HomeಮುಖಪುಟE20 ಪೆಟ್ರೋಲ್ ಪ್ರಕರಣ : 'ಗ್ರ್ಯಾಂಡ್ ವಿಟಾರಾ' ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ ‘ಗ್ರಾಂಡ್ ವಿಟಾರಾ’ ಕಾರನ್ನು ನೀಡುವಂತೆ ಕಾರು ತಯಾರಿಕಾ ಕಂಪನಿ ಮಾರುತಿ ಸುಝುಕಿಗೆ ಆದೇಶಿಸಿದೆ. ಗ್ರಾಹಕನಿಗೆ ನೀಡುವ ಹೊಸ ಕಾರು ಕಡ್ಡಾಯವಾಗಿ E20 ಇಂಧನಕ್ಕೆ ಹೊಂದಿಕೊಳ್ಳುವಂತಹ (E20-compatible) ಇಂಜಿನ್ ಹೊಂದಿರಬೇಕು ಎಂದು ಗ್ರಾಹಕ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

ಈ ಆದೇಶವನ್ನು ಜುಲೈ 14 ರಂದು ಡಿಸಿಡಿಆರ್‌ಸಿ ಅಧ್ಯಕ್ಷ ಪ್ರಶಾಂತ್ ಕುಂದು ಮತ್ತು ಸದಸ್ಯ ಡಾ. ಆನಂದ್ ಎ. ವರ್ಗೀಸ್ ಅವರನ್ನೊಳಗೊಂಡ ಪೀಠ ಹೊರಡಿಸಿದೆ. ಮಾರುತಿ ಸುಝುಕಿ ಸಂಸ್ಥೆ ಮತ್ತು ಅದರ ಅಧಿಕೃತ ಡೀಲರ್ ಆದ ‘ನೆಕ್ಸಾ ಮ್ಯಾಗ್ನೆಟೋ’ ವಿರುದ್ಧ ಡಾ. ಪ್ರೇಮರಾಜ್ ದೇವಂಗನ್ ಅವರು ಸಲ್ಲಿಸಿದ್ದ ಗ್ರಾಹಕ ದೂರನ್ನು ಪುರಸ್ಕರಿಸಿ ಈ ತೀರ್ಪು ನೀಡಲಾಗಿದೆ.

ಆದೇಶ ಹೊರಡಿಸಿದ 45 ದಿನಗಳ ಒಳಗಾಗಿ ಡಾ. ದೇವಂಗನ್ ಅವರ ಗ್ರಾಂಡ್ ವಿಟಾರಾ ಕಾರಿನ ಬದಲಿಗೆ, ಅದೇ ಮಾಡೆಲ್‌ನ ಹಾಗೂ ಕಡ್ಡಾಯವಾಗಿ E20 ಇಂಧನಕ್ಕೆ ಹೊಂದಿಕೊಳ್ಳುವಂತಹ ಇಂಜಿನ್ ಹೊಂದಿರುವ ಹೊಸ ಕಾರನ್ನು ನೀಡಬೇಕು ಎಂದು ಗ್ರಾಹಕ ಆಯೋಗವು ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋಗೆ ನಿರ್ದೇಶನ ನೀಡಿದೆ.

ಒಂದು ವೇಳೆ ನಿಗದಿತ ಅವಧಿಯಲ್ಲಿ ಕಾರನ್ನು ಬದಲಾಯಿಸಿಕೊಡದಿದ್ದರೆ, ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋ ಡಾ. ದೇವಂಗನ್ ಅವರು 2023ರಲ್ಲಿ ಕಾರಿಗಾಗಿ ಪಾವತಿಸಿದ್ದ 18.29 ಲಕ್ಷ ರೂಪಾಯಿ ಮಾರಾಟದ ಮೊತ್ತವನ್ನು ಮಾತ್ರವಲ್ಲದೆ, ಅವರು ವಾಹನಕ್ಕಾಗಿ ಪಾವತಿಸಿದ್ದ 1,86,850 ರೂಪಾಯಿ ಆರ್‌ಟಿಒ ಶುಲ್ಕ ಮತ್ತು 34,644 ರೂಪಾಯಿ ವಿಮಾ ಪ್ರೀಮಿಯಂ ಮೊತ್ತವನ್ನು ಸಹ ಮರುಪಾವತಿಸಬೇಕು. ಈ ಒಟ್ಟು ಮೊತ್ತವು 20,50,494 ರೂಪಾಯಿ ಆಗಿರುತ್ತದೆ ಎಂದು ಆಯೋಗ ತಿಳಿಸಿದೆ.

ಯಾವ ಪರಿಸ್ಥಿತಿಯೇ ಇರಲಿ (ಕಾರು ಬದಲಾಯಿಸಿಕೊಡುವುದು ಅಥವಾ ಹಣ ಮರುಪಾವತಿಸುವುದು), ಗ್ರಾಹಕರಿಗೆ ಉಂಟಾದ ಮಾನಸಿಕ ತೊಂದರೆ ಮತ್ತು ಕಿರುಕುಳಕ್ಕೆ ಪರಿಹಾರವಾಗಿ 1 ಲಕ್ಷ ರೂಪಾಯಿ ಹಾಗೂ ನ್ಯಾಯಾಲಯದ ವೆಚ್ಚಕ್ಕಾಗಿ 10,000 ರೂಪಾಯಿ ಮೊತ್ತವನ್ನು ಪಾವತಿಸುವಂತೆ ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋಗೆ ಆದೇಶಿಸಲಾಗಿದೆ. ಈ ಪಾವತಿಯನ್ನು ಸಹ ಆದೇಶದ ದಿನಾಂಕದಿಂದ 45 ದಿನಗಳ ಒಳಗಾಗಿ ಮಾಡಬೇಕಾಗಿದೆ.

ಡಾ. ದೇವಂಗನ್ ಅವರು ತಾವು 2023ರಲ್ಲಿ ಮಾರುತಿ ಗ್ರಾಂಡ್ ವಿಟಾರಾ ಐಇ ಸ್ಟ್ರಾಂಗ್ ಹೈಬ್ರಿಡ್ ಝೆಟಾ ಪ್ಲಸ್ ಕಾರನ್ನು ಖರೀದಿಸಿದ್ದಾಗಿ ಆಯೋಗಕ್ಕೆ ತಿಳಿಸಿದ್ದರು. ಆದರೆ, ಈ ಕಾರು E20 ಇಂಧನಕ್ಕೆ ಹೊಂದಿಕೊಳ್ಳುವ ತಂತ್ರಜ್ಞಾನ ಹೊಂದಿಲ್ಲದ ಕಾರಣ, ನಂತರದ ದಿನಗಳಲ್ಲಿ ಪದೇ ಪದೇ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಬೇಕಾಯಿತು ಎಂದು ಆರೋಪಿಸಿದ್ದರು.

E20 ಪೆಟ್ರೋಲ್ ಎನ್ನುವುದು ಶೇಕಡಾ 20 ರಷ್ಟು ಎಥನಾಲ್ ಮತ್ತು ಶೇಕಡಾ 80 ರಷ್ಟು ಪೆಟ್ರೋಲ್‌ನ ಮಿಶ್ರಣವಾಗಿದೆ. ಇದು ಕಚ್ಚಾ ತೈಲ ಆಮದನ್ನು ಕಡಿಮೆ ಮಾಡಲು, ಮಾಲಿನ್ಯವನ್ನು ತಗ್ಗಿಸಲು ಮತ್ತು ದೇಶೀಯವಾಗಿ ಉತ್ಪಾದಿಸುವ ಜೈವಿಕ ಇಂಧನಗಳ ಬಳಕೆಯನ್ನು ಉತ್ತೇಜಿಸಲು ಭಾರತ ಸರ್ಕಾರ ರೂಪಿಸಿರುವ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ.

ಆದರೆ, E20 ಇಂಧನ ಪರಿಚಯವು ಒಂದು ಆತಂಕವನ್ನು ಹುಟ್ಟುಹಾಕಿದೆ. ವಿಶೇಷವಾಗಿ E20 ಇಂಧನಕ್ಕೆ ತಕ್ಕಂತೆ ವಿನ್ಯಾಸಗೊಳಿಸದ ಹಳೆಯ ವಾಹನಗಳಲ್ಲಿ ಹೊಂದಾಣಿಕೆಯ ಸಮಸ್ಯೆಗಳು ಇಂಧನ ವ್ಯವಸ್ಥೆ ತುಕ್ಕು ಹಿಡಿಯುವುದು (fuel system corrosion) ಮತ್ತು ಮೈಲೇಜ್ ಅಥವಾ ಇಂಧನ ದಕ್ಷತೆ ಕಡಿಮೆಯಾಗುವ (reduced fuel efficiency) ಸಾಧ್ಯತೆಗಳಿವೆ ಎಂಬ ಕಳಕಳಿ ವ್ಯಕ್ತವಾಗಿದೆ.

ವಾಹನ ತಯಾರಕರು ಈಗ ಹೆಚ್ಚೆಚ್ಚು E20-ಹೊಂದಾಣಿಕೆಯ ವಾಹನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ, ಆದರೆ 2023ಕ್ಕಿಂತ ಮೊದಲು ಮಾರಾಟವಾದ ವಾಹನಗಳ ಹೊಂದಾಣಿಕೆಯ ಬಗ್ಗೆ ಇನ್ನೂ ಹಲವು ಪ್ರಶ್ನೆಗಳು ಉಳಿದಿವೆ.

ಡಾ. ದೇವಂಗನ್ ಅವರ ಪ್ರಕರಣದಲ್ಲಿ, ಅವರು ಇಂಧನವನ್ನು ಸಂಪೂರ್ಣವಾಗಿ ಹೊರಹಾಕಿ (drain), ಇಂಧನ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಿ, ನಂತರ ಮತ್ತೆ ಹೊಸ ಪೆಟ್ರೋಲ್ ಅನ್ನು ತುಂಬಿಸಿದ್ದೇನೆ. ಆದಾಗ್ಯೂ, ವಾಹನ ಪದೇ ಪದೇ ಮಧ್ಯದಲ್ಲೇ ನಿಂತುಹೋಗುವ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಲೇ ಇತ್ತು ಹೇಳಿದ್ದರು.

ಇಂತಹ ಮರುಕಳಿಸುವ ದೋಷಗಳಿಂದಾಗಿ ಅವರು ತಮ್ಮ ವಾಹನವನ್ನು ಪದೇ ಪದೇ ರಿಪೇರಿಗಾಗಿ ಮಾರುತಿ ಸೇವಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕಾಯಿತು ಎಂದು ಗ್ರಾಹಕ ನ್ಯಾಯಾಲಯದ ಆದೇಶದಲ್ಲಿ ದಾಖಲಿಸಲಾಗಿದೆ.

ವಾಹನದಲ್ಲಿ ಕಾಣಿಸಿಕೊಂಡ ಸಮಸ್ಯೆಗೆ ಕಳಪೆ ಗುಣಮಟ್ಟದ ಇಂಧನ ಬಳಕೆಯೇ ಕಾರಣ ಎಂದು ಮಾರುತಿ ಸುಝುಕಿ ಮತ್ತು ನೆಕ್ಸಾ ಮ್ಯಾಗ್ನೆಟೋ ವಾದಿಸಿದ್ದರು. ಅಲ್ಲದೆ, ಹೊಸ E20 ಇಂಧನ ಸ್ನೇಹಿ ಮಾಡೆಲ್ ನೀಡಲು ನಿರಾಕರಿಸಿದ್ದರು. ಇದರಿಂದಾಗಿ ಡಾ. ದೇವಂಗನ್ ಅವರು ನ್ಯಾಯ ಮತ್ತು ಪರಿಹಾರಕ್ಕಾಗಿ ಗ್ರಾಹಕ ಆಯೋಗದ ಮೊರೆ ಹೋಗಿದ್ದರು.

ಜುಲೈ 14 ರಂದು ನೀಡಿದ ತನ್ನ ತೀರ್ಪಿನಲ್ಲಿ, ಮಾರುತಿ ಸುಝುಕಿ ಕಂಪನಿ ಮತ್ತು ಅದರ ಡೀಲರ್ ಗ್ರಾಹಕ ಸೇವೆ ಹಾಗೂ ನ್ಯಾಯೋಚಿತ ವ್ಯಾಪಾರ ಪದ್ಧತಿಯಲ್ಲಿ ಲೋಪ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ಡಾ. ದೇವಂಗನ್ ಯಶಸ್ವಿಯಾಗಿದ್ದಾರೆ ಎಂದು ಗ್ರಾಹಕ ಆಯೋಗವು ತೀರ್ಪು ನೀಡಿದೆ.

ಅದರಂತೆ, ಡಾ. ದೇವಂಗನ್ ಅವರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ಅವರ ಕಾರನ್ನು ಬದಲಾಯಿಸಿಕೊಡಬೇಕು ಅಥವಾ ಅವರು ಕಾರಿನ ಖರೀದಿಗೆ ಸಂಬಂಧಿಸಿದಂತೆ ಭರಿಸಿದ ಸಂಪೂರ್ಣ ವೆಚ್ಚವನ್ನು ಮರುಪಾವತಿಸಬೇಕು ಎಂದು ಆದೇಶಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...