Homeಕರ್ನಾಟಕಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

- Advertisement -
- Advertisement -

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮತ್ತು ಅತ್ತಿಬೆಲೆ ರಾಷ್ಟ್ರೀಯ ಹೆದ್ದಾರಿಯ ಟೋಲ್ ಶುಲ್ಕವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದ್ದು, ನಿತ್ಯ ಸಂಚರಿಸುವ ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಬೀಳಲಿದೆ.

ನಂದಿ ಎಕನಾಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ಸಂಸ್ಥೆಯು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ಯೋಜನೆಯಡಿ ಬರುವ ತನ್ನ ಪೆರಿಫೆರಲ್ ಮತ್ತು ಲಿಂಕ್ ರಸ್ತೆಗಳ ಟೋಲ್ ದರವನ್ನು ಸರಾಸರಿ ಶೇಕಡಾ 10% ರಷ್ಟು ಹೆಚ್ಚಿಸಿದೆ. 

ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗೆ ಸಾಗುವ 40.8 ಕಿ.ಮೀ ಉದ್ದದ ಪೆರಿಫೆರಲ್ ರಸ್ತೆ ಹಾಗೂ 8.1 ಕಿ.ಮೀ ಉದ್ದದ ಲಿಂಕ್ ರಸ್ತೆಯಲ್ಲಿ ಚಲಿಸುವ ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಇಂದಿನಿಂದ ಕನಿಷ್ಠ ಶೇ. 10% ರಷ್ಟು ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಲೆಕ್ಕಾಚಾರದ ಸುಲಭಕ್ಕಾಗಿ ಹೆಚ್ಚುವರಿ ಮೊತ್ತವನ್ನು ಮುಂದಿನ ರೌಂಡ್ ಫಿಗರ್ ಸಂಖ್ಯೆಗೆ ಪೂರ್ಣಗೊಳಿಸಲಾಗಿದೆ. ಇದು ರಾಜ್ಯ ಸರ್ಕಾರದೊಂದಿಗಿನ ಒಪ್ಪಂದದ ಪ್ರಕಾರ ನಡೆಯುವ ವಾರ್ಷಿಕ ದರ ಪರಿಷ್ಕರಣೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

ನೈಸ್ ರಸ್ತೆ ಮೂಲಕ ಬನಶಂಕರಿ, ತಾವರೆಕೆರೆ, ಎಲೆಕ್ಟ್ರಾನಿಕ್ಸ್ ಸಿಟಿ ಭಾಗಗಳಿಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳಿಗೂ ಈ ದರ ಏರಿಕೆ ಅನ್ವಯವಾಗುವುದರಿಂದ, ಸಂಸ್ಥೆಯು ಈ ಹೊರೆಯನ್ನು ಟಿಕೆಟ್ ದರ ಹೆಚ್ಚಳದ ಮೂಲಕ ಸಾರ್ವಜನಿಕ ಪ್ರಯಾಣಿಕರ ಮೇಲೆಯೇ ಹಾಕುವ ಸಾಧ್ಯತೆ ದಟ್ಟವಾಗಿದೆ.

ಮತ್ತೊಂದೆಡೆ, ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿವರೆಗಿನ 9.98 ಕಿಮೀ ಉದ್ದದ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಮತ್ತು ಕರ್ನಾಟಕ-ತಮಿಳುನಾಡು ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ 44 ರ ಟೋಲ್ ದರವನ್ನು ಬೆಂಗಳೂರು ಎಲಿವೇಟೆಡ್ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ (BETPL) ಪರಿಷ್ಕರಿಸಿದೆ. ಸಗಟು ಬೆಲೆ ಸೂಚ್ಯಂಕದ (WPI) ಆಧಾರದ ಮೇಲೆ ಮಾಡಲಾಗಿರುವ ಈ ದರ ಪರಿಷ್ಕರಣೆಯು ಜೂನ್ 30, 2027 ರವರೆಗೆ ಜಾರಿಯಲ್ಲಿರಲಿದೆ.

ಹೊಸ ನಿಯಮದ ಪ್ರಕಾರ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ನಲ್ಲಿ ಕಾರು, ಜೀಪ್ ಮತ್ತು ವ್ಯಾನ್‌ಗಳ ಏಕಮುಖ (ಒನ್-ವೇ) ಸಂಚಾರದ ದರದಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ, ದಿನದಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಸಂಚರಿಸುವ ‘ಮಲ್ಟಿಪಲ್ ಜರ್ನಿ’ ಶುಲ್ಕವನ್ನು 95 ರೂಪಾಯಿಯಿಂದ 100 ರೂಪಾಯಿಗೆ ಹೆಚ್ಚಿಸಲಾಗಿದೆ. ಹಾಗೆಯೇ ಮಾಸಿಕ ಪಾಸ್ ದರವನ್ನು 1,885 ರೂಪಾಯಿಯಿಂದ 1,960 ರೂಪಾಯಿಗೆ ಏರಿಸಲಾಗಿದ್ದು, ನಿತ್ಯ ಓಡಾಡುವ ಐಟಿ ಉದ್ಯೋಗಿಗಳಿಗೆ ಪ್ರತಿ ತಿಂಗಳು 75 ರೂಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ದ್ವಿಚಕ್ರ ವಾಹನ ಸವಾರರ ಒನ್-ವೇ ಹಾಗೂ ಮಲ್ಟಿಪಲ್ ಟೋಲ್ ದರ ಯಥಾಸ್ಥಿತಿ ಮುಂದುವರಿದಿದ್ದರೂ, ಅವರ ಮಾಸಿಕ ಪಾಸ್ ದರವನ್ನು 755 ರೂಪಾಯಿಯಿಂದ 785 ರೂಪಾಯಿಗೆ ಹೆಚ್ಚಿಸಲಾಗಿದೆ.

ಇದೇ ವೇಳೆ, ಹೊಸೂರು ರಸ್ತೆಯ ಅತ್ತಿಬೆಲೆ ಟೋಲ್ ಪ್ಲಾಜಾದಲ್ಲಿಯೂ ದರ ಏರಿಕೆಯಾಗಿದ್ದು, ಕಾರು ಮತ್ತು ಜೀಪ್‌ಗಳ ದಿನದ ಮಲ್ಟಿಪಲ್ ಪ್ರಯಾಣದ ಶುಲ್ಕವನ್ನು 55 ರೂಪಾಯಿಯಿಂದ 60 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಒಟ್ಟಾರೆ ಒಂದೇ ದಿನ ಮೂರು ಪ್ರಮುಖ ಮಾರ್ಗಗಳ ಟೋಲ್ ದರಗಳು ದುಬಾರಿಯಾಗಿರುವುದು ಕಚೇರಿ ಕೆಲಸಗಳಿಗಾಗಿ ನಿತ್ಯ ಸಂಚರಿಸುವ ಮಧ್ಯಮ ವರ್ಗದ ವಾಹನ ಸವಾರರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...