Homeಮುಖಪುಟತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

- Advertisement -
- Advertisement -

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ ಮನವಿ ಮಾಡಿದ್ದಾರೆ. ಈ ಪ್ರಸ್ತಾವನೆಯ ಕುರಿತು ಮಾತನಾಡಿದ ರಾಜ್‌ಮೋಹನ್, ರಾಜ್ಯದ ಪ್ರತಿಯೊಂದು ಪ್ರಮುಖ ರಾಜಕೀಯ ಪಕ್ಷವೂ ತನ್ನ ಆಳ್ವಿಕೆಯ ಸಂದರ್ಭದಲ್ಲಿ ಶಾಲಾ ಪೌಷ್ಟಿಕಾಂಶ ಕಾರ್ಯಕ್ರಮವನ್ನು ತನ್ನದೇ ಆದ ರೀತಿಯಲ್ಲಿ ಬಲಪಡಿಸಿದೆ ಎಂದು ಹೇಳಿದ್ದಾರೆ.

ಕಾಮರಾಜರ್ ಅವರು ಮಧ್ಯಾಹ್ನದ ಬಿಸಿಊಟದ ಯೋಜನೆಯನ್ನು ಪರಿಚಯಿಸಿದರು, ಕಲೈಜ್ಞರ್ ಕರುಣಾನಿಧಿ ಅವರು ಮೊಟ್ಟೆಯನ್ನು ಸೇರಿಸಿದರು, ಎಂಜಿಆರ್ ಅದನ್ನು ಪೌಷ್ಟಿಕ ಆಹಾರ ಯೋಜನೆಯಾಗಿ ಪರಿವರ್ತಿಸಿದರು ಮತ್ತು ಜಯಲಲಿತಾ ಅವರು ವಾರದ ಉದ್ದಕ್ಕೂ ಮೊಟ್ಟೆ ವಿತರಣೆಯನ್ನು ವಿಸ್ತರಿಸಿದರು. ಅದೇ ರೀತಿ, ಸರ್ಕಾರಿ ಶಾಲೆಗಳಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ಪರಿಚಯಿಸಬೇಕೆಂಬುದು ನನ್ನ ಆಸೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ ಈ ಪ್ರಸ್ತಾವನೆಯು ಮುಖ್ಯಮಂತ್ರಿ ವಿಜಯ್ ಅವರ ಪರಿಶೀಲನೆಯಲ್ಲಿದ್ದು, ಇನ್ನು ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

ಶಾಲಾ ಪೌಷ್ಟಿಕಾಂಶ ಕಾರ್ಯಕ್ರಮಗಳಲ್ಲಿ ತಮಿಳುನಾಡು ಬಹುಕಾಲದಿಂದಲೂ ಮುಂದಾಳಾಗಿ ಗುರುತಿಸಿಕೊಂಡಿದೆ. 1950ರ ದಶಕದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಕಾಮರಾಜ್ ಅವರು ಮೊದಲ ಬಾರಿಗೆ ಮಧ್ಯಾಹ್ನದ ಬಿಸಿಊಟ ಯೋಜನೆಯನ್ನು ಪ್ರಾರಂಭಿಸಿ, ಭಾರತದ ಅತ್ಯಂತ ಯಶಸ್ವಿ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಕ್ಕೆ ಬಲವಾದ ಅಡಿಪಾಯ ಹಾಕಿದ್ದರು. ನಂತರ ಬಂದ ಸರ್ಕಾರಗಳು ಆಹಾರದ ಪೌಷ್ಟಿಕಾಂಶದ ಮೌಲ್ಯ ಮತ್ತು ಮೆನುವನ್ನು ಸುಧಾರಿಸುವ ಮೂಲಕ ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸಿದವು.

ಸೆಪ್ಟೆಂಬರ್ 2022 ರಲ್ಲಿ DMK ಸರ್ಕಾರವು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರ ನೀಡಲು ಮುಖ್ಯಮಂತ್ರಿಯವರ ಉಪಹಾರ ಯೋಜನೆಯನ್ನು (ನಂತರ ಇದನ್ನು ಪೆರುಂತಲೈವರ್ ಕಾಮರಾಜರ್ ಉಪಹಾರ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು) ಪ್ರಾರಂಭಿಸಿತು. ಮಧ್ಯಾಹ್ನದ ಬಿಸಿಊಟದ ಯೋಜನೆಯ ಜೊತೆಗೆ ಜಾರಿಯಲ್ಲಿರುವ ಈ ಕಾರ್ಯಕ್ರಮವು ಶಾಲಾ ಅವಧಿಯಲ್ಲಿ ಮಕ್ಕಳಿಗೆ ಎರಡು ಬಾರಿಯ ಪೌಷ್ಟಿಕ ಆಹಾರ ಸಿಗುವಂತೆ ನೋಡಿಕೊಳ್ಳುತ್ತಿದೆ.

ರಾಜ್‌ಮೋಹನ್ ಅವರ ಈ ಪ್ರಸ್ತಾವನೆಗೆ ಅನುಮೋದನೆ ದೊರೆತರೆ, ಚಿಕನ್ ಬಿರಿಯಾನಿ ಸೇರ್ಪಡೆಯು ತಮಿಳುನಾಡಿನ ಶಾಲಾ ಊಟದ ಮೆನುವಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಅತ್ಯಂತ ಮಹತ್ವದ ಬದಲಾವಣೆಗಳಲ್ಲಿ ಒಂದಾಗಲಿದೆ. ಇದು ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲೆಗೆ ವಿದ್ಯಾರ್ಥಿಗಳ ಹಾಜರಾತಿಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ರಾಜ್ಯದ ಸಾಂಪ್ರದಾಯಿಕ ಕಲ್ಯಾಣ ಯೋಜನೆಗಳನ್ನು ಮುಂದುವರಿಸಿದಂತಾಗುತ್ತದೆ.

ಇದರ ಜೊತೆಗೆ, ಹಾಲಿ ಇರುವ ಶಾಲಾ ಉಪಹಾರದ ಮೆನುವನ್ನು ಬದಲಾಯಿಸುವ ಯೋಜನೆಗಳನ್ನೂ ಸಚಿವರು ಉಲ್ಲೇಖಿಸಿದ್ದಾರೆ. ಪ್ರಸ್ತುತ ಪ್ರತಿ ವಿದ್ಯಾರ್ಥಿಗೆ ಸುಮಾರು 15 ರೂಪಾಯಿ ಹಂಚಿಕೆ ಮಾಡಲಾಗುತ್ತಿದ್ದು, ಪದೇ ಪದೇ ನೀಡಲಾಗುವ ಗೋಧಿ ಮತ್ತು ರವೆ ಉಪ್ಪಿಟ್ಟಿನ ಬದಲಿಗೆ ಹೆಚ್ಚು ಪೌಷ್ಟಿಕ ಮತ್ತು ರುಚಿಕರವಾದ ಪರ್ಯಾಯ ಆಹಾರಗಳನ್ನು ಒದಗಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...