ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ.
ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಸುನಾಲಿ ಖಾತುನ್, ಅವರ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.
ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.
ಗಡಿಯಾಚೆಗೆ ತಳ್ಳುವಾಗ ತುಂಬು ಗರ್ಭಿಣಿಯಾಗಿದ್ದ ಕಾರಣ, ಸುನಾಲಿ ಖಾತೂನ್ ಮತ್ತು ಅವರ ಮಗ ಸಾಬಿರ್ನನ್ನು ಮಾನವೀಯತೆಯ ಆಧಾರದ ಮೇಲೆ 2025ರ ಡಿಸೆಂಬರ್ನಲ್ಲಿ ಮರಳಿ ಭಾರತಕ್ಕೆ ಕರೆತರಲಾಗಿತ್ತು.
ಬುಧವಾರ ಖಾತೂನ್ ಅವರ ಪತಿ ಡ್ಯಾನಿಶ್ ಶೇಖ್, ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಇವರ ಊರಿನವರಾದ ಬೀರ್ಭೂಮ್ನ ಪೈಕರ್ ಗ್ರಾಮದ ನಿವಾಸಿಸೋಯೆಫ್ ಅಲಿ ತಿಳಿಸಿರುವುದಾಗಿ scroll.in ವರದಿ ಮಾಡಿದೆ.
ನಾಲ್ವರು ಮಾಲ್ಡಾ ಜಿಲ್ಲೆಯ ಮಹಾದಿಪುರ ಗಡಿ ಕ್ರಾಸಿಂಗ್ ಮೂಲಕ ಪಶ್ಚಿಮ ಬಂಗಾಳ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಗಡಿಯಾಚೆಗೆ ತಳ್ಳಿರುವ ಆರು ಜನರ ಪೈಕಿ ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಈಗಾಗಲೇ ಭಾರತಕ್ಕೆ ಕರೆ ತಂದಿರುವುದರಿಂದ, ಇನ್ನುಳಿದ ನಾಲ್ವರನ್ನು ಭಾರತಕ್ಕೆ ವಾಪಸ್ ಕರೆತಂದು ಅವರ ಪೌರತ್ವವನ್ನು ಮರು ಪರಿಶೀಲಿಸುವುದಾಗಿ ಮೇ 22ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ವಾಗ್ದಾನ ಮಾಡಿತ್ತು.
ಆರೂ ಜನರ ಗಡಿಪಾರು ಆದೇಶವನ್ನು ವಜಾಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೇಳಿಕೆ ನೀಡಿತ್ತು.
ಗಡಿಯಾಚೆಗೆ ತಳ್ಳಿದವರನ್ನು ನಾಲ್ಕು ವಾರಗಳ ಒಳಗಾಗಿ ಪಶ್ಚಿಮ ಬಂಗಾಳ ಮರಳಿ ಕರೆತರಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿತ್ತು. ಸುನಾಲಿ ಖಾತೂನ್ ಅವರ ತಂದೆ ಭೋದು ಸೇಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಆದೇಶ ನೀಡಿತ್ತು.
ನಾಲ್ಕು ವಾರಗಳ ಅವಧಿ ಮುಗಿಯಲು ಎರಡು ದಿನಗಳು ಬಾಕಿ ಇರುವಾಗ, ಅಕ್ಟೋಬರ್ನಲ್ಲಿ ಕೇಂದ್ರ ಸರ್ಕಾರ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಹೈಕೋರ್ಟ್ಗೆ ವ್ಯಾಪ್ತಿ ಇದೆಯೇ ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಪ್ರಶ್ನಿಸಿದ್ದರು.
ನಾಲ್ವರನ್ನು ಭಾರತಕ್ಕೆ ವಾಪಸ್ ಕರೆ ತಂದಿರುವ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದ ಸಮೀರುಲ್ ಇಸ್ಲಾಂ ಪ್ರತಿಕ್ರಿಯಿಸಿದ್ದು, “ನ್ಯಾಯಾಂಗದ ಮಧ್ಯಸ್ಥಿಕೆಯ ಕಾರಣದಿಂದಾಗಿ ಮಾತ್ರ ಕೇಂದ್ರ ಸರ್ಕಾರ ಕೊನೆಗೂ ಬಡ ಭಾರತೀಯ ನಾಗರಿಕರನ್ನು ಮರಳಿ ಕರೆ ತಂದಿದೆ” ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದ ಪೋಸ್ಟ್ನಲ್ಲಿ ಅವರು, “ನಿಜವಾಗಿಯೂ ಅಕ್ರಮ ನುಸುಳುಕೋರರಾಗಿರುವವರನ್ನು ಗಡಿಪಾರು ಮಾಡುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ” ಎಂದಿದ್ದಾರೆ. “ನಮ್ಮ ಮೂಲಭೂತ ಪ್ರಶ್ನೆ ಏನೆಂದರೆ: ಗಡಿಪಾರು ಹೆಸರಿನಲ್ಲಿ ಬಡ ಮತ್ತು ನಿಜವಾದ ಭಾರತೀಯ ನಾಗರಿಕರನ್ನು ಏಕೆ ಇಂತಹ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಪಡಿಸಬೇಕು?” ಎಂದು ಇಸ್ಲಾಂ ಪ್ರಶ್ನಿಸಿದ್ದಾರೆ.
ಏಪ್ರಿಲ್ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ವ್ಯಕ್ತಿಗಳನ್ನು, ಹೆಚ್ಚಾಗಿ ಮುಸ್ಲಿಮರನ್ನು ವಶಕ್ಕೆ ಪಡೆಯುತ್ತಿದ್ದಾರೆ ಮತ್ತು ಅವರು ಭಾರತೀಯ ನಾಗರಿಕರು ಎಂಬುದನ್ನು ಸಾಬೀತುಪಡಿಸುವಂತೆ ಒತ್ತಾಯಿಸುತ್ತಿದ್ದಾರೆ.
ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಹಲವಾರು ವ್ಯಕ್ತಿಗಳನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿದೆ. ಈ ಪೈಕಿ ಹಲವು ಮಂದಿಯನ್ನು ತಪ್ಪಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂದು ಇಲ್ಲಿನ ರಾಜ್ಯ ಅಧಿಕಾರಿಗಳು ಸಾಬೀತುಪಡಿಸಿದ ನಂತರ, ಮರಳಿ ಕರೆ ತರಲಾಗಿದೆ.ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಿದ್ದಾರೆ.


