Homeಮುಖಪುಟಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

- Advertisement -
- Advertisement -

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ.

ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಸುನಾಲಿ ಖಾತುನ್, ಅವರ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.

ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.

ಗಡಿಯಾಚೆಗೆ ತಳ್ಳುವಾಗ ತುಂಬು ಗರ್ಭಿಣಿಯಾಗಿದ್ದ ಕಾರಣ, ಸುನಾಲಿ ಖಾತೂನ್ ಮತ್ತು ಅವರ ಮಗ ಸಾಬಿರ್‌ನನ್ನು ಮಾನವೀಯತೆಯ ಆಧಾರದ ಮೇಲೆ 2025ರ ಡಿಸೆಂಬರ್‌ನಲ್ಲಿ ಮರಳಿ ಭಾರತಕ್ಕೆ ಕರೆತರಲಾಗಿತ್ತು.

ಬುಧವಾರ ಖಾತೂನ್ ಅವರ ಪತಿ ಡ್ಯಾನಿಶ್ ಶೇಖ್, ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಇವರ ಊರಿನವರಾದ ಬೀರ್‌ಭೂಮ್‌ನ ಪೈಕರ್ ಗ್ರಾಮದ ನಿವಾಸಿಸೋಯೆಫ್ ಅಲಿ ತಿಳಿಸಿರುವುದಾಗಿ scroll.in ವರದಿ ಮಾಡಿದೆ.

ನಾಲ್ವರು ಮಾಲ್ಡಾ ಜಿಲ್ಲೆಯ ಮಹಾದಿಪುರ ಗಡಿ ಕ್ರಾಸಿಂಗ್ ಮೂಲಕ ಪಶ್ಚಿಮ ಬಂಗಾಳ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಡಿಯಾಚೆಗೆ ತಳ್ಳಿರುವ ಆರು ಜನರ ಪೈಕಿ ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಈಗಾಗಲೇ ಭಾರತಕ್ಕೆ ಕರೆ ತಂದಿರುವುದರಿಂದ, ಇನ್ನುಳಿದ ನಾಲ್ವರನ್ನು ಭಾರತಕ್ಕೆ ವಾಪಸ್ ಕರೆತಂದು ಅವರ ಪೌರತ್ವವನ್ನು ಮರು ಪರಿಶೀಲಿಸುವುದಾಗಿ ಮೇ 22ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿತ್ತು.

ಆರೂ ಜನರ ಗಡಿಪಾರು ಆದೇಶವನ್ನು ವಜಾಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿತ್ತು.

ಗಡಿಯಾಚೆಗೆ ತಳ್ಳಿದವರನ್ನು ನಾಲ್ಕು ವಾರಗಳ ಒಳಗಾಗಿ ಪಶ್ಚಿಮ ಬಂಗಾಳ ಮರಳಿ ಕರೆತರಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿತ್ತು. ಸುನಾಲಿ ಖಾತೂನ್ ಅವರ ತಂದೆ ಭೋದು ಸೇಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಆದೇಶ ನೀಡಿತ್ತು.

ನಾಲ್ಕು ವಾರಗಳ ಅವಧಿ ಮುಗಿಯಲು ಎರಡು ದಿನಗಳು ಬಾಕಿ ಇರುವಾಗ, ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಹೈಕೋರ್ಟ್‌ಗೆ ವ್ಯಾಪ್ತಿ ಇದೆಯೇ ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಪ್ರಶ್ನಿಸಿದ್ದರು.

ನಾಲ್ವರನ್ನು ಭಾರತಕ್ಕೆ ವಾಪಸ್ ಕರೆ ತಂದಿರುವ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದ ಸಮೀರುಲ್ ಇಸ್ಲಾಂ ಪ್ರತಿಕ್ರಿಯಿಸಿದ್ದು, “ನ್ಯಾಯಾಂಗದ ಮಧ್ಯಸ್ಥಿಕೆಯ ಕಾರಣದಿಂದಾಗಿ ಮಾತ್ರ ಕೇಂದ್ರ ಸರ್ಕಾರ ಕೊನೆಗೂ ಬಡ ಭಾರತೀಯ ನಾಗರಿಕರನ್ನು ಮರಳಿ ಕರೆ ತಂದಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, “ನಿಜವಾಗಿಯೂ ಅಕ್ರಮ ನುಸುಳುಕೋರರಾಗಿರುವವರನ್ನು ಗಡಿಪಾರು ಮಾಡುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ” ಎಂದಿದ್ದಾರೆ. “ನಮ್ಮ ಮೂಲಭೂತ ಪ್ರಶ್ನೆ ಏನೆಂದರೆ: ಗಡಿಪಾರು ಹೆಸರಿನಲ್ಲಿ ಬಡ ಮತ್ತು ನಿಜವಾದ ಭಾರತೀಯ ನಾಗರಿಕರನ್ನು ಏಕೆ ಇಂತಹ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಪಡಿಸಬೇಕು?” ಎಂದು ಇಸ್ಲಾಂ ಪ್ರಶ್ನಿಸಿದ್ದಾರೆ.

ಏಪ್ರಿಲ್ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ವ್ಯಕ್ತಿಗಳನ್ನು, ಹೆಚ್ಚಾಗಿ ಮುಸ್ಲಿಮರನ್ನು ವಶಕ್ಕೆ ಪಡೆಯುತ್ತಿದ್ದಾರೆ ಮತ್ತು ಅವರು ಭಾರತೀಯ ನಾಗರಿಕರು ಎಂಬುದನ್ನು ಸಾಬೀತುಪಡಿಸುವಂತೆ ಒತ್ತಾಯಿಸುತ್ತಿದ್ದಾರೆ.

ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಹಲವಾರು ವ್ಯಕ್ತಿಗಳನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿದೆ. ಈ ಪೈಕಿ ಹಲವು ಮಂದಿಯನ್ನು ತಪ್ಪಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂದು ಇಲ್ಲಿನ ರಾಜ್ಯ ಅಧಿಕಾರಿಗಳು ಸಾಬೀತುಪಡಿಸಿದ ನಂತರ, ಮರಳಿ ಕರೆ ತರಲಾಗಿದೆ.ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...