Homeಮುಖಪುಟಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

- Advertisement -
- Advertisement -

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ ಯಾವುದೇ ಸ್ಪಂದನೆ ಸಿಗದೆ ಪ್ರತಿಭಟನೆಯನ್ನು ಹಿಂತೆಗೆದುಕೊಂಡರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ.

“ನಾನು ಆಹಾರ ಸೇವಿಸಿದರೆ, ಯಾವ ಸಂದೇಶ ರವಾನೆಯಾಗುತ್ತದೆ? ಸರ್ಕಾರಕ್ಕೆ ಹೊಣೆಗಾರಿಕೆಯ ಅಗತ್ಯವೇ ಇಲ್ಲ ಎಂಬ ಸಂದೇಶ ಹೋಗುತ್ತದೆ. ಪ್ರತಿಭಟನಾಕಾರರು ಬರುತ್ತಾರೆ ಮತ್ತು ಹಾಗೇ ಹೊರಟುಹೋಗುತ್ತಾರೆ” ಎಂದು ತಾವು ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರೆ ಏನಾದರೂ ಬದಲಾಗುತ್ತದೆಯೇ ಎಂದು ಪ್ರಶ್ನಿಸುತ್ತಾ ವಾಂಗ್‌ಚುಕ್ ಹೇಳಿದ್ದಾರೆ.

ಬುಧವಾರ (ಜು.15) ತಡರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ, ತಮ್ಮ ಉಪವಾಸ ಸತ್ಯಾಗ್ರಹದ 18ನೇ ದಿನದಂದು ಪ್ರತಿಭಟನೆಯನ್ನು ಕೈಬಿಡುವಂತೆ ವ್ಯಾಪಕ ಮನವಿಗಳು ಬಂದಿವೆ ಎಂದು ಹೇಳಿದ್ದಾರೆ.

“ಉಪವಾಸ ಕೈಬಿಡುವಂತೆ ಕೋರಿ ನನಗೆ ಸಾವಿರಾರು ಸಂದೇಶಗಳು ಬಂದಿವೆ. ಅನೇಕ ಹಿರಿಯ ರಾಜಕಾರಣಿಗಳು ನನ್ನ ಬಳಿ ಬಂದು ಪ್ರೀತಿ ಮತ್ತು ಕಾಳಜಿಯಿಂದ ಮಾತನಾಡಿದ್ದಾರೆ. ನನಗೆ ಆಹಾರ ನೀಡುವಂತೆ ನಿರ್ದೇಶನ ನೀಡಲು ಕೋರಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ” ಎಂದು ವಾಂಗ್‌ಚುಕ್ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಬಗೆಗಿನ ಕಳವಳಗಳನ್ನು ಉದ್ದೇಶಿಸಿ ಮಾತನಾಡಿದ ವಾಂಗ್‌ಚುಕ್, “ವೈದ್ಯಕೀಯ ತಪಾಸಣೆಗಳು ಯಾವುದೇ ತಕ್ಷಣದ ಅಪಾಯವನ್ನು ಸೂಚಿಸಿಲ್ಲ” ಎಂದು ಹೇಳಿದ್ದಾರೆ.

“ನನ್ನ ಪರಿಸ್ಥಿತಿ ಎರಡು-ನಾಲ್ಕು ದಿನಗಳಲ್ಲಿ ಸಾಯುವಷ್ಟೇನೂ ಕೆಟ್ಟದಾಗಿಲ್ಲ. ಅನೇಕ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದ್ದು, 18 ದಿನಗಳ ಉಪವಾಸಕ್ಕೆ ಹೋಲಿಸಿದರೆ ಫಲಿತಾಂಶಗಳು ಸಾಕಷ್ಟು ಸಾಮಾನ್ಯವಾಗಿವೆ. ಇಸಿಜಿ ಕೂಡ ಮಾಡಲಾಗಿದ್ದು, ಅದು ಕಳಪೆಯಾಗಿಲ್ಲ. ನಾನು ಇನ್ನೂ ಅನೇಕ ದಿನಗಳವರೆಗೆ ಇದನ್ನು ಮುಂದುವರಿಸಬಲ್ಲೆ. ಹೌದು, ದೌರ್ಬಲ್ಯವಿದೆ ಮತ್ತು ನನ್ನ ಸ್ನಾಯುಗಳು ದುರ್ಬಲಗೊಳ್ಳುತ್ತಿವೆ, ಆದರೆ ನನ್ನ ಹೃದಯ ಮತ್ತು ದೇಹದ ಮುಖ್ಯ ಭಾಗಗಳು ಇನ್ನೂ ಚೆನ್ನಾಗಿಯೇ ಇವೆ” ಎಂದಿದ್ದಾರೆ.

ತಮ್ಮ ಉಪವಾಸವನ್ನು ಕೊನೆಗೊಳಿಸುವಂತೆ ಮನವಿ ಮಾಡುವ ಬದಲು, ಸರ್ಕಾರಕ್ಕೆ ಬಲವಾದ ಸಂದೇಶವನ್ನು ರವಾನಿಸಲು ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಮ್ಮಿಕೊಂಡಿರುವ “ಚಲೋ ಸಂಸದ್” ಮಾರ್ಚ್‌ನಲ್ಲಿ ಭಾರಿ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಾಂಗ್‌ಚುಕ್ ಅವರು ಬೆಂಬಲಿಗರಿಗೆ ಕರೆ ನೀಡಿದ್ದಾರೆ.

“ರಾಷ್ಟ್ರೀಯ ಶಿಕ್ಷಣ ನೀತಿಯಡಿ (ಎನ್‌ಇಪಿ) ಜುಲೈ 20 ಅನ್ನು ಪ್ರಾಯೋಗಿಕ ಶಿಕ್ಷಣದ ದಿನವನ್ನಾಗಿ ಆಚರಿಸುವಂತೆ ನಾನು ಎಲ್ಲಾ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ವಿನಂತಿಸುತ್ತೇನೆ. ವಿದ್ಯಾರ್ಥಿಗಳು ರಾಜಕೀಯ ವಿಜ್ಞಾನ ಮತ್ತು ಪ್ರಜಾಪ್ರಭುತ್ವದ ನೈಜ ಪಾಠವನ್ನು ಕಣ್ಣಾರೆ ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ಇದು ಅವಕಾಶ ನೀಡುತ್ತದೆ ಎಂದು ಹೇಳಿದ್ದಾರೆ.

ಅಭಿಯಾನದ ವೆಬ್‌ಸೈಟ್ ಅಥವಾ ಮಿಸ್ಡ್-ಕಾಲ್ ಮೂಲಕ ಈ ಮಾರ್ಚ್‌ಗಾಗಿ ನೋಂದಾಯಿಸಿಕೊಳ್ಳುವಂತೆ ಜನರಿಗೆ ಕರೆ ನೀಡಿದ್ದಾರೆ.

“ಜುಲೈ 20ರಂದು ಸಾವಿರಾರು ಸಂಖ್ಯೆಯಲ್ಲಿ ಬನ್ನಿ. ನಾವೆಲ್ಲರೂ ಒಟ್ಟಾಗಿ ಈ ಸಮಸ್ಯೆಯನ್ನು ಸಂಸತ್ತಿಗೆ ಹಸ್ತಾಂತರಿಸೋಣ. ಆಗ ಇದು ಸರಿಯಾದ ಕೈಗಳಿಗೆ ಸೇರಿದೆ ಎಂದು ನಾನು ನಂಬುತ್ತೇನೆ” ಎಂದು ವಾಂಗ್‌ಚುಕ್ ಹೇಳಿದ್ದಾರೆ.

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ಕ್ಷೇತ್ರದ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಿಂದ ಪ್ರತಿಭಟನೆ ನಡೆಸುತ್ತಿದೆ. ಇದೇ ಜಾಗದಲ್ಲಿ ಸೋನಮ್ ವಾಂಗ್‌ಚುಕ್ ಜೂನ್ 28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿರುವ ಜುಲೈ 20ರಂದು ಸಿಜೆಪಿ “ಚಲೋ ಸಂಸದ್” ಮಾರ್ಚ್‌ಗೂ ಕರೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...