HomeಅಂಕಣಗಳುKarnataka against SIRSIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ ಶೇಕಡಾ 100ರಷ್ಟು ಪೂರ್ಣಗೊಂಡಿದೆ ಎಂದು ಚುನಾವಣಾ ಅಧಿಕಾರಿಗಳು ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಸ್ವಂತ ಮನೆಯಲ್ಲಿರುವ ಅರ್ಹ ಮತದಾರರಿಗೆ ಯಾವುದೇ ಮಾಹಿತಿ ನೀಡದೇ, ಅವರ ಅನುಮತಿ ಅಥವಾ ದೃಢೀಕರಣ ಪಡೆಯದೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಿ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇಂತಹದೊಂದು ಪ್ರತ್ಯಕ್ಷ ಸಾಕ್ಷಿ ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯ 273ನೇ ಮತಗಟ್ಟೆ ವ್ಯಾಪ್ತಿಯಲ್ಲಿ ಬಯಲಾಗಿದೆ. ಹಲವು ವರ್ಷಗಳಿಂದ ಸ್ವಂತ ಮನೆಯಲ್ಲಿ ವಾಸಿಸುತ್ತಿರುವ ಒಂದೇ ಕುಟುಂಬದ ನಾಲ್ವರು ಮತದಾರರಾದ ಪೃಥ್ವಿರಾಜು, ಅವರ ತಾಯಿ, ಸೋದರ ಅತ್ತೆ ಹಾಗೂ ಮಾವ ಅವರಿಗೆ ಈವರೆಗೆ ಎಸ್‌ಐಆರ್ ಎನ್ಯುಮರೇಷನ್ ನಮೂನೆ ತಲುಪಿಯೇ ಇಲ್ಲ. ಆದರೆ, ಎಸ್‌ಐಆರ್ ಆನ್‌ಲೈನ್ ಡೇಟಾದಲ್ಲಿ ಅವರೆಲ್ಲರೂ ಖಾಯಂ ಸ್ಥಳಾಂತರಗೊಂಡಿದ್ದಾರೆ ಎಂದು ಅಪ್‌ಡೇಟ್‌ ಮಾಡಿ ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡಲಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿ, ಸಂತ್ರಸ್ತ ಮತದಾರರ ಆಕ್ರೋಶ

ಎಸ್‌ಐಆರ್ ಆರಂಭವಾದ ದಿನದಿಂದಲೂ ಗಣತಿ ನಮೂನೆ ಪಡೆಯಲು ಬಿಎಲ್‌ಒ (BLO) ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಆನ್‌ಲೈನ್‌ನಲ್ಲೂ ಕರೆ ಮಾಡಲು ಮನವಿ ಸಲ್ಲಿಸಿದ್ದೆವು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಸಂತ್ರಸ್ತ ಪೃಥ್ವಿರಾಜು ಅಳಲು ತೋಡಿಕೊಂಡಿದ್ದಾರೆ.

ಜುಲೈ 29ರವರೆಗೂ ಬಿಎಲ್‌ಒ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸ್ಥಳೀಯ ಬಿಎಲ್‌ಎ (BLA) ಅವರನ್ನು ಸಂಪರ್ಕಿಸಿದಾಗ, ನಿಮ್ಮನ್ನು ಈಗಾಗಲೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ನಾವು ದಶಕಗಳಿಂದ ಸ್ವಂತ ಮನೆಯಲ್ಲೇ ಇದ್ದರೂ ನಮ್ಮನ್ನು ಸ್ಥಳಾಂತರ ಎಂದು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ‘ನೀವು ಮನೆಯಲ್ಲಿ ಇರಲಿಲ್ಲ’ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆದರೆ ಯಾರೂ ನಮ್ಮ ಮನೆಗೆ ಬಂದಿರಲಿಲ್ಲ, ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕುಟುಂಬದ ಬಳಿ 2002ರಿಂದಲೂ ಇರುವ ಹಳೆಯ ಮತದಾರರ ದಾಖಲೆಗಳಿದ್ದರೂ ಅಧಿಕಾರಿಗಳು ಅದನ್ನು ಪರಿಗಣಿಸಿಲ್ಲ. ಬದಲಾಗಿ, ವಾಸವಿರುವ ಮನೆಯ ಕಂದಾಯ ರಸೀದಿಯನ್ನು ಕೇಳಲಾಗುತ್ತಿದ್ದು, ಈಗ ಪಟ್ಟಿಯಲ್ಲಿ ಬದಲಾವಣೆ ಸಾಧ್ಯವಿಲ್ಲ, ಆಗಸ್ಟ್‌ 17ರ ನಂತರ ಹೊಸದಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಿ ಎಂದು ಬಿಎಲ್‌ಒ ಹೇಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಎಸ್‌ಡಿಡಿಒ (ASDDO – Absent, Shifted, Dead, Duplicate, Others) ವರ್ಗದಡಿ ಬರೋಬ್ಬರಿ 36 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿ ಮಾಡಲಾಗಿದೆ. ಈ ವರ್ಗದಡಿ ಗುರುತಿಸಲಾಗುವ ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ನೇರವಾಗಿ ಅಳಿಸಿ ಹಾಕಲಾಗುತ್ತದೆ. ಈಗ ಪೃಥ್ವಿರಾಜ್ ಕುಟುಂಬದ ಪ್ರಕರಣವನ್ನು ಗಮನಿಸಿದರೆ, ಅಧಿಕಾರಿಗಳ ನಿರ್ಲಕ್ಷ್ಯ, ಬಿಎಲ್‌ಒಗಳ ಮೇಲಿನ ಒತ್ತಡ ಮತ್ತು ಚುನಾವಣಾ ಆಯೋಗದ ತಾಂತ್ರಿಕ ಎಡವಟ್ಟುಗಳಿಂದಾಗಿಯೇ ಈ ಪ್ರಮಾಣದಲ್ಲಿ ಸರಿ ಇರುವ ಮತದಾರರ ಹೆಸರುಗಳನ್ನೂ ಎಎಸ್‌ಡಿಡಿಒ ಅಡಿಯಲ್ಲಿ ತಳ್ಳಿ ಮತಪಟ್ಟಿಯಿಂದ ಗಾಯಬ್ ಮಾಡಲಾಗುತ್ತಿದೆಯೇ ಎಂಬ ಅನುಮಾನ ದಟ್ಟವಾಗಿದೆ.

ಈ ಹಿಂದೆ ಕೊಡಗು ಜಿಲ್ಲೆಯ ಆದಿವಾಸಿ ಹಾಡಿಗಳಲ್ಲಿಯೂ ಗಣತಿ ನಮೂನೆ ತಲುಪದ ಪ್ರಕರಣಗಳು ವರದಿಯಾಗಿದ್ದವು. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ರಾಜ್ಯದಲ್ಲಿ ಗಣತಿ ನಮೂನೆಗಳನ್ನು ಶೇ.100ರಷ್ಟು ತಲುಪಿಸಲಾಗಿದೆ ಎಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ, ನೆಲಮಟ್ಟದಲ್ಲಿ ಇಂತಹ ಅಕ್ರಮಗಳು ಬಯಲಾಗುತ್ತಿರುವುದು ಆಯೋಗದ ಹೇಳಿಕೆಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ.

ಹೆಚ್ಚುತ್ತಿರುವ ಎಎಸ್‌ಡಿಡಿಒ ಸಂಖ್ಯೆಯ ಹಿಂದೆ ಕೇವಲ ಮತದಾರರ ಜಾಗ ಬದಲಾವಣೆಯಷ್ಟೇ ಇಲ್ಲ, ಬದಲಾಗಿ ಆಡಳಿತಾತ್ಮಕ ಲೋಪಗಳು ಮತ್ತು ಕಾನೂನು ಪಾಲನೆಯ ಕೊರತೆಯೂ ಇದೆ. ಈ ಬಗ್ಗೆ ಚುನಾವಣಾ ಆಯೋಗ ತಕ್ಷಣವೇ ಸಮಗ್ರ ತನಿಖೆ ನಡೆಸಿ, ಯಾವುದೇ ಅರ್ಹ ಮತದಾರನ ಹಕ್ಕು ಕಸಿಯದಂತೆ ಎಚ್ಚರವಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...