Homeಮುಖಪುಟಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

- Advertisement -
- Advertisement -

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ ಹಣವನ್ನು ಹಿಂತಿರುಗಿಸಿದ್ದಾರೆ ಎಂಬ ಸತ್ಯವನ್ನು ಕೇಂದ್ರ ಸರ್ಕಾರವೇ ಮಂಗಳವಾರ ಲೋಕಸಭೆಯಲ್ಲಿ ಒಪ್ಪಿಕೊಂಡಿದೆ.

ತಮ್ಮದೇ ಅಧಿಕಾರ ವ್ಯಾಪ್ತಿಯ ತೋಟಗಾರಿಕಾ ಯೋಜನೆಯನ್ನು ಬಳಸಿಕೊಂಡು ಸೌತೆಕಾಯಿ ಕೃಷಿಗಾಗಿ ಸಚಿವರು ₹99 ಲಕ್ಷ ಸಬ್ಸಿಡಿ ಗಿಟ್ಟಿಸಿಕೊಂಡಿದ್ದನ್ನು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ತನಿಖಾ ವರದಿ ಬಯಲಿಗೆಳೆದಿತ್ತು. ವರದಿ ಪ್ರಕಟವಾಗಿ ಸರಿಯಾಗಿ ಒಂದು ತಿಂಗಳ ನಂತರ, ಚೌಧರಿ ಅವರು ಹಣ ವಾಪಸ್ ಮಾಡುವ ನಾಟಕವಾಡಿದ್ದಾರೆ.

ತೃಣಮೂಲ ಕಾಂಗ್ರೆಸ್ (TMC) ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೃಷಿ ಇಲಾಖೆಯ ಇನ್ನೊಬ್ಬ ರಾಜ್ಯ ಸಚಿವ ರಾಮ್‌ನಾಥ್ ಠಾಕೂರ್, ಭಾಗೀರಥ್ ಚೌಧರಿ ಅವರು ಸಬ್ಸಿಡಿ ಮೊತ್ತವನ್ನು ಸಂಬಂಧಪಟ್ಟ ಬ್ಯಾಂಕ್‌ಗೆ ವಾಪಸ್ ಮಾಡಿದ್ದಾರೆ. ಆ ಹಣವನ್ನು ರಾಷ್ಟ್ರೀಯ ತೋಟಗಾರಿಕಾ ಮಂಡಳಿಗೆ (NHB) ಜಮಾ ಮಾಡುವಂತೆ ಬ್ಯಾಂಕ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ.

ಸಚಿವರು ಮಾತ್ರವಲ್ಲ, ರಾಜಸ್ಥಾನದ ಜಾಲೋರ್‌ನ ಬಿಜೆಪಿ ಸಂಸದ ಲುಂಬಾರಾಮ್ ಚೌಧರಿ ಕೂಡ ಕಳೆದ ಐದು ವರ್ಷಗಳಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಈ ಯೋಜನೆಗಳಡಿ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಪಶುಸಂಗೋಪನಾ ಕಾರ್ಯದರ್ಶಿ ನರೇಶ್ ಪಾಲ್ ಗಂಗ್ವಾರ್ ಕುಟುಂಬದ ಮೂವರು ಸದಸ್ಯರು ಕಳೆದ 5 ವರ್ಷಗಳಲ್ಲಿ ಬರೋಬ್ಬರಿ ₹1.16 ಕೋಟಿ ಸಬ್ಸಿಡಿ ಬಾಚಿಕೊಂಡಿದ್ದಾರೆ.

ಆಯ್ದ ತರಕಾರಿ ಮತ್ತು ಹೂವುಗಳ “ವಾಣಿಜ್ಯ ಕೃಷಿ”ಯನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸುವ ಈ ಯೋಜನೆಯು ತೋಟಗಾರಿಕೆ ಸಮಗ್ರ ಅಭಿವೃದ್ಧಿ ಮಿಷನ್ (MIDH) ಅಡಿಯಲ್ಲಿ ಬರುತ್ತದೆ. ಇದನ್ನು 2014-15 ರಲ್ಲಿ ಪ್ರಾರಂಭಿಸಲಾಯಿತು. ಇದು ಚೌಧರಿ ಅವರ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ತೋಟಗಾರಿಕಾ ಮಂಡಳಿಯಿಂದ ನಿರ್ವಹಿಸಲ್ಪಡುತ್ತದೆ.

ಕ್ಯಾಪ್ಸಿಕಂ, ಸೌತೆಕಾಯಿ, ಟೊಮೆಟೊ ಮತ್ತು ಗುಲಾಬಿ, ಆಂಥೂರಿಯಂ, ಆರ್ಕಿಡ್ ಸೇರಿದಂತೆ ಎಂಟು ಬಗೆಯ ಹೂವುಗಳ ಕೃಷಿ ಯೋಜನೆಗೆ ಗರಿಷ್ಠ ಶೇ. 50 ರಷ್ಟು ಅಥವಾ ಪ್ರತಿ ಕುಟುಂಬಕ್ಕೆ ಗರಿಷ್ಠ 1 ಕೋಟಿ ರೂಪಾಯಿವರೆಗೆ ಸಬ್ಸಿಡಿ ನೀಡಲಾಗುತ್ತದೆ.

ಸಾಮಾನ್ಯ ರೈತರು ಸಣ್ಣ ಸಬ್ಸಿಡಿಗಾಗಿ, ಸಾಲಕ್ಕಾಗಿ ಬ್ಯಾಂಕ್‌ಗಳ ಮೆಟ್ಟಿಲೇರಿ ಕಣ್ಣೀರು ಹಾಕುತ್ತಿರುವಾಗ, ಅಧಿಕಾರದ ಚುಕ್ಕಾಣಿ ಹಿಡಿದ ಜನಪ್ರತಿನಿಧಿಗಳು ಮತ್ತು ಉನ್ನತಾಧಿಕಾರಿಗಳು ಕೋಟಿ ಕೋಟಿ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಳ್ಳುತ್ತಿರುವುದು ಇಂದಿನ ಆಡಳಿತ ವ್ಯವಸ್ಥೆಯ ದುರಂತಕ್ಕೆ ಸಾಕ್ಷಿ.

ರಾಜಕಾರಣಿಗಳು ಅಥವಾ ಅವರ ಕುಟುಂಬದವರು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿದಾಗ ಅಧಿಕಾರ ದುರುಪಯೋಗ ತಡೆಯಲು ಅಥವಾ ಹಿತಾಸಕ್ತಿ ತಡೆಯಲು ನಿಯಮಗಳಿವೆಯೇ ಎಂದು ಅಭಿಷೇಕ್ ಬ್ಯಾನರ್ಜಿ ಸದನದಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ ಸರ್ಕಾರ, ರಾಷ್ಟ್ರೀಯ ತೋಟಗಾರಿಕಾ ಮಂಡಳಿಯ ಈಗಿನ ಮಾರ್ಗದರ್ಶಿ ಸೂತ್ರಗಳಲ್ಲಿ ಜನಪ್ರತಿನಿಧಿಗಳು ಅಥವಾ ಅವರ ಕುಟುಂಬದ ಸದಸ್ಯರು ಸಬ್ಸಿಡಿಗೆ ಅರ್ಜಿ ಸಲ್ಲಿಸುವುದನ್ನು ತಡೆಯುವ ಅಥವಾ ಹಿತಾಸಕ್ತಿ ಸಂಘರ್ಷದ ಕುರಿತು ಯಾವುದೇ ನಿರ್ದಿಷ್ಟ ನಿಯಮಗಳಿಲ್ಲ ಎಂದು ಉಡಾಫೆಯಾಗಿ ಹೇಳಿದೆ. ಅಂದರೆ, ಸಚಿವರು ಮತ್ತು ಸಂಸದರು ಜನಸಾಮಾನ್ಯರ ತೆರಿಗೆ ಹಣವನ್ನು ತಮ್ಮ ಕಿಸೆಗೆ ಹಾಕಿಕೊಳ್ಳಲು ಲೂಟಿ ಬಾಗಿಲು ತೆರೆದೇ ಇದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಂತಾಗಿದೆ.

ಸಾರ್ವಜನಿಕರ ಆಕ್ರೋಶಕ್ಕೆ ಹೆದರಿ ಹಣ ವಾಪಸ್ ನೀಡಿದ ತಕ್ಷಣ ಸಚಿವರ ಅಧಿಕಾರ ದುರುಪಯೋಗದ ಅಪರಾಧ ಇಲ್ಲದಂತಾಗುತ್ತದೆಯೇ? ಸಾಮಾನ್ಯ ರೈತನಾಗಿದ್ದರೆ ಸರ್ಕಾರ ಇದೇ ರೀತಿ ಸುಮ್ಮನಿರುತ್ತಿತ್ತೇ? ಎನ್ನುವ ಪ್ರಶ್ನೆಗಳು ಈಗ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...