Homeಮುಖಪುಟಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ 'ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ' ಎಂದು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೊದಲ್ಲಿ, ತಾನು ಇನ್ನೂ ಅಪ್ರಾಪ್ತ ವಯಸ್ಕಳಾಗಿದ್ದು, ಪ್ರತಿಭಟನೆಯಲ್ಲಿದ್ದ ಜನರ ಪ್ರಭಾವಕ್ಕೆ ಒಳಗಾಗಿ ಪ್ರಧಾನಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾಗಿ ಆಕೆ ಹೇಳಿಕೊಂಡಿದ್ದಾಳೆ ಎಂದು ಪಿಟಿಐ ವರದಿ ಮಾಡಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಆಕೆಯ ವಯಸ್ಸು 25 ವರ್ಷ ಎಂದು ಉಲ್ಲೇಖಿಸಲಾಗಿದ್ದರೆ, ಕ್ಷಮೆಯಾಚನೆಯ ವಿಡಿಯೋದಲ್ಲಿ ಆಕೆ ತನಗೆ ಕೇವಲ 15 ವರ್ಷ ವಯಸ್ಸು ಎಂದು ಹೇಳಿಕೊಂಡಿದ್ದಾಳೆ. ನನಗೆ ಕೇವಲ 15 ವರ್ಷ. ನಾನು ಮಾಡಿದ್ದು ಕ್ಷಮೆಗೆ ಅರ್ಹವಲ್ಲದ್ದು, ನಾನು ಅತ್ಯಂತ ಕೆಟ್ಟದಾಗಿ ಮಾತನಾಡಿದ್ದೇನೆ ಎಂದಿರುವ ಆಕೆ, ಇದನ್ನು ತನ್ನ ಮೊದಲ ಮತ್ತು ಕೊನೆಯ ತಪ್ಪು ಎಂದು ಹೇಳಿದ್ದಾಳೆ. ಅಲ್ಲದೆ, ನಾನು ಇಡೀ ದೇಶದ ಕ್ಷಮೆ ಕೇಳುತ್ತೇನೆ. ನನಗೆ ತುಂಬಾ ನಾಚಿಕೆಯಾಗುತ್ತಿದೆ, ನನ್ನನ್ನು ನಾನೇ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಿನಂತಿಸಿದ್ದಾಳೆ. ಆದರೆ ಈ ವಿಡಿಯೋದ ನೈಜತೆಯನ್ನು ಸ್ವತಂತ್ರವಾಗಿ ದೃಢೀಕರಿಸಲು ಸಾಧ್ಯವಾಗಿಲ್ಲ.

ಜುಲೈ 23 ರಂದು ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ನೋಯ್ಡಾ ಪೊಲೀಸರು ಜೀರೋ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಆ ನಂತರ ಈ ಜೀರೋ ಎಫ್‌ಐಆರ್ ಅನ್ನು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರತಿಭಟನಾಕಾರ ಬಾಲಕಿಯ ವಯಸ್ಸನ್ನು ಪರಿಶೀಲಿಸಲು ದೆಹಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಇದೀಗ ಕ್ಷಮೆಯಾಚನೆಯ ವೀಡಿಯೊ ಹೊರಬಂದಿರುವುದರಿಂದ, ಮುಂದಿನ ತನಿಖೆಯನ್ನು ಹೇಗೆ ನಡೆಸಬೇಕು ಎಂಬುದರ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಈ ವೀಡಿಯೊದಲ್ಲಿರುವ ಹೇಳಿಕೆಗಳ ಸತ್ಯಾಸತ್ಯತೆಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಸ್ವತಂತ್ರವಾಗಿ ದೃಢೀಕರಿಸಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹುಡುಕಿದರೂ ಯಾವುದೇ ದೃಢೀಕೃತ ಖಾತೆ ಸಿಕ್ಕಿಲ್ಲ ಹಾಗೂ ಈ ಪ್ರಕರಣದಲ್ಲಿ ಆ ಯುವತಿಯಿಂದ ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ ಎಂದು ವರದಿ ಹೇಳಿದೆ.

ಮತ್ತೊಂದೆಡೆ, ಶುಕ್ರವಾರ ರಾತ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಬಳಸಿದ ನಿಂದನೀಯ ಭಾಷೆ ಸಾಂಸ್ಕೃತಿಕ ಆಘಾತ ತಂದಿದೆ. ಆದಾಗ್ಯೂ, ದಾರಿ ತಪ್ಪಿದ ಯುವಜನತೆಯನ್ನು ಸಮಾಜವು ತಿದ್ದಿ ಸರಿದಾರಿಗೆ ತರಬೇಕು ಮತ್ತು ಆ ರೀತಿ ತನಗೆ ನಿಂದಿಸಿದ ‘ದಾರಿ ತಪ್ಪಿದ ಯುವಕರನ್ನು’ ತಾನು ಕ್ಷಮಿಸಿರುವುದಾಗಿ ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಪ್ರಧಾನಿ ಮೋದಿ, ಪ್ರತಿಭಟನೆಯ ಸಮಯದಲ್ಲಿ ಕೆಲವು ‘ಕಿಡಿಗೇಡಿ ಮಕ್ಕಳು’ ತಮ್ಮನ್ನು ಮತ್ತು ತಮ್ಮ ಮೃತ ತಾಯಿಯನ್ನು ಗುರಿಯಾಗಿಸಿಕೊಂಡು ಅತ್ಯಂತ ಕೀಳು ಮಟ್ಟದ ಮಾತುಗಳನ್ನು ಬಳಸಿದ್ದಾರೆ. ಆದರೆ ನಿಂದನೆಗಳಿಂದ ಎಂದಿಗೂ ಸಮಸ್ಯೆಗಳು ಬಗೆಹರಿಯುವುದಿಲ್ಲ, ಯೌವನದಲ್ಲಿ ಮಾಡಿದ ತಪ್ಪುಗಳನ್ನು ಸರಿಯಾದ ಮಾರ್ಗದರ್ಶನದ ಮೂಲಕ ತಿದ್ದಬೇಕು ಎಂದಿದ್ದಾರೆ. ಯುವಕರನ್ನು ಶಿಕ್ಷಿಸುವುದು, ಅವರನ್ನು ಕೋರ್ಟ್ ಮೆಟ್ಟಿಲೇರಿಸುವುದು ಅಥವಾ ತೊಂದರೆ ಕೊಡುವುದರಿಂದ ಪರಿಸ್ಥಿತಿ ಬದಲಾಗುವುದಿಲ್ಲ. ಹೀಗಾಗಿ ಅವರನ್ನು ಕ್ಷಮಿಸಲು ತಾನು ಬಯಸುತ್ತಿದ್ದು, ಸಮಾಜವೂ ಅವರಿಗೆ ಸರಿಯಾದ ದಾರಿ ತೋರಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. ನೀಟ್ ಅಕ್ರಮಗಳ ಕುರಿತ ಈ ಸರಣಿ ಪ್ರತಿಭಟನೆಗಳ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...