡಿಯಾರು ಎಂಬ ಭಯ ನಮಗಿದೆ. ನಮ್ಮ ಹುಡುಗರು ಮನೆ ಬಿಟ್ಟು ಎಲ್ಲೂ ಹೊರಗಡೆ ಹೋಗದಂತೆ ಸೂಚಿಸಿದ್ದೇವೆ. ಇದು ಮೊದಲ ಘಟನೆಯಲ್ಲ, ನನಗೆ ಗೊತ್ತಿರುವ ಹಾಗೆ ಕಳೆದ ಹತ್ತು ವರ್ಷದಲ್ಲಿ ಹಲವಾರು ಬಾರಿ ನಮ್ಮ ಸಮುದಾಯದವರ ಮೇಲೆ ಹಲ್ಲೆಯಾಗಿದೆ. ಜಾತಿಯನ್ನೇ ಮುಂದಿಟ್ಟುಕೊಂಡು ಪದೇ ಪದೇ ಹಲ್ಲೆ ಮಾಡುವುದು, ನಿಂದಿಸುವುದು ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು, ಇವುಗಳಿಂದ ಮುಕ್ತಿ ಬೇಕು ಎಂದು ಮಂಜುಳಾ ಅಳಲು ತೋಡಿಕೊಂಡಿದ್ದಾರೆ.

ಸಮುದಾಯಗಳ ನಡುವೆ ಪರಸ್ಪರ ಅನ್ಯೋನ್ಯತೆ ಮೂಡಲಿ- ಕರಿಯಪ್ಪ ಗುಡಿಮನಿ

ದಲಿತ ಸಮುದಾಯದ ಮೇಲೆ ನಡೆದ ದಾಳಿಯನ್ನು ಖಂಡಿಸಿ ದಲಿತ ಮತ್ತು ಇತರ ಜನಪರ ಸಂಘಟನೆಗಳು ಶೀಘ್ರದಲ್ಲೇ ಬೋಚನಹಳ್ಳಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವ ತೀರ್ಮಾನ ಮಾಡಿದ್ದೇವೆ. ಅದಕ್ಕೂ ಮೊದಲು, ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ತಿಳಿಸಿದ್ದಾರೆ.

ಬೋಚನಹಳ್ಳಿಯಲ್ಲಿ ಎರಡು ತಳ ಸಮುದಾಯಗಳ ನಡುವೆ ಸಂಘರ್ಷ ನಡೆದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪರಸ್ಪರ ಅನ್ಯೋನ್ಯತೆಯಿಂದ ಇರಬೇಕಾದ ಈ ಸಮುದಾಯಗಳ ಜನರು, ಈ ರೀತಿ ಗಲಾಟೆ ಮಾಡಿಕೊಳ್ಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ನಾವು ಯಾವುದೇ ಸಮುದಾಯವನ್ನು ಗುರಿಯಾಗಿಸುತ್ತಿಲ್ಲ. ನಮ್ಮ ಆಗ್ರಹ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬುವುದು ಮಾತ್ರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಜಾತಿ ದೌರ್ಜನ್ಯಗಳು ನಡೆಯುತ್ತಿವೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜನ ಸಮುದಾಯಗಳ ನಡುವೆ ಪರಸ್ಪರ ಸೌಹಾರ್ದತೆ, ನಂಬಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಕರಿಯಪ್ಪ ಆಗ್ರಹಿಸಿದ್ದಾರೆ.

ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ದಲಿತರ ಮೇಲಿನ ಹಲ್ಲೆಯನ್ನು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ ವಿದ್ಯಾರ್ಥಿ ಸಂಘಟನೆ, ಮಹಿಳಾ ಮುನ್ನಡೆ ಹಾಗೂ ಪ್ರಗತಿಪರ ಚಿಂತಕರು ತೀವ್ರವಾಗಿ ಖಂಡಿಸಿದ್ದು, ಹೋರಾಟಕ್ಕೆ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಾದಿಗ ರಕ್ಷಣಾ ವೇದಿಕೆ, ಮೊಹರಂ ಹಬ್ಬದ ಸಂದರ್ಭದಲ್ಲಿ ಮಾದಿಗ ಸಮುದಾಯದ ಕಾಲೋನಿಗೆ ನುಗ್ಗಿ ಕೆಲ ಕಿಡಿಗೇಡಿಗಳು ದೌರ್ಜನ್ಯ ನಡೆಸಿರುವ ಘಟನೆ ಖಂಡನೀಯವಾಗಿದೆ. ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವಂತಹ ಜಾತಿವಾದಿ ಮನೋಭಾವದ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

“ಸಂವಿಧಾನ ನೀಡಿರುವ ಸಮಾನತೆ, ಗೌರವ ಮತ್ತು ಬದುಕುವ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಹಾಗೂ ಆಡಳಿತದ ಜವಾಬ್ದಾರಿಯಾಗಿದೆ. ಯಾವುದೇ ಸಮುದಾಯದ ಮೇಲೆ ಅನ್ಯಾಯ ನಡೆದರೆ ಅದನ್ನು ಸಹಿಸಲಸಾಧ್ಯ. ಬೋಚನಹಳ್ಳಿ ಗ್ರಾಮದ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು” ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.

ಗ್ರಾಮದಲ್ಲಿ ಶಾಶ್ವತ ಶಾಂತಿ, ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ಸಂಘಟನೆಗಳ ಮುಖಂಡರು ಚರ್ಚಿಸಿದ್ದಾರೆ. ನೊಂದ ಸಮುದಾಯದ ಪರವಾಗಿ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಅವರ ನೇತೃತ್ವದಲ್ಲಿ ಮುಂದಿನ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ಗ್ರಾಮದ ನೊಂದ ಮಾದಿಗ ಸಮುದಾಯದ ನೂರಾರು ಜನರು ಈ ಸಂದರ್ಭದಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುದಕಪ್ಪ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ರಾಣದಪ್ಪ, ಮುಖಂಡರಾದ ನಿಂಗಪ್ಪ ಪೂಜಾರಿ, ಜಿಲ್ಲಾ ಖಜಾಂಚಿ ಗವಿಸಿದ್ದಪ್ಪ ಹಲಗಿ, ತಾಲೂಕು ಕಾರ್ಯದರ್ಶಿ ಯಂಕಪ್ಪ ಬಿಸರಳ್ಳಿ, ತಾಲೂಕು ಸಹ ಕಾರ್ಯದರ್ಶಿ ಹೊಸಳ್ಳಿ ನಾಗರಾಜ್, ಮುಖಂಡರಾದ ಕಾರಿಗನೂರು ಓಬಳೇಶ್, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಪರವಾಗಿ ವಕೀಲರಾದ ಯಮನೂರಪ್ಪ ಈಳಿಗನೂರು, ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...