Homeಮುಖಪುಟ‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

- Advertisement -
- Advertisement -

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು ದ್ವೇಷ ಭಾಷಣದ ಭಾಗವಾಗಿದೆ ಎಂಬ ತೀವ್ರ ಟೀಕೆಗಳು ಮತ್ತು ಆಕ್ರೋಶಗಳು ದೇಶಾದ್ಯಂತ ವ್ಯಕ್ತವಾಗುತ್ತಿವೆ.

ಇತ್ತೀಚೆಗೆ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೇಶವ್ ಪ್ರಸಾದ್ ಮೌರ್ಯ, “ಭಾರತ, ಪಾಕಿಸ್ತಾನ ಅಥವಾ ಬಾಂಗ್ಲಾದೇಶದಲ್ಲಿ ಮದರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ” ಎಂದು ಹೇಳಿಕೆ ನೀಡಿದ್ದರು. ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಗಳ ಕುರಿತು ಈ ರೀತಿ ಸಗಟಾಗಿ ಮತ್ತು ಪ್ರಚೋದನಕಾರಿಯಾಗಿ ನೀಡಿದ ಹೇಳಿಕೆಯು ವ್ಯಾಪಕ ಖಂಡನೆಗೆ ಗುರಿಯಾಯಿತು.

ಆದರೆ, ತಮ್ಮ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತವಾದ ನಂತರವೂ ಮೌರ್ಯ ಅವರು ಕ್ಷಮೆ ಕೇಳುವ ಬದಲು, ತಮ್ಮ ನಿಲುವನ್ನು ಮತ್ತಷ್ಟು ಸಮರ್ಥಿಸಿಕೊಂಡರು. “ಇದು ಮೊದಲ ಬಾರಿಗೆನಾ? ಇದು ವಾಸ್ತವ; ಇದು ಸತ್ಯ. ಮದರಸಾ ಶಿಕ್ಷಣವು ಖಂಡಿತವಾಗಿಯೂ ಕಾರಣವಾಗಿದೆ, ಭಾರತದೊಳಗೆ ಅಥವಾ ಪ್ರಪಂಚದ ಬೇರೆಡೆ ದಾಳಿಗಳಲ್ಲಿ ಭಾಗಿಯಾಗಿರುವ ಅತಿದೊಡ್ಡ ಭಯೋತ್ಪಾದಕರು ಮದರಸಾ ಶಿಕ್ಷಣದ ಉತ್ಪನ್ನವಾಗಿದೆ” ಎಂದು ಹೇಳುವ ಮೂಲಕ ತಮ್ಮ ದ್ವೇಷದ ಭಾಷಣವನ್ನು ದ್ವಿಗುಣಗೊಳಿಸಿದರು. ಅಷ್ಟಕ್ಕೇ ನಿಲ್ಲದೆ, “ನಾನು ಇದನ್ನೇ ಮೊದಲೇ ಹೇಳಿದ್ದೇನೆ, ಮತ್ತು ಇಂದಿಗೂ ಅದನ್ನೇ ಪುನರಾವರ್ತಿಸುತ್ತೇನೆ. ಮದರಸಾ ಶಿಕ್ಷಣ ಪಡೆಯುವ ಯಾರಾದರೂ ‘ಭಾರತ್ ಮಾತಾ ಕಿ ಜೈ’ ಎಂದು ಹೇಳುವುದಿಲ್ಲ, ‘ವಂದೇ ಮಾತರಂ’ ಹಾಡುವುದಿಲ್ಲ, ಮತ್ತು ಅವರ ಮನಸ್ಥಿತಿ ಭಯೋತ್ಪಾದಕರ ಮನಸ್ಥಿತಿಯಂತೆ ಆಗುತ್ತದೆ” ಎಂದೂ ಜಾರಿಕೊಂಡರು.

ಇಸ್ಲಾಂ ಮತ್ತು ಮುಸ್ಲಿಮರ ವಿರುದ್ಧ ಪದೇ ಪದೇ ಆಕ್ರೋಶ ಹೊರಹಾಕುವ ಬಾಂಗ್ಲಾದೇಶದ ಲೇಖಕಿ ತಸ್ಲಿಮಾ ನಸ್ರಿನ್ ಅವರು ಮದರಸಾಗಳನ್ನು ರದ್ದುಗೊಳಿಸಬೇಕೆಂದು ಕರೆ ನೀಡಿದ ಕೆಲವೇ ದಿನಗಳಲ್ಲಿ ಕೇಶವ್ ಪ್ರಸಾದ್ ಮೌರ್ಯ ಅವರಿಂದ ಈ ಹೇಳಿಕೆ ಬಂದಿದೆ. ಕೋಲ್ಕತ್ತಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ತಸ್ಲಿಮಾ ನಸ್ರಿನ್, ಮದರಸಾಗಳು “ಅಸ್ತಿತ್ವದಲ್ಲೇ ಇರಬಾರದು” ಎಂದು ಪ್ರತಿಪಾದಿಸಿದ್ದರು. ಅಲ್ಲದೆ, ಕೆಲವು ಮದರಸಾಗಳು “ಜಿಹಾದಿಗಳನ್ನು ಉತ್ಪಾದಿಸುವ ಕಾರ್ಖಾನೆಗಳು” ಎಂದು ಆರೋಪಿಸಿದ್ದ ಅವರು, ಅವುಗಳನ್ನು ಜಾತ್ಯತೀತ ಶಾಲೆಗಳಾಗಿ ಪರಿವರ್ತಿಸಬೇಕು ಎಂದು ವಾದಿಸಿದ್ದರು.

ಮೌರ್ಯ ಅವರ ಈ ಕೋಮುವಾದಿ ಹೇಳಿಕೆ ವಿರುದ್ಧ ಉತ್ತರ ಪ್ರದೇಶದ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ಸಮಾಜವಾದಿ ಪಕ್ಷದ ಶಾಸಕ ಬ್ರಿಜೇಶ್ ಯಾದವ್ ಮಾತನಾಡಿ, “ಚುನಾವಣಾ ಲಾಭಕ್ಕಾಗಿ ಬಿಜೆಪಿ ಕೋಮುವಾದಿ ವಾಕ್ಚಾತುರ್ಯವನ್ನು ಆಶ್ರಯಿಸುತ್ತಿದೆ. ಅವರು ಹಿಂದೂಗಳು ಮತ್ತು ಮುಸ್ಲಿಮರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದರೆ, ಅವರಿಗೆ ನಾಲ್ಕು ಸ್ಥಾನಗಳನ್ನು ಕೂಡ ಗೆಲ್ಲಲು ಸಾಧ್ಯವಿಲ್ಲ. ಧರ್ಮ ದ್ವೇಷವನ್ನು ಹರಡುವುದು, ಜನರಿಗೆ ಧರ್ಮದ ಅಫೀಮನ್ನು ಕುಡಿಸುವುದು, ಜನರಿಗೆ ಸುಳ್ಳು ಹೇಳುವುದು ಮತ್ತು ದೇಶವನ್ನು ಲೂಟಿ ಮಾಡುವುದೇ ಬಿಜೆಪಿಯ ಮುಖ್ಯ ಕಾರ್ಯಸೂಚಿಯಾಗಿದೆ” ಎಂದು ಆರೋಪಿಸಿದ್ದಾರೆ. 

ಸಮಾಜವಾದಿ ಪಕ್ಷದ ಮತ್ತೊಬ್ಬ ಶಾಸಕ ಮೊಹಮ್ಮದ್ ಹಸನ್ ರೂಮಿ ಅವರು, ಈ ಹೇಳಿಕೆಗಳು ಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತದಾರರನ್ನು ಧ್ರುವೀಕರಿಸಲು ನಡೆಸುತ್ತಿರುವ ಸಂಚು ಎಂದಿದ್ದಾರೆ. “ಉಪಮುಖ್ಯಮಂತ್ರಿ ಜನರನ್ನು ದಾರಿ ತಪ್ಪಿಸಬಾರದು. ಚುನಾವಣೆಗಳು ಸಮೀಪಿಸುತ್ತಿವೆ, ಹೀಗಿರುವಾಗ ಅವರು ಪಾಕಿಸ್ತಾನ ಮತ್ತು ಬಾಂಗ್ಲಾದೇಶವನ್ನು ಉಲ್ಲೇಖಿಸದಿದ್ದರೆ ತಮ್ಮ ರಾಜಕೀಯ ಕಾರ್ಯಸೂಚಿಯನ್ನು ಹೇಗೆ ಮುಂದುವರಿಸಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಕೇಶವ್ ಪ್ರಸಾದ್ ಮೌರ್ಯ ಅವರು ಮುಸ್ಲಿಂ ವಿರೋಧಿ ಎಂದು ವ್ಯಾಪಕವಾಗಿ ಟೀಕಿಸಲ್ಪಟ್ಟ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೆ ಸಿಲುಕಿರುವುದು ಇದೇ ಮೊದಲೇನಲ್ಲ. 

2021ರ ಚುನಾವಣಾ ಭಾಷಣ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಅವರು ಆರೋಪಿತ ಅಪರಾಧಿಗಳನ್ನು “ಲುಂಗಿ-ಚಾಪ್” ಮತ್ತು “ಜಾಲಿದಾರ್ ಟೋಪಿ” (ನೆಟ್-ಕ್ಯಾಪ್) ಗೂಂಡಾಗಳು ಎಂದು ಸಂಬೋಧಿಸಿದ್ದರು. ವಿಮರ್ಶಕರು ಮತ್ತು ಹಕ್ಕುಗಳ ಹೋರಾಟಗಾರರು ಇದನ್ನು ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿಯಾಗಿಸಲು ಬಳಸಿದ ಸಂಕೇತ ಪದಗಳು ಎಂದು ವಿಶ್ಲೇಷಿಸಿದ್ದರು.

ಮಥುರಾ ವಿವಾದ: ಅದೇ ವರ್ಷ, ಅಯೋಧ್ಯೆ ಮತ್ತು ಕಾಶಿಯ ನಂತರ, ಮಥುರಾಗೆ “ಸಿದ್ಧತೆಗಳು” ನಡೆಯುತ್ತಿವೆ ಎಂದು ಟ್ವೀಟ್ ಮಾಡುವ ಮೂಲಕ ಹೊಸ ವಿವಾದಕ್ಕೆ ಬೆಂಕಿ ಹಚ್ಚಿದ್ದರು. ಈ ಹೇಳಿಕೆಯು ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದವನ್ನು ಉಲ್ಲೇಖಿಸುವ ಉದ್ದೇಶಪೂರ್ವಕ ಶ್ರಮವಾಗಿತ್ತು.

ಸಿಎಎ ಪ್ರತಿಭಟನೆ ಮತ್ತು ಧರ್ಮ ಸಂಸದ್ ಸಮರ್ಥನೆ: 2019 ರಲ್ಲಿ, ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ “ಪಾಕಿಸ್ತಾನಕ್ಕೆ ಹೋಗಿ” ಎಂದು ಹೇಳಿದ್ದ ಪೊಲೀಸ್ ಅಧಿಕಾರಿಯ ನಡವಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಹಾಗೆಯೇ 2022 ರಲ್ಲಿ ಹರಿದ್ವಾರ ಧರ್ಮ ಸಂಸದ್‌ನಲ್ಲಿ ಧಾರ್ಮಿಕ ನಾಯಕರು ಮುಸ್ಲಿಮರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಕರೆ ನೀಡಿದಾಗ, ಅದನ್ನು ಧಾರ್ಮಿಕ ನಾಯಕರ ಹಕ್ಕು ಎಂದು ಸಮರ್ಥಿಸಿಕೊಂಡಿದ್ದರು.

ಮದರಸಾ ಶಿಕ್ಷಣವನ್ನು ಭಯೋತ್ಪಾದನೆಗೆ ಜೋಡಿಸುವ ಮೌರ್ಯ ಅವರ ಇತ್ತೀಚಿನ ಹೇಳಿಕೆಗಳು, ಹಲವಾರು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರಗಳು ನಡೆಸುತ್ತಿರುವ ವ್ಯಾಪಕ ಅಭಿಯಾನದ ಭಾಗವಾಗಿಯೇ ಬಂದಿವೆ. ಬಿಜೆಪಿ ಸರ್ಕಾರಗಳು ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳನ್ನು ಅಸಮಾನವಾಗಿ ಗುರಿಯಾಗಿಸುತ್ತಿವೆ ಎಂಬ ದೂರುಗಳು ವ್ಯಾಪಕವಾಗಿವೆ.

ಇತ್ತೀಚಿನ ವರ್ಷಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳು ಮದರಸಾಗಳ ಸಮೀಕ್ಷೆ ಮತ್ತು ತಪಾಸಣೆಗೆ ಆದೇಶಿಸಿವೆ. ನಿಯಮಗಳನ್ನು ಕಟ್ಟುನಿಟ್ಟುಗೊಳಿಸುವುದು, ವಿದೇಶಿ ನಿಧಿಯ ತನಿಖೆ ನಡೆಸುವುದು, ಸರ್ಕಾರಿ ಹಣಕಾಸಿನ ನೆರವನ್ನು ಕಡಿಮೆ ಮಾಡುವುದು ಅಥವಾ ಹಿಂಪಡೆಯುವುದು ಮತ್ತು ಕೆಲವು ಸಂದರ್ಭಗಳಲ್ಲಿ ಸರ್ಕಾರಿ ಸ್ವಾಮ್ಯದ ಮದರಸಾಗಳನ್ನು ಸಂಪೂರ್ಣವಾಗಿ ಮುಚ್ಚುವುದು ಅಥವಾ ಪರಿವರ್ತಿಸುವುದನ್ನು ನಿರಂತರವಾಗಿ ಮಾಡುತ್ತಾ ಬರಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರವು ಮದರಸಾಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ, ಹಾಡಿನ ಕೆಲವು ಭಾಗಗಳು ಇಸ್ಲಾಮಿಕ್ ಏಕದೇವತಾವಾದಿ (ತೌಹೀದ್) ನಂಬಿಕೆಗಳಿಗೆ ವಿರುದ್ಧವಾಗಿವೆ ಎಂದು ವಾದಿಸಿ ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿವೆ.

ವಿರೋಧ ಪಕ್ಷಗಳು, ಮುಸ್ಲಿಂ ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಒಕ್ಕೂಟಗಳು, ಬಿಜೆಪಿ ಸರ್ಕಾರಗಳು ವಿಶಾಲವಾದ ಹಿಂದುತ್ವ ಕಾರ್ಯಸೂಚಿಯ ಭಾಗವಾಗಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸುತ್ತಿವೆ ಹಾಗೂ ಭಾರತೀಯ ಸಂವಿಧಾನವು ಅಲ್ಪಸಂಖ್ಯಾತರಿಗೆ ನೀಡಿರುವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಹಕ್ಕುಗಳನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿವೆ ಎಂದು ಆರೋಪಿಸಿವೆ.

ಈ ನಡುವೆ ನ್ಯಾಯಾಂಗವು ಸರ್ಕಾರದ ಇಂತಹ ಕ್ರಮಗಳನ್ನು ತಡೆದಿರುವ ಪ್ರಸಂಗಗಳೂ ಇವೆ. ಜನವರಿ 2026 ರಲ್ಲಿ, ಅಲಹಾಬಾದ್ ಹೈಕೋರ್ಟ್ ಮಾನ್ಯತೆ ಪಡೆಯದ ಮದರಸಾವನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿತ್ತು. ಅಧಿಕೃತ ಮಾನ್ಯತೆ ಇಲ್ಲದಿರುವುದು ಮಾತ್ರಕ್ಕೇ ಸಂಸ್ಥೆಯನ್ನು ಮುಚ್ಚುವುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು. 

2016 ರ ಮದರಸಾ ನಿಯಮಗಳ ಅಡಿಯಲ್ಲಿ, ಮಾನ್ಯತೆ ಪಡೆಯದಿರುವುದು ಸಂಸ್ಥೆಯು ಸರ್ಕಾರಿ ಅನುದಾನಗಳನ್ನು ಪಡೆಯುವುದಕ್ಕೆ ತಡೆಯೊಡ್ಡುತ್ತದೆಯೇ ಹೊರತು, ಅದನ್ನು ಸಂಪೂರ್ಣವಾಗಿ ಮುಚ್ಚಲು ಆದೇಶಿಸಲು ಅಧಿಕಾರಿಗಳಿಗೆ ಯಾವುದೇ ಸಾಂವಿಧಾನಿಕ ಅಥವಾ ಕಾನೂನುಬದ್ಧ ಅಧಿಕಾರವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಒಟ್ಟಾರೆಯಾಗಿ, ಸಾಂವಿಧಾನಿಕ ಹುದ್ದೆಯಲ್ಲಿರುವ ಉಪಮುಖ್ಯಮಂತ್ರಿಯೊಬ್ಬರು ಸಾಕ್ಷ್ಯಾಧಾರಗಳಿಲ್ಲದೆ ಇಡೀ ಶಿಕ್ಷಣ ಸಮುದಾಯವನ್ನು ‘ಭಯೋತ್ಪಾದನೆಯ ಉತ್ಪಾದನೆ’ ಎಂದು ಕರೆಯುವುದು ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳಿಗೆ ಎಸಗಿದ ದ್ರೋಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...