Homeಕರ್ನಾಟಕಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ": ಉದ್ಧವ್ ಠಾಕ್ರೆ

ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ರಾತ್ರಿ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದಾರೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಂದ ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಅವರು ಕರೆದಿದ್ದಾರೆ.

ದೆಹಲಿ ಪೊಲೀಸರು ತ್ವರಿತವಾಗಿ ಮತ್ತು ನಿರ್ಣಾಯಕವಾಗಿ ವರ್ತಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವ ಹಾಗೆ ಮಾಡಬೇಕು. ಈ ರೀತಿ ಮಾಡಲು ವಿಫಲವಾದರೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ವಿಫಲವಾಗಿದ್ದೀರಿ ಎಂದೇ ಅರ್ಥ ಎಂದು ಉದ್ಧವ್‌ ಎಚ್ಚರಿಕೆ ನೀಡಿದ್ದಾರೆ.

“ಯುವಕರು ಭಯಭೀತರಾಗಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ನಾವೆಲ್ಲರೂ ಒಗ್ಗೂಡಿ ಅವರಲ್ಲಿ ವಿಶ್ವಾಸ ಮೂಡಿಸಬೇಕಾಗಿದೆ. ನಮ್ಮ ಯುವಜನರು ಹೇಡಿಗಳಲ್ಲ. ಯುವಜನರನ್ನು ಪ್ರಚೋದಿಸುವ ಮೂಲಕ ಬಾಂಬ್ ಸ್ಫೋಟಿಸಬೇಡಿ. ಪೊಲೀಸರು ನಿಷ್ಪಕ್ಷಪಾತವಾಗಿ ವರ್ತಿಸದಿದ್ದರೆ, ಅವರ ಕಠೋರ ಪ್ರಶ್ನೆಗಳನ್ನು ಎದುರಿಸಬೇಕಾಗುತ್ತಿದೆ ಎಂದು ಠಾಕ್ರೆ ಹೇಳಿದ್ದಾರೆ.

2008 ರಲ್ಲಿ ಮುಂಬೈನ ಪ್ರಮುಖ ಸ್ಥಳಗಳ ಮೇಲೆ ಮೂರು ದಿನಗಳ ಕಾಲ ಭಯೋತ್ಪಾದಕರು ದಾಳಿ ಮಾಡಿದ್ದರು. ಇದರಿಂದ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಲಷ್ಕರ್-ಎ-ತೈಬಾ ಮುಖ್ಯಸ್ಥ ಹಫೀಜ್ ಸಯೀದ್ ಈ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ.

ಇನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಜೆನ್‌ಎನ್‌ಯು ಹಿಂಸೆಯನ್ನು ಖಂಡಿಸಿದ್ದಾರೆ. “ಈ ಹಿಂಸೆಯು ಭಿನ್ನಾಭಿಪ್ರಾಯದ ಪ್ರತಿ ಧ್ವನಿಯನ್ನು ನಿಗ್ರಹಿಸಲು ಮತ್ತು ವಶಪಡಿಸಿಕೊಳ್ಳಲು ಸರ್ಕಾರವು ಎಂತಹ ಮಟ್ಟಕ್ಕೂ ಹೋಗಬಹುದು ಎಂಬುದರ ಕಠೋರ ಜ್ಞಾಪನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಭಾರತದ ಯುವಜನರ ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಪ್ರತಿದಿನ ನಿಗ್ರಹಿಸಲಾಗುತ್ತಿದೆ. ಆಡಳಿತಾರೂಢ ಮೋದಿ ಸರ್ಕಾರವನ್ನು ಸಕ್ರಿಯವಾಗಿ ಬೆಂಬಲಿಸುವ ಗೂಂಡಾಗಳು ಭಾರತದ ಯುವಜನರ ಮೇಲೆ ನಡೆಸಿದ ಭಯಾನಕ ಹಿಂಸಾಚಾರವು ಶೋಚನೀಯ ಮತ್ತು ಸ್ವೀಕಾರಾರ್ಹವಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಪಿ ಚಿದಂಬರಂ ಮಾತನಾಡಿ ಜೆಎನ್‌ಯು ಹಿಂಸಾಚಾರದ ಈ ಘಟನೆಯು ಬಹುಶಃ ನಾವು ಅರಾಜಕತೆಗೆ ವೇಗವಾಗಿ ಇಳಿಯುತ್ತಿದ್ದೇವೆ ಎಂಬುದಕ್ಕೆ ಅತ್ಯಂತ ಸಾಕ್ಷಿಯಾಗಿದೆ. ಇದು ಕೇಂದ್ರ ಸರ್ಕಾರ, ಗೃಹ ಸಚಿವ, ಲೆಫ್ಟಿನೆಂಟ್‌ ಗರ್ವನರ್‌ ಮತ್ತು ಪೊಲೀಸ್ ಆಯುಕ್ತರ ಮೇಲ್ವಿಚಾರಣೆಯಲ್ಲಿ ದೆಹಲಿಯಲ್ಲಿರುವ ಭಾರತದ ಅಗ್ರಗಣ್ಯ ವಿಶ್ವವಿದ್ಯಾಲಯದಲ್ಲಿ ಸಂಭವಿಸಿದೆ ಸಂಭವಿಸಿದೆ ಎಂದು ಅಸಮಾಧಾಣ ವ್ಯಕ್ತಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮಾತನಾಡಿ ಮುಖವಾಡದ ದಾಳಿಕೋರರು ದೆಹಲಿಯ ಜೆಎನ್‌ಯು ಕ್ಯಾಂಪಸ್‌ಗೆ ಹೇಗೆ ಪ್ರವೇಶಿಸಿದರು ಮತ್ತು ಯೋಜಿತ ರೀತಿಯಲ್ಲಿ ಹೇಗೆ ದಾಳಿ ಮಾಡಿದರು ಎಂಬುದನ್ನು ದೇಶ ಮತ್ತು ಜಗತ್ತು ನೋಡಿದೆ. ನ್ಯಾಯಯುತ ತನಿಖೆ ಅಗತ್ಯವಿದೆ ಏಕೆಂದರೆ ಇದರ ಹಿಂದೆ ಮುಖ್ಯ ಸಂಚುಕೋರ ಯಾರು ಎಂದು ನಾವು ತಿಳಿದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...