Homeಚಳವಳಿಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು ದೇಶದ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಶಾಂತಿಯುತ ಧರಣಿ ನಡೆಸುವಂತೆ ತನ್ನ ಬೆಂಬಲಿಗರು, ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಸಂಘಟನೆಗಳಿಗೆ ಅದು ಕರೆ ನೀಡಿದೆ.

ಜುಲೈ 20 ರಂದು ‘ಸಂಸದ್ ಚಲೋ’ ಮೆರವಣಿಗೆಯ ಮೇಲೆ ದೆಹಲಿ ಪೋಲೀಸರು ನಡೆಸಿದ ತೀವ್ರ ಬಲಪ್ರಯೋಗದ ನಂತರ, ವಿದ್ಯಾರ್ಥಿಗಳ ಈ ಪ್ರತಿಭಟನೆಯನ್ನು ಹತ್ತಿಕ್ಕಲು ಹಾಗೂ ಅವರ ಹೋರಾಟದ ಹಾದಿಯನ್ನು ತಪ್ಪಿಸಲು ಬಲಪಂಥೀಯ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆಗಳು ಅಖಾಡಕ್ಕಿಳಿದಿವೆ.

View this post on Instagram

A post shared by Siddham Jain (@1siddham)

“ಪ್ರತಿಭಟನೆಯಲ್ಲಿ ಸಿವಿಲ್ ಉಡುಪಿನಲ್ಲಿದ್ದವರನ್ನು ಗೂಂಡಾಗಳೆಂದು ಪ್ರತಿಭಟನಾಕಾರರು ದೂರಿದ್ದರು, ಅವರು ವಾಸ್ತವವಾಗಿ ಪೋಲೀಸ್ ಅಧಿಕಾರಿಗಳು. ಆದರೆ ಅಸಲಿ ಗೂಂಡಾಗಳು ಈಗ ಬಂದಿದ್ದಾರೆ, ಇಡೀ ದೆಹಲಿಯಲ್ಲಿ ಸುತ್ತಾಡುತ್ತಿದ್ದೇವೆ, ನಮಗೆ ಒಂದೇ ಒಂದು ಕಾಕ್ರೋಚ್ (ಪ್ರತಿಭಟನಾಕಾರರು) ಕೂಡ ಸಿಗುತ್ತಿಲ್ಲ” ಎಂದು ಲಾಯ್ಡ್‌ ಹರಡುತ್ತಿರುವ ಸ್ವತಂತ್ರ ಭಾರದ್ವಾಜ್ ಎಂಬ ಹಿಂದುತ್ವ ಇನ್ಫ್ಲುಯೆನ್ಸರ್‌ನ ವಿಡಿಯೋ ಲಕ್ಷಾಂತರ ಲೈಕ್ಸ್ ಪಡೆದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

View this post on Instagram

A post shared by Swatantra Bhardwaj (@bhardwaj_swatantra_official)

ಸಾರ್ವಜನಿಕವಾಗಿ ಇಂತಹ ಬೆದರಿಕೆ ಹಾಕುವ ಮೂಲಭೂತವಾದಿ ಪಡೆಯು, ಜಂತರ್ ಮಂತರ್‌ನ ವಿದ್ಯಾರ್ಥಿ ಚಳವಳಿಯನ್ನು ‘ದೇಶದ್ರೋಹಿ’, ‘ವಿದೇಶಿ ನಿಧಿ ಆಧಾರಿತ’ ಹಾಗೂ ‘ಜಿಹಾದಿ ಮನಸ್ಥಿತಿ’ ಎಂದು ಬಿಂಬಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಮಗೆ ಕೇವಲ ಒಂದು ದಿನ ದೆಹಲಿ ಪೋಲೀಸ್‌ ಪಡೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಲಿ, ಸಮವಸ್ತ್ರವಿಲ್ಲದೆ ಇಡೀ ಪ್ರತಿಭಟನಾಕಾರರಿಗೆ ಲಾಠಿಯಿಂದ ಬುದ್ಧಿ ಕಲಿಸಿ ಅವರ ಜಾಗವನ್ನು ತೋರಿಸುತ್ತೇವೆ ಎಂದು ಈ ಶಕ್ತಿಗಳು ಬಹಿರಂಗವಾಗಿ ಹಿಂಸಾಚಾರಕ್ಕೆ ಕರೆ ನೀಡುತ್ತಿವೆ.

These Hindutva miscreants aim to "deal with the cockroaches" and seem to be infiltrating the Jantar Mantar protest.

ಈ ಬಲಪಂಥೀಯ ಇಕೋ-ಸಿಸ್ಟಮ್‌ನ ಪ್ರಮುಖ ನಾಯಕರು ಪ್ರತಿಭಟನಾ ಸ್ಥಳದಲ್ಲಿ ನೇರವಾಗಿ ಹಿಂಸೆಯಲ್ಲಿ ಪಾಲ್ಗೊಂಡಿದ್ದಾರೆ. ಲಕ್ಷಾಂತರ ಫಾಲೋವರ್ಸ್‌ ಹೊಂದಿರುವ ಸ್ವತಂತ್ರ ಭಾರದ್ವಾಜ್, ಸಚಿವ ಚಿರಾಗ್ ಪಾಸ್ವಾನ್ ಅವರೊಂದಿಗೆ ಫೋಟೋ ಹಂಚಿಕೊಂಡಿರುವ ವಿಡಿಯೋಗಳ ಜೊತೆಗೆ, ಪ್ರತಿಭಟನಾ ಸ್ಥಳದಲ್ಲಿದ್ದ ಪುಟ್ಟ ಹೆಣ್ಣುಮಗುವಿನ ತಂದೆ ಸಂಜಯ್ ಎಂಬುವವರ ಮೇಲೆ ಹಲ್ಲೆ ಮಾರಣಾಂತಿಕ ನಡೆಸಿ ದೌರ್ಜನ್ಯ ಎಸಗಿದ್ದಾನೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ಸ್ಪಷ್ಟಪಡಿಸಿದ್ದಾರೆ.

#Imp: This goon also attacked minor Nishu’s father, Sanjay ji, inside Jantar Mantar and broke his skull. We kept demanding that the Police invoke SC/ST Act, and stricter IPC provisions. Our fear was that he’ll be emboldened to repeat this.@DCPNewDelhi why are you protecting…

— Saurav Das (@SauravDassss) July 23, 2026

ಇನ್ನು 10 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿರುವ ಅಭಿಷೇಕ್ ಠಾಕೂರ್ ಸನಾತನಿ ಎಂಬ ಮತ್ತೊಬ್ಬ ಇನ್ಫ್ಲುಯೆನ್ಸರ್, ತನ್ನ ಕೈಯಲ್ಲಿ ಲಾಠಿ ಹಿಡಿದುಕೊಂಡು “ನಮಗೆ ಕೇವಲ 6 ಗಂಟೆ ಸಮಯ ಕೊಡಿ, ದೇಶವನ್ನು ಬಾಂಗ್ಲಾದೇಶ ಅಥವಾ ನೇಪಾಳ ಮಾಡಲು ಹೊರಟಿರುವ ಈ ಉಗ್ರರನ್ನು ಭೂಮಿಯ ಮೇಲೆಯೇ ಜಾಗವಿಲ್ಲದಂತೆ ಓಡಿಸುತ್ತೇವೆ” ಎಂದು ಬಹಿರಂಗ ಸವಾಲು ಹಾಕಿದ್ದಾನೆ. ಈತನೂ ಸಹ ಕಪಿಲ್ ಮಿಶ್ರಾ ಮತ್ತು ಡಾ. ಸುಧಾಂಶು ತ್ರಿವೇದಿ ಅವರಂತಹ ಬಿಜೆಪಿ ಅಗ್ರ ನಾಯಕರೊಂದಿಗೆ ಸಿಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ.

View this post on Instagram

A post shared by Abhishek Singh (@abhishekthakursanatani)

ಅಷ್ಟೇ ಅಲ್ಲದೆ, ‘ಹಿಂದು ರಕ್ಷಾ ದಳ’ದ ರಾಷ್ಟ್ರೀಯ ಅಧ್ಯಕ್ಷ ಭೂಪೇಂದ್ರ ತೋಮರ್ ಉರುಫ್ ‘ಪಿಂಕಿ ಭಯ್ಯಾ’ ಹಾಗೂ ಹರ್ಷ ಚೌಧರಿ ನೇತೃತ್ವದ ಪಡೆಗಳು ಕತ್ತಿಗಳನ್ನು ಪ್ರದರ್ಶಿಸುತ್ತಾ, “ಪ್ರತಿಭಟನಾಕಾರರಿಗೆ ಪಾಠ ಕಲಿಸಲು ಪ್ರತಿ ಹಿಂದುತ್ವ ಯೋಧನೂ ಸಿದ್ಧರಾಗಬೇಕು” ಎಂದು ಪ್ರಚೋದನಾಕಾರಿ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಇವರಲ್ಲಿ ಕೆಲವರು ತಾವೇ ಪೋಲೀಸರಂತೆ ವೇಷ ಧರಿಸಿ ಪ್ರತಿಭಟನಾಕಾರರ ಗುಂಪಿನೊಳಗೆ ನುಸುಳಿ, ಮಾಧ್ಯಮ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಉದ್ರೇಕಿಸುತ್ತಿರುವುದು ಹಾಗೂ ‘ಹೊಡೆಯಿರಿ ಹೊಡೆಯಿರಿ’ ಎಂದು ಕೂಗುತ್ತಿರುವುದು ರೆಕಾರ್ಡ್ ಆಗಿದೆ.

View this post on Instagram

A post shared by Abhishek Singh (@abhishekthakursanatani)

ಈ ವೈರಲ್ ವಿಡಿಯೋಗಳಲ್ಲಿ ಗೂಂಡಾಗಿರಿ ಜೊತೆಗೆ, ಅಖಿಲ ಭಾರತ ಹಿಂದೂ ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಕುಮಾರ್ ಅಗರ್ವಾಲ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿ, ಇಡೀ ವಿದ್ಯಾರ್ಥಿ ಹೋರಾಟದ ವಿರುದ್ಧ ಎನ್‌ಐಎ (NIA) ತನಿಖೆಗೆ ಆಗ್ರಹಿಸುವ ಮೂಲಕ ನ್ಯಾಯಾಲಯವನ್ನೂ ಹೋರಾಟಗಾರರ ವಿರುದ್ಧ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ.

View this post on Instagram

A post shared by Abhishek Singh (@abhishekthakursanatani)

ಒಟ್ಟಾರೆಯಾಗಿ, ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ತಮ್ಮ ಭವಿಷ್ಯಕ್ಕಾಗಿ ಪ್ರತಿಭಟಿಸುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳು, ಯುವತಿಯರು ಮತ್ತು ಮಕ್ಕಳ ಮೇಲೆ ದೆಹಲಿ ಪೋಲೀಸರ ಲಾಠಿಚಾರ್ಜ್‌ ಒಂದೆಡೆಯಾದರೆ, ಇನ್ನೊಂದೆಡೆ ರಾಜಕೀಯ ಬೆಂಬಲದೊಂದಿಗೆ ‘ಒಂದು ದಿನದ ಮಟ್ಟಿಗೆ ನಮ್ಮನ್ನು ಪೋಲೀಸ್‌ ಮಾಡಿ’ ಎಂದು ಅರಚುತ್ತಿರುವ ಉಗ್ರ ಮೂಲಭೂತವಾದಿಗಳ ಸೃಷ್ಟಿತ ಗೂಂಡಾಗಿರಿಯ ಭೀತಿ ಎದುರಾಗಿದೆ. ನ್ಯಾಯಯುತ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕಲು ಸರ್ಕಾರಿ ಶಕ್ತಿ ಮತ್ತು ಬಲಪಂಥೀಯ ಗೂಂಡಾಗಳು ಕೈಜೋಡಿಸಿರುವುದು ನಮ್ಮ ಪ್ರಜಾಪ್ರಭುತ್ವದ ಅಸ್ಮಿತೆಗೆ ಎದುರಾಗಿರುವ ಅತಿದೊಡ್ಡ ಅಪಾಯವಾಗಿದೆ.

Source: The Quint

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...