HomeಮುಖಪುಟTMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ ಮೇಲ್ಮನೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಟಿಎಂಸಿಗೆ ಹಾಗೂ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸುಸ್ಮಿತಾ ದೇವ್, ಸುಖೇಂದು ಶೇಖರ್ ರಾಯ್ ಮತ್ತು ಪ್ರಕಾಶ್ ಚಿಕ್ ಬರೈಕ್ ಅವರು ಗುರುವಾರ ಅಧಿಕೃತವಾಗಿ ಕಮಲ ಪಾಳಯ ಸೇರಿದ್ದಾರೆ. ಅವರು ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ, ಅವರು ಖಾಲಿ ಮಾಡಿದ್ದ ಅದೇ ಮೂರು ಸ್ಥಾನಗಳ ಮುಂಬರುವ ಉಪಚುನಾವಣೆಗೆ ಬಿಜೆಪಿಯು ಅವರನ್ನೇ ತನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ! ಈ ಸ್ಥಾನಗಳಿಗೆ ಜುಲೈ 24 ರಂದು ಮರುಚುನಾವಣೆ ನಡೆಯಲಿದೆ.

TMC ಯನ್ನು ಮುಗಿಸುವ ಬಿಜೆಪಿಯ ‘ಆಪರೇಷನ್’ ಇನ್ನೂ ಮುಗಿದಿಲ್ಲ ಎಂದು ದೆಹಲಿಯ ರಾಜಕೀಯ ಮೂಲಗಳು ತಿಳಿಸಿವೆ. ಮತ್ತೊಬ್ಬ ಟಿಎಂಸಿ ಸಂಸದೆ ರುಕ್ಮಿಣಿ ಮಲ್ಲಿಕ್ ಈಗಾಗಲೇ ಇಮೇಲ್ ಮೂಲಕ ರಾಜ್ಯಸಭಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಶೀಘ್ರದಲ್ಲೇ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ. ಇನ್ನುಳಿದ ಒಂಬತ್ತು ಟಿಎಂಸಿ ರಾಜ್ಯಸಭಾ ಸಂಸದರ ಪೈಕಿ ಇಬ್ಬರು ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆಯಿದೆ ಎನ್ನಲಾಗಿದೆ.

TMC ನಾಯಕರು ಭ್ರಷ್ಟಾಚಾರ ಮತ್ತು ಗೂಂಡಾಗಿರಿಯಲ್ಲಿ ತೊಡಗಿದ್ದಾರೆ, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂಬ ಬಿಜೆಪಿಯ ಸಾರ್ವಜನಿಕ ನಿಲುವಿಗೆ ಈ ಬೆಳವಣಿಗೆ ಸಂಪೂರ್ಣ ವಿರುದ್ಧವಾಗಿದೆ. ಆದರೆ, ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಇದನ್ನು “ಅಪವಾದ” ಎಂದು ಕರೆದು ಸಮರ್ಥಿಸಿಕೊಂಡಿದ್ದಾರೆ. ಅವರು ‘ಒಳ್ಳೆಯ ಟಿಎಂಸಿ ಮತ್ತು ಕೆಟ್ಟ ಟಿಎಂಸಿ’ ಎಂಬ ಹೊಸ ಸಿದ್ಧಾಂತವನ್ನು ಮಂಡಿಸಿದ್ದು, ‘ಭಾಲೋ’ (ಒಳ್ಳೆಯ) ಟಿಎಂಸಿ ನಾಯಕರನ್ನು ಪಕ್ಷಕ್ಕೆ ಕರೆತರಲು ನಮಗೆ ಯಾವುದೇ ಹಿಂಜರಿಕೆಯಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸಮೀಕ್ ಭಟ್ಟಾಚಾರ್ಯ, “ಇದು ಒಂದು ವಿಶಿಷ್ಟ ಪ್ರಕರಣವಾಗಿದ್ದು, ಪಕ್ಷದ ಹಳೆಯ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭ್ರಷ್ಟಾಚಾರದಲ್ಲಿ ಭಾಗಿಯಾದ ಟಿಎಂಸಿ ನಾಯಕರಿಗೆ ನಮ್ಮ ಪಕ್ಷದ ಬಾಗಿಲು ಎಂದಿಗೂ ಮುಚ್ಚಿರುತ್ತದೆ. ಆದರೆ, ಅಧಿಕಾರ ದುರ್ಬಳಕೆ ಮಾಡಿಕೊಳ್ಳದ ಮತ್ತು ಭ್ರಷ್ಟಾಚಾರ ರಹಿತ ನಾಯಕರು ಟಿಎಂಸಿ ವಿರುದ್ಧದ ಹೋರಾಟಕ್ಕೆ ಹಾಗೂ ಬಂಗಾಳದ ಮರುನಿರ್ಮಾಣಕ್ಕೆ ನಮ್ಮೊಂದಿಗೆ ಕೈಜೋಡಿಸಲು ಯಾವಾಗಲೂ ಮುಕ್ತ ಅವಕಾಶವಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯ ನಂತರ ತಮ್ಮ ಭವಿಷ್ಯದ ಬಗ್ಗೆ ಗೊಂದಲದಲ್ಲಿದ್ದ ವಿರೋಧ ಪಕ್ಷದ ನಾಯಕರಿಗೆ, ಬಿಜೆಪಿಗೆ ಬಂದರೆ ಕೇವಲ ಆಶ್ರಯ ಮಾತ್ರವಲ್ಲ, ತಕ್ಕ ಗೌರವ ಮತ್ತು ಸ್ಥಾನಮಾನವೂ ಸಿಗುತ್ತದೆ ಎಂಬ ಬಲವಾದ ಸಂದೇಶ ರವಾನೆಯಾದಂತಾಗಿದೆ.

ವಿಭಜನೆಗೂ ಮುನ್ನ ರಾಜ್ಯಸಭೆಯಲ್ಲಿ ಟಿಎಂಸಿ 13 ಸಂಸದರನ್ನು ಹೊಂದಿತ್ತು. ಕಾನೂನುಬದ್ಧವಾಗಿ ಪಕ್ಷ ಒಡೆದು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಲು ಕನಿಷ್ಠ 9 ಸಂಸದರ (ಮೂರನೇ ಎರಡರಷ್ಟು) ಅಗತ್ಯವಿತ್ತು. ಸದ್ಯಕ್ಕೆ ಆ ಸಂಖ್ಯೆ ಹೊಂದಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಹೊಸ ತಂತ್ರ ಅನುಸರಿಸಿದೆ. ಮೊದಲು ಸಂಸದರಿಂದ ರಾಜೀನಾಮೆ ಕೊಡಿಸುವುದು, ನಂತರ ತಮ್ಮದೇ ಚಿಹ್ನೆಯಡಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸುವುದು ಈ ಪ್ಲಾನ್. ಇದರಿಂದ ಟಿಎಂಸಿ ಬಲ ಕುಗ್ಗುವುದರ ಜೊತೆಗೆ ರಾಜ್ಯಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ ಹೆಚ್ಚಾಗಲಿದೆ.

ಜುಲೈ 24 ರ ನಂತರ ರಾಜ್ಯಸಭೆಯಲ್ಲಿ ಬಿಜೆಪಿಯ ಸ್ವಂತ ಬಲ 117 ಕ್ಕೆ ಏರಲಿದ್ದು, ಇದು ಪಕ್ಷದ ಇತಿಹಾಸದಲ್ಲೇ ಗರಿಷ್ಠ ಸೀಟುಗಳಾಗಿವೆ. ಇದರೊಂದಿಗೆ ಬಿಜೆಪಿ ಸ್ವಂತ ಬಲದ ಸರಳ ಬಹುಮತಕ್ಕೆ (123) ಕೇವಲ ಆರು ಸ್ಥಾನಗಳಷ್ಟೇ ಬಾಕಿ ಇರಲಿದೆ. ನಾಮನಿರ್ದೇಶಿತ, ಪಕ್ಷೇತರರು ಹಾಗೂ ಮೈತ್ರಿಪಕ್ಷಗಳ (TDP, AIADMK, JDU, NCP ಇತ್ಯಾದಿ) ಬೆಂಬಲದೊಂದಿಗೆ ಎನ್‌ಡಿಎ (NDA) ಮೈತ್ರಿಕೂಟದ ಒಟ್ಟು ಬಲ 153 ಕ್ಕೆ ತಲುಪಲಿದ್ದು, ಮೂರನೇ ಎರಡರಷ್ಟು ಬಹುಮತಕ್ಕೆ (164) ಕೇವಲ 11 ಸ್ಥಾನಗಳಷ್ಟೇ ಬಾಕಿ ಉಳಿಯಲಿವೆ.

ಕೇವಲ ರಾಜ್ಯಸಭೆ ಮಾತ್ರವಲ್ಲದೇ, ಲೋಕಸಭೆಯಲ್ಲೂ ಟಿಎಂಸಿಯನ್ನು ಒಡೆಯಲು ಬಿಜೆಪಿ ಭಿನ್ನ ತಂತ್ರ ಹೂಡಿದೆ. ಪಕ್ಷದ 28 ಲೋಕಸಭಾ ಸಂಸದರ ಪೈಕಿ 20 ಸಂಸದರು ಈಗಾಗಲೇ ಮಮತಾ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದಾರೆ. ಅವರು ‘ಎನ್‌ಸಿಪಿಐ’ (NCPI) ಎಂಬ ಅಷ್ಟಾಗಿ ಪರಿಚಿತವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ. ಇದಕ್ಕೆ ಈಗ ಲೋಕಸಭಾ ಸ್ಪೀಕರ್ ಅವರ ಅಧಿಕೃತ ಅನುಮೋದನೆ ಬಾಕಿಯಿದೆ.

ಮಮತಾ ಬ್ಯಾನರ್ಜಿ ಅವರಿಂದ ಟಿಎಂಸಿ ಪಕ್ಷವನ್ನೇ ಕಸಿದುಕೊಳ್ಳಲು ದೆಹಲಿಯಿಂದ ಕೋಲ್ಕತ್ತಾವರೆಗೆ ವ್ಯವಸ್ಥಿತ ಚಕ್ರವ್ಯೂಹ ರಚಿಸಲಾಗಿದೆ. ಕೋಲ್ಕತ್ತಾದಲ್ಲಿ 60 ಕ್ಕೂ ಹೆಚ್ಚು ಶಾಸಕರು ಋತಬ್ರತ ಬ್ಯಾನರ್ಜಿ ನೇತೃತ್ವದಲ್ಲಿ ಬಂಡಾಯ ಎದ್ದಿದ್ದು, ಅಲ್ಲಿನ ವಿಧಾನಸಭೆ ಸ್ಪೀಕರ್ ಈಗಾಗಲೇ ಋತಬ್ರತ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಗುರುತಿಸಿದ್ದಾರೆ! ಈ ಬಂಡಾಯ ಬಣವೇ ‘ನೈಜ ಟಿಎಂಸಿ’ ಎಂದು ಚುನಾವಣಾ ಆಯೋಗದ ಮುಂದೆ ಪಕ್ಷದ ಚಿಹ್ನೆಗಾಗಿ ಹಕ್ಕು ಮಂಡಿಸಿದೆ.

ಹೀಗಾಗಿ ದೀದಿ ಈಗ ಏಕಕಾಲದಲ್ಲಿ ಎರಡು ರೀತಿಯ ಕಠಿಣ ಕಾನೂನು ಹೋರಾಟ ನಡೆಸಬೇಕಿದೆ. ಮೊದಲನೆಯದ್ದು ತಮ್ಮದೇ ಬಣ ‘ನೈಜ ಟಿಎಂಸಿ’ ಮತ್ತು ಪಕ್ಷದ ಚಿಹ್ನೆ ತಮಗೆ ಸೇರಬೇಕು ಎಂದು ಚುನಾವಣಾ ಆಯೋಗದ ಮುಂದೆ ಸಾಬೀತುಪಡಿಸುವುದು. ಎರಡನೆಯದ್ದು ಪಕ್ಷಾಂತರ ನಿಷೇಧ ಕಾಯ್ದೆಯಡಿ ಲೋಕಸಭೆಯ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಮುಂದೆ ಹೋರಾಡುವುದು. ಆದರೆ ಸದ್ಯಕ್ಕೆ ಮಮತಾ ಬಳಲಿದಂತೆ ಕಾಣುತ್ತಿದ್ದು ಮುಂದೆ ಯಾವ ತೀರ್ಮಾನ ಕೈಗೊಳ್ಳುತ್ತಾರೋ ಕಾದು ನೋಡಬೇಕಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

    ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

    ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

    ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

    ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

    ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

    ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

    ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

    ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

    ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

    ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

    ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

    ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

    ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

    ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

    ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

    ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

    ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

    ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

    ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...