Homeಮುಖಪುಟ‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

- Advertisement -
- Advertisement -

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ‘ಜಿರಳೆ ಜನತಾ ಪಕ್ಷ’ (ಸಿಜೆಪಿ) ಸೋಮವಾರ ಗಂಭೀರ ಆರೋಪ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್, ಪ್ರತಿಭಟನೆಯ ಸಮಯದಲ್ಲಿ ಆಂಗ್ಮೋ ಅವರ ಮೇಲೆ ಪೊಲೀಸ್ ಸಿಬ್ಬಂದಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಕೂದಲು ಎಳೆದು ಹಲ್ಲೆ: ಕನಿಷ್ಠ 40-50 ಜನರ ತಲೆಗೆ ಗಾಯ!

ಪೊಲೀಸರ ಬಲಪ್ರಯೋಗವನ್ನು ತೀವ್ರವಾಗಿ ಖಂಡಿಸಿರುವ ಸೌರವ್ ದಾಸ್, “ಗೀತಾಂಜಲಿ ಜಿ ಅವರ ಕೂದಲನ್ನು ದೆಹಲಿ ಪೊಲೀಸರು ಎಳೆದಿದ್ದಾರೆ ಮತ್ತು ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿದ್ದ 12 ವರ್ಷದ ಬಾಲಕಿಯೊಬ್ಬಳ ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತ ಬಂದಿದೆ. ಅಷ್ಟೇ ಅಲ್ಲದೆ, ಇತರ 40 ರಿಂದ 50 ಪ್ರತಿಭಟನಾಕಾರರ ತಲೆಗಳು ಒಡೆದು ಗಾಯಗೊಂಡಿವೆ! ದೆಹಲಿ ಪೊಲೀಸರು ಅಲ್ಲಿ ನಿಜಕ್ಕೂ ಏನು ಮಾಡುತ್ತಿದ್ದಾರೆ!?” ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿಭಟನಾಕಾರರ ಮೇಲೆ ತೀವ್ರ ದಾಳಿ ನಡೆಸುತ್ತಿರುವ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ, ದೆಹಲಿ ಪೊಲೀಸರ ಈ ವಿಕೃತ ನಡವಳಿಕೆಯ ವಿರುದ್ಧ ಸಾರ್ವಜನಿಕ ವಲಯದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮೆರವಣಿಗೆಯ ಸಂದರ್ಭದಲ್ಲಿ ಸಂಸತ್ತಿನ ಕಡೆಗೆ ಮುನ್ನುಗ್ಗುತ್ತಿದ್ದ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ದಾಸ್ ತಿಳಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ‘X’ ಪೋಸ್ಟ್‌ನಲ್ಲಿ ದಾಸ್, “ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ! ಬೀದಿಗಳಲ್ಲಿ ಹಕ್ಕೊತ್ತಾಯಕ್ಕಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಲ್ಲುವಂತೆ ನಾವು ದೇಶದ ಎಲ್ಲಾ ಸಂಸದರಲ್ಲಿ ಮನವಿ ಮಾಡುತ್ತೇವೆ. ಪೊಲೀಸರು ಪ್ರತಿಭಟನಾಕಾರರನ್ನು ಅತ್ಯಂತ ಕ್ರೂರವಾಗಿ ಕೆಡವಿ ಹೊಡೆಯುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜೆ.ಪಿ. ನಡ್ಡಾ ಭೇಟಿ ಮತ್ತು ಮನವಿ ಸಲ್ಲಿಕೆ

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಜ್ಞಾಪಕ ಪತ್ರವನ್ನು (ಮೆಮೊರಾಂಡಂ) ಸಲ್ಲಿಸಲು ಸಿಜೆಪಿ ವಕ್ತಾರ ಸೌರವ್ ದಾಸ್ ಮತ್ತು ಚಳವಳಿಯ ಪ್ರಮುಖ ನಾಯಕ ಅಶುತೋಷ್ ರಾಂಕಾ ಅವರು ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾದ ಬೆನ್ನಲ್ಲೇ ಈ ಎಲ್ಲಾ ಬೆಳವಣಿಗೆಗಳು ಮತ್ತು ಆರೋಪಗಳು ಹೊರಬಿದ್ದಿವೆ.

ಈ ಭೇಟಿಯ ವಿವರಗಳನ್ನು ಹಂಚಿಕೊಂಡ ದಾಸ್, ನಡ್ಡಾ ಅವರನ್ನು ಭೇಟಿಯಾಗಲು ತಮಗೆ ಸುಲಭವಾಗಿ ಅವಕಾಶ ಸಿಗಲಿಲ್ಲ, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಕಾಯಬೇಕಾಯಿತು ಎಂದು ಹೇಳಿದ್ದಾರೆ. “ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಾದ ನಂತರ, ಅಶುತೋಷ್ ರಾಂಕಾ ಮತ್ತು ನಾನು ಜೆ.ಪಿ. ನಡ್ಡಾ ಅವರನ್ನು ಅವರ ನಿವಾಸದಲ್ಲಿ ಸುಮಾರು 10 ನಿಮಿಷಗಳ ಕಾಲ ಭೇಟಿಯಾದೆವು. ನಮ್ಮ ಸಮಗ್ರ ಬೇಡಿಕೆಗಳನ್ನು ಒಳಗೊಂಡ ಲಿಖಿತ ಪತ್ರವನ್ನು ನಾವು ಅವರಿಗೆ ಸಲ್ಲಿಸಿದಾಗ, ಅವರು ಈ ವಿಷಯದ ಕುರಿತು ಪಕ್ಷ ಮತ್ತು ಸರ್ಕಾರದ ಆಂತರಿಕ ಮಟ್ಟದಲ್ಲಿ ಮಾತನಾಡುವುದಾಗಿ ಭರವಸೆ ನೀಡಿದರು. ನಾವು ಆ ಪ್ರಕ್ರಿಯೆಯಲ್ಲಿದ್ದಾಗಲೇ, ಹೊರಗಡೆ ಪ್ರತಿಭಟನಾಕಾರರ ಸಾಮೂಹಿಕ ಬಂಧನ ಮತ್ತು ಹಲ್ಲೆಯ ಸುದ್ದಿಗಳು ಬರಲು ಪ್ರಾರಂಭಿಸಿದವು” ಎಂದು ದಾಸ್ ವಿವರಿಸಿದ್ದಾರೆ.

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹಾಗೂ ವಿದ್ಯಾರ್ಥಿ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ಈ ‘ಸಂಸದ್ ಚಲೋ’ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಜಂತರ್ ಮಂತರ್ ಕಡೆಯಿಂದ ಕೇಂದ್ರ ಸರ್ಕಾರದ ಕಚೇರಿಗಳತ್ತ ಸಾಗುತ್ತಿದ್ದ ಅನೇಕ ಮಹಿಳೆಯರು ಸೇರಿದಂತೆ ನೂರಾರು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ತೀವ್ರವಾಗಿ ಘೋಷಣೆಗಳನ್ನು ಕೂಗಿದರು. ಮೆರವಣಿಗೆ ಮುಂದಕ್ಕೆ ಹೋಗದಂತೆ ತಡೆಯಲು ದೆಹಲಿ ಪೊಲೀಸರು ಆ ಪ್ರದೇಶದಲ್ಲಿ ಭಾರೀ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಇಡೀ ಪ್ರದೇಶವನ್ನು ಕಟ್ಟುನಿಟ್ಟಿನ ವಶಕ್ಕೆ ಪಡೆದಿದ್ದರು.

ಆದಾಗ್ಯೂ, ಪ್ರತಿಭಟನಾಕಾರರ ಬಂಧನಗಳು ಮತ್ತು ಗಾಯಗೊಂಡವರ ಕುರಿತು ಅಧಿಕೃತ ಸಾಂಖ್ಯಿಕ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಇನ್ನು ಪ್ರತಿಭಟನಾಕಾರರ ಆರೋಪಕ್ಕೆ ನೇರ ಪ್ರತಿಕ್ರಿಯೆ ನೀಡದಿದ್ದರೂ, ದೆಹಲಿ ಪೊಲೀಸರು ತಮ್ಮ ಅಧಿಕೃತ ‘X’ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಅಂತಹ ಯಾವುದೇ ಹಲ್ಲೆಯ ಘಟನೆಗಳು ನಡೆದಿಲ್ಲ. ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಪೊಲೀಸರು ಅತ್ಯಂತ ವೃತ್ತಿಪರ ಹಾಗೂ ಕಾನೂನುಬದ್ಧವಾಗಿಯೇ ನಿರ್ವಹಿಸುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ. 

ಕೃತ್ಯ ನಡೆದ ಸಾಕ್ಷ್ಯಗಳು ವಿಡಿಯೋ ರೂಪದಲ್ಲಿ ಹರಿದಾಡುತ್ತಿದ್ದರೂ ಪೊಲೀಸರು ಆರೋಪವನ್ನು ನಿರಾಕರಿಸುತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...