Homeಮುಖಪುಟ'ನುಡಿಯು ಸಿರಿಯಲ್ಲ ಬದುಕು' ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ 'ಜನನುಡಿ-2026'

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

- Advertisement -
- Advertisement -

“ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ,” ಎಂದು ‘ಅಭಿಮತ ಮಂಗಳೂರು’ ಆಶಯ ವ್ಯಕ್ತಪಡಿಸಿದೆ.

ಪ್ರಭುತ್ವದ ನಿರಂಕುಶ ಧೋರಣೆ, ಸಾಂಸ್ಕೃತಿಕ ಕಾರ್ಪೊರೇಟೀಕರಣ ಹಾಗೂ ಸಮಾಜವನ್ನು ವಿಭಜಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ಸಾಂಸ್ಕೃತಿಕ-ಸಾಹಿತ್ಯಿಕ ಪ್ರತಿರೋಧದ ಸಂಕೇತವಾಗಿ ರೂಪುಗೊಂಡಿದ್ದ ‘ಜನನುಡಿ’ ಮತ್ತೆ ಸದ್ದು ಮಾಡಲು ಸಜ್ಜಾಗಿದೆ. ‘ಅಭಿಮತ ಮಂಗಳೂರು’ ಆಶ್ರಯದಲ್ಲಿ 2026ರ ನವೆಂಬರ್ 28 ಮತ್ತು 29 ರಂದು ಕರಾವಳಿ ನಗರಿ ಮಂಗಳೂರಿನಲ್ಲಿ ‘ಜನನುಡಿ – 2026’ ಅನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 50ಕ್ಕೂ ಹೆಚ್ಚು ಹಿರಿಯ-ಕಿರಿಯ ಬರಹಗಾರರು, ರಂಗಕರ್ಮಿಗಳು, ಚಿಂತಕರು ಮತ್ತು ಜನಪರ ಆಕ್ಟಿವಿಸ್ಟ್‌ಗಳು ಭಾಗವಹಿಸಿದ್ದ ‘ಅಭಿಮತ’ದ ಪ್ರಾಥಮಿಕ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಸಕ್ತ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎದುರಿಸುತ್ತಿರುವ ತೀವ್ರ ಸವಾಲುಗಳನ್ನು ಕೇಂದ್ರವಾಗಿಟ್ಟುಕೊಂಡು ಈ ಬಾರಿಯ ‘ಜನನುಡಿ’ ಗೋಷ್ಠಿಗಳನ್ನು ವಿನ್ಯಾಸಗೊಳಿಸಲು ತೀರ್ಮಾನಿಸಲಾಗಿದೆ.

‘ಜನನುಡಿ’ಯ ಹುಟ್ಟು

ಕರಾವಳಿಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಹೆಸರಿನಲ್ಲಿ ನಡೆಯುತ್ತಿದ್ದ ಅದ್ದೂರಿ, ಕಾರ್ಪೊರೇಟ್ ಪ್ರಾಯೋಜಿತ ಹಾಗೂ ವಿಚಾರಶೂನ್ಯ ಉತ್ಸವಗಳಿಗೆ ಪರ್ಯಾಯವಾಗಿ 2013ರಲ್ಲಿ ‘ಅಭಿಮತ’ ಬಳಗದ ಮೂಲಕ ‘ನುಡಿಯು ಸಿರಿಯಲ್ಲ ಬದುಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಜನ್ಮತಾಳಿದ್ದು ‘ಜನನುಡಿ’

ಸಾಹಿತ್ಯಿಕ ಆಡಂಬರ, ಬ್ರಾಂಡ್ ಕಟ್ಟುವ ತಂತ್ರ ಹಾಗೂ ಅಧಿಕಾರಸ್ಥರ ಓಲೈಕೆಯ ವಿರುದ್ಧ ‘ಜನರ ಧ್ವನಿ’ಯಾಗಿ ಆರಂಭವಾದ ಈ ಸಮಾವೇಶ, ಪ್ರಭುತ್ವದ ತಪ್ಪು ನೀತಿಗಳು, ಮೌಢ್ಯ (ಉದಾಹರಣೆಗೆ ಮಡೆಸ್ನಾನ), ಕೋಮುವಾದ ಮತ್ತು ಜಾಗತೀಕರಣದ ಪರಿಣಾಮಗಳ ಕುರಿತು ಮುಕ್ತವಾಗಿ ಚರ್ಚಿಸುವ ವೇದಿಕೆಯಾಗಿತ್ತು.

ಡಾ. ಯು.ಆರ್. ಅನಂತಮೂರ್ತಿ, ಜಿ. ರಾಜಶೇಖರ್, ಪ್ರೊ. ರಾಜೇಂದ್ರ ಚೆನ್ನಿ, ಕೆ.ವಿ. ನಾರಾಯಣ, ಡಾ. ಎಚ್.ಎಸ್. ಅನುಪಮಾ, ಸಾರಾ ಅಬೂಬಕರ್, ಪ್ರಕಾಶ್ ರೈ ಮುಂತಾದ ಪ್ರಗತಿಪರ ವೈಚಾರಿಕ ದೈತ್ಯರು ‘ಜನನುಡಿ’ಯ ಗೋಷ್ಠಿಗಳಲ್ಲಿ ಧ್ವನಿಯಾಗಿದ್ದರು. ಯಾವುದೇ ಸರ್ಕಾರಿ ಅನುದಾನ ಅಥವಾ ಕಾರ್ಪೊರೇಟ್ ಹಂಗಿಲ್ಲದೆ, ಪ್ರಗತಿಪರ ಮನಸ್ಸುಗಳ ಸ್ವಯಂಪ್ರೇರಿತ ವಂತಿಗೆಯಿಂದಲೇ ನಡೆದುಬಂದದ್ದು ‘ಜನನುಡಿ’ಯ ಹೆಗ್ಗಳಿಕೆ.

ಕಳೆದ ಕೆಲವು ವರ್ಷಗಳಿಂದ ಸಾಂಸ್ಥಿಕ ತೊಡಕುಗಳು, ಕೋವಿಡ್‌ ಸಂದರ್ಭ ಹಾಗೂ ಸಂಘಟನಾತ್ಮಕ ಹಿನ್ನಡೆಗಳಿಂದಾಗಿ ‘ಜನನುಡಿ’ ನಿರಂತರವಾಗಿ ನಡೆಯಲು ಸಾಧ್ಯವಾಗಿರಲಿಲ್ಲ. ಸಾಂಸ್ಕೃತಿಕ ಚಳವಳಿಗಳಲ್ಲಿ ಉಂಟಾದ ಈ ಶೂನ್ಯತೆಯು ಜನಪರ ಚಳವಳಿಗಳ ಮೇಲೆ ಪರಿಣಾಮ ಬೀರಿತ್ತು. ಆದರೆ, ಇಂದಿನ ಆತಂಕಕಾರಿ ರಾಜಕೀಯ ಮತ್ತು ಸಾಮಾಜಿಕ ಸನ್ನಿವೇಶದಲ್ಲಿ ‘ಜನನುಡಿ’ಯಂತಹ ಮುಕ್ತ, ವೈಚಾರಿಕ ಹಾಗೂ ಜನಪರ ವೇದಿಕೆಯು ಕಾಲದ ಅತ್ಯಂತ ತುರ್ತು ಅಗತ್ಯ ಎಂಬ ಅಭಿಪ್ರಾಯ ನಾಡಿನಾದ್ಯಂತ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ‘ಜನನುಡಿ’ಗೆ ಮರುಜೀವ ನೀಡಲು ಮುಂದಾಗಿರುವ ‘ಅಭಿಮತ’, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಮಾನಮನಸ್ಕ ಸಂಘಟನೆಗಳು, ಸಾಹಿತಿಗಳು ಮತ್ತು ಚಿಂತಕರನ್ನು ಒಗೂಡಿಸಲು ಯೋಜನೆ ರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...