Homeಮುಖಪುಟ'ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು' ಎಂಬಂತೆ NTA ಯಿಂದ ₹7.5 ಕೋಟಿಯ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

- Advertisement -
- Advertisement -

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್ ಕರೆಯುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಜವಾಬ್ದಾರಿ ಹೊತ್ತಿರುವ ಏಜೆನ್ಸಿಯೊಂದು, ಇಷ್ಟು ದಿನಗಳ ಕಾಲ ಕನಿಷ್ಠ ಭದ್ರತಾ ಮಾನದಂಡಗಳನ್ನೂ ಅಳವಡಿಸಿಕೊಳ್ಳದೆ ಸಂಪೂರ್ಣ ಉಡಾಫೆಯಿಂದ ವರ್ತಿಸಿದ್ದು ಈ ದೇಶದ ಅತಿದೊಡ್ಡ ದುರಂತ. ಇನ್ನು ಮುಂದಾದರೂ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ಮರುಕಳಿಸದೆ, ವಿದ್ಯಾರ್ಥಿಗಳ ಪರಿಶ್ರಮಕ್ಕೆ ಬೆಲೆ ಸಿಗುವಂತಾಗಲಿ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಂತರ, ತನ್ನ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನು ಬಲಪಡಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಮುಖ ಹೆಜ್ಜೆಯನ್ನಿಟ್ಟಿದೆ. ನವದೆಹಲಿಯಲ್ಲಿರುವ ತನ್ನ ಮುಖ್ಯ ಕಚೇರಿ, ಪ್ರಾದೇಶಿಕ ಕಚೇರಿಗಳು ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ 24×7 ತಾಸುಗಳ ಭದ್ರತಾ ಸೇವೆ ಒದಗಿಸಲು ಸುಮಾರು ₹7.5 ಕೋಟಿ ಮೌಲ್ಯದ ಟೆಂಡರ್ ಆಹ್ವಾನಿಸಿದೆ.

ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎನ್‌ಟಿಎ, ಹೌಸ್‌ಕೀಪಿಂಗ್ (ನೈರ್ಮಲ್ಯ ನಿರ್ವಹಣೆ) ಮತ್ತು ಸುರಕ್ಷಿತ ಮುದ್ರಣ (Secure Printing) ಸೇವೆಗಳಿಗಾಗಿಯೂ ಪ್ರತ್ಯೇಕ ಬಿಡ್‌ಗಳನ್ನು ಕರೆದಿದೆ ಎಂದು ಇಂಡಿಯಾ ಟುಡೆ ವರದಿ ಮಡಿದೆ.

ಜುಲೈ 25 ರಂದು ಹೊರಡಿಸಲಾದ ಟೆಂಡರ್ ದಾಖಲೆಯ ಪ್ರಕಾರ, ಆಯ್ಕೆಯಾಗುವ ಭದ್ರತಾ ಸಂಸ್ಥೆಯು ದೆಹಲಿಯ ಮಿಂಟೋ ರಸ್ತೆಯಲ್ಲಿರುವ ಎನ್‌ಟಿಎ ಪ್ರಧಾನ ಕಚೇರಿ, ಓಖ್ಲಾ ಪ್ರಾದೇಶಿಕ ಕಚೇರಿ ಮತ್ತು ಇತರ ನಿಗದಿತ ಸ್ಥಳಗಳಲ್ಲಿ ಭದ್ರತಾ ಸೇವೆಯನ್ನು ಒದಗಿಸಬೇಕಾಗುತ್ತದೆ. ಸಿಬ್ಬಂದಿ, ಭೇಟಿ ನೀಡುವ ಸಾರ್ವಜನಿಕರು, ಅತ್ಯಂತ ರಹಸ್ಯವಾದ ಪರೀಕ್ಷಾ ಸಾಮಗ್ರಿಗಳು, ಸರ್ವರ್ ಕೊಠಡಿಗಳು, ಸ್ಟ್ರಾಂಗ್ ರೂಮ್‌ಗಳು, ಗೋದಾಮುಗಳು ಮತ್ತು ದಾಖಲೆ ಕೊಠಡಿಗಳಿಗೆ ಪೂರ್ಣ ಪ್ರಮಾಣದ ಭದ್ರತೆ ನೀಡುವುದು ಈ ಸಂಸ್ಥೆಯ ಹೊಣೆಯಾಗಿರುತ್ತದೆ.

ಈ ಗುತ್ತಿಗೆ ಅವಧಿಯು ಆರಂಭದಲ್ಲಿ ಎರಡು ವರ್ಷಗಳಾಗಿದ್ದು, ತೃಪ್ತಿಕರ ಸೇವೆಯ ಆಧಾರದ ಮೇಲೆ ತಲಾ ಒಂದು ವರ್ಷದಂತೆ ಎರಡು ಬಾರಿ ವಿಸ್ತರಿಸುವ ಅವಕಾಶವಿದೆ. ಆಸಕ್ತ ಸಂಸ್ಥೆಗಳು ಆಗಸ್ಟ್ 17 ರ ಮಧ್ಯಾಹ್ನ 3 ಗಂಟೆಯವರೆಗೆ ಬಿಡ್‌ಗಳನ್ನು ಸಲ್ಲಿಸಬಹುದಾಗಿದ್ದು, ಅದೇ ದಿನ ತಾಂತ್ರಿಕ ಬಿಡ್‌ಗಳನ್ನು ತೆರೆಯಲಾಗುತ್ತದೆ. ಭದ್ರತೆ ಮತ್ತು ಹೌಸ್‌ಕೀಪಿಂಗ್ ಟೆಂಡರ್‌ಗಳಿಗೆ ಆಗಸ್ಟ್ 17 ಕೊನೆಯ ದಿನವಾಗಿದ್ದರೆ, ಮುದ್ರಣ ಸೇವೆಗಳ ಟೆಂಡರ್‌ಗೆ ಆಗಸ್ಟ್ 20 ಕೊನೆಯ ದಿನವಾಗಿದೆ.

ಸಾಮಾನ್ಯವಾಗಿ ಸರ್ಕಾರಿ ಇಲಾಖೆಗಳು ಅನುಸರಿಸುವ ‘ಕಡಿಮೆ ವೆಚ್ಚದ ಬಿಡ್‌’ (Lowest Bid) ಮಾದರಿಯನ್ನು ಬದಿಗೊತ್ತಿ, ಎನ್‌ಟಿಎ ಈ ಬಾರಿ ‘ಗುಣಮಟ್ಟ ಮತ್ತು ವೆಚ್ಚ ಆಧಾರಿತ ಆಯ್ಕೆ’ (QCBS) ವಿಧಾನವನ್ನು ಆಯ್ಕೆ ಮಾಡಿಕೊಂಡಿದೆ. ದೇಶದ ಪ್ರಮುಖ ಪರೀಕ್ಷಾ ಮೂಲಸೌಕರ್ಯವನ್ನು ರಕ್ಷಿಸಲು ತಾಂತ್ರಿಕ ಸಾಮರ್ಥ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯ ಎಂಬ ಕಾರಣಕ್ಕೆ ಈ ನಿರ್ಧಾರ ತಳೆಯಲಾಗಿದೆ. ಈ ವ್ಯವಸ್ಥೆಯಡಿ ತಾಂತ್ರಿಕ ಸಾಮರ್ಥ್ಯಕ್ಕೆ ಶೇ. 70 ರಷ್ಟು ಮತ್ತು ಆರ್ಥಿಕ ಬಿಡ್‌ಗೆ ಶೇ. 30 ರಷ್ಟು ಅಂಕಗಳನ್ನು ನಿಗದಿಪಡಿಸಲಾಗಿದೆ.

ತಾಂತ್ರಿಕ ಮೌಲ್ಯಮಾಪನದಲ್ಲಿ ಕನಿಷ್ಠ 70 ಅಂಕಗಳನ್ನು ಪಡೆಯದ ಸಂಸ್ಥೆಗಳನ್ನು ಆರ್ಥಿಕ ಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಹತೆಗಾಗಿ ಅರ್ಜಿದಾರರು ಭದ್ರತಾ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಅನುಭವ, ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಸರಾಸರಿ ₹10 ಕೋಟಿ ವಾರ್ಷಿಕ ವಹಿವಾಟು ಹಾಗೂ ಕೇಂದ್ರ ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ವಿಮಾನ ನಿಲ್ದಾಣಗಳು ಅಥವಾ ಮೆಟ್ರೋ ಜಾಲಗಳಂತಹ ಉನ್ನತ ಭದ್ರತಾ ಸಂಸ್ಥೆಗಳಿಗೆ ಸೇವೆ ನೀಡಿದ ಅನುಭವ ಹೊಂದಿರಬೇಕಾಗುತ್ತದೆ.

ಆಯ್ಕೆಯಾಗುವ ಭದ್ರತಾ ಸಂಸ್ಥೆಯು ಎನ್‌ಟಿಎ ಆವರಣಕ್ಕೆ ಬರುವವರ ಗುರುತಿನ ಚೀಟಿ ತಪಾಸಣೆ, ಬಯೋಮೆಟ್ರಿಕ್ ಹಾಜರಾತಿ ಮತ್ತು ತಂತ್ರಜ್ಞಾನ ಆಧಾರಿತ ಜಿಪಿಎಸ್ (GPS) ಗಸ್ತು ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಪ್ರವೇಶ ದ್ವಾರಗಳಲ್ಲಿ ಡೋರ್ ಫ್ರೇಮ್ ಮತ್ತು ಹ್ಯಾಂಡ್-ಹೆಲ್ಡ್ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆ, ಭದ್ರತಾ ನಿಯಮಾವಳಿಗಳು ಮತ್ತು ಐಟಿ ಮೂಲಸೌಕರ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸದಂತೆ ಕಟ್ಟುನಿಟ್ಟಿನ ಗೌಪ್ಯತಾ ಷರತ್ತುಗಳನ್ನು ವಿಧಿಸಲಾಗಿದೆ. ಗುತ್ತಿಗೆ ಅವಧಿ ಮುಗಿದ ನಂತರವೂ ಈ ಗೌಪ್ಯತೆ ಮುಂದುವರಿಯಲಿದೆ.

ಮೇ 3 ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಆ ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21 ರಂದು ಮರುಪರೀಕ್ಷೆ ನಡೆಸಲಾಗಿತ್ತು. ಈ ಘಟನೆಯು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ತಿದ್ದುಪಡಿ ಮಾಡಲು ವೇದಿಕೆ ಕಲ್ಪಿಸಿದ್ದು, ಸಂಸತ್ತು ‘ಪ್ರಶ್ನೆಪತ್ರಿಕೆ ಸೋರಿಕೆ ತಡೆ ವಿಧೇಯಕ’ವನ್ನು (Anti-Paper Leak Bill) ಅಂಗೀಕರಿಸಿತ್ತು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ನಂಬಿಕೆಯನ್ನು ಮರುಸ್ಥಾಪಿಸಲು ಎನ್‌ಟಿಎ ಈಗ ಮುದ್ರಣ, ಸಂಗ್ರಹಣೆ, ಸ್ಥಳದ ಭದ್ರತೆಯಿಂದ ಹಿಡಿದು ಪ್ರತಿಯೊಂದು ಹಂತದಲ್ಲೂ ತಂತ್ರಜ್ಞಾನ ಮತ್ತು ಕಟ್ಟುನಿಟ್ಟಿನ ಭದ್ರತೆಯನ್ನು ಅಳವಡಿಸಿಕೊಳ್ಳುತ್ತಿದೆ. ಈ ಎಲ್ಲಾ ಬೆಳವಣಿಗೆಗಳು NTA ಮುಂದಿನ ದಿನಗಳಲ್ಲಿ ಪಾರದರ್ಶಕವಾಗಿ ನಡೆದುಕೊಳ್ಳಲಿದೆಯೇ? ವಿದ್ಯಾರ್ಥಿಗಳ ನಂಬಿಕೆಯನ್ನು ಉಳಿಸಿಕೊಳ್ಳದೆಯೇ ಕಾದುನೊಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...