Homeಕರ್ನಾಟಕಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ..

- Advertisement -
- Advertisement -

’ಕಾವೇರಿ ಕೂಗು’ ಅಭಿಯಾನಕ್ಕಾಗಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿರುವ ಇಶಾ ಫೌಂಡೇಶನ್‌ ಸ್ಥಾಪಕ ಜಗ್ಗಿ ವಾಸುದೇವ್‌ ಅಫಿಡವಿಟ್‌ ಮೂಲಕ ಎಷ್ಟು ಹಣ ಸಂಗ್ರಹಿಸಿದ್ದಾರೆ ಮತ್ತು ಯಾವೆಲ್ಲಾ ವಿಧಾನಗಳ ಮೂಲಕ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ.

ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕೂಡ ಕಾನೂನಿಗಿಂತ ಮಿಗಿಲಲ್ಲ ಎಂದು ಒತ್ತಿ ಹೇಳಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಓಕ ಮತ್ತು ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಪೀಠ, ಜಗ್ಗಿ ವಾಸುದೇವ್‌ ಸಂಗ್ರಹಿಸಿರುವ ಹಣದ ಲೆಕ್ಕ ಕೊಡಬೇಕು ಎಂದು ತಾಕೀತು ಮಾಡಿದೆ.

ಕಾವೇರಿ ಕೂಗು ಯೋಜನೆಗೆ ಯಾವ ಕಾರಣಕ್ಕೂ ಸಾರ್ವಜನಿಕರಿಂದ ಹಣ ಸಂಗ್ರಹಿಸಬಾರದು ಎಂದು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿದ ಸಾರ್ವಜನಿಕ ಹಿತರಕ್ಷಣಾ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ತೀರ್ಮಾನಕ್ಕೆ ಬಂದಿದೆ.

ಯಾರಾದರೂ ಜನರಿಗೆ ಅರಿವು ಮೂಡಿಸಿದರೆ ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಅದರ ನೆಪದಲ್ಲಿ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಿಸುವುದನ್ನು ಒಪ್ಪುವುದಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್

ಈ ಹಣ ಸಂಗ್ರಹಣೆಯ ವಿಚಾರದಲ್ಲಿ ಯಾವುದೇ ತನಿಖೆ ನಡೆಸದೇ, ಕೈಕಟ್ಟಿ ಕೂತಿರುವ ರಾಜ್ಯಸರ್ಕಾರವನ್ನು ಸಹ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ರಾಜ್ಯಸರ್ಕಾರದ ಹೆಸರಿನಲ್ಲಿ ಯಾರಾದರೂ ಜನರಿಂದ ಒತ್ತಾಯಪೂರ್ವಕವಾಗಿ ಹಣ ಸಂಗ್ರಹಣೆ ಮಾಡತ್ತಿದ್ದಾರೆ ಎಂಬ ದೂರು ಬಂದರೆ ಅದನ್ನು ತನಿಖೆ ಮಾಡುವುದು, ಸಮಸ್ಯೆ ಬಗೆಹರಿಸುವುದು ನಿಮ್ಮ ಕರ್ತವ್ಯವಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಸರ್ಕಾರವು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ನಮಗೆ ಯಾವುದೇ ದೂರುಗಳು ಬಂದಿಲ್ಲ ಮತ್ತು ಸರ್ಕಾರಿ ಜಾಗದಲ್ಲಿ ಫೌಂಡೇಶನ್‌ ಕೆಲಸ ಮಾಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಮಾಡುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾ.ಎಸ್.ಆರ್‌.ಕೃಷ್ಣಕುಮಾರ್‌ ಹಿಂದೆ ಸರಿದಿದ್ದಾರೆ. ’ಕಾವೇರಿ ಕೂಗು’ ಹೆಸರಲ್ಲಿ ಈಶ ಫೌಂಡೇಶನ್ ಸುಮಾರು ೨೫೩ ಕೋಟಿ ಸಸಿ ನೆಡುವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಒಂದು ಸಸಿಗೆ ೪೨ ರೂ.ಗಳಂತೆ ಜನರಿಂದ ೧೦,೬೨೬ ಕೋಟಿ ರೂ. ಸಂಗ್ರಹಿಸಲಾಗುತ್ತಿದೆ ಎಂದು ವಕೀಲ ಎ.ವಿ.ಅಮರನಾಥನ್ ಅರ್ಜಿ ಸಲ್ಲಿಸಿದ್ದರು.

ಈ ಅಭಿಯಾನವು ತಲಕಾವೇರಿಯಿಂದ ತಿರುವರೂರಿನವರೆಗೆ ಕಾವೇರಿ ನದಿಗೆ ಅಡ್ಡಲಾಗಿ ಮರಗಳನ್ನು ಬೆಳೆಸುವ ಯೋಜನೆ ಹೊಂದಿದ್ದು, ಇದಕ್ಕಾಗಿ 253 ಕೋಟಿ ಸಸ್ಯಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಇದಕ್ಕಾಗಿ ಪ್ರತಿ ಮರಕ್ಕೆ 42 ರೂ. ಸಂಗ್ರಹಿಸುತ್ತಿದ್ದು ಇದು 10,626 ಕೋಟಿ ರೂ. ಆಗುತ್ತದೆ ಎಂದು ಅರ್ಜಿದಾರರ ವಕೀಲ ಎ.ವಿ. ಅಮರನಾಥನ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಅರ್ಜಿದಾರ ವಕೀಲ ಎ.ವಿ.ಅಮರನಾಥನ್, ಸಸಿ ನೆಡುವುದಕ್ಕೆ ಆಕ್ಷೇಪವಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸಸಿ ನೆಡಲು ಜನರಿಂದ ಸಾವಿರಾರು ಕೋಟಿ ರೂ. ಸಂಗ್ರಹ ಮಾಡುತ್ತಿರುವುದಕ್ಕೆ ವಿರೊಧವಿದೆ ಎಂದು ಹೇಳಿದ್ದರು.

ಸಮಾನತೆ ಮತ್ತು ನ್ಯಾಯದ ಹಿತದೃಷ್ಟಿಯಿಂದ ‘ಕಾವೇರಿ ಕೂಗು ಯೋಜನೆ’ಗಾಗಿ ಸಾರ್ವಜನಿಕರಿಂದ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಜಗ್ಗಿ ವಾಸುದೇವ್ ನೇತೃತ್ವದ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿತ್ತು.

ಪಿಐಎಲ್ ಪ್ರಕಾರ, ಕಾವೇರಿ ನದಿಗೆ ಅಡ್ಡಲಾಗಿ ತಲಕಾವೆರಿಯಿಂದ ತಿರುವರೂರುವರೆಗೆ ಮರಗಳನ್ನು ನೆಡಲು ಇಶಾ ಪ್ರತಿಷ್ಠಾನ ಯೋಜಿಸುತ್ತಿದೆ. ಅದಕ್ಕಾಗಿ 639.1 ಕಿ.ಮೀ ಉದ್ದ ತಲಕಾವೆರಿಯಿಂದ ತಿರುವರೂರುವರೆಗೆ ತನ್ನ ಬೈಕ್ ರ್ಯಾಲಿಯನ್ನು ಪ್ರಾರಂಭಿಸಿದೆ. “ಕಾವೇರಿ ಜಲಾನಯನ ಪ್ರದೇಶಕ್ಕೆ ಸಂಬಂಧಿಸಿದಂತೆ ಅಧ್ಯಯನಗಳನ್ನು ನಡೆಸಿದೆ ಎಂದು ಫೌಂಡೇಶನ್ ಹೇಳುತ್ತದೆ. ಆದರೆ ಅದರ ವರದಿಯನ್ನು ರಾಜ್ಯಕ್ಕೆ ಸಲ್ಲಿಸಬೇಕಾಗಿತ್ತು. ತಾವು ಮಾಡಿದ ಅಧ್ಯಯನಗಳನ್ನು ಚರ್ಚಿಸಿದ ನಂತರ ರಾಜ್ಯವು ಅನುಮೋದನೆ ನೀಡಬೇಕು. ಆದರೆ ಅಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದಿಲ್ಲ. ರಾಜ್ಯದಿಂದ ಸರಿಯಾದ ಅನುಮೋದನೆ ಪಡೆಯದೆ ಯಾವುದೇ ಖಾಸಗಿ ಸಂಸ್ಥೆಗೆ ಸರ್ಕಾರಿ ಜಮೀನಿನಲ್ಲಿ ಯಾವುದೇ ಕೆಲಸ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...