Homeಮುಖಪುಟಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) “ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ” ಎಂದು ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಎಚ್ಚರಿಸಿದ್ದಾರೆ. ಅಲ್ಲದೆ, ಈ ಕೂಡಲೇ ಆ ಹೊಸ ವಿಭಾಗವನ್ನು ಹಿಂಪಡೆಯಬೇಕು ಎಂದು ಅವರು ಆಯೋಗವನ್ನು ಒತ್ತಾಯಿಸಿದ್ದಾರೆ.

ಹೊಸ ಮತದಾರರು ಫಾರ್ಮ್ 6 ಅನ್ನು ಬಳಸಿಕೊಂಡು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಇದರ ಆನ್‌ಲೈನ್ ಆವೃತ್ತಿಯಲ್ಲಿ ಈಗ ಅರ್ಜಿದಾರರು ತಮ್ಮ, ತಮ್ಮ ಪೋಷಕರ ಅಥವಾ ಅಜ್ಜ-ಅಜ್ಜಿಯರ ಹೆಸರುಗಳು ಕೊನೆಯ ಎಸ್‌ಐಆರ್ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಯಲ್ಲಿ ಇವೆಯೇ ಎಂದು ಘೋಷಿಸಲು ಕೋರಲಾಗುತ್ತಿದೆ. ಆದರೆ, ಇದೇ ಫಾರ್ಮ್‌ನ ಡೌನ್‌ಲೋಡ್ ಮಾಡಬಹುದಾದ (ಪಿಡಿಎಫ್) ಆವೃತ್ತಿಯಲ್ಲಿ ಈ ಮಾಹಿತಿಯನ್ನು ಕೇಳಲಾಗಿಲ್ಲ.

ಸಾಮಾನ್ಯವಾಗಿ ಫಾರ್ಮ್ 6 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲು 1950ರ ಜನಪ್ರತಿನಿಧಿ ಕಾಯ್ದೆ ಅಥವಾ ಅದಕ್ಕೆ ಸಂಬಂಧಿಸಿದ ನಿಯಮಗಳಿಗೆ ಸಂಸತ್ತಿನ ತಿದ್ದುಪಡಿಯ ಅಗತ್ಯವಿರುತ್ತದೆ. ಆದರೆ, ಈ ಎಸ್‌ಐಆರ್ ಘೋಷಣೆಯ ಸೇರ್ಪಡೆಯನ್ನು ಬೆಂಬಲಿಸಲು ಅಂತಹ ಯಾವುದೇ ತಿದ್ದುಪಡಿಯನ್ನು ಮಾಡಲಾಗಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ದಾಮಿನಿ ನಾಥ್ ಭಾನುವಾರ ವರದಿ ಮಾಡಿದ್ದರು.

“ಒಂದು ವೇಳೆ ಪರಿಸ್ಥಿತಿ ನಿಜಕ್ಕೂ ಹೀಗಿದ್ದರೆ (ಮೇಲೆ ಹೇಳಿದಂತೆ), ಆಯೋಗವು ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ” ಎಂದು ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದ ಬ್ರಿಟ್ಟಾಸ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಸೋಮವಾರ (ಜುಲೈ 13) ಬರೆದ ಪತ್ರದಲ್ಲಿ ತಿಳಿಸಿದ್ದು, ಈ ಬೆಳವಣಿಗೆಯ ಕುರಿತು ತಮ್ಮ “ತೀವ್ರ ಕಳಕಳಿ”ಯನ್ನು ವ್ಯಕ್ತಪಡಿಸಿದ್ದಾರೆ.

ಸಂವಿಧಾನದ 324 ನೇ ವಿಧಿಯು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಮತ್ತು ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗಕ್ಕೆ ವ್ಯಾಪಕವಾದ ಅಧಿಕಾರಗಳನ್ನು ನೀಡುತ್ತದೆ. ಆದರೆ ಅದನ್ನು “ಶಾಸನಬದ್ಧ ನಿಯಮಗಳನ್ನು ಮರುಬರೆಯಲು ಅಥವಾ ಸಂಸತ್ತು ಸ್ಪಷ್ಟವಾಗಿ ಬೇರೆಡೆಗೆ ವಹಿಸಿರುವ ಅಧಿಕಾರಗಳನ್ನು ತಾನೇ ವಹಿಸಿಕೊಳ್ಳಲು ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಬ್ರಿಟ್ಟಾಸ್ ವಾದಿಸಿದ್ದಾರೆ. ಯಾವುದೇ ತಿದ್ದುಪಡಿ ಇಲ್ಲದೆ ಈ ಹೊಸ ಘೋಷಣೆಯನ್ನು ಜಾರಿಗೆ ತಂದಿರುವುದನ್ನು ಮತ್ತು ಇದು ಇಲ್ಲದೆ ಆನ್‌ಲೈನ್ ಅರ್ಜಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದಿರುವುದನ್ನು ಅವರು “ಸಂಪೂರ್ಣವಾಗಿ ಕಾನೂನು ಬಾಹಿರ” ಎಂದು ಕರೆದಿದ್ದಾರೆ.

ಫಾರ್ಮ್ 6 ರ ಆಫ್‌ಲೈನ್ ಆವೃತ್ತಿಯಲ್ಲಿ ಎಸ್‌ಐಆರ್ ಘೋಷಣೆ ಇಲ್ಲದಿರುವುದನ್ನು ಉಲ್ಲೇಖಿಸಿದ ಬ್ರಿಟ್ಟಾಸ್, “ಒಬ್ಬರು ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಆರಿಸಿಕೊಂಡರೆ ಮತ್ತು ಇನ್ನೊಬ್ಬರು ಭೌತಿಕವಾಗಿ ಅರ್ಜಿ ಸಲ್ಲಿಸುತ್ತಾರೆ ಎಂಬ ಕಾರಣಕ್ಕಾಗಿ ಒಂದೇ ಪರಿಸ್ಥಿತಿಯಲ್ಲಿರುವ ನಾಗರಿಕರನ್ನು ವಿಭಿನ್ನ ಕಾನೂನು ಕಟ್ಟುಪಾಡುಗಳಿಗೆ ಒಳಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಇದು ಕಾನೂನಿನ ಮುಂದೆ ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

“ಲಕ್ಷಾಂತರ ಹೊಸ ಮತದಾರರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು, ದತ್ತು ಪಡೆದ ಮಕ್ಕಳು, ಅನಾಥರು, ತಮ್ಮ ಕುಟುಂಬಗಳಿಂದ ದೂರಾದವರು ಮತ್ತು ಕಳೆದ ಹಲವು ದಶಕಗಳಲ್ಲಿ ಪೋಷಕರು ಅಥವಾ ಅಜ್ಜ-ಅಜ್ಜಿಯರು ಬೇರೆ ಕ್ಷೇತ್ರಗಳಿಗೆ ವಲಸೆ ಹೋಗಿರುವ ನಾಗರಿಕರು ತಮ್ಮ ಹಳೆಯ ಚುನಾವಣಾ ವಿವರಗಳನ್ನು ಒದಗಿಸಲು ಯಾವುದೇ ಪ್ರಾಯೋಗಿಕ ಮಾರ್ಗಗಳನ್ನು ಹೊಂದಿಲ್ಲದಿರಬಹುದು” ಎಂದು ಬರೆದಿರುವ ಬ್ರಿಟ್ಟಾಸ್, 2002-03 ರ ಎಸ್‌ಐಆರ್‌ಗಳ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಗಳು ಸುಲಭವಾಗಿ ಲಭ್ಯವಿಲ್ಲದಿರಬಹುದು ಎಂಬುದನ್ನು ಸಹ ನೆನಪಿಸಿದ್ದಾರೆ.

ಎಸ್‌ಐಆರ್ ವಿಭಾಗವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿರುವ ಬ್ರಿಟ್ಟಾಸ್ ಅವರು, “ಈ ಅನಧಿಕೃತ ಘೋಷಣೆ” ಇಲ್ಲ ಎಂಬ ಒಂದೇ ಕಾರಣಕ್ಕಾಗಿ ಯಾವುದೇ ಅರ್ಜಿಗಳನ್ನು ತಿರಸ್ಕರಿಸದಂತೆ, ಬಾಕಿ ಉಳಿಸಿಕೊಳ್ಳದಂತೆ ಅಥವಾ ಅಪೂರ್ಣ ಎಂದು ಗುರುತಿಸದಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

“ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಘೋಷಣೆ ಅಗತ್ಯ ಎಂದು ಆಯೋಗವು ಭಾವಿಸಿದರೆ, ಅದಕ್ಕೆ ಸರಿಯಾದ ಸಾಂವಿಧಾನಿಕ ಮಾರ್ಗವೆಂದರೆ 1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 28ರ ಅನ್ವಯ, ಸಮರ್ಥ ಪ್ರಾಧಿಕಾರದ ಮೂಲಕ 1960ರ ಮತದಾರರ ನೋಂದಣಿ ನಿಯಮಗಳಿಗೆ ತಿದ್ದುಪಡಿ ಮಾಡಲು ಶಿಫಾರಸು ಮಾಡುವುದಾಗಿದೆ” ಎಂದು ಅವರು ಬೆಟ್ಟು ಮಾಡಿದ್ದಾರೆ.

ಹೆಸರು ಹೇಳಲಿಚ್ಛಿಸದ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಭಾನುವಾರ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಆಯೋಗವು ಈ ಎಸ್‌ಐಆರ್ ಘೋಷಣೆಯನ್ನು ಕೇವಲ ‘ಸೂಚನೆಗಳ ಮೂಲಕ’ ಸೇರಿಸಿದೆಯೇ ಹೊರತು, ಫಾರ್ಮ್ 6 ಅನ್ನು ಯಾವುದೇ ರೀತಿಯಲ್ಲಿ ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದ್ದಾರೆ. “ಇದು ಮತದಾರರ ಮ್ಯಾಪಿಂಗ್ ಮಾಡಲು ಸಹಾಯ ಮಾಡುತ್ತದೆ ಮತ್ತು ಹೊಸ ಮತದಾರರು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ಹೊರೆಯನ್ನು ಕಡಿಮೆ ಮಾಡುತ್ತದೆ” ಎಂದು ಆ ಅಧಿಕಾರಿಯ ಹೇಳಿಕೆಯನ್ನು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಚುನಾವಣಾ ಆಯೋಗವು ಎಸ್‌ಐಆರ್ ನಡೆಸುತ್ತಿರುವ ವಿಧಾನವು ಈಗಾಗಲೇ ತೀವ್ರ ವಿವಾದಕ್ಕೆ ಈಡಾಗಿರುವ ಬೆನ್ನಲ್ಲೇ, ಈ ಹೊಸ ಘೋಷಣೆಯ ಸೇರ್ಪಡೆ ಬಂದಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ, ನೋಂದಣಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತು ತೀರ್ಪು ನೀಡಬೇಕಾಗಿದ್ದ ನ್ಯಾಯಮಂಡಳಿಗಳಿಗೆ ಸಾಕಷ್ಟು ಸಮಯ ನೀಡದ ಕಾರಣಕ್ಕಾಗಿ, ಕಳೆದ ಏಪ್ರಿಲ್‌ನ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 27 ಲಕ್ಷ ಮತದಾರರು ಮತ ಚಲಾಯಿಸಲು ಸಾಧ್ಯವಾಗದ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...