HomeಅಂಕಣಗಳುKarnataka against SIRರಾಜ್ಯದಲ್ಲಿ 'SIR' ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, 'SIR ವಿರೋಧಿ ಕರ್ನಾಟಕ'...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

- Advertisement -
- Advertisement -

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ ‘ಎಸ್‌ಐಆರ್’ (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10 ಕೋಟಿಗೂ ಹೆಚ್ಚು) ಜೀವಂತ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ಆಯೋಗ ಸಂಚು ರೂಪಿಸಿದೆ ಎಂದು ‘ಎಸ್‌ಐಆರ್ ವಿರೋಧಿ ಕರ್ನಾಟಕ’ ಒಕ್ಕೂಟ ಗಂಭೀರ ಆರೋಪ ಮಾಡಿದೆ.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡ ಒಕ್ಕೂಟದ ಮುಖಂಡರು, ಚುನಾವಣಾ ಆಯೋಗ ಹಂಚಿಕೊಂಡಿರುವ SIR ಮಾಹಿತಿ ಪ್ರತಿಗಳನ್ನು ಹರಿದು ಆಯೋಗದ ಸರ್ವಾಧಿಕಾರಿ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಭಾರಿ ಪ್ರಮಾಣದ ಡಿಲೀಷನ್: ಆಯೋಗಕ್ಕೆ 3 ಪ್ರಮುಖ ಪ್ರಶ್ನೆಗಳು

ರಾಜ್ಯದಲ್ಲಿ ಪ್ರತಿ ಐವರು ಮತದಾರರಲ್ಲಿ ಒಬ್ಬರು ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಬೆಂಗಳೂರಿನಲ್ಲೇ ಶೇ. 40 ರಷ್ಟು ಮತದಾರರು ಪಟ್ಟಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ಒಕ್ಕೂಟ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದೆ.

ಡಿಲೀಟ್ ಮಾಡಲು ಗುರುತಿಸಲಾಗಿರುವ ಮತದಾರರಲ್ಲಿ ಶೇ. 15 ರಷ್ಟು ಜನ ಕೇವಲ ವಲಸೆ ಹೋದವರು (Shifted) ಅಥವಾ ಬಿಎಲ್‌ಒ (BLO) ಭೇಟಿ ನೀಡಿದಾಗ ಸಿಗದವರಾಗಿದ್ದಾರೆ (Absent). ಇವರು ಸತ್ತವರೂ ಅಲ್ಲ, ನಕಲಿ ಮತದಾರರೂ ಅಲ್ಲ. ಹೀಗಿರುವಾಗ ರಾಜ್ಯದ ಒಂದು ಕೋಟಿಗೂ ಹೆಚ್ಚು ಜೀವಂತ ನಾಗರಿಕರನ್ನು ಪಟ್ಟಿಯಿಂದ ತೆಗೆದುಹಾಕುವುದು ಎಷ್ಟು ಸರಿ?

ಇನ್ಯುಮುರೇಷನ್ ಫಾರಂ 100% ವಿತರಣೆಯಾಗಿದೆ ಮತ್ತು ಡಿಜಿಟಲೀಕರಣ ಮುಕ್ತಾಯಗೊಂಡಿದೆ ಎಂದು ಆಯೋಗ ಪ್ರಕಟಿಸಿದೆ. ಆದರೆ ಇಂದಿಗೂ ಖಾಲಿ ಫಾರಂ ಹಿಡಿದು ಪರದಾಡುತ್ತಿರುವ ನೂರಾರು ಜೀವಂತ ಉದಾಹರಣೆಗಳನ್ನು ನಾವು ನೀಡಬಲ್ಲೆವು. ಇದಕ್ಕೆ ಆಯೋಗದ ಉತ್ತರವೇನು?

ಬಿಎಲ್‌ಒ ಆಪ್‌ನಲ್ಲಿರುವ ‘ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಫ್ಟ್‌ವೇರ್’ ಬಗ್ಗೆ ಬಿಎಲ್‌ಎ (BLA) ಗಳಿಗೆ ತರಬೇತಿ ನೀಡಿಲ್ಲವೇಕೆ? ಪ್ರಧಾನಿ ಹಾಗೂ ಗೃಹ ಸಚಿವರು ಈ ಪ್ರಕ್ರಿಯೆ ಒಳನುಸುಳುಕೋರರನ್ನು ಪತ್ತೆಹಚ್ಚಲು ನಡೆಯುತ್ತಿದೆ ಎಂದಿದ್ದಾರೆ. ಹಾಗಾದರೆ ಈ ಪ್ರಕ್ರಿಯೆಯ ಮೂಲಕ ಆಯೋಗ ಪತ್ತೆ ಹಚ್ಚಿದ ಅಕ್ರಮ ಬಾಂಗ್ಲಾದೇಶಿ ನುಸುಳುಕೋರರ ಸಂಖ್ಯೆ ಎಷ್ಟು?

ದುರುದ್ದೇಶಪೂರಿತ ಹಾಗೂ ಅವೈಜ್ಞಾನಿಕ ಪ್ರಕ್ರಿಯೆ

ಕೇಂದ್ರದ ಆಡಳಿತಾರೂಢ ಬಿಜೆಪಿಯ ರಾಜಕೀಯ ಅಜೆಂಡಾ ಈಡೇರಿಸಲು ಎಸ್‌ಐಆರ್ ಪ್ರಕ್ರಿಯೆಯನ್ನು ಜನರ ಮೇಲೆ ಹೇರಲಾಗಿದೆ. ಇದು ಮತದಾರರ ಪಟ್ಟಿ ಪರಿಷ್ಕರಣೆಯಲ್ಲ, ಬದಲಿಗೆ ಇಡೀ ರಾಜ್ಯದ ಮತದಾರರ ಹಕ್ಕನ್ನು ಕಸಿದುಕೊಂಡು ವಿಕೃತ ಪಟ್ಟಿ ತಯಾರಿಸುವ ಹುನ್ನಾರ. ಸರಿಯಾದ ತರಬೇತಿ ಇಲ್ಲದೆ, ಒತ್ತಡದಲ್ಲಿ ಕೆಲಸ ಮಾಡುತ್ತಿರುವ ಬಿಎಲ್‌ಒ (BLO) ಗಳನ್ನು ಬಲಿಪಶು ಮಾಡಲಾಗುತ್ತಿದೆ.

ಉದ್ಯೋಗ ಅರಸಿ, ಜೀವನೋಪಾಯಕ್ಕಾಗಿ ಬೇರೆಡೆಗೆ ವಲಸೆ ಹೋದ ಬಡ ಮತ್ತು ಮಧ್ಯಮ ವರ್ಗದವರನ್ನು ‘ಸಿಗದವರು’ ಎಂಬ ಏಕೈಕ ಕಾರಣಕ್ಕೆ ಪಟ್ಟಿಯಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ.

ಎಸ್‌ಐಆರ್ ವಿರೋಧಿ ಕರ್ನಾಟಕ’ದ ಪ್ರಮುಖ ಒತ್ತಾಯಗಳು:
  • ಸಮಗ್ರ ಪರಿಶೀಲನೆ: ಇದುವರೆಗೆ ನಡೆದಿರುವ ಎಸ್‌ಐಆರ್ ಪ್ರಕ್ರಿಯೆಯ ಪುನರ್ ಪರಿಶೀಲನೆಯಾಗಬೇಕು ಮತ್ತು ಜನಪರ ಸಂಘಟನೆಗಳಿಗೂ ಅಭಿಪ್ರಾಯ ಮಂಡಿಸಲು ಅವಕಾಶ ನೀಡಬೇಕು.
  • ವಲಸೆ ಹೋದವರಿಗೆ ಪರ್ಯಾಯ ವ್ಯವಸ್ಥೆ: ಬೇರೆಡೆಗೆ ಸ್ಥಳಾಂತರಗೊಂಡವರನ್ನು ಪಟ್ಟಿಯಿಂದ ತೆಗೆಯದೆ, ಅವರು ಇರುವ ಸ್ಥಳದಲ್ಲೇ ‘ಫಾರಂ 8’ ನೀಡಿ ಮತದಾನದ ಹಕ್ಕನ್ನು ವರ್ಗಾಯಿಸಿಕೊಡಬೇಕು.
  • ಸಮಯಾವಕಾಶ ವಿಸ್ತರಣೆ: ಈ ಗಂಭೀರ ದೋಷಗಳನ್ನು ಸರಿಪಡಿಸಲು ಪ್ರಕ್ರಿಯೆಯ ಅವಧಿಯನ್ನು ಕನಿಷ್ಠ ಒಂದು ತಿಂಗಳು ವಿಸ್ತರಿಸಬೇಕು.
  • ಸಾರ್ವಜನಿಕ ಪರಿಶೀಲನಾ ಸಭೆ: ಕರಡು ಪಟ್ಟಿ ಪ್ರಕಟವಾದ ನಂತರ ಆಯೋಗದ ಮಾರ್ಗದರ್ಶನದಂತೆ ಪ್ರತಿಯೊಂದು ಪ್ರದೇಶದಲ್ಲೂ ಸಾರ್ವಜನಿಕ ಪರಿಶೀಲನಾ ಸಭೆ ನಡೆಸಿ, ಸಾಕ್ಷ್ಯಗಳ ಆಧಾರದ ಮೇಲೆ ಹೆಸರುಗಳನ್ನು ಉಳಿಸಿಕೊಳ್ಳಬೇಕು.

ಪ್ರಸ್ತುತ ರಾಜ್ಯದಾದ್ಯಂತ ‘ನಾಗರಿಕ ಮತ ಕಾವಲು ಸಮಿತಿ’ಗಳನ್ನು ರಚಿಸಲಾಗಿದ್ದು, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಸುರಕ್ಷಿತಗೊಳ್ಳುವವರೆಗೆ ಈ ಹೋರಾಟ ಮುಂದುವರಿಯಲಿದ್ದು, ರಾಜ್ಯದ ಜನರ ತಾಳ್ಮೆಯನ್ನು ಆಯೋಗ ಪರೀಕ್ಷಿಸಬಾರದು. ನಾಗರಿಕ ಸಮಾಜದ ಪ್ರಸ್ತಾಪಗಳನ್ನು ಪುರಸ್ಕರಿಸದೆ, ಅಕ್ರಮ ಡಿಲೀಷನ್ ಕೈಬಿಡದಿದ್ದರೆ ಹಾಗೂ ಪ್ರಕ್ರಿಯೆಯ ಅವಧಿ ವಿಸ್ತರಿಸದಿದ್ದರೆ ರಾಜ್ಯಾದ್ಯಂತ ತೀವ್ರ ಸ್ವರೂಪದ ಸಾರ್ವಜನಿಕ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಚುನಾವಣಾ ಆಯೋಗವನ್ನು ಎಚ್ಚರಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...