Homeಮುಖಪುಟಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

- Advertisement -
- Advertisement -

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ ಪೌರತ್ವ ನಿಯಮಗಳು ಮತ್ತು ಗುರುತಿನ ಚೀಟಿಗಳು ಜಾರಿಗೆ ಬರುವ ಮುನ್ನವೇ ತಾವು ಈ ಭೂಮಿಯಲ್ಲಿ ಬದುಕುತ್ತಿರುವುದರಿಂದ, ಈ ಆಧುನಿಕ ದಾಖಲಾತಿ ವ್ಯವಸ್ಥೆಗಳು ತಮಗೆ ಅನ್ವಯಿಸುವುದಿಲ್ಲ ಎಂದು ವಾದಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಮ್ಮ ಪುರಾತನ ಅಸ್ತಿತ್ವ ಮತ್ತು ಸಾಂಪ್ರದಾಯಿಕ ಗುರುತನ್ನು ಉಳಿಸಿಕೊಳ್ಳಲು ಈ ಸಮುದಾಯವು ಪ್ರಸ್ತುತ ಎಸ್‌ಐಆರ್ ಪ್ರಕ್ರಿಯೆಯಿಂದ ದೂರ ಉಳಿಯಲು ನಿರ್ಧರಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಖುಂತಿ ಬ್ಲಾಕ್‌ನ (ತಾಲೂಕು) ಬಾರ್‌ಬಾಂಡಾ ಗ್ರಾಮದ ಮುಂಡಾ ಸಮುದಾಯದ ಸದಸ್ಯರು ತಮ್ಮನ್ನು ‘ಎಸಿ’ (AC) ಸಮುದಾಯ’ ಎಂದು ಕರೆದುಕೊಳ್ಳುತ್ತಾರೆ. ಇಲ್ಲಿ ‘ಎಸಿ’ ಎಂದರೆ ‘Ante Christum’, ಅಂದರೆ ಕ್ರಿಸ್ತಪೂರ್ವ ಎಂದರ್ಥ. ತಾವು ಈ ಭೂಮಿಯ ಅತ್ಯಂತ ಪುರಾತನ ಮೂಲ ನಿವಾಸಿಗಳು ಎಂಬುವುದನ್ನು ಸಾಬೀತುಪಡಿಸಲು ಅಥವಾ ಬಿಂಬಿಸಲು ಅವರು ತಮ್ಮ ಹೆಸರುಗಳ ಮುಂದೆ ‘ಎಸಿ’ ಎಂಬ ಪದವನ್ನು ಬಳಸುತ್ತಾರೆ.

“ನಮಗೆ ಯಾವುದೇ ದಾಖಲೆಗಳು ಬೇಡ, ನಾವು ಏಸುಕ್ರಿಸ್ತನ ಜನನಕ್ಕೂ ಮುಂಚಿನಿಂದಲೂ ಅಸ್ತಿತ್ವದಲ್ಲಿದ್ದೇವೆ. ಇದೇ ಕಾರಣಕ್ಕಾಗಿ ನಾವು ನಮ್ಮ ಹೆಸರುಗಳ ಮುಂದೆ ‘ಎಸಿ’ ಎಂದು ಬಳಸುತ್ತೇವೆ” ಎಂಬುವುದಾಗಿ ಗ್ರಾಮದ ನಿವಾಸಿ ಎಸಿ ಮಂಗ್ರಾ ಮುಂಡಾ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಎಸ್‌ಐಆರ್ ತಿರಸ್ಕರಿಸುತ್ತಿರುವುದು ಸರ್ಕಾರದ ಕಲ್ಯಾಣ ಯೋಜನೆಗಳು ಹಾಗೂ ಗುರುತಿನ ವ್ಯವಸ್ಥೆಗಳಿಂದ ಸಂಪೂರ್ಣವಾಗಿ ದೂರ ಉಳಿಯುವ ಸಮುದಾಯದ ವಿಶಾಲ ನಿರ್ಧಾರದ ಒಂದು ಭಾಗವಾಗಿದೆ. ತಾವು ಆಧಾರ್ ಕಾರ್ಡ್ ಅಥವಾ ಇತರ ಯಾವುದೇ ಗುರುತಿನ ದಾಖಲೆಗಳನ್ನು ಹೊಂದಿಲ್ಲ ಮತ್ತು ಸರ್ಕಾರದ ಪಡಿತರ ಸೌಲಭ್ಯಗಳನ್ನೂ ಪಡೆಯುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಜೇಡಿಮಣ್ಣಿನ ಹೆಂಚಿನ ಛಾವಣಿಗಳನ್ನು ಹೊಂದಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವ ಈ ಸಮುದಾಯದ ಜನರ ದೈನಂದಿನ ಜೀವನವು ಕೃಷಿ, ಕಾಡುಗಳು ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ಅವಲಂಬಿಸಿದೆ. ಇಲ್ಲಿನ ನಿವಾಸಿಗಳು ಅಕ್ಕಿ, ರಾಗಿ, ಕರಿಬೇವು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರು ಹೆಚ್ಚಾಗಿ ಗ್ಯಾಜೆಟ್‌ಗಳು, ಅಡುಗೆ ಅನಿಲ ಮತ್ತು ಇತರ ಆಧುನಿಕ ಸೌಕರ್ಯಗಳಿಂದ ದೂರು ಇದ್ದಾರೆ. ಪುರುಷರು ಬಿಳಿ ಧೋತಿ, ಶರ್ಟ್ ಅಥವಾ ಕುರ್ತಾಗಳು ಮತ್ತು ಸಾಂಪ್ರದಾಯಿಕ ಪೇಠ ಧರಿಸುತ್ತಾರೆ. ಮಹಿಳೆಯರು ಬಿಳಿ ಸೀರೆ ಉಡುತ್ತಾರೆ. ಈ ಸಮುದಾಯದ ಜನರು ತಾವು ಧೂಮಪಾನ ಮಾಡುವುದಿಲ್ಲ ಮತ್ತು ಸ್ಥಳೀಯ ಅಕ್ಕಿ ಬ್ರೂವಾದ ‘ಹರಿಯಾ’ ಕುಡಿಯುವುದಿಲ್ಲ ಎಂದು ಹೇಳಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಅಧಿಕಾರಿಗಳು, ಸ್ಥಳೀಯರನ್ನು ಒಪ್ಪಿಸಲು ಪದೇ ಪದೇ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.

“ನಾವು ಪ್ರಕೃತಿಯ ನಿಯಮಗಳಿಗನುಸಾರವಾಗಿ ಬದುಕುತ್ತೇವೆ ಎಂದು ಅವರು ಹೇಳುತ್ತಾರೆ” ಎಂಬುವುದಾಗಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ದುಲಾರಿ ಹೊರೊ ಎಂಬವರು ತಿಳಿಸಿದ್ದಾರೆ. ಬುಧವಾರದ ಗಡುವಿಗಿಂತ ಮುಂಚಿತವಾಗಿ ಮತದಾರರ ವಿವರಗಳ ನಮೂನೆಯನ್ನು ಸಂಗ್ರಹಿಸಲು ಅವರು ಮತ್ತೊಮ್ಮೆ ಪ್ರಯತ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ವರದಿ ವಿವರಿಸಿದೆ.

“ಈ ಸಮುದಾಯದ ಮಕ್ಕಳು ಶಾಲೆಗೆ ಹೋಗುತ್ತಾರೆ, ಆದರೆ ಅಲ್ಲಿ ನೀಡುವ ಬಿಸಿಯೂಟವನ್ನು ತಿನ್ನುವುದಿಲ್ಲ” ಎಂದು ಹೊರೊ ಅವರು ಹೇಳಿದ್ದಾರೆ. “ಮಕ್ಕಳ ಜನನ ಸಾಮಾನ್ಯವಾಗಿ ಮನೆಗಳಲ್ಲೇ ಆಗುತ್ತದೆ ಮತ್ತು ಅನೇಕ ನವಜಾತ ಶಿಶುಗಳ ಹೆಸರನ್ನು ಸರ್ಕಾರಿ ದಾಖಲೆಗಳಲ್ಲಿ ನೋಂದಾಯಿಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಖುಂತಿ ಬಿಡಿಒ ಜ್ಯೋತಿ ಕುಮಾರಿ ಅವರು ಮಾತನಾಡಿ, ಬಾರ್‌ಬಾಂಡಾ ಗ್ರಾಮದ 27 ಅರ್ಹ ಮತದಾರರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ. ಖುಂತಿ ತಾಲ್ಲೂಕಿನ ಕನಿಷ್ಠ 15 ಬೂತ್‌ಗಳಲ್ಲಿ ಸುಮಾರು 700 ಜನರು ಮತದಾರರ ವಿವರಗಳ ನಮೂನೆಯನ್ನು ಸಲ್ಲಿಸಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು (ಬುಡಕಟ್ಟು ಸಮುದಾಯದ ಜನರು) ಬಹುಮಟ್ಟಿಗೆ ಸರ್ಕಾರದ ಅಧಿಕೃತ ಕಲ್ಯಾಣ ಯೋಜನೆಗಳು ಮತ್ತು ಗುರುತಿನ ವ್ಯವಸ್ಥೆಗಳಿಂದ ಹೊರಗುಳಿದಿದ್ದಾರೆ” ಎಂದು ಕುಮಾರಿ ತಿಳಿಸಿದ್ದಾರೆ.

ಮುಖ್ಯ ಚುನಾವಣಾ ಅಧಿಕಾರಿ ಕೆ. ರವಿ ಕುಮಾರ್ ಅವರು ಮಾತನಾಡಿ, ಅಧಿಕಾರಿಗಳು ಸ್ಥಳೀಯರನ್ನು ಸಂಪರ್ಕಿಸುವ ಪ್ರಯತ್ನವನ್ನು ಮುಂದುವರಿಸಲಿದ್ದಾರೆ ಎಂದು ಹೇಳಿದ್ದಾರೆ. “ಅವರು ಭಾರತದ ನಾಗರಿಕರು, ಹಾಗಾಗಿ ನಾವು ಅವರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಲೇ ಇರುತ್ತೇವೆ” ಎಂದು ತಿಳಿಸಿದ್ದಾರೆ. “ಆದಾಗ್ಯೂ, ಅವರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದಿದ್ದರೆ, ಅಂತಿಮವಾಗಿ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಬಹುದು” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...