Homeಅಂತರಾಷ್ಟ್ರೀಯಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

- Advertisement -
- Advertisement -

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ ಮಾಡಿದೆ.

ಇರಾನಿನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಅಮೆರಿಕ ಇರಾನ್‌ನ ಕೆಲ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾದ ನಂತರ ಶಾಹಿದ್ ಬಘೈ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಲಾಯಿತು. ಆಸ್ಪತ್ರೆಯು ಕ್ಯಾನ್ಸರ್ ಮತ್ತು ರಕ್ತ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ, ವಿಶೇಷವಾಗಿ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿತ್ತು.

“ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಅಮೆರಿಕ ನಡೆಸಿದ ಆಕ್ರಮಣಕಾರಿ ದಾಳಿಯ ನಂತರ, ನಾವು ಆಸ್ಪತ್ರೆಗೆ ದಾಖಲಾದ 211 ರೋಗಿಗಳನ್ನು ವರ್ಗಾಯಿಸಲು ಸಾಧ್ಯವಾಗುತ್ತಿಲ್ಲ” ಎಂದು ಆಸ್ಪತ್ರೆಯ ನಿರ್ದೇಶಕ ಮಜೀದ್ ಬೌಧರ್ ಹೇಳಿದರು.

ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕುಟುಂಬದ ಇತರೆ ಸದಸ್ಯರನ್ನೂ ಸ್ಥಳಾಂತರಿಸಲಾಗಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದ ರೋಗಿಗಳು ಮಾತ್ರ ಆಸ್ಪತ್ರೆಯಲ್ಲಿಯೇ ಇರಿಸಲಾಗಿತ್ತು ಎಂದರು.

ಇದಕ್ಕೂ ಮೊದಲು, ಇರಾನ್ ಸೇನೆಯು ಬಹ್ರೇನ್‌ನಲ್ಲಿರುವ ಶೇಖ್ ಇಸಾ ವಾಯುನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದೆ ಎಂದು ಹೇಳಿಕೊಂಡಿದೆ. ಈ ಜಾಗವು ಯುಎಸ್ ಸೇನಾ ಪಡೆಗಳು ಬಳಸುವ ಪೇಟ್ರಿಯಾಟ್ ನೆಲೆಯಾಗಿದ್ದು, ಸೂಪರ್ ಹಾಕ್ ರಾಡಾರ್‌ಗಳಂತಹ ಸಂವಹನ ಮತ್ತು ರಾಡಾರ್ ವ್ಯವಸ್ಥೆಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನ ಮತ್ತೊಂದು ಹೇಳಿಕೆಯಲ್ಲಿ, ಅದೇ ನೆಲೆಯ ಮೇಲೆ “ವಿನಾಶಕಾರಿ ದಾಳಿ”ಯನ್ನು ಘೋಷಿಸಿತು. “ವಾಯು ವಿಚಕ್ಷಣ ಮತ್ತು ನಿಯಂತ್ರಣ ರಾಡಾರ್‌ಗಳ ಜೊತೆಗೆ ಆಕ್ರಮಣಕಾರಿ ಶತ್ರುಗಳ ಫೈಟರ್ ಜೆಟ್‌ಗಳ ಇಂಧನ ಟ್ಯಾಂಕ್ ಪಂಪಿಂಗ್ ಸ್ಟೇಷನ್ ಅನ್ನು ಸಂಪೂರ್ಣವಾಗಿ ನಾಶಪಡಿಸಿದೆ” ಎಂದು ಹೇಳಿಕೊಂಡಿತು.

ಅಹ್ವಾಜ್ ನಗರದ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಳಾಂತರಿಸುವ ಜೊತೆಗೆ ಇಲಾಮ್ ಪ್ರಾಂತ್ಯದ ಗಡಿಯ ಬಳಿ ಕರ್ಬಲಾ ಯಾತ್ರಿಕರಿಗೆ ನೀರು ಉತ್ಪಾದನಾ ಘಟಕದ ಮೇಲಿನ ದಾಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿಗಳು ನಡೆದಿವೆ ಎಂದು ಅದು ಹೇಳಿದ್ದು, “ಯುದ್ಧ ಇನ್ನೂ ಮುಂದುವರೆದಿದೆ” ಎಂದು ಹೇಳಿಕೊಂಡಿದೆ. ಐಆರ್‌ಜಿಸಿಯು ಕುವೈತ್ ಮತ್ತು ಜೋರ್ಡಾನ್ ಮೇಲಿನ ದಾಳಿಗಳ ಹೊಣೆಯನ್ನೂ ಹೊತ್ತುಕೊಂಡಿದೆ.

ಕುವೈತ್‌ನಲ್ಲಿ, ತನ್ನ ಪಡೆಗಳು ಅಲಿ ಅಲ್ ಸೇಲಂನಲ್ಲಿರುವ ಯುಎಸ್ ವಾಯುನೆಲೆಯ ಉಪಗ್ರಹ ಸಂವಹನ ಕೇಂದ್ರ ಮತ್ತು ಮುನ್ನೆಚ್ಚರಿಕಾ ರಾಡಾರ್ ಮತ್ತು ಆಶ್-ಶು’ಐಬಾದಲ್ಲಿನ ಯುಎಸ್ ಮಿಲಿಟರಿ ಪಿಯರ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ಕಾರ್ಯಾಚರಣೆಯೊಂದಿಗೆ ಗುರಿಯಾಗಿಸಿಕೊಂಡು ನಾಶಪಡಿಸಿದವು ಎಂದು ಸೇನೆ ಹೇಳಿದೆ.

“ಶತ್ರುಗಳು ಪ್ಯಾಲೆಸ್ತೀನ್, ಲೆಬನಾನ್, ಇರಾನ್ ಮತ್ತು ಯೆಮೆನ್ ಜನರ ವಿರುದ್ಧ ಆಕ್ರಮಣ ಮಾಡಲು ನಿಮ್ಮ ಭೂಮಿಯನ್ನು ಬಳಸಲು ಬಿಡಬೇಡಿ” ಎಂದು ಕುವೈತ್ ಜನರಲ್ಲಿ ಇರಾನ್‌ ಮನವಿ ಮಾಡಿದೆ.

“ಅಮೆರಿಕದ ದುಷ್ಟತನಗಳ ಅಂತ್ಯದ ಆಧಾರದ ಮೇಲೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕೆ ಷರತ್ತುಬದ್ಧವಾಗಿದೆ” ಎಂದು ಇರಾನ್‌ ಕರೆ ನೀಡಿದ್ದು, ಈ ಪ್ರದೇಶಗಳಿಂದ ಅಮೆರಿಕವನ್ನು ಹಿಂದೆ ಸರಿಯುವಂತೆ ಮಾಡಬೇಕು ಎಂದು ನೆರೆ ರಾಷ್ಟ್ರಗಳನ್ನು ಒತ್ತಾಯಿಸಿತು.

ಅಮೆರಿಕದ ದಾಳಿಗಳು ಮುಂದುವರಿದರೆ ಅವರ ಎಲ್ಲಾ ನೆಲೆಗಳನ್ನು ‘ಪುಡಿಮಾಡುವುದಾಗಿ’ ಇರಾನಿನ ಮಿಲಿಟರಿ ವಕ್ತಾರ ಬೆದರಿಕೆ ಹಾಕಿದ್ದಾರೆ.

ಇರಾನ್‌ನ ಖತಮ್ ಅಲ್-ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿಯ ವಕ್ತಾರ ಬ್ರಿಗೇಡಿಯರ್ ಜನರಲ್ ಇಬ್ರಾಹಿಂ ಝೋಲ್ಫಾಘರಿ, ಇರಾನ್ ಯುದ್ಧನೆಲೆಗಳ ಮೇಲೆ ಯುಎಸ್ ನಡೆಯುಸವ ಯಾವದೇ ದಾಳಿಗಳು ಈ ಪ್ರದೇಶದಲ್ಲಿ ದೊಡ್ಡ ವಿನಾಶಕ್ಕೆ ಕಾರಣವಾಗುತ್ತವೆ ಎಂದು ಬೆದರಿಕೆ ಹಾಕಿದ್ದಾರೆ.

“ಪಶ್ಚಿಮ ಏಷಿಯಾ ಪ್ರದೇಶದಲ್ಲಿರುವ ಅಮೆರಿಕದ ಎಲ್ಲ ನೆಲೆಗಳು ಇಸ್ಲಾಮಿಕ್ ಗಣರಾಜ್ಯ ಇರಾನ್‌ನ ಪ್ರಬಲ ಸಶಸ್ತ್ರ ಪಡೆಗಳ ಉಕ್ಕಿನ ಹೊಡೆತಗಳಿಂದ ಪುಡಿಪುಡಿಯಾಗುತ್ತವೆ. ಅದರ ಯಾವುದೇ ಕುರುಹು ಉಳಿಯುವುದಿಲ್ಲ, ಅವು ಮೊದಲಿನಿಂದಲೂ ಅಸ್ತಿತ್ವದಲ್ಲಿಲ್ಲ ಎಂಬಂತೆ ಮಾಡುತ್ತೇವೆ” ಎಂದು ಹೇಳಿದರು.

“ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಹಸ್ತಕ್ಷೇಪಕ್ಕೆ ಇರಾನ್ ಅವಕಾಶ ನೀಡುವುದಿಲ್ಲ” ಎಂದು ಅವರು ಹೇಳಿದರು. “ಯಾವುದೇ ಸಂದರ್ಭಗಳಲ್ಲಿ ಮತ್ತು ಯಾವುದೇ ರೀತಿಯಲ್ಲಿ ವಿದೇಶಿ, ಪ್ರಾದೇಶಿಕೇತರ ದೇಶವಾಗಿ ಅಮೆರಿಕವು ಹೊರ್ಮುಜ್ ಜಲಸಂಧಿಯಲ್ಲಿ ಹಸ್ತಕ್ಷೇಪ ಮಾಡಲು ನಾವು ಅನುಮತಿಸುವುದಿಲ್ಲ. ಇದು ಇರಾನ್‌ನ ಅಜೇಯ ಕೆಂಪು ರೇಖೆ” ಎಂದು ಅವರು ಹೇಳಿಕೊಂಡಿದ್ದಾರೆ.

ಹಡಗುಗಳಿಗೆ ನಾವಿಕರನ್ನು ನಿಯೋಜಿಸದಂತೆ ಹಡಗು ಮಾಲೀಕರಿಗೆ ಕೇಂದ್ರ ಸರ್ಕಾರದ ಮನವಿ

ಯುಎಸ್ ಮತ್ತು ಇರಾನ್ ನಡುವಿನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಹಾರ್ಮುಜ್ ಜಲಸಂಧಿಯ ಮೂಲಕ ಹೋಗುವ ಹಡಗುಗಳಲ್ಲಿ ತನ್ನ ನಾವಿಕರನ್ನು ನಿಯೋಜಿಸದಂತೆ ಭಾರತ ಬುಧವಾರ ಹಡಗು ವ್ಯವಸ್ಥಾಪಕರು, ನೇಮಕಾತಿ ಕಂಪನಿಗಳು ಮತ್ತು ಹಡಗು ಮಾಲೀಕರಿಗೆ ಸರ್ಕಾರದ ಆದೇಶಿಸಿದೆ.

“ಮುಂದಿನ ಆದೇಶದವರೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಲ್ಲಿ ಭಾರತೀಯ ನಾವಿಕರನ್ನು ನಿಯೋಜಿಸಲಾಗುವುದಿಲ್ಲ” ಎಂದು ಶಿಪ್ಪಿಂಗ್ ನಿರ್ದೇಶನಾಲಯವು ಆದೇಶದಲ್ಲಿ ತಿಳಿಸಿದೆ.

ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಹೆಚ್ಚಿದ ಬಳಿಕ ಕಳೆದ ಮೂರು ದಿನಗಳಲ್ಲೇ ಈ ಪ್ರದೇಶದಲ್ಲಿ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. “ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ … ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಡಗುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ನಾವಿಕರ ಹಿತಾಸಕ್ತಿಗಳನ್ನು ಕಾಪಾಡಲು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವೆಂದು ನಿರ್ದೇಶನಾಲಯ ಪರಿಗಣಿಸುತ್ತದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...