Homeಮುಖಪುಟಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

- Advertisement -
- Advertisement -

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ, ಈಶಾನ್ಯ ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ (ಡಿಸಿಪಿ) ಸಂದೀಪ್ ಲಂಬಾ ಮಹಿಳಾ ಪ್ರತಿಭಟನಾಕಾರರೊಬ್ಬರ ಕೆನ್ನೆಗೆ ಹೊಡೆದು ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರವಾಗಿ ಹರಿದಾಡುತ್ತಿದ್ದು, ಆಡಳಿತ ಮತ್ತು ಪೊಲೀಸರ ಈ ಅನಾಗರಿಕ ನಡವಳಿಕೆಗೆ ದೇಶಾದ್ಯಂತ ವ್ಯಾಪಕ ಖಂಡನೆ ಹಾಗೂ ಟೀಕೆ ವ್ಯಕ್ತವಾಗಿದೆ.

ವೈರಲ್ ಆಗಿರುವ ಈ ವೀಡಿಯೊವನ್ನು ಕಂಡು ಸಾಮಾಜಿಕ ಕಾರ್ಯಕರ್ತರು, ಹಿರಿಯ ಪತ್ರಕರ್ತರು ಹಾಗೂ ವಿರೋಧ ಪಕ್ಷದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸಿಪಿ ಸಂದೀಪ್ ಲಂಬಾ ಅವರ ಕೃತ್ಯವನ್ನು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ.

ಕಾಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಧ್ಯಕ್ಷ ಅಭಿಜೀತ್ ದೀಪ್ಕೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್)ನಲ್ಲಿ ವೀಡಿಯೊಗೆ ಪ್ರತಿಕ್ರಿಯಿಸುತ್ತಾ, ಲಂಬಾ ಅವರ ಹಲ್ಲೆಯ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ. “ಪೋಲಿಸ್ ಅಧಿಕಾರಿ ಲಂಬಾ ಅವರು ಗೀತಾಂಜಲಿ ವಾಂಗ್ಚುಕ್ ಅವರನ್ನು ಹೊಡೆಯಲು ಏಕಾಏಕಿ ಟ್ರಕ್ ಮೇಲೆ ಹತ್ತಿದರು, ಆ ಬಳಿಕ ಅವರ ಕೂದಲನ್ನು ಹಿಡಿದು ಎಳೆದರು. ಇಂತಹ ಅಮಾನವೀಯ ಕೃತ್ಯ ಎಸಗಿರುವ ಸಂದೀಪ್ ಲಾಂಬಾ ಅವರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಮಾನಸಿಕವಾಗಿ ಸದೃಢರಾಗಿಲ್ಲ,” ಎಂದು ದೀಪ್ಕೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ. “ಇಲ್ಲ! ಅವನು ತನ್ನ ಕರ್ತವ್ಯವನ್ನು ಮಾತ್ರ ಮಾಡುತ್ತಿರಲಿಲ್ಲ! ಸರ್ಕಾರಿ ಅಧಿಕಾರದ ಮದದಲ್ಲಿ ಮೆರೆಯುತ್ತಿರುವ ಇಂತಹ ಪ್ರತಿ ಕ್ರೂರಿಯನ್ನು ನಾವು ಹೆಸರಿಸಿ, ನಾಚಿಕೆಪಡಿಸಿ, ಅವರಿಗೆ ಸಾಮಾಜಿಕ ಬಹಿಷ್ಕಾರ ಉಂಟಾಗುವಂತೆ ನೋಡಿಕೊಳ್ಳಬೇಕು. ಅಷ್ಟೇ ಅಲ್ಲದೆ ಇವರನ್ನು ನ್ಯಾಯಾಲಯದ ಬೋನಿಗೆ ಕರೆದೊಯ್ಯಬೇಕು. ಅದರಲ್ಲಿ ಮೊದಲನೆಯವನೇ ಈ ಸಂದೀಪ್ ಲಂಬಾ. ಇವನನ್ನು ಗುರುತಿಸಿ, ಇವನು ಎಲ್ಲಿ ವಾಸಿಸುತ್ತಾನೆ, ಇವನ ಹಿನ್ನೆಲೆ ಮತ್ತು ದಾಖಲೆ ಏನು ಎಂಬುದನ್ನು ಪತ್ತೆಹಚ್ಚಿ. ಕಾನೂನು ತಂಡಗಳು ದಯವಿಟ್ಟು ಇವನ ವಿರುದ್ಧ ದಾಖಲೆಗಳ ಕೆಲಸವನ್ನು ತಕ್ಷಣವೇ ಪ್ರಾರಂಭಿಸಿ,” ಎಂದು ಮೊಯಿತ್ರಾ ಆಕ್ರೋಶದ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಸಹ ಈ ವಿಡಿಯೋವನ್ನು ಹಂಚಿಕೊಂಡು, ಕೇಂದ್ರ ಸರ್ಕಾರದ ಹಸ್ತಕ್ಷೇಪ ಹಾಗೂ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ಇದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಮವಸ್ತ್ರದಲ್ಲಿರುವ ಗೂಂಡಾಗಳ ನಿಜವಾದ ಮುಖ,” ಎಂದು ಆಕ್ರೋಶ ಹೊರಹಾಕಿದ್ದಾರೆ. 

ಮುಂದುವರಿದು, “ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ ಅವರಂತಹ ಅನೇಕ ಪೊಲೀಸ್ ಅಧಿಕಾರಿಗಳು ತಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಮುಗ್ಧ ವಿದ್ಯಾರ್ಥಿನಿಯರ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರದ ಬ್ಯಾಡ್ಜ್‌ಗಳನ್ನು ತೆಗೆದುಹಾಕಿ, 12 ರಿಂದ 14 ವರ್ಷ ವಯಸ್ಸಿನ ಅಪ್ರಾಪ್ತ ಮಕ್ಕಳ ಮೇಲೆಯೂ ಕೈಮಾಡುತ್ತಿರುವ ಲೆಕ್ಕವಿಲ್ಲದಷ್ಟು ವೀಡಿಯೊಗಳು ಲಭ್ಯವಿವೆ. 

ಪೊಲೀಸರೇ ಸ್ವತಃ ಕಾರಿನ ಕಿಟಕಿಗಳನ್ನು ಒಡೆದು, ಕಲ್ಲು ತೂರಾಟ ನಡೆಸಿ, ಸಾಮಾನ್ಯ ಉಡುಪಿನಲ್ಲಿರುವ ಗೂಂಡಾಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸುವಂತೆ ಪ್ರೋತ್ಸಾಹಿಸುತ್ತಿರುವುದನ್ನು ನಾವು ಕಣ್ಣಾರೆ ನೋಡಿದ್ದೇವೆ,” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವರದಿಗಳು ಬಂದಾಗ, ವೈರಲ್ ವೀಡಿಯೊ ಅಥವಾ ಲಂಬಾ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಕುರಿತು ದೆಹಲಿ ಪೊಲೀಸ್ ಇಲಾಖೆ ಯಾವುದೇ ಅಧಿಕೃತ ಸಾರ್ವಜನಿಕ ಸ್ಪಷ್ಟನೆ ಅಥವಾ ಪ್ರತಿಕ್ರಿಯೆ ನೀಡಿಲ್ಲ. ಏತನ್ಮಧ್ಯೆ, ಸುದ್ದಿ ಸಂಸ್ಥೆ ‘ಐಎಎನ್ಎಸ್’ (IANS) ಜೊತೆ ಮಾತನಾಡಿದ ಸಂದೀಪ್ ಲಂಬಾ, ಪ್ರತಿಭಟನಾಕಾರರೊಂದಿಗಿನ ಘರ್ಷಣೆಯ ಸಂದರ್ಭದಲ್ಲಿ ತಮ್ಮ ಮೊಣಕಾಲಿಗೆ ಗಾಯವಾಗಿದೆ ಮತ್ತು ತಮ್ಮ ಪೊಲೀಸ್ ಸಮವಸ್ತ್ರ ಹರಿದುಹೋಗಿದೆ ಎಂದು ತಮ್ಮ ಸ್ವಪಕ್ಷ ಸಮರ್ಥನೆ ಮಾಡಿಕೊಂಡಿದ್ದಾರೆ.

ಸಂಸತ್ತಿಗೆ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಈ ಭೀಕರ ದಮನ ಕಾರ್ಯಾಚರಣೆಯಲ್ಲಿ, ಪೊಲೀಸರು ಜನಸಂದಣಿಯನ್ನು ಚದುರಿಸಲು ಲಾಠಿ ಚಾರ್ಜ್ ಹಾಗೂ ಅತಿಯಾದ ಬಲಪ್ರಯೋಗ ನಡೆಸಿದ್ದರಿಂದ ಸುಮಾರು 100 ಕ್ಕೂ ಹೆಚ್ಚು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಬಹುತೇಕರು ವಿದ್ಯಾರ್ಥಿಗಳು ಹಾಗೂ ಹದಿಹರೆಯದವರಾಗಿದ್ದಾರೆ ಎಂಬುದು ಕಳವಳಕಾರಿ ಸಂಗತಿಯಾಗಿದೆ.

ವಿಶೇಷವೆಂದರೆ, ಅಧಿಕಾರಿ ಸಂದೀಪ್ ಲಂಬಾ ಈ ಹಿಂದೆ ವಿವಾದಕ್ಕೆ ಸಿಲುಕಿದ್ದು ಇದೇ ಮೊದಲೇನಲ್ಲ. 2020 ರಲ್ಲಿ ನಡೆದ ಈಶಾನ್ಯ ದೆಹಲಿಯ ಮುಸ್ಲಿಂ ವಿರೋಧಿ ಹಿಂಸಾಚಾರದ ವೇಳೆ ದೆಹಲಿ ಪೊಲೀಸರು ನಡೆಸಿದ ವಿವಾದಾಸ್ಪದ ತನಿಖೆಯಲ್ಲಿ ಲಂಬಾ ಅವರ ಪಾತ್ರವನ್ನು ಹಕ್ಕುಗಳ ಹೋರಾಟಗಾರರು ಮತ್ತು ವಿಮರ್ಶಕರು ಗುರುತಿಸಿದ್ದರು. 

ಗಮನಾರ್ಹ ಸಂಗತಿಯೆಂದರೆ, ಅದೇ ತನಿಖೆಗಾಗಿ ಕೇಂದ್ರ ಗೃಹ ಸಚಿವಾಲಯವು ಅವರಿಗೆ ‘ತನಿಖಾ ಶ್ರೇಷ್ಠತೆ ಪದಕ’ ನೀಡಿ ಗೌರವಿಸಿತ್ತು. ಇಂತಹ ವಿವಾದಾಸ್ಪದ ಹಿನ್ನೆಲೆಯ ಅಧಿಕಾರಿಯೇ ಈಗ ಮತ್ತೆ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...