Homeಕರ್ನಾಟಕJNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

JNUಗೆ ಭೇಟಿ ಮತ್ತು ಬೆಂಬಲ : ದೀಪಿಕಾ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರ.. ಸತತ ಟಾಪ್‌ ಟ್ರೆಂಡಿಂಗ್‌

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ಹಿಂಸೆ ಖಂಡಿಸಿ ಜೆಎನ್‌ಯುಗೆ ತೆರಳಿ ಹೋರಾಟನಿರತ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ ಖ್ಯಾತ ಚಿತ್ರನಟಿ ದೀಪಿಕಾ ಪಡುಕೋಣೆಯ ದಿಟ್ಟತನಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅಲ್ಲದೇ ನಿನ್ನೆ ಸಂಜೆಯಿಂದ ದೀಪಿಕಾ ಹೆಸರು ಟ್ವಿಟ್ಟರ್‌ನಲ್ಲಿ ಸತತವಾಗಿ ಟಾಪ್‌ ಟ್ರೆಂಡಿಂಗ್‌‌ನಲ್ಲಿದೆ.

ಜೆಎನ್‌ಯು ಭೇಟಿಗೂ ಮುನ್ನ ದೀಪಿಕಾ ಜೆಎನ್‌ಯು ಹಿಂಸೆ ಖಂಡಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ “ಈ ದಾಳಿಗಳಿಂದ ನಾವು ಭಯಗೊಂಡಿಲ್ಲ ಎಂಬುದಕ್ಕೆ ಹೆಮ್ಮೆಯಾಗುತ್ತದೆ” ಎಂದು ಪ್ರತಿಕ್ರಿಯಿಸಿದ್ದರು.

ನಿಮ್ಮ ಒಗ್ಗಟ್ಟು ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮನ್ನು ಇಂದು ನಿಂದಿಸಬಹುದು ಅಥವಾ ಟ್ರೋಲ್ ಮಾಡಬಹುದು, ಆದರೆ ನಿಮ್ಮ ಧೈರ್ಯ ಮತ್ತು ಭಾರತದ ಕಲ್ಪನೆಯ ಪರ ನಿಂತಿದ್ದಕ್ಕಾಗಿ ಇತಿಹಾಸವು ನಿಮ್ಮನ್ನು ನೆನಪಿಸಿಕೊಳ್ಳುತ್ತದೆ. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ ದೀಪಿಕಾ ಪಡುಕೋಣೆ ಎಂದು ಕನ್ಹಯ್ಯ ಕುಮಾರ್‌ ತಿಳಿಸಿದ್ದಾರೆ.

ದೀಪಿಕಾ ಪಡುಕೋಣೆಯ ಧೈರ್ಯ ಮತ್ತು ಬದ್ಧತೆಯನ್ನು ಮೆಚ್ಚಲೇಬೇಕು. ಜೆಎನ್‌ಯು ಪ್ರವೇಶಿಸಿ ದಾಳಿಗೆ ಒಳಗಾದವರ ಜತೆ ನಿಲ್ಲುವುದು ಅಷ್ಟು ಸುಲಭವಲ್ಲ, ಅದೂ ದೀಪಿಕಾರಂಥ ಸೆಲೆಬ್ರಿಟಿಗಳಿಗೆ.‌ ದ್ವೇಷಭಕ್ತರು ಇನ್ನು ಮುಂದೆ ದೀಪಿಕಾ ಅವರನ್ನು ತುಳಿಯಲು ಸಾಧ್ಯವಿರುವ ಎಲ್ಲ‌ ಮಾರ್ಗಗಳನ್ನೂ ತುಳಿಯಲಿದ್ದಾರೆ. ಇದು ದೀಪಿಕಾ ಅವರಿಗೆ ಗೊತ್ತಿಲ್ಲದ ವಿಷಯವೇನಲ್ಲ. ನನ್ನ ಸಿನಿಮಾ ಬಿಡುಗಡೆಗೆ ಸಿದ್ಧವಿದೆ, ಮಾತಾಡಿದರೆ ನಿರ್ಮಾಪಕರಿಗೆ ನಷ್ಟ ಎಂದು ಅಜಯ್ ದೇವಗನ್‌ ಇತ್ತೀಚಿಗೆ ಹೇಳಿದ್ದ ನೆನಪು.‌ ಖಾನ್ ಗಳ‌ ಪೈಕಿ ನಿಜಕ್ಕೂ ಮಾತನಾಡುವ ಎದೆಗಾರಿಕೆ‌ ಇದ್ದ ಅಮೀರ್ ಖಾನ್‌ ಕೂಡ‌ ಸುಮ್ಮನಿದ್ದಾರೆ.‌ ಇಂಥ ಸಂದರ್ಭದಲ್ಲಿ ದೀಪಿಕಾ ತಮ್ಮ ಜೀವನದ ದೊಡ್ಡ ರಿಸ್ಕ್ ತೆಗೆದುಕೊಂಡಿದ್ದಾರೆ. ಅವರ ಕುರಿತು ಗೌರವದ ಜತೆ ಹೆಮ್ಮೆ ಮೂಡುತ್ತಿದೆ ಎಂದು ಪತ್ರಕರ್ತರಾದ ದಿನೇಶ್‌ ಕುಮಾರ್‌ ದಿನೂ ಅಭಿಪ್ರಾಯಪಟ್ಟಿದ್ದಾರೆ.

ದೀಪಿಕಾ ಪಡುಕೋಣೆ, ಮುದೊಂದು ದಿನ ಭಾರತದ ಇತಿಹಾಸ ಸದಾಕಾಲವೂ ನಿಮ್ಮನ್ನು ನೆನಪಿನಲ್ಲಿಟ್ಟಿರುತ್ತದೆ. ಸತ್ಯದ ಜೊತೆ ನ್ಯಾಯದ ಜೊತೆ ನಿಂತ ನಿಮ್ಮ ನಿಲುವಿನ ಕಾರಣಕ್ಕಾಗಿ, ಧನ್ಯವಾದ ಎಂದು ಶಂಕರ್‌ ಸಿಹಿಮೂಗೆ ತಿಳಿಸಿದ್ದಾರೆ.

ಜೆ ಎನ್ ಯು ಪರವಾಗಿ ತನ್ನ ಬೆಂಬಲವನ್ನು ಘೋಷಿಸಲು ಇವತ್ತು ದೀಪಿಕಾ ಪಡುಕೋಣೆ ಜೆ ಎನ್ ಯುವಿಗೆ ಬಂದಿದ್ದರು. ಅವರಿಗೆ ಕೃತಜ್ಞತೆಗಳು. ಜೆ ಎನ್ ಯು ಹೊಸ ತಲೆಮಾರಿನ ಕನಸು. ಅದನ್ನು ಯಾರೂ ನಾಶ ಮಾಡಲಾರರು ಎಂದು ಅಲ್ಲಿಯ ಪ್ರಾಧ್ಯಾಪಕರಾದ ಪ್ರೊ.ಪುರುಷೋತ್ತಮ್‌ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಜನವರಿ 10ರಂದು ದೀಪಿಕಾ ಪಡುಕೋಣೆಯವರ ಮಹತ್ವದ ಚಪಾಕ್‌ ಚಿತ್ರ ಬಿಡುಗಡೆಯಾಗುತ್ತಿದೆ. ಅವರು ಜೆಎನ್‌ಯುಗೆ ಬೆಂಬಲ ಕೊಟ್ಟಿದ್ದಕ್ಕೆ ಆ ಚಿತ್ರವನ್ನು ನೋಡಬಾರದು ಎಂದು ಕೆಲವರು ಬಲಪಂಥೀಯರು ಹುಯಿಲು ಹಬ್ಬಿಸಲು ಮುಂದಾಗಿದ್ದಾರೆ. ಅದಕ್ಕೆ ಸಾಕಷ್ಟು ವಿರೋಧ ಬಂದಿದ್ದು, ಲಕ್ಷಾಂತರ ಜನ ದೀಪಿಕಾ ಬೆಂಬಲಕ್ಕೆ ನಿಂತಿದ್ದಾರೆ. ಅದಕ್ಕೆ ಖ್ಯಾತ ಯುವಚಿಂತಕ ಧೃವ್‌ ರಾಠೀ ಕೊಟ್ಟ ಉತ್ತರ ಕೆಳಗಿನಂತಿದೆ.

ಭಕ್ತರು ಬಹಿಷ್ಕರಿಸಲು ಪ್ರಯತ್ನಿಸಿದ ಚಿತ್ರಗಳ ಪಟ್ಟಿ

– ಪದ್ಮಾವತ್ (₹ 580 ಕೋಟಿ ಲಾಭ)
– ಪಿಕೆ (₹ 850 ಕೋಟಿ ಲಾಭ)
– ದಂಗಲ್ (2000 ಕೋಟಿ ಲಾಭ)
– ವೀರೆ ಡಿ ವೆಡ್ಡಿಂಗ್ (₹ 140 ಕೋಟಿ ಲಾಭ)

ಈಗ ಚಪಾಕ್‌ ಸಿನೆಮಾ ಕೂಡ ಸೂಪರ್ ಸೂಪರ್ ಹಿಟ್ ಆಗಲು ಕಾಯಿರಿ.. ಎಂದು ಛೇಡಿಸಿದ್ದಾರೆ.

ಆಕಾಶ್‌ ಬ್ಯಾನರ್ಜಿಯವರು ಕಾಳಜಿಯುತ ಮಾತುಗಳು ಈ ಟ್ವೀಟ್‌ನಲ್ಲಿದ್ದರೆ ಮತ್ತೊಬ್ಬ ಕನ್ನಡಿಗ ಡೂಡಲ್‌ಗಾರ ಅರವಿಂದ ತೆಗ್ಗಿನಮಠ ರಚಿಸಿದ ಸರಳ ಚಿತ್ರ ವೈರಲ್‌ ಆಗಿದೆ.

ಇನ್ನು ನಿನ್ನೆ ಸಂಜೆಯಿಂದ ಇಂದಿನವರೆಗೂ ಟ್ವಿಟ್ಟರ್‌ ಮತ್ತು ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ತುಂಬಿಹೋಗಿದ್ದಾರೆ. ಟಾಪ್‌ ಟ್ರೆಂಡಿಂಗ್‌ನಲ್ಲಿದ್ದು ಮನೆಮಾತಾಗಿದ್ದಾರೆ. ಆಕೆ ಕನ್ನಡತಿಯಾಗಿರುವುದರಿಂದಲೂ ಕನ್ನಡಿಗರೂ ಸಹ ಪ್ರೀತಿಯಿಂದ ಅಭಿನಂದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...