Homeಮುಖಪುಟಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

- Advertisement -
- Advertisement -

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ ‘ನೀಲಿ’ (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ ಹಾಕಿ ಇಂಡಿಯಾ (HI) ಬಿಡುಗಡೆ ಮಾಡಿರುವ ಹೊಸ ಕಿಟ್, ಕ್ರೀಡಾಪಟುಗಳ ವಲಯದಲ್ಲಷ್ಟೇ ಅಲ್ಲದೆ ರಾಜಕೀಯ ರಂಗದಲ್ಲೂ ದೊಡ್ಡ ಸಂಚಲನ ಸೃಷ್ಟಿಸಿದೆ. ಸಾಂಪ್ರದಾಯಿಕ ಗುರುತನ್ನು ನಾಶಪಡಿಸಿ, ಪ್ರತಿಯೊಂದರಲ್ಲೂ ಕೇಸರಿಮಯ ಮಾಡಲು ಹೊರಟಿರುವ ಆಡಳಿತಾರೂಢ ಬಿಜೆಪಿ ಸಿದ್ಧಾಂತದ ವಿರುದ್ಧ ಪ್ರತಿಪಕ್ಷಗಳು ಹಾಗೂ ಮಾಜಿ ಆಟಗಾರರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?”: ಮಾಜಿ ನಾಯಕ ರಸ್ಕ್ವಿನ್ಹಾ ಆಕ್ರೋಶ

ಭಾರತೀಯ ಹಾಕಿ ತಂಡದ ಈ ಹಠಾತ್ ಬಣ್ಣ ಬದಲಾವಣೆಯನ್ನು ಮಾಜಿ ನಾಯಕ ಹಾಗೂ ಪ್ರಸಿದ್ಧ ಹಾಕಿ ಪಟು ವೀರೆನ್ ರಸ್ಕ್ವಿನ್ಹಾ ತೀವ್ರವಾಗಿ ಖಂಡಿಸಿದ್ದಾರೆ. ‘X’ (ಟ್ವಿಟರ್) ಖಾತೆಯಲ್ಲಿ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಅವರು, “ಹಾಕಿ ಇಂಡಿಯಾದ ಈ ನಿರ್ಧಾರ ನಿಜಕ್ಕೂ ತೀರಾ ಮುಜುಗರ ತರುವಂತದ್ದು. ಭಾರತೀಯ ಹಾಕಿ ತಂಡದ ಪರಂಪರೆ ಮತ್ತು ಗುರುತು ಯಾವಾಗಲೂ ನೀಲಿ ಬಣ್ಣದ್ದಾಗಿದೆ. ನಾನು ವರ್ಷಗಳ ಕಾಲ ಅತ್ಯಂತ ಹೆಮ್ಮೆಯಿಂದ ಆ ನೀಲಿ ಜೆರ್ಸಿ ಧರಿಸಿ ಆಡಿದ್ದೇನೆ. ಅಭಿಮಾನಿಗಳು ಕೂಡ ನಮ್ಮ ತಂಡವನ್ನು ನೀಲಿ ಬಣ್ಣದಲ್ಲೇ ನೋಡಲು ಬಯಸುತ್ತಾರೆ. ಇದ್ದಕ್ಕಿದ್ದಂತೆ ಕಿತ್ತಳೆ ಬಣ್ಣ ತಂದಿದ್ದರ ಹಿಂದಿನ ತರ್ಕವೇನು?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ. ಹೆಮ್ಮೆ ಮತ್ತು ಪರಂಪರೆಯ ವಿಷಯದಲ್ಲಿ ಇಂತಹ ಬದಲಾವಣೆ ಸರಿಯಲ್ಲ ಎಂಬುದು ಅವರ ಸ್ಪಷ್ಟ ನಿಲುವಾಗಿದೆ.

“ಮುಂದೆ ಸೇನಾ ಸಮವಸ್ತ್ರಕ್ಕೂ ಕೇಸರಿ ಹೇರಬಹುದು”: ಪ್ರಿಯಾಂಕಾ ಗಾಂಧಿ, ಪ್ರತಿಪಕ್ಷಗಳ ನೇರ ದಾಳಿ

ಹಾಕಿ ಜೆರ್ಸಿಗೆ ಕೇಸರಿ ಬಣ್ಣ ಬಳಿಯುತ್ತಿದ್ದಂತೆ ಸಂಸತ್ತಿನ ಅಂಗಳದಲ್ಲಿ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಧ್ವನಿಯೆತ್ತಿದ್ದಾರೆ. ದೇಶದ ಪ್ರತಿಯೊಂದು ಸಾಂಸ್ಥಿಕ ಹಾಗೂ ಕ್ರೀಡಾ ಗುರುತಿನ ಮೇಲೆ ಕೇಸರಿ ಬಣ್ಣವನ್ನು ಹೇರಲಾಗುತ್ತಿದೆ ಎಂದು ನಾಯಕರು ದೂರಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಬಗ್ಗೆ ಕಠಿಣವಾಗಿ ಮಾತನಾಡಿ, “ಆರ್‌ಎಸ್‌ಎಸ್ ಪ್ರಭಾವಿತ ಶಿಕ್ಷಣ ನೀತಿ ಮತ್ತು ನಿರ್ಧಾರಗಳ ಮೂಲಕ ಸರ್ಕಾರವು ದೇಶದ ಇತಿಹಾಸ, ಸಮವಸ್ತ್ರಗಳನ್ನು ಬದಲಾಯಿಸಲು ಹೊರಟಿದೆ. ಆದರೆ ಈ ವಿಷಯಗಳಲ್ಲಿ ದೇಶದ ಯುವಜನತೆಯ ನಿಜವಾದ ಅಭಿಪ್ರಾಯವೇನು ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಈ ದೇಶದ ಸ್ವಾತಂತ್ರ್ಯ ಸಂಗ್ರಾಮವು ಸತ್ಯ ಮತ್ತು ಅಹಿಂಸೆಯ ತತ್ವಗಳ ಮೇಲೆ ನಡೆದಿದೆ. ಆ ಇತಿಹಾಸದಲ್ಲಿ ಆರ್‌ಎಸ್‌ಎಸ್ ಎಲ್ಲೂ ಇರಲಿಲ್ಲ. ದೇಶದ ಜನರಿಗೆ ಸತ್ಯ ಏನೆಂದು ತಿಳಿದಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನ ನಿಜವಾದ ಉದ್ದೇಶವೇನೆಂಬುದು ಈಗ ಅವರಿಗೆ ಸ್ಪಷ್ಟವಾಗಿ ಅರ್ಥವಾಗುತ್ತಿದೆ,” ಎಂದು ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಮಾತನಾಡಿ, “ಇಂದು ಅವರು ಹಾಕಿಯಲ್ಲಿ ಬಣ್ಣ ಬದಲಾಯಿಸಿದ್ದಾರೆ, ನಾಳೆ ಭಾರತೀಯ ಸೈನ್ಯದ ಸಮವಸ್ತ್ರಕ್ಕೂ ಇದೇ ರೀತಿ ಕೇಸರಿ ಬಣ್ಣ ಹೇರಿದರೂ ಅಚ್ಚರಿಯಿಲ್ಲ. ಯಾರೂ ಇವರನ್ನು ನಂಬಲು ಸಾಧ್ಯವಿಲ್ಲ, ಅವರಿಗೆ ಪ್ರತಿಯೊಂದರಲ್ಲೂ ಕೇಸರಿಯೇ ಬೇಕು. ಪ್ರತಿಯೊಂದಕ್ಕೂ ತನ್ನದೇ ಆದ ಇತಿಹಾಸ ಮತ್ತು ಮಹತ್ವವಿದೆ. ಅಧಿಕಾರಕ್ಕೆ ಬಂದ ತಕ್ಷಣ ಇಂತಹ ಚಿಹ್ನೆಗಳನ್ನು ಬದಲಾಯಿಸುವುದು ಅತ್ಯಂತ ದುರದೃಷ್ಟಕರ,” ಎಂದಿದ್ದಾರೆ.

ಮತ್ತೊಬ್ಬ ಹಿರಿಯ ನಾಯಕ ತಾರಿಕ್ ಅನ್ವರ್ ಮಾತನಾಡಿ, “ಇದು ಬಿಜೆಪಿಯ ಸಂಕುಚಿತ ಮನಸ್ಥಿತಿಯ ಸಂಕೇತ. ಶಿಕ್ಷಣವಿರಲಿ ಅಥವಾ ಕ್ರೀಡೆಯಿರಲಿ, ಎಲ್ಲೆಡೆ ತಮ್ಮ ಸಿದ್ಧಾಂತವನ್ನು ಹೇರಲಾಗುತ್ತಿದೆ. ಮೈದಾನದಲ್ಲಿ ಪ್ರದರ್ಶನ ಮುಖ್ಯವೇ ಹೊರತು ಧಾರ್ಮಿಕ ಬಣ್ಣಗಳಲ್ಲ. ಸಾಂಪ್ರದಾಯಿಕ ನೀಲಿ ಬಣ್ಣವನ್ನು ಬದಲಾಯಿಸಿ ಧಾರ್ಮಿಕ ಬಣ್ಣ ಹೇರುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇತ್ತ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟರ್ಕಿ, “ಆಟದ ಮೈದಾನದ ಟರ್ಫ್ ನೀಲಿ ಬಣ್ಣದಲ್ಲಿರುವುದರಿಂದ ಆಟಗಾರರ ಜೆರ್ಸಿಯೂ ನೀಲಿಯಾಗಿದ್ದರೆ ಗೋಚರತೆಯ (Visibility) ಸಮಸ್ಯೆ ಉಂಟಾಗುತ್ತದೆ ಎಂದು ತರಬೇತುದಾರರು ಹೇಳಿದ್ದರು. ಆದ್ದರಿಂದ ಈ ಬದಲಾವಣೆ ಮಾಡಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಆದರೆ, ದಶಕಗಳಿಂದ ಕ್ರೀಡಾಭಿಮಾನಿಗಳ ಮನಸ್ಸಿನಲ್ಲಿ ನೆಲೆಸಿದ್ದ ‘ಮೆನ್ ಇನ್ ಬ್ಲೂ’ ಗುರುತನ್ನು ಅಳಿಸಿ ಕೇಸರಿಮಯ ಮಾಡಲು ಹೊರಟಿರುವ ಸರ್ಕಾರದ ನಡೆಗೆ ಸಾರ್ವಜನಿಕ ವಲಯದಲ್ಲೂ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...