Homeಕರ್ನಾಟಕJNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ...

JNU ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ಹರಿದು ಬಂದ ಯುವಜನತೆ…

- Advertisement -
- Advertisement -

JNU ದಾಳಿ ಖಂಡಿಸಿ, ಗೂಂಡಾಗಳನ್ನು ಬಂಧಿಸುವಂತೆ ಆಗ್ರಹಿಸಿದ ದೇಶಾದ್ಯಂತ ಸಾವಿರಾರು ಕಡೆ ಹೋರಾಟಗಳು ನಡೆದಿವೆ. ಮುಂಬೈನಲ್ಲಿ 40 ಗಂಟೆಗಳಿಗೂ ಅಧಿಕ ನಿರಂತರ ಧರಣಿ ನಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಸಹ ಮಂಗಳವಾರ ಸಂಜೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದ್ದು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗ ವೇಳೆಗೆ ಧರಣಿ ಮಾಡಲು ನಿರ್ಧರಿಸಿ ಕರೆ ಕೊಟ್ಟಿದ್ದೆ ತಡೆ ಸಂಜೆ 6ಗಂಟೆಯ ವೇಳೆಗೆ ನೂರಾರು ಯುವಜನರು ಒಟ್ಟುಗೂಡಿದ್ದಾರೆ. ಸುಮಾರು 300ಕ್ಕೂ ಹೆಚ್ಚು ಜನರು ರಾತ್ರಿಯೆಲ್ಲಾ ಘೋಷಣೆ, ಹಾಡು, ಕವನ ವಾಚನ ಸೇರಿದಂತೆ ವಿನೂತನವಾಗಿ ಪ್ರತಿಭಟಿಸುವ ಮೂಲಕ ಜೆಎನ್‌ಯು ಹಿಂಸೆಯನ್ನು ಜೊತೆಗೆ ಕೇಂದ್ರ ಸರ್ಕಾರದ ಸಿಎಎ, ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ.

 

ಸಂಘಟಕರಲ್ಲಿ ಒಬ್ಬರಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್‌ ಬೆಂಕಿಕೇರೆ ಮಾತನಾಡಿ, “ಈಗ ಸಮಯ ಬೆಳಗಿನ ಜಾವ 3 ಗಂಟೆ. ಇಷ್ಟೊಂದು ಜನ ಎಲ್ಲೆಲ್ಲಿಂದ ಬಂದಿದ್ದಾರೆ ಗೊತ್ತಿಲ್ಲ. ಯಾವುದೇ ತಯಾರಿ ಇಲ್ಲದೆ ಮಧ್ಯಾಹ್ನ 3 ಗಂಟೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ನಾವು ಕರೆ ಕೊಟ್ಟಿದ್ದು ಅಷ್ಟೇ. ಸಂಜೆ 6 ಗಂಟೆಗೆ ಸಾವಿರಾರು ವಿದ್ಯಾರ್ಥಿ-ಯುವಜನರಿಂದ ಶುರುವಾದ ಪ್ರತಿಭಟನೆಯು ಬೆಳಗಿನ ಜಾವ 3 ಗಂಟೆ ದಾಟಿದರು ಒಂದೇ ಒಂದು ನಿಮಿಷವು ಹಾಡು, ಕವನ, ಭಾಷಣ, ಘೋಷಣೆಗಳು ನಿಂತೆಯಿಲ್ಲ! ಈ ಯುವಜನರ ಸ್ಥಳದಲ್ಲೆ ಅದೆಷ್ಟೋ ಕವನಗಳನ್ನು ಬರೆದಿದ್ದಾರೆ. ಒಂದೊಂದು ಕವನವೂ ಮೈ ಜುಮ್ ಅನಿಸುವಂಥದ್ದಾಗಿದೆ.. ವಿದ್ಯಾರ್ಥಿ ಹೋರಾಟವು ಈ ದೇಶವನ್ನು ಖಂಡಿತವಾಗಿಯೂ ಸಂವಿಧಾನ ಆಶಯದ ಕಡೆ ತಗೆದುಕೊಂಡು ಹೋಗಲಿದೆ. ಇಂದು ನಡೆಯಲಿರುವ ರೈತ, ಕಾರ್ಮಿಕರ ಮುಷ್ಕರಕ್ಕೆ ವಿದ್ಯಾರ್ಥಿ ಹೋರಾಟವೂ ಬೆಂಬಲಿಸುತ್ತದೆ.” ಎಂದಿದ್ದಾರೆ.

ಭಾರತದ ತ್ರಿವರ್ಣ ಧ್ವಜಗಳನ್ನು ಹಿಡಿದಿದ್ದ ಯುವಜನರು ಸಂವಿಧಾನದ ಪೀಠಿಕೆಯನ್ನು ಒಟ್ಟಾಗಿ ಓದುವ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರತಿಜ್ಞೆ ಮಾಡಿದರು.

ಅಜಾದಿ ಘೋಷಣೆಗಳು ಮೊಳಗಿದ್ದಲ್ಲದೇ ಎಬಿವಿಪಿಯ ವಿರುದ್ಧವೂ ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಪ್ರತಿಭಟನೆ ಇಂದು ಸಂಜೆ 6 ಗಂಟೆಯವರೆಗೂ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವರು ಬದುಕಲಿಕ್ಕೆ ಆಶ್ರಯದಾತ ವಾಗಿರುವ
    ಭಾರತದ ಐಕ್ಯತೆಯನ್ನು ಮತ್ತು ನಾಗರೀಕರ ಹಿತಕಾಯುವ ಸಲುವಾಗಿ
    ಬಾಬಾ ಸಾಹೇಬರನ್ನು ಅವಮಾನಿಸಿದ ಕ್ಕಾಗಿ ನನ್ನಂತಹ ಜ್ಞಾನ ತುಂಬಿಕೊಂಡಿರುವ ಈ ರೀತಿ ತೊಂದರೆ ಮಾಡಿದ್ದಾರೆ ಆರ್ಯರು ಎಂದಾದರೆ ಮನುವಾದಿಗಳ
    ಕೊಡುವ ನೋವಿಗೆ ಗೊತ್ತಾಗಬಾರದೆಂದು ನಿರಂತರವಾಗಿ ಗಾಂಧಿ ಗೋವಳ ಕಾರ್ ಇನ್ನೂ ಅನೇಕ ಅನೇಕ ಜನರ ಏಕಾಂಗಿ ಹೋರಾಟ ಮಾಡಿ ಪ್ರತಿಯೊಬ್ಬರ
    ಏಳಿಗೆಗಾಗಿ ನ್ಯಾಯ ಸಿಕ್ಕುತ್ತಿರುವ ಗ್ರಂಥ ಎಂದರೆ ಭಗವದ್ಗೀತೆ ಯಿಂದಲ್ಲ ತಿಳಿದುಕೊಳ್ಳಲೇ ಬೇಕಾದ ವಿಷಯ

    ಅಂಬೇಡ್ಕರರ ಸಂವಿಧಾನ ಭಾರತಕ್ಕೆ ಸರ್ವಶ್ರೇಷ್ಠ ಗ್ರಂಥವಾಗಿದೆ ಪ್ರತಿಯೊಬ್ಬರೂ ಸಹ ಸಂವಿಧಾನದ ಆಶ್ರಯ ಪಡೆದು ಅಂಬೇಡ್ಕರರನ್ನು ಮಾತ್ರ ಜಾತಿಗೆ ಹೊಂದಾಣಿಕೆ ಮಾಡಿ ನೋಡುವಂತ ಮನುವಾದಿಗಳ ಹಿಡಿತದಲ್ಲಿ ಭಾರತದ ಮೂಲನಿವಾಸಿಗಳು ಬದುಕಬೇಕಾದ ದುರ್ದೈವ ನಮ್ಮದಾಗಿದೆ
    ಜೈ ಭೀಮ್ ಜೈ ಸಂವಿಧಾನ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...