Homeಮುಖಪುಟಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; 'ನನ್ನ ಮಗನ ಶವ ನನಗೆ ಬೇಡ' ಎಂದ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

- Advertisement -
- Advertisement -

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ ಮುಂಜಾನೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಆದರೆ, ಈ ಘಟನೆಯ ನಂತರ ಆತನ ಹೆತ್ತ ತಾಯಿ ನೀಡಿರುವ ಹೇಳಿಕೆ ಹಾಗೂ ಆಕೆಯ ನಿರ್ಧಾರ ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ. “ನನ್ನ ಮಗ ಮಾಡಿದ ರಾಕ್ಷಸ ಕೃತ್ಯಕ್ಕೆ ಆತನಿಗೆ ಸೂಕ್ತ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಸ್ವೀಕರಿಸುವುದಿಲ್ಲ” ಎಂದು ತಾಯಿ ಸಂಧ್ಯಾ ಮಂಡಲ್ ದೃಢವಾಗಿ ಹೇಳಿದ್ದು, ಕ್ರೂರ ಅಪರಾಧವೆಸಗಿದ ಮಗನಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಂಡಿದ್ದಾರೆ.

ಬರುಯಿಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪಲಾಶ್ ಚಂದ್ರ ದಾಲಿ ನೀಡಿದ ಮಾಹಿತಿಯಂತೆ, ಬುಧವಾರ ಮುಂಜಾನೆ ಸುಮಾರು 12:45ರ ವೇಳೆಗೆ ಪ್ರಕರಣದ ತನಿಖೆಯ ಭಾಗವಾಗಿ ಅಪರಾಧ ನಡೆದ ಸ್ಥಳದ (ಸೂರ್ಯಪುರ) ಪುನರ್ನಿರ್ಮಾಣ (Reconstruction of crime scene) ಕಾರ್ಯಕ್ಕಾಗಿ ಆರೋಪಿ ಪ್ರಭಾಸ್ ಮೊಂಡೋಲ್‌ನನ್ನು ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿಯು ತನಿಖೆಗೆ ಸಹಕರಿಸದೆ ಅಧಿಕಾರಿಗಳನ್ನು ದಾರಿತಪ್ಪಿಸಲು ಯತ್ನಿಸಿದ್ದನು.

ಸ್ಥಳಕ್ಕೆ ತಲುಪುತ್ತಿದ್ದಂತೆಯೇ, ಪ್ರಭಾಸ್ ದಿಢೀರನೆ ಪೊಲೀಸ್ ಅಧಿಕಾರಿಯೊಬ್ಬರ ಸೇವಾ ಪಿಸ್ತೂಲನ್ನು ಕಸಿದುಕೊಂಡು, ಪೊಲೀಸ್ ತಂಡದ ಮೇಲೆ ಒಂದು ಸುತ್ತು ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಭಾಸ್‌ನನ್ನು ತಕ್ಷಣವೇ ಬರುಯಿಪುರ ಸಬ್-ಡಿವಿಷನಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

‘ಶವ ಮನೆಗೆ ತರಲ್ಲ, ಏನು ಬೇಕಾದರೂ ಮಾಡಿ’: ತಾಯಿಯ ಪ್ರತಿಕ್ರಿಯೆ

ಮಗನ ಎನ್‌ಕೌಂಟರ್ ಸುದ್ಧಿ ತಿಳಿದ ನಂತರ ಪ್ರಮುಖ ಆರೋಪಿ ಪ್ರಭಾಸ್‌ನ ತಾಯಿ ಸಂಧ್ಯಾ ಮಂಡಲ್ ಸುದ್ದಿ ಸಂಸ್ಥೆ (ANI) ಜೊತೆ ಮಾತನಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬುಧವಾರ ಬೆಳಿಗ್ಗೆ ನಾನು ಎಚ್ಚರಗೊಳ್ಳುತ್ತಿದ್ದಂತೆಯೇ ಇಬ್ಬರು ಪೊಲೀಸರು ಮನೆಗೆ ಬಂದರು. ‘ನಿಮ್ಮ ಮಗ ಸತ್ತಿದ್ದಾನೆ, ಆಸ್ಪತ್ರೆಗೆ ಬರುತ್ತೀರಾ?’ ಎಂದು ಕೇಳಿದರು. ನನ್ನ ಪತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಬರುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದೆ. ಆತ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ. ಆತ ಎಸಗಿದ ಭಯಾನಕ ಅಪರಾಧಕ್ಕೆ ಆತನಿಗೆ ತಕ್ಕ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಮನೆಗೆ ತರುವುದಿಲ್ಲ ಮತ್ತು ಸ್ವೀಕರಿಸುವುದೂ ಇಲ್ಲ. ಆತನ ಶವವನ್ನು ಪೊಲೀಸರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೆ ಯಾವುದೇ ಅಭ್ಯಂತರವಿಲ್ಲ” ಎಂದು ಅತ್ಯಂತ ಕಠಿಣ ಧ್ವನಿಯಲ್ಲಿ ಸಂಧ್ಯಾ ಮಂಡಲ್ ಪ್ರತಿಪಾದಿಸಿದ್ದಾರೆ.

ಈ ಪ್ರಕರಣವು ಪಶ್ಚಿಮ ಬಂಗಾಳ ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಶನಿವಾರ (ಜುಲೈ 4) ಕಾಣೆಯಾಗಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಮೃತದೇಹವು ಭಾನುವಾರ ಬೆಳಿಗ್ಗೆ ಬರುಯಿಪುರದ ಸೂರ್ಯಪುರ ಹಾಟ್ ಬಳಿಯ ಕೊಳವೊಂದರಲ್ಲಿ ಪತ್ತೆಯಾಗಿತ್ತು.

ಬಾಲಕಿಯ ಶವ ಸಿಗುತ್ತಿದ್ದಂತೆಯೇ ಸ್ಥಳೀಯರು ರೊಚ್ಚಿಗೆದ್ದು, ರಸ್ತೆ ತಡೆ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಆಸ್ಪತ್ರೆಯಿಂದ ಬಂದ ಪ್ರಥಮ ಮರಣೋತ್ತರ ಪರೀಕ್ಷೆಯ (Autopsy) ವರದಿಯು ಅಪರಾಧದ ಕ್ರೂರತೆಯನ್ನು ಬಿಚ್ಚಿಟ್ಟಿತ್ತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ದೇಹಕ್ಕೆ ಸುಟ್ಟ ಗಾಯಗಳನ್ನು ಉಂಟುಮಾಡಿ, ತಲೆಯ ಹಿಂಭಾಗಕ್ಕೆ ಬಲವಾದ ವಸ್ತುವಿನಿಂದ ಹೊಡೆದು ಹಿಂಸಿಸಲಾಗಿತ್ತು. ಅಷ್ಟೇ ಅಲ್ಲದೆ, ಬಾಲಕಿ ಜೀವಂತವಾಗಿದ್ದಾಗಲೇ ಆಕೆಯನ್ನು ಕೊಳಕ್ಕೆ ಎಸೆಯಲಾಗಿತ್ತು ಎಂಬುದು ಆಕೆಯ ಶ್ವಾಸಕೋಶದಲ್ಲಿ ಸಿಕ್ಕ ಕೆಸರು ನೀರಿನಿಂದ ದೃಢಪಟ್ಟಿತ್ತು. ಅತಿಯಾದ ರಕ್ತಸ್ರಾವ ಮತ್ತು ನೀರಿನಲ್ಲಿ ಮುಳುಗಿದ್ದೇ ಬಾಲಕಿಯ ಸಾವಿಗೆ ಕಾರಣವೆಂದು ವೈದ್ಯರು ದೃಢಪಡಿಸಿದ್ದರು.

ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬಾಲಕಿ ಕಾಣೆಯಾಗುವ ಮೊದಲು ಆಕೆಯೊಂದಿಗೆ ಪ್ರಭಾಸ್ ಮೊಂಡೋಲ್ ಇರುವುದು ಕಂಡುಬಂದಿತ್ತು. ಪೊಲೀಸರು ತಕ್ಷಣವೇ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಇತರ ಸಹ-ಆರೋಪಿಗಳಾದ ಆನಂದ್ ಸರ್ದಾರ್, ದಿವಾಕರ್ ಸರ್ದಾರ್ ಮತ್ತು ಕಬೀರ್ ಮೊಲ್ಲಾ ಎಂಬುವವರ ಹೆಸರುಗಳು ಹೊರಬಂದಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪೋಕ್ಸೋ (POCSO) ಕಾಯ್ದೆ, ಸಾಮೂಹಿಕ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯ ನಾಶದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದರು.

ಈ ಎನ್‌ಕೌಂಟರ್ ಘಟನೆಯು ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರವು ಅಪರಾಧಗಳ ವಿರುದ್ಧ ‘ಝೀರೋ ಟಾಲರೆನ್ಸ್’ ನೀತಿ ಅನುಸರಿಸುವುದಾಗಿ ಸ್ಪಷ್ಟಪಡಿಸಿದ್ದರೆ, ಮತ್ತೊಂದೆಡೆ ಎನ್‌ಕೌಂಟರ್ ಪ್ರಕ್ರಿಯೆಯ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

ತನ್ನ ಮಗನೇ ಆದರೂ ಆತ ಎಸಗಿದ ಮನುಷ್ಯತ್ವವಿಲ್ಲದ ಕೃತ್ಯಕ್ಕೆ ಆತನ ಹೆತ್ತ ತಾಯಿಯೇ ಮೃತದೇಹವನ್ನು ನಿರಾಕರಿಸಿ, ಶಿಕ್ಷೆಯನ್ನು ಬೆಂಬಲಿಸಿರುವುದು ಸಮಾಜದಲ್ಲಿ ಅಪರಾಧಿಗಳ ವಿರುದ್ಧ ವ್ಯಕ್ತವಾಗುತ್ತಿರುವ ತೀವ್ರ ಆಕ್ರೋಶಕ್ಕೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...