HomeಅಂಕಣಗಳುKarnataka against SIRಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

- Advertisement -
- Advertisement -

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.

ಆದರೆ, ತಳಮಟ್ಟದಲ್ಲಿ ವಾಸ್ತವ ಸ್ಥಿತಿ ಬೇರೆಯೇ ಇದೆ. ಮುಖ್ಯವಾಗಿ ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ತಳ ಸಮುದಾಯಗಳ ಪರಿಸ್ಥಿತಿ ಶೋಚನೀಯವಾಗಿದೆ. ವ್ಯವಸ್ಥೆಯ ಲೋಪದಿಂದ ಈ ಸಮುದಾಯಗಳ ಸಾವಿರಾರು ಜನರು ತಮ್ಮ ಅಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳುವುದು ಖಚಿತವಾಗಿದೆ.

ಆಗಸ್ಟ್ 8ರಂದು ಎಸ್‌ಐಆರ್ ಪ್ರಕ್ರಿಯೆಯ ಮನೆ ಮನೆ ಗಣತಿ ಅಥವಾ ಫಾರಂ ವಿತರಣೆ ಮತ್ತು ವಾಪಸ್ ಪಡೆಯುವ ಅವಧಿ ಕೊನೆಗೊಳ್ಳಲಿದೆ. ಆದರೆ, ಕೊಡಗು ಜಿಲ್ಲೆಯ ಆದಿವಾಸಿ ಹಾಡಿಗಳಿಗೆ ಇನ್ನೂ ಫಾರಂ ತಲುಪಿಯೇ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

2026 ಜುಲೈ 29ರಂದು ಆಂದೋಲನ ಪತ್ರಿಕೆ ಪ್ರಕಟಿಸಿದ ವರದಿ ಪ್ರಕಾರ, ಕೊಡಗು ಜಿಲ್ಲೆಯಲ್ಲಿ ಎಸ್‌ಐಆರ್ ಫಾರಂ ವಿತರಣೆ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್‌. ಜೆ ಸೋಮಶೇಖರ್ ಹೇಳಿದ್ದಾರೆ. ಆದರೆ, ವಿರಾಜಪೇಟೆ ತಾಲೂಕಿನ ಬಾಳುಗೋಡು ಮತ್ತು ಬಿ.ಶೆಟ್ಟಿಗಿರಿ ಹಾಡಿಗಳಲ್ಲಿ (ಹಳ್ಳಿಗಳಲ್ಲಿ) ಸುಮಾರು 26 ಜನರಿಗೆ ಇನ್ನೂ ಫಾರಂ ತಲುಪಿಲ್ಲ ಎಂದು ನಾಗರಿಕ ಮತ ಕಾವಲು ಸಮಿತಿಯ ಹೇಮಂತ್ ಹೇಳುತ್ತಾರೆ.

ಫಾರಂ ತಲುಪದವರ ಕಥೆ ಒಂದೆಡೆಯಾದರೆ, ಇನ್ನು ಫಾರಂ ತಲುಪಿದವರ ಕಥೆ ಬೇರೆಯದ್ದೇ ಆಗಿದೆ. ಎರಡೂ ಹಳ್ಳಿಗಳ ಮತದಾರರು ಆದಿವಾಸಿಗಳು, ದಲಿತರು ಆಗಿರುವುದರಿಂದ ಅವರಿಗೆ ಫಾರಂ ತುಂಬುವುದು ಗೊತ್ತಿಲ್ಲ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಈ ಫಾರಂ ಏಕೆ ಕೊಟ್ಟಿದ್ದಾರೆ ಎಂದೇ ಮಾಹಿತಿಯಿಲ್ಲ. ಕೆಲವೆಡೆ ಫಾರಂ ತುಂಬಲು ಬಿಎಲ್‌ಒಗಳು ಸಹಾಯ ಮಾಡಿದ್ದು, ಆದರೆ, ತಪ್ಪು ತಪ್ಪಾಗಿ ತುಂಬಿದ್ದಾರೆ ಎಂದು ಹೇಮಂತ್ ವಿವರಿಸಿದ್ದಾರೆ.

ಬಾಳುಗೋಡು ಹಾಡಿಯಲ್ಲಿ 80 ಮಂದಿ ಆದಿವಾಸಿ ಎರವ ಸಮುದಾಯದ ಮತದಾರರಿದ್ದಾರೆ. ಈ ಪೈಕಿ 40 ಮತದಾರರ ಫಾರಂಗಳನ್ನು ನಾವು ಪರಿಶೀಲನೆ ಮಾಡಿದ್ದೇವೆ. ಒಬ್ಬರು ಮಾತ್ರ ಸರಿಯಾಗಿ ಫಾರಂ ತುಂಬಿರುವುದು ಕಂಡು ಬಂದಿದೆ. ಬಿ.ಶೆಟ್ಟಿಗೆರಿಯಲ್ಲಿ 500ಕ್ಕೂ ಹೆಚ್ಚು ಎರವ, ಜೇನು ಕುರುಬ ಮತ್ತು ದಲಿತ ಸಮುದಾಯಗಳ ಮತದಾರರಿದ್ದಾರೆ. ಈ ಪೈಕಿ 100ಕ್ಕೂ ಹೆಚ್ಚು ಮಂದಿಯ ಫಾರಂಗಳನ್ನು ನಾವು ಪರಿಶೀಲಿಸಿದ್ದೇವೆ. ಕೇವಲ 26ರ ಜನರು ಮಾತ್ರ ಸರಿಯಾಗಿ ಫಾರಂ ತುಂಬಿದ್ದಾರೆ ಎಂದು ಹೇಮಂತ್ ತಿಳಿಸಿದ್ದಾರೆ.

ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಿಎಲ್‌ಒಗಳಾಗಿ ನೇಮಿಸಲಾಗಿದೆ. ಅವರಿಗೆ ಸಹಾಯ ಮಾಡಲು ಕೆಲವರನ್ನು ನಿಯೋಜಿಸಲಾಗಿದೆ. ಈ ಪೈಕಿ ಬಹುತೇಕರಿಗೆ ಸರಿಯಾದ ತರಬೇತಿ ನೀಡಿಲ್ಲ. 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರ ವಿವರಗಳನ್ನು 2025ರ ಮಾಹಿತಿ ತುಂಬಬೇಕಾದಲ್ಲಿ ತುಂಬಿದ್ದಾರೆ. ಇನ್ನೂ 2002ರ ಪಟ್ಟಿಯಲ್ಲಿ ಹೆಸರು ಇಲ್ಲದವರ ಫಾರಂನಲ್ಲಿ ಸಂಬಂಧಿಕರ ಬದಲು ಅದೇ ಮತದಾರರ ಮಾಹಿತಿಯನ್ನೇ ತುಂಬಿದ್ದಾರೆ. ಈ ರೀತಿ ಹಲವು ಲೋಪಗಳು ಆಗಿವೆ ಎಂದು ವಿವರಿಸಿದ್ದಾರೆ.

ಇನ್ನೂ ಕೆಲ ಮತದಾರರ ಫಾರಂಗಳಲ್ಲಿ ಮಾಹಿತಿ ಸಿಕ್ಕಿಲ್ಲ ಎಂದು ಬಿಎಲ್‌ಒಗಳೇ ಬರೆದಿದ್ದಾರೆ. ಈ ಎಲ್ಲಾ ಕಾರಣಗಳಿಗೆ ಈ ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವುದು ಖಂಡಿತ ಎಂದು ಹೇಮಂತ್ ಕಳವಳ ವ್ಯಕ್ತಪಡಿಸಿದ್ದಾರೆ.

ಆದಿವಾಸಿ ಮತದಾರರ 2002ರ ಪಟ್ಟಿ ಹುಡುಕುವುದು ಸವಾಲಾಗಿದೆ. ಹಾಡಿ ಜನರ ಸಹಾಯಕ್ಕೆ ಯಾವುದೇ ಪಕ್ಷಗಳ ಬಿಎಲ್‌ಎಗಳು ಬರುತಿಲ್ಲ. ಬಿಎಲ್‌ಒಗಳಿಗೆ ಸರಿಯಾಗಿ ತರಬೇತಿ ಇಲ್ಲ ಎಂದು ಹೇಮಂತ್ ಸಮಸ್ಯೆ ವಿವರಿಸಿದ್ದಾರೆ.

ದಾಖಲೆಗಳು ಇಲ್ಲ, ಪಿಆರ್‌ಸಿ, ಜಾತಿ ಪ್ರಮಾಣ ಪತ್ರ ಸಿಗುವುದು ಅನುಮಾನ

ಇನ್ನೂ ಫಾರಂ ಸಿಗದ ಮತದಾರರು ತಮ್ಮ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಫಾರಂ ಸಿಕ್ಕವರ ಪೈಕಿ ಬಹುತೇಕರು ಸರಿಯಾಗಿ ತುಂಬದೆ, ವಿವರಗಳು ಮ್ಯಾಚ್ ಆಗದೆ ಕರಡು ಪಟ್ಟಿಯಿಂದ ಹೊರ ಬೀಳುವುದು ಖಚಿತವಾಗಿದೆ. ಇಆರ್‌ಒ ನೋಟಿಸ್ ಕೊಟ್ಟರೆ ಸಮರ್ಥಿಸಿಕೊಳ್ಳಲು ಈ ಜನಗಳ ಬಳಿ ಯಾವುದೇ ದಾಖಲೆಗಳಿಲ್ಲ. ಶಾಶ್ವತ ನಿವಾಸಿ ಪ್ರಮಾಣ ಪತ್ರ ಪಡೆಯೋಣ ಅಂದರೆ, ಇವರದ್ದು ಸರ್ಕಾರಿ ಜಾಗದಲ್ಲಿ ಹೋರಾಟ ನಿರತ ಹಳ್ಳಿಗಳಾಗಿವೆ. ಜಾತಿ ಪ್ರಮಾಣ ಪತ್ರ ಪಡೆಯಲು ಇವರ ಜಾತಿಗಳು ಸರಿಯಾಗಿ ವಿಂಗಡಣೆಯೇ ಆಗಿಲ್ಲ ಎಂದು ಹೇಮಂತ್ ಹೇಳಿದ್ದಾರೆ.

ನಾನುಗೌರಿ.ಕಾಂ ವಿರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದ ಹಿರಿಯ ಮತದಾರರೊಬ್ಬರ ಗಣತಿ ನಮೂನೆಯನ್ನು ಪರಿಶೀಲನೆ ನಡೆಸಿದೆ. ಈ ವೇಳೆ ಅವರ ನಮೂನೆಯಲ್ಲಿ ಎರಡೂ ಬದಿಯ ಕಾಲಂಗಳನ್ನು ತುಂಬಿರುವುದು ಕಂಡು ಬಂದಿದೆ. ಈ ರೀತಿಯ ಉದಾಹರಣೆಗಳು ಹಲವಿದೆ ಎಂದು ಹೇಮಂತ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...