HomeಅಂಕಣಗಳುSIRSIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

- Advertisement -
- Advertisement -

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದೆ.

ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ಸಾಮಾಜಿಕವಾಗಿ ವಂಚಿತ ಸಮುದಾಯಗಳಿಗೆ ಸೇರಿದವರಾಗಿದ್ದು, ಗುರುತಿನ ಮತ್ತು ವಾಸಸ್ಥಳದ ದಾಖಲೆಗಳನ್ನು ಪಡೆಯಲು ಹಾಗೂ ಅವುಗಳನ್ನು ನವೀಕರಿಸಲು ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಂಸ್ಥೆಯು ತನ್ನ ಪತ್ರದಲ್ಲಿ ತಿಳಿಸಿದೆ.

ಇವರಲ್ಲಿ ಅನೇಕರು ವಲಸಿಗರಾಗಿದ್ದು, ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ, ಸ್ಥಳಾಂತರಿಸುವಿಕೆ ಅಥವಾ ಸಾಮಾಜಿಕ ಕಳಂಕದ ಕಾರಣದಿಂದಾಗಿ ಅವರು ಪದೇ ಪದೇ ವಾಸಸ್ಥಳವನ್ನು ಬದಲಾಯಿಸುತ್ತಿರುತ್ತಾರೆ ಮತ್ತು ತಮ್ಮ ಕುಟುಂಬಗಳೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಪರಿಸ್ಥಿತಿಗಳಿಂದಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿಯಲ್ಲಿ ಅಗತ್ಯವಿರುವ ದಾಖಲಾತಿ ನಿಯಮಗಳನ್ನು ಪೂರೈಸುವುದು ಲೈಂಗಿಕ ಕಾರ್ಯಕರ್ತೆಯರಿಗೆ ಕಷ್ಟಕರವಾಗಿದೆ ಎಂದು ಪತ್ರವು ವಿವರಿಸಿದೆ.

ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ತಮ್ಮ ಪೋಷಕರೊಂದಿಗೆ ಸಂಬಂಧವನ್ನು ಸ್ಥಾಪಿಸುವ ಯಾವುದೇ ದಾಖಲೆಗಳನ್ನು ಹೊಂದಿರುವುದಿಲ್ಲ ಎಂದು ಹೇಳಿರುವ ಸಂಸ್ಥೆ, ಪೋಷಕರು ಅಥವಾ ಮಕ್ಕಳ ಮ್ಯಾಪಿಂಗ್ (ಸಂಬಂಧದ ಕೊಂಡಿ ಜೋಡಿಸುವಿಕೆ) ಅಗತ್ಯತೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ತಮ್ಮ ಪೋಷಕರೊಂದಿಗೆ ಸಂಬಂಧವನ್ನು ಸ್ಥಾಪಿಸುವ ದಾಖಲೆಗಳನ್ನು ಹೊಂದಿಲ್ಲದಿರಬಹುದು ಅಥವಾ ಅವರು ಹಲವು ವರ್ಷಗಳಿಂದ ತಮ್ಮ ಕುಟುಂಬಗಳಿಂದ ದೂರ ವಾಸಿಸುತ್ತಿರಬಹುದು. ಅದೇ ರೀತಿ, ಅವರ ಮಕ್ಕಳೂ ಸಹ ಪರಿಶೀಲನೆಗೆ ಅಪೇಕ್ಷಿತ ರೀತಿಯಲ್ಲಿ ಪೋಷಕರ ಸಂಬಂಧವನ್ನು ಸಾಬೀತುಪಡಿಸುವ ದಾಖಲೆಗಳನ್ನು ಹೊಂದಿಲ್ಲದಿರಬಹುದು. ಕೆಲವು ಸಂದರ್ಭಗಳಲ್ಲಿ, ಮಕ್ಕಳನ್ನು ಸಂಬಂಧಿಕರು, ಪೋಷಕರು, ಸಮುದಾಯದ ಸದಸ್ಯರು ಅಥವಾ ಸಾಂಸ್ಥಿಕ ಆರೈಕೆಯಲ್ಲಿ ಬೆಳೆಸಲಾಗಿರುತ್ತದೆ, ಇದು ಸಾಂಪ್ರದಾಯಿಕ ಕೌಟುಂಬಿಕ ದಾಖಲಾತಿಯನ್ನು ಕಷ್ಟಕರವಾಗಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಅನೇಕ ಲೈಂಗಿಕ ಕಾರ್ಯಕರ್ತೆಯರ ಪೋಷಕರು ಮರಣ ಹೊಂದಿದ್ದಾರೆ ಅಥವಾ ಅವರಿಗೆ ತಮ್ಮ ಪೋಷಕರ ಪೂರ್ಣ ಕಾನೂನಾತ್ಮಕ ಹೆಸರುಗಳು, ಜನ್ಮಸ್ಥಳ ಅಥವಾ ಚುನಾವಣಾ ಇತಿಹಾಸ ತಿಳಿದಿಲ್ಲ ಎಂದು ಸಂಸ್ಥೆಯು ತಿಳಿಸಿದೆ. ಅನೇಕ ಸಂದರ್ಭಗಳಲ್ಲಿ, ಕೌಟುಂಬಿಕ ಸಂಬಂಧಗಳು ಕಡಿತಗೊಂಡಿವೆ ಅಥವಾ ಅದಕ್ಕೆ ಸಂಬಂಧಿಸಿದ ದಾಖಲೆಗಳು ಎಂದಿಗೂ ಅಸ್ತಿತ್ವದಲ್ಲಿಲ್ಲ ಎಂದು ಹೇಳಿರುವ ಸಂಸ್ಥೆಯು, ಇಂತಹ ವ್ಯಕ್ತಿಗಳು ಹಿಂದಿನ ಮತದಾರರ ಪಟ್ಟಿಗಳೊಂದಿಗೆ ಕೌಟುಂಬಿಕ ಕೊಂಡಿಯನ್ನು ಸಾಬೀತುಪಡಿಸಬೇಕೆಂದು ನಿರೀಕ್ಷಿಸುವುದು ಅವಾಸ್ತವಿಕವಾಗಿದೆ ಎಂದು ಪತ್ರದಲ್ಲಿ ಸೇರಿಸಿದೆ.

ಈ ಪರಿಸ್ಥಿತಿಗಳು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅಪಾಯವನ್ನು ಉಂಟುಮಾಡುತ್ತವೆ ಎಂದು ವಾದಿಸಿರುವ ಪತ್ರವು, ಇಂತಹ ಹೊರಗಿಡುವಿಕೆಯು ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವ ಚುನಾವಣಾ ಆಯೋಗದ ಬದ್ಧತೆಯನ್ನು ಕುಂಠಿತಗೊಳಿಸುತ್ತದೆ ಎಂದು ತಿಳಿಸಿದೆ.

“ಬುದ್ಧದೇವ್ ಕರ್ಮಾಕರ್ V/S ಪಶ್ಚಿಮ ಬಂಗಾಳ ಸರ್ಕಾರ’ ಮತ್ತು ‘ಪ್ರಜ್ವಲ V/S ಭಾರತ ಸರ್ಕಾರ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಸಂಸ್ಥೆಯು ಉಲ್ಲೇಖಿಸಿದೆ. ಈ ತೀರ್ಪುಗಳಲ್ಲಿ ನ್ಯಾಯಾಲಯವು ಮಾನವ ಕಳ್ಳಸಾಗಣೆ (ಟ್ರಾಫಿಕಿಂಗ್) ಮತ್ತು ಒಪ್ಪಿಗೆಯ ಮೇರೆಗೆ ವಯಸ್ಕರು ನಡೆಸುವ ಲೈಂಗಿಕ ವೃತ್ತಿಯ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಿದೆ ಹಾಗೂ ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕರ ಘನತೆ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಮಾನ್ಯ ಮಾಡಿದೆ ಎಂದು ಹೇಳಿದೆ.

ಸಾಮಾಜಿಕ ಕಳಂಕ, ವಲಸೆ, ಕೌಟುಂಬಿಕ ಪ್ರತ್ಯೇಕತೆ ಮತ್ತು ಪೋಷಕರ ಸಂಬಂಧವನ್ನು ಸಾಬೀತುಪಡಿಸುವ ದಾಖಲೆಗಳ ಕೊರತೆಯನ್ನು ಗಣನೆಗೆ ತೆಗೆದುಕೊಂಡು ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಜಾರಿಗೊಳಿಸಬೇಕು ಎಂದು ಸಂಸ್ಥೆಯು ಅಧಿಕಾರಿಗಳನ್ನು ಒತ್ತಾಯಿಸಿದೆ.

ಚುನಾವಣಾ ಅಧಿಕಾರಿಗಳು ದುರ್ಬಲ ಮತ್ತು ವಂಚಿತ ವರ್ಗದವರಿಗಾಗಿ ವಿಶೇಷ ಕ್ರಮಗಳನ್ನು ಅಳವಡಿಸಿಕೊಂಡಿರುವ ಇತರ ರಾಜ್ಯಗಳ ಉದಾಹರಣೆಗಳನ್ನು ಸಹ ಪತ್ರದಲ್ಲಿ ಎತ್ತಿ ತೋರಿಸಲಾಗಿದೆ.

ಎಲ್ಲಾ ಚುನಾವಣಾ ನೋಂದಣಾಧಿಕಾರಿಗಳು (ಇಆರ್‌ಒಗಳು), ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು (ಎಇಆರ್‌ಒಗಳು) ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒಗಳು) ಈ ಕೆಳಗಿನ ಸೂಚನೆಗಳನ್ನು ನೀಡುವಂತೆ ಸಂಸ್ಥೆಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ:

  1. ಪೋಷಕರು ಅಥವಾ ಮಕ್ಕಳ ಮ್ಯಾಪಿಂಗ್ (ಸಂಬಂಧದ ಕೊಂಡಿ ಜೋಡಿಸುವಿಕೆ) ಇಲ್ಲದಿರುವುದನ್ನು, ಇತರ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಮತದಾರರನ್ನು ಹೊರಗಿಡಲು ಒಂದು ಕಾರಣವಾಗಿ ಮಾಡಬಾರದು.
  2. ಕೌಟುಂಬಿಕ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳು ಲಭ್ಯವಿಲ್ಲದಿದ್ದಲ್ಲಿ, ಪರ್ಯಾಯ ದಾಖಲೆಗಳು ಮತ್ತು ಕ್ಷೇತ್ರ ಮಟ್ಟದ ಪರಿಷ್ಕರಣೆ (ಫೀಲ್ಡ್ ವೆರಿಫಿಕೇಶನ್) ವಿಧಾನಗಳನ್ನು ಅಂಗೀಕರಿಸಬೇಕು. ಇಂತಹ ಪರ್ಯಾಯ ಪರಿಶೀಲನೆಗಾಗಿ ಹಿಂದಿನ ಚುನಾವಣಾ ದಾಖಲೆಗಳು, ಎಪಿಕ್ (ಮತದಾರರ ಗುರುತಿನ ಚೀಟಿ), ಸರ್ಕಾರಿ ಯೋಜನೆಗಳ ಅಡಿಯಲ್ಲಿನ ದಾಖಲೆಗಳು, ಹಾಗೆಯೇ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಅಥವಾ ನೋಂದಾಯಿತ ಸಮುದಾಯ ಆಧಾರಿತ ಸಂಸ್ಥೆಗಳು (ಸಿಬಿಒಗಳು) ನೀಡಿರುವ ಗುರುತಿನ ಅಥವಾ ವಾಸಸ್ಥಳದ ಪ್ರಮಾಣಪತ್ರಗಳು ಅಥವಾ ಪರಿಶೀಲನಾ ಪತ್ರಗಳನ್ನು ಒಳಗೊಂಡಿರಬಹುದು.
  3. ಪರಿಶೀಲನಾ ಪ್ರಕ್ರಿಯೆಯ ಸಂದರ್ಭದಲ್ಲಿ, ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಮಹಿಳೆಯರು, ಅವರ ಮಕ್ಕಳು ಮತ್ತು ಇತರ ದುರ್ಬಲ ವರ್ಗದವರ ವಿಶೇಷ ಪರಿಸ್ಥಿತಿಗಳಿಗೆ ಸೂಕ್ತ ಪರಿಗಣನೆ ನೀಡಬೇಕು.
  4. ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಾಮಾಜಿಕ ಕಳಂಕ, ತಾರತಮ್ಯ ಮತ್ತು ದಾಖಲಾತಿ ಸಂಬಂಧಿತ ಅಡೆತಡೆಗಳ ಕುರಿತು ಚುನಾವಣಾ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಸಂವೇದನಾಶೀಲತಾ ತರಬೇತಿಯನ್ನು (ಸೆನ್ಸಿಟೈಸೇಶನ್ ಟ್ರೈನಿಂಗ್) ಆಯೋಜಿಸಬೇಕು.
  5. ಕುಟುಂಬದ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳ ಕೊರತೆಯಿಂದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗದ ಅಪಾಯದಲ್ಲಿರುವ ದುರ್ಬಲ ವರ್ಗದ ಮತದಾರರಿಗಾಗಿ ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು (ಗ್ರೀವೆನ್ಸ್ ರಿಡ್ರೆಸಲ್ ಮೆಕಾನಿಸಂ) ಸ್ಥಾಪಿಸಬೇಕು.
  6. ಮತದಾರರ ಪರಿಶೀಲನೆ ಮತ್ತು ಸೇರ್ಪಡೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಮುದಾಯ ಆಧಾರಿತ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ಸಂಸ್ಥೆಗಳೊಂದಿಗೆ (ಸಿವಿಲ್ ಸೊಸೈಟಿ ಆರ್ಗನೈಸೇಶನ್ಸ್) ಸಮನ್ವಯವನ್ನು ಸಾಧಿಸಬೇಕು.
  7. ಸಾಂಪ್ರದಾಯಿಕ ಕೌಟುಂಬಿಕ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳು ಲಭ್ಯವಿಲ್ಲ ಎಂಬ ಕಾರಣಕ್ಕಾಗಿ ಮಾತ್ರ ಮಹಿಳಾ ಲೈಂಗಿಕ ಕಾರ್ಯಕರ್ತೆಯರು, ಅವರ ಮಕ್ಕಳು ಮತ್ತು ಇತರ ದುರ್ಬಲ ವರ್ಗದ ಮತದಾರರನ್ನೊಳಗೊಂಡ ಪ್ರಕರಣಗಳಲ್ಲಿ ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಬಾರದು. ಇಂತಹ ಸಂದರ್ಭಗಳಲ್ಲಿ, ಪ್ರಸ್ತುತ ಪರಿಸ್ಥಿತಿಗಳ ಆಧಾರದ ಮೇಲೆ ಹೊಂದಿಕೊಳ್ಳುವಂತಹ (ಫ್ಲೆಕ್ಸಿಬಲ್) ಪರಿಶೀಲನಾ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ಅಗತ್ಯವಿರುವ ಕಡೆಗಳಲ್ಲಿ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳ ಪರಿಶೀಲನೆಯನ್ನು ಸಹ ಪರಿಗಣಿಸಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...