Homeಮುಖಪುಟಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು ಮಾಡಿದರೆ ಅಪರಾಧ ಎನ್ನುವ ಹೊಸ ರಾಜಕೀಯ ಗಾದೆಗೆ ನರೇಂದ್ರ ಮೋದಿಯವರೇ ಜೀವಂತ ಉದಾಹರಣೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್’ (X) ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿಯವರ ಇತ್ತೀಚಿನ ಹೇಳಿಕೆಗಳು ಹಾಗೂ ಪೋಸ್ಟ್‌ಗಳನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.

ಬೆಂಕಿ ಹಚ್ಚಿದವನೇ ಬಕೆಟ್ ಹಿಡಿದಂತೆ

ನನ್ನನ್ನೂ, ನನ್ನ ತಾಯಿಯನ್ನೂ ನಿಂದಿಸಿದವರನ್ನು ಕ್ಷಮಿಸಿದ್ದೇನೆ ಎಂದು ಹೇಳುತ್ತಿರುವ ಪ್ರಧಾನಿಯವರೇ, ದಶಕಗಳ ಕಾಲ ಮಹಿಳೆಯರ ವಿರುದ್ಧ ನಡೆದ ಅವಹೇಳನಕಾರಿ ಹೇಳಿಕೆಗಳು ಹಾಗೂ ವಿರೋಧಿಗಳ ಕುಟುಂಬಗಳ ಮೇಲಿನ ನಿಂದನೆಗೆ ನೀವು ಮೌನವಾಗಿದ್ದಿರಿ. ಇಂದು ಮಾತೃಗೌರವದ ಪ್ರವಚನ ಮಾಡುತ್ತಿರುವುದು ನೋಡಿದರೆ ‘ಬೆಂಕಿ ಹಚ್ಚಿದವನೇ ಬಕೆಟ್ ಹಿಡಿದು ಅಗ್ನಿಶಾಮಕನಂತೆ ಪೋಸ್ ಕೊಟ್ಟ ಹಾಗಿದೆ ಎಂದು ಹರಿಪ್ರಸಾದ್ ಎಕ್ಸ್‌ನಲ್ಲಿ ಟೀಕಿಸಿದ್ದಾರೆ.

ಗಾಂಧಿ ಕುಟುಂಬದ ತ್ಯಾಗ ಮತ್ತು ಕರುಣೆಯನ್ನು ನೆನಪಿಸಿದ ಹರಿಪ್ರಸಾದ್, ಅಜ್ಜಿ ಇಂದಿರಾ ಗಾಂಧಿಯವರ ದೇಹವನ್ನು ಗುಂಡುಗಳಿಂದ ಛಿದ್ರಗೊಳಿಸಿದ ಹತ್ಯೆಯ ನೋವು ಹಾಗೂ ತಂದೆ ರಾಜೀವ್ ಗಾಂಧಿಯವರ ದೇಹವನ್ನೇ ಛಿದ್ರಗೊಳಿಸಿದ ಭೀಕರ ನೋವನ್ನು ಅನುಭವಿಸಿದ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು, ‘ನನಗೆ ಯಾರ ಮೇಲೂ ಕೋಪ ಅಥವಾ ದ್ವೇಷವಿಲ್ಲ ನಾನು ಕ್ಷಮಿಸಿದ್ದೇನೆ’ ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನು ತಂದೆಯ ಹಂತಕಿಯನ್ನೇ ಜೈಲಿನಲ್ಲಿ ಭೇಟಿಯಾದ ಪ್ರಿಯಾಂಕಾ ಗಾಂಧಿ ಅವರು ಪ್ರತೀಕಾರಕ್ಕಿಂತ ಮಾನವೀಯತೆಯನ್ನು ಆರಿಸಿಕೊಂಡರು. ಅದು ಕ್ಯಾಮೆರಾ ಮುಂದೆ ನಿರ್ಮಿಸಿದ ‘ರೀಲ್’ ಅಲ್ಲ, ತಮ್ಮ ಬದುಕನ್ನೇ ಛಿದ್ರಗೊಳಿಸಿದ ದುರಂತದ ನಡುವೆಯೂ ದ್ವೇಷವನ್ನು ನಿರಾಕರಿಸಿದ ನೈಜ ಸಂಸ್ಕಾರ ಎಂದು ತಿಳಿಸಿದ್ದಾರೆ.

ಅಂದು ಮಹಿಳೆಯರ ನಿಂದನೆಯಾದಾಗ ಆತ್ಮಸಾಕ್ಷಿ ಎಲ್ಲಿತ್ತು?

ಪ್ರಧಾನಿ ಮೋದಿಯವರ ಹಳೆಯ ಹೇಳಿಕೆಗಳನ್ನು ನೆನಪಿಸಿ ಪ್ರಶ್ನಿಸಿರುವ ಅವರು:

  • ಸೋನಿಯಾ ಗಾಂಧಿಯವರನ್ನು ‘ಜರ್ಸಿ ಹಸು’ ಎಂದು ನಿಂದಿಸಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು?
  • ತುಂಬಿದ ಸಂಸತ್ತಿನಲ್ಲಿ ಸಂಸದೆ ರೇಣುಕಾ ಚೌಧರಿಯವರ ನಗುವನ್ನು ‘ಶೂರ್ಪನಖಿ’ ಪಾತ್ರದ ನಗುವಿಗೆ ಹೋಲಿಸಿ ಇಡೀ ಸದನವನ್ನು ನಗಿಸಿದಾಗ ಮಹಿಳೆಯ ಗೌರವ ನೆನಪಾಗಲಿಲ್ಲವೇ?
  • ಸುನಂದಾ ಪುಷ್ಕರ್ ಅವರನ್ನು ‘50 ಕೋಟಿ ರೂ. ಗರ್ಲ್‌ಫ್ರೆಂಡ್’ ಎಂದು ಸಾರ್ವಜನಿಕ ಸಭೆಯಲ್ಲಿ ಹೀಯಾಳಿಸಿದಾಗ ತಾಯಿ, ಸಹೋದರಿ, ಮಹಿಳಾ ಮರ್ಯಾದೆಯ ಪ್ರವಚನಗಳು ಯಾವ ಗುಹೆಯಲ್ಲಿ ತಪಸ್ಸು ಮಾಡುತ್ತಿದ್ದವು ಪ್ರಧಾನಿಗಳೇ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
ಟ್ರೋಲ್ ಪಟಾಲಂಗೆ ಎಂದಾದರೂ ಕಿವಿಮಾತು ಹೇಳಿದ್ದೀರಾ?

2014ರ ನಂತರ ನಿಮ್ಮ ಹೆಸರಿನಲ್ಲಿ ಬೆಳೆದ ಸಾಮಾಜಿಕ ಜಾಲತಾಣದ ಅಂಧಭಕ್ತ ಪಡೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರ ತಾಯಿ, ಪತ್ನಿ ಮತ್ತು ಮಕ್ಕಳ ಚಿತ್ರಗಳನ್ನು ಮಾರ್ಫ್ ಮಾಡಿ, ಅತ್ಯಂತ ಕೀಳು ಭಾಷೆಯಲ್ಲಿ ನಿಂದಿಸುತ್ತಲೇ ಬಂದಿದೆ. ಆ ವಿಕೃತಿಗಳಿಗೆ ಎಂದಾದರೂ ಒಂದು ಕಿವಿಮಾತು ಹೇಳಿದ್ದೀರಾ? ‘ಮಹಿಳೆಯರನ್ನು ನಿಂದಿಸಬೇಡಿ’ ಎಂದು ನಿಮ್ಮ ಬೆಂಬಲಿಗರಿಗೆ ಎಂದಾದರೂ ಒಂದೇ ಒಂದು ವಿಡಿಯೊ/ರೀಲ್ ಮಾಡಿದ್ದೀರಾ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ತಾಯಿಯ ಹೆಸರನ್ನು ರಾಜಕೀಯ ಮೈಲೇಜ್‌ಗೆ ಬಳಸುವುದು ನಿರ್ದಯ ವ್ಯಾಪಾರ

“ನೋಟು ಅಮಾನ್ಯೀಕರಣದ ಸಂಕಷ್ಟದ ಸಮಯದಲ್ಲಿ ಬ್ಯಾಂಕಿನ ಸಾಲಿನಲ್ಲಿ ನಿಂತಿದ್ದ ನಿಮ್ಮ ವಯೋವೃದ್ಧ ತಾಯಿಯ ಚಿತ್ರವೂ ರಾಜಕೀಯ ಪ್ರಚಾರದ ಸರಕಾಯಿತು. ಈಗ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಅವರ ಮೇಲಿನ ಲಾಠಿಪ್ರಹಾರ, ಬಂಧನ, ಪ್ರಕರಣ ಮತ್ತು ಶಿಕ್ಷಣ ವ್ಯವಸ್ಥೆಯ ವೈಫಲ್ಯದಿಂದ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಮತ್ತೆ ತಾಯಿಯ ಹೆಸರನ್ನೇ ಭಾವನಾತ್ಮಕ ಗುರಾಣಿಯನ್ನಾಗಿ ಬಳಸುತ್ತಿದ್ದೀರಿ. ತಾಯಿಯ ಮೇಲಿನ ಪ್ರೀತಿ ಪವಿತ್ರವಾದದ್ದು, ಆದರೆ ತಾಯಿಯ ಹೆಸರನ್ನು ಪ್ರತಿಯೊಂದು ರಾಜಕೀಯ ಸಂಕಷ್ಟದಲ್ಲೂ ಮತಗಳ ಮೈಲೇಜ್‌ಗಾಗಿ ಬಳಸುವುದು ಪ್ರೀತಿಯಲ್ಲ, ಅದು ಅತ್ಯಂತ ನಿರ್ದಯವಾದ ರಾಜಕೀಯ ವ್ಯಾಪಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿ

ವಿದ್ಯಾರ್ಥಿಗಳ ಭವಿಷ್ಯವನ್ನೇ ನಾಶ ಮಾಡಿರುವ ಬಿಜೆಪಿ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಕ್ಷಮೆಯ ಅಗತ್ಯವೂ ಇಲ್ಲ, ಅನಿವಾರ್ಯತೆಯೂ ಇಲ್ಲ. ನಿಮ್ಮ ನಾಟಕೀಯತೆಯನ್ನು ಯುವಜನತೆ ಈಗಾಗಲೇ ತಿರಸ್ಕರಿಸಿದ್ದಾರೆ. ಕೂಡಲೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯಿರಿ, ಪೊಲೀಸರ ದೌರ್ಜನ್ಯಕ್ಕೆ ಹೊಣೆ ಹೊತ್ತುಕೊಂಡು ದೇಶದ ವಿದ್ಯಾರ್ಥಿಗಳ ಎದುರು ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.

ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವುದು ಕ್ಷಮೆಯಲ್ಲ, ಅಧಿಕಾರದ ಕ್ರೌರ್ಯವನ್ನು ನಿಲ್ಲಿಸುವುದೇ ನಿಜವಾದ ಕ್ಷಮೆ. ತನ್ನ ನಾಲಿಗೆಯಿಂದ ಮಹಿಳೆಯರನ್ನು ಅವಮಾನಿಸಿ, ತನ್ನ ಬೆಂಬಲಿಗರ ನಾಲಿಗೆಯ ವಿಷಕ್ಕೆ ಮೌನವಾಗಿದ್ದು, ಈಗ ಮಾತೃಭಕ್ತಿಯ ಮುಖವಾಡ ಧರಿಸುವ ಈ ಭಂಡತನವನ್ನು ದೇಶ ಗುರುತಿಸಿದೆ. ನಿಮ್ಮ ರೀಲ್‌ಗಳಿಗೆ ನಿಮ್ಮ ಅಂಧಭಕ್ತರು ಮೆಚ್ಚುಗೆ ಸೂಚಿಸಬಹುದು, ಆದರೆ ಇತಿಹಾಸ ಮಾತ್ರ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬಿ.ಕೆ. ಹರಿಪ್ರಸಾದ್ ತಮ್ಮ ಪೋಸ್ಟ್ ಮುಕ್ತಾಯಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...