Homeಮುಖಪುಟಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

- Advertisement -
- Advertisement -

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ ‘ಜೆನ್ ಝೀ’ (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು ಮಣಿಸಿದ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರದ ಫ್ಯಾಸಿಸ್ಟಿಕ್ ದುರಾಡಳಿತವನ್ನು ಕೊನೆಗೊಳಿಸಲು ಹೇಗೆ ಮುನ್ನಡೆಯಬೇಕು ಎಂಬುದನ್ನು ತೋರಿಸಿಕೊಟ್ಟ ಐತಿಹಾಸಿಕ ಮೈಲಿಗಲ್ಲಾಗಿದೆ.

ಇದುವರೆಗಿನ ಚಳುವಳಿಗಳ ಹಳೆಯ ಸಾಂಪ್ರದಾಯಿಕ ಚೌಕಟ್ಟನ್ನು ದಾಟಿ ಇಂದಿನ ಯುವಜನರು ಪ್ರಭುತ್ವದ ಯಾವ ದಾಳಿಗೂ ಅಂಜದೇ ಅತ್ಯಂತ ದಿಟ್ಟತನದಿಂದ ಸೃಜನಶೀಲತೆ, ತಂತ್ರಜ್ಞಾನ ಮತ್ತು ವ್ಯಂಗ್ಯವನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡ ಈ ಹೋರಾಟ ಇಡೀ ಆಡಳಿತ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ್ದಾರೆ. ದೇಹಲಿಯ ಜಂತರ್ ಮಂತರ್ ಮತ್ತು ದೇಶಾದ್ಯಂತ ಭುಗಿಲೆದ್ದ ತೀವ್ರ ಆಕ್ರೋಶಕ್ಕೆ ಹೆದರಿದ ಪ್ರಧಾನಿ ನರೇಂದ್ರ ಮೋದಿ, ಇತಿಹಾಸದಲ್ಲೇ ಮೊದಲ ಬಾರಿಗೆ ತಡರಾತ್ರಿ ಇನ್‌ಸ್ಟಾಗ್ರಾಮ್ ರೀಲ್ ಶೈಲಿಯಲ್ಲಿ ನೇರ ಸೆಲ್ಫಿ ವಿಡಿಯೋ ಬಿಡುಗಡೆ ಮಾಡಿ ವಿದ್ಯಾರ್ಥಿಗಳನ್ನು ಶಾಂತಗೊಳಿಸಲು ಪ್ರಯತ್ನಿಸಬೇಕಾಯಿತು. ಯುವ ಜನಾಂಗವನ್ನು ತಲುಪಲು ಎಂದಿನ ‘ಮಿತ್ರೋಂ’ ಬದಲಿಗೆ ‘ಫ್ರೆಂಡ್ಸ್’ ಎಂದು ಸಂಬೋಧಿಸಿದ್ದು ಸರ್ಕಾರದೊಳಗಿನ ಆತಂಕವನ್ನು ಎತ್ತಿ ತೋರಿಸುತ್ತದೆ. ಇದರಿಂದ ಹೋರಾಟದ ತೀವ್ರತೆಗೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಆದರೆ, ಅವರ ರಾಜೀನಾಮೆ ಪತ್ರದಲ್ಲಿ ನೀಟ್ ಪರಿಕ್ಷಾ ಅಕ್ರಮದ ಕುರಿತು ನೈತಿಕ ಹೊಣೆ ಹೊರುವ ಅಥವಾ ಆತ್ಮಹತ್ಯೆಗೆ ಒಳಗಾಗಿ ತಮ್ಮ ಮಕ್ಕಳನ್ನು ಕಳೆದುಕೊಂಡು ನೊಂದ ಪೋಷಕರು, ವಿದ್ಯಾರ್ಥಿಗಳಿಗೆ ವಿಷಾದಿಸುವ ಯಾವುದೇ ಪಶ್ಚಾತ್ತಾಪ ಇರಲಿಲ್ಲ. ಬದಲಿಗೆ ಪ್ರತಿಭಟನೆಯನ್ನು ದೇಶವಿರೋಧಿ ಶಕ್ತಿಗಳು ಬಳಸಿಕೊಳ್ಳುತ್ತಿವೆ ಎಂದು ಆರೋಪಿಸುವ ಮೂಲಕ ಬಿಜೆಪಿ ಸರ್ಕಾರದ ಆಡಳಿತದ ಎಂದಿನ ಹಠಮಾರಿತನವನ್ನೇ ಪ್ರದರ್ಶಿಸಿದರು.

ಸ್ವತಂತ್ರ ಭಾರತದ ಇತಿಹಾಸದಲ್ಲಿ ದೇಶದ ಪ್ರಮುಖ ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳನ್ನು ಒಳಗಿನಿಂದಲೇ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಆರ್.ಎಸ್.ಎಸ್ ಸಂಘಪರಿವಾರದ ದೀರ್ಘಕಾಲೀನ ಕಾರ್ಯವಿಧಾನವಾಗಿದೆ. NEET ನಂತಹ ಕೇಂದ್ರೀಕೃತ ಪರೀಕ್ಷೆಗಳ ಮೂಲಕ ಪ್ರಾದೇಶಿಕ, ರಾಜ್ಯಗಳ ಒಕ್ಕೂಟ ವ್ಯವಸ್ಥೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಹತ್ತಿಕ್ಕುವುದು ಇದರ ಮೂಲ ಭಾಗವಾಗಿದೆ. ಪ್ರಸ್ತುತ NEET ಪ್ರತಿಭಟನೆಗಳ ಹಿನ್ನೆಲೆಯಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದಿನ ಯುವಕರಿಗೆ ಆದೇಶಗಳಲ್ಲ, ಚರ್ಚೆ ಮತ್ತು ಸಹಮತ ಬೇಕು ಎಂದು ಹೇಳಿರುವುದು ಯುವ ಆಕ್ರೋಶದ ತೀವ್ರತೆಯನ್ನು ತಣ್ಣಗಾಗಿಸುವ ಒಂದು ಯೋಜಿತ ತಂತ್ರವೇ ಆಗಿರುವುದರ ಜೊತೆಗೆ ಈ ಹೇಳಿಕೆಯ ಮೂಲಕ ಪರೋಕ್ಷವಾಗಿ ಪ್ರಧಾನಿ ಮೋದಿಗೂ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಎಡ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಭವಿಷ್ಯದಲ್ಲಿ ಸಂಘಪರಿವಾರ ಹರಡಬಹುದಾದ ವಿವಿಧ ತಿರುಚಿದ ನಿರೂಪಣೆಗಳ ವಿರುದ್ಧ ಈಗಿನಿಂದಲೇ ಜಾಗರೂಕರಾಗಿರಬೇಕಾಗಿದೆ. ಈಗಾಗಲೇ RSS ಮುಖಂಡರು ಈ NEET ಮತ್ತು CJP (ಕಾಕ್ರೋಚ್ ಜನತಾ ಪಾರ್ಟಿ) ಆಂದೋಲನದ ಹಿಂದೆ ದೇಶಿ ಮತ್ತು ವಿದೇಶಿ ವಿಚ್ಛಿದ್ರಕಾರಕ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸುತ್ತಿದ್ದಾರೆ. ಆ ಮೂಲಕ ಭವಿಷ್ಯದಲ್ಲಿ ಈ ಇಡೀ ನ್ಯಾಯಸಮ್ಮತ ಹೋರಾಟವನ್ನು ಅಭಿವೃದ್ಧಿ ವಿರೋಧಿ ಅಥವಾ ಅಂತರರಾಷ್ಟ್ರೀಯ ಸಂಚು ಎಂದು ಬಿಂಬಿಸಿ ಜನರಲ್ಲಿ ಗೊಂದಲ ಮೂಡಿಸಲಾಗುತ್ತದೆ. ಇದರೊಂದಿಗೆ ಶಿಕ್ಷಣ ಸಚಿವರ ರಾಜೀನಾಮೆಯನ್ನು ಪ್ರಭುತ್ವದ ಸೋಲು ಎಂದು ಒಪ್ಪಿಕೊಳ್ಳುವ ಬದಲಿಗೆ, ಮುಂಬರುವ ದಿನಗಳಲ್ಲಿ ಇದನ್ನು ಮೋದಿ ಸರ್ಕಾರದ ಪಾರದರ್ಶಕತೆ ಮತ್ತು ನೈತಿಕತೆಗೆ ಸಾಕ್ಷಿ ಎಂದು ತನ್ನ ಐಟಿ ಸೆಲ್ ಮೂಲಕ ತಿರುಚಲಾಗುತ್ತದೆ.

ಪರಿಕ್ಷಾ ಪ್ರಶ್ನೆ ಪತ್ರಿಕೆಯ ಸೋರಿಕೆಯು ಕೇವಲ ಒಂದು ತಾಂತ್ರಿಕ ಭದ್ರತಾ ಲೋಪ ಅಥವಾ ಕೆಲವು ಭ್ರಷ್ಟ ಅಧಿಕಾರಿಗಳ ವೈಯಕ್ತಿಕ ತಪ್ಪು ಎಂದು ಬಿಂಬಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮತ್ತು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತದೆ. ಈ ಮೂಲಕ ಶಿಕ್ಷಣದ ಕೇಂದ್ರೀಕರಣ ಮತ್ತು ಖಾಸಗೀಕರಣದಂತಹ ವ್ಯವಸ್ಥಿತ ಹಾಗು ತನ್ನ ದೋಷಗಳನ್ನು ಸಾರ್ವಜನಿಕ ಚರ್ಚೆಯಿಂದ ಮರೆಮಾಚಲಾಗುತ್ತದೆ. ನರೇಂದ್ರ ಮೋದಿ ಫ್ಯಾಸಿಸ್ಟಿಕ್ ಸರ್ಕಾರವನ್ನು ಮಣಿಸುವುದು ಹೇಗೆ ಎಂಬುದಕ್ಕೆ 2021 ರಲ್ಲಿ ದೆಹಲಿಯ ಗಡಿಗಳಲ್ಲಿ ನಡೆದ ಐತಿಹಾಸಿಕ ರೈತ ಹೋರಾಟವೇ ನಮಗೆ ಅತ್ಯುತ್ತಮ ಉದಾಹರಣೆ ಮತ್ತು ಪ್ರೇರಣೆಯಾಗಿದೆ. ಕಾರ್ಪೊರೇಟ್ ಪರ ಕೃಷಿ ಕಾಯ್ದೆಗಳ ವಿರುದ್ಧ ರೈತರು ತೋರಿದ ನಿರಂತರ ಶಿಸ್ತುಬದ್ಧ ಹೋರಾಟವು ಸರ್ಕಾರವನ್ನು ನಡುಗಿಸಿತ್ತು ಮತ್ತು ಅಂತಿಮವಾಗಿ ಪ್ರಧಾನಿ ಮೋದಿಯವರು ದೇಶದ ಕ್ಷಮೆಯಾಚಿಸಿ ಕಾಯ್ದೆಗಳನ್ನು ಹಿಂಪಡೆಯಬೇಕಾಯಿತು. ಅಂದು ರೈತ ಚಳುವಳಿಯು ಕೇವಲ ಕೃಷಿಕರ ಸಮಸ್ಯೆಯಾಗಿ ಉಳಿಯದೆ ದೇಶದ ರೈತಾಪಿ ವರ್ಗದ ಘನತೆಯ ಹೋರಾಟವಾಗಿ ಮಾರ್ಪಟ್ಟಿತ್ತು.

ಇಂದಿನ NEET ಹೋರಾಟವೂ ಕೂಡ ಕೇವಲ ವಿದ್ಯಾರ್ಥಿಗಳ ಸಮಸ್ಯೆಯಲ್ಲ, ಇದು ಇಡೀ ದೇಶದ ಮಧ್ಯಮ ಮತ್ತು ಬಡ ಕುಟುಂಬಗಳ ಭವಿಷ್ಯದ ಹೋರಾಟ ಎಂದು ಬಿಂಬಿಸುವಲ್ಲಿ ರೈತ ಚಳುವಳಿಯ ಕಾರ್ಯತಂತ್ರ ನಮಗೆ ಪ್ರಮುಖ ಪಾಠವಾಗಿದೆ. ರೈತ ಹೋರಾಟಕ್ಕೂ ಅಂದು ಸಂಘಪರಿವಾರ ಖಾಲಿಸ್ತಾನಿ, ದೇಶ ವಿರೋಧಿ ಹಣೆಪಟ್ಟಿ ಹಚ್ಚಲು ಪ್ರಯತ್ನಿಸಿತ್ತು ಆದರೆ ಸಂಘಟಿತ ಒಗ್ಗಟ್ಟು ಆ ಎಲ್ಲಾ ಸುಳ್ಳುಗಳನ್ನು ಧೂಳೀಪಟ ಮಾಡಿತ್ತು; ಅದೇ ಒಗ್ಗಟ್ಟನ್ನು ಇಂದಿನ ಯುವ ಹೋರಾಟದಲ್ಲೂ ಕಾಯ್ದುಕೊಳ್ಳಬೇಕಿದೆ.

ಯುವಜನರ ತತ್ಕಾಲಿಕ ಆಕ್ರೋಶವನ್ನು ದೀರ್ಘಕಾಲೀನ ಸೈದ್ಧಾಂತಿಕ ಚಳುವಳಿಯ ಪ್ರಜ್ಞೆಯಾಗಿ ಪರಿವರ್ತಿಸಲು ಎಲ್ಲ ಪ್ರಜಾಪ್ರಭುತ್ವವಾದಿ ಚಳುವಳಿಗಳು, ಎಡ‌ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಹೊಸ ಕಾರ್ಯತಂತ್ರಗಳನ್ನು ರೂಪಿಸಬೇಕಿದೆ. ಕ್ಲಿಷ್ಟಕರವಾದ ಹಳೆಯ ಪಾರಿಭಾಷಿಕ ಪದಗಳ ಬದಲಿಗೆ ಇಂದಿನ ಯುವಕರಿಗೆ ಅರ್ಥವಾಗುವ ಸರಳ ಭಾಷೆಯಲ್ಲಿ ಬಂಡವಾಳಶಾಹಿ ಮತ್ತು ಫ್ಯಾಸಿಸಂನ ಶೋಷಣೆಯನ್ನು ವಿವರಿಸಬೇಕು. ಇಂದಿನ ದುಬಾರಿ ಶಿಕ್ಷಣ, ಜನವಿರೋಧಿ ಅನಿಶ್ಚಿತ ಆರ್ಥಿಕತೆ ಮತ್ತು ನಿರುದ್ಯೋಗದ ಸಮಸ್ಯೆಗಳಿಗೆ ಕಾರ್ಪೊರೇಟ್ ಪರ ನೀತಿಗಳೇ ಹೇಗೆ ಕಾರಣ ಎಂಬುದನ್ನು ಪ್ರಾಯೋಗಿಕವಾಗಿ ಮನವರಿಕೆ ಮಾಡಿಕೊಡಬೇಕು.ಸಾಂಪ್ರದಾಯಿಕ ಅಧ್ಯಯನ ವಲಯಗಳ ಬದಲಿಗೆ ಪಾಡ್‌ಕಾಸ್ಟ್‌ಗಳು, ಆಡಿಯೋ ಬುಕ್‌ಗಳು ಮತ್ತು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳ ಮೂಲಕ ಜನಪರವಾದ, ಎಡ ಪ್ರಜಾಸತ್ತಾತ್ಮಕ ಸಿದ್ಧಾಂತಗಳನ್ನು ಪ್ರಚಾರ ಮಾಡಬೇಕು. ಚಲನಚಿತ್ರಗಳು, ಹಿಪ್-ಹಾಪ್ ಸಂಗೀತ ಮತ್ತು ಸ್ಟ್ರೀಟ್ ಆರ್ಟ್ ಮೂಲಕ ಯುವಜನರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು.

ಹಿರಿಯ ನಾಯಕರು ಝೆನ್-ಝೀ ಯುವಜನರನ್ನು ಕೇವಲ ಅನುಭವವಿಲ್ಲದವರು ಎಂದು ನೋಡುವ ಧೋರಣೆಯನ್ನು ಬಿಟ್ಟು, ಚಳುವಳಿಯೊಳಗಿನ ಆಂತರಿಕ ಪ್ರಜಾಪ್ರಭುತ್ವವನ್ನು ಬಲಪಡಿಸಿ, ಯುವ ಪೀಳಿಗೆಯ ಮುಕ್ತ ಪ್ರಶ್ನೆಗಳಿಗೆ ಸೈದ್ಧಾಂತಿಕವಾಗಿ ಮನವರಿಕೆ ಮಾಡಿಕೊಡುವ ಸಂವಾದ ಸಂಸ್ಕೃತಿಯನ್ನು ಬೆಳೆಸಬೇಕು. ಕರ್ನಾಟಕದ ಪ್ರಗತಿಪರ, ಎಡ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು NEET ಹಗರಣದ ವೈಫಲ್ಯವನ್ನು ರಾಜ್ಯದ ಸ್ವಾಯತ್ತತೆಯ ಮೇಲಿನ ದಾಳಿ ಎಂದು ಬಿಂಬಿಸಬೇಕು. ಶಿಕ್ಷಣವನ್ನು ಮತ್ತೆ ರಾಜ್ಯ ಪಟ್ಟಿಗೆ ತರಬೇಕು ಎಂಬ ಪ್ರಾದೇಶಿಕ ಆಕಾಂಕ್ಷೆಯನ್ನು ಎಡ, ಜನಪರ ಚಳುವಳಿಯ ಮುಖ್ಯ ಕಾರ್ಯಸೂಚಿಯನ್ನಾಗಿ ಮಾಡಿಕೊಳ್ಳಬೇಕು.

ಕರ್ನಾಟಕದಲ್ಲಿ ಕೋಮು ರಾಜಕಾರಣದ ಪ್ರಯೋಗಶಾಲೆಯನ್ನು ಮೆಟ್ಟಿನಿಲ್ಲಲು ಯುವಜನರಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಂಘಪರಿವಾರ ಬಿತ್ತುತ್ತಿರುವ ದ್ವೇಷಕ್ಕೆ ಪರ್ಯಾಯವಾಗಿ ವೈಜ್ಞಾನಿಕ ಮನೋಭಾವ ಮತ್ತು ಸಾಂಸ್ಕೃತಿಕ ಸೌಹಾರ್ದತೆಯನ್ನು ಸೃಷ್ಟಿಸುವುದು ಇಂದಿನ ತುರ್ತು ಅಗತ್ಯವಾಗಿದೆ. NEET ಅಕ್ರಮದ ವಿರುದ್ಧದ ಪ್ರತಿಭಟನೆಯು ಜನಪರ ಚಳುವಳಿಗಳಿಗೆ ಹೊಸ ದಾರಿದೀಪವಾಗಿದೆ. ಸಿದ್ಧಾಂತಗಳು ಮತ್ತು ಸಾಂಪ್ರದಾಯಿಕ ಶೈಲಿಗಳು ಮುಖ್ಯವಾದರೂ, ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಚಳುವಳಿಗಳು ತಮ್ಮ ಸ್ವರೂಪವನ್ನು ಬದಲಾಯಿಸಿಕೊಳ್ಳಬೇಕು.

2021ರ ರೈತ ಹೋರಾಟದ ದೃಢತೆ, ಕರ್ನಾಟಕದ ಚಳುವಳಿಗಳ ಪ್ರಾದೇಶಿಕ ತಳಹದಿ ಮತ್ತು ಜೆನ್ ಝೀ ಯುವಕರ ಸೃಜನಶೀಲ ಆಕ್ರೋಶಕ್ಕೆ ಎಡ, ಪ್ರಜಾಪ್ರಭುತ್ವವಾದಿ ಚಳುವಳಿಗಳ ಗಟ್ಟಿಯಾದ ಸೈದ್ಧಾಂತಿಕ ಹಿನ್ನೆಲೆಯನ್ನು ಒದಗಿಸಿದರೆ, ಅದು ಬಲಪಂಥೀಯ ಆರ್.ಎಸ್.ಎಸ್ ಸಂಘಪರಿವಾರದ ಕುತಂತ್ರಗಳನ್ನು ಮೆಟ್ಟಿ ನಿಂತು ಕೋಮುವಾದಿ ಫ್ಯಾಸಿಸ್ಟ್ ಆಡಳಿತದ ತಳಹದಿಯನ್ನೇ ನಡುಗಿಸಬಲ್ಲ ದೀರ್ಘಕಾಲೀನ ರಾಜಕೀಯ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ.

ಪೃಥ್ವಿ ಎಂ‌.ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...